AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಾಬೂಲ್ ಆಸ್ಪತ್ರೆ ಮೇಲೆ ಪಾಕಿಸ್ತಾನ ವೈಮಾನಿಕ ದಾಳಿ: 400 ಮಂದಿ ಸಾವು, 250ಕ್ಕೂ ಹೆಚ್ಚು ಜನರಿಗೆ ಗಾಯ!

ಕಾಬೂಲ್‌ನ ಓಮಿದ್ ಮಾದಕ ವ್ಯಸನಿಗಳ ಆಸ್ಪತ್ರೆ ಮೇಲೆ ಪಾಕಿಸ್ತಾನದ ವೈಮಾನಿಕ ದಾಳಿಯಿಂದ 400ಕ್ಕೂ ಹೆಚ್ಚು ಮಂದಿ ಮೃತಪಟ್ಟಿದ್ದಾರೆಂದು ತಾಲಿಬಾನ್ ವರದಿ ಮಾಡಿದೆ. ಗಡಿ ಸಂಘರ್ಷದ ನಡುವೆ ನಡೆದ ಈ ದಾಳಿಯಲ್ಲಿ ನಾಗರಿಕರ ಸಾವನ್ನು ಪಾಕಿಸ್ತಾನ ನಿರಾಕರಿಸಿದೆ, ಕೇವಲ ಭಯೋತ್ಪಾದಕರ ಅಡಗುತಾಣಗಳನ್ನು ಗುರಿಯಾಗಿಸಿದ್ದಾಗಿ ಹೇಳಿದೆ. ಅಫ್ಘಾನಿಸ್ತಾನ-ಪಾಕಿಸ್ತಾನ ಸಂಬಂಧ ಮತ್ತಷ್ಟು ಹದಗೆಟ್ಟಿದೆ.

ಕಾಬೂಲ್ ಆಸ್ಪತ್ರೆ ಮೇಲೆ ಪಾಕಿಸ್ತಾನ ವೈಮಾನಿಕ ದಾಳಿ: 400 ಮಂದಿ ಸಾವು, 250ಕ್ಕೂ ಹೆಚ್ಚು ಜನರಿಗೆ ಗಾಯ!
ಪಾಕಿಸ್ತಾನ ವೈಮಾನಿಕ ದಾಳಿImage Credit source: BBC
ಅಕ್ಷಯ್​ ಪಲ್ಲಮಜಲು​​
|

Updated on:Mar 17, 2026 | 9:12 AM

Share

ಕಾಬೂಲ್, ಮಾ.17: ಅಫ್ಘಾನಿಸ್ತಾನ ಮತ್ತು ಪಾಕಿಸ್ತಾನದ ನಡುವಿನ ಸಂಘರ್ಷ ತಾರಕಕ್ಕೇರಿದ್ದು, ಕಾಬೂಲ್‌ನಲ್ಲಿರುವ ಮಾದಕ ವ್ಯಸನಿಗಳ ಪುನರ್ವಸತಿ ಆಸ್ಪತ್ರೆಯ ಮೇಲೆ ಪಾಕಿಸ್ತಾನ ನಡೆಸಿದ ವೈಮಾನಿಕ ದಾಳಿಯಲ್ಲಿ ಕನಿಷ್ಠ 400 ಮಂದಿ ಸಾವನ್ನಪ್ಪಿದ್ದಾರೆ ಮತ್ತು 250ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ ಎಂದು ತಾಲಿಬಾನ್ ಸರ್ಕಾರ ತಿಳಿಸಿದೆ.

ಸೋಮವಾರ ರಾತ್ರಿ ಸುಮಾರು 9 ಗಂಟೆಗೆ ಕಾಬೂಲ್‌ನಲ್ಲಿರುವ ‘ಓಮಿದ್’ (Omid) ಹೆಸರಿನ 2,000 ಹಾಸಿಗೆಗಳ ಸಾಮರ್ಥ್ಯದ ಮಾದಕ ವ್ಯಸನಿಗಳ ಚಿಕಿತ್ಸಾ ಆಸ್ಪತ್ರೆಯ ಮೇಲೆ ಈ ದಾಳಿ ನಡೆದಿದೆ. ಆಸ್ಪತ್ರೆಯ ಬಹುಪಾಲು ಕಟ್ಟಡಗಳು ಧ್ವಂಸವಾಗಿದ್ದು, ಮೃತರ ಸಂಖ್ಯೆ ಇನ್ನೂ ಹೆಚ್ಚಾಗುವ ಸಾಧ್ಯತೆಯಿದೆ ಎಂದು ತಾಲಿಬಾನ್ ವಕ್ತಾರ ಹಮ್ದುಲ್ಲಾ ಫಿತ್ರತ್ ಆತಂಕ ವ್ಯಕ್ತಪಡಿಸಿದ್ದಾರೆ.

ಇಲ್ಲಿದೆ ನೋಡಿ ಎಕ್ಸ್​​​​​​​ ಪೋಸ್ಟ್​​:

ಆದರೆ ಪಾಕಿಸ್ತಾನ ಈ ಆರೋಪವನ್ನು ತಿರಸ್ಕರಿಸಿದೆ. ತಾವು ಕೇವಲ ‘ಭಯೋತ್ಪಾದಕರ ಅಡಗುತಾಣಗಳು ಮತ್ತು ಮಿಲಿಟರಿ ನೆಲೆಗಳನ್ನು’ ಗುರಿಯಾಗಿಸಿಕೊಂಡು ದಾಳಿ ಮಾಡಿದ್ದೇವೆ ಎಂದು ಹೇಳಿಕೊಂಡಿದೆ. ನಾಗರಿಕರಿಗೆ ಯಾವುದೇ ಹಾನಿಯಾಗಿಲ್ಲ ಎಂದು ಪಾಕಿಸ್ತಾನ ಸಮರ್ಥಿಸಿಕೊಂಡಿದೆ.

ಇದನ್ನೂ ಓದಿ: ಯುದ್ಧದ ನಡುವೆಯೂ ಅರ್ಮೇನಿಯಾ ಮೂಲಕ ಇರಾನ್​ನಿಂದ 550 ಭಾರತೀಯರ ಸ್ಥಳಾಂತರ

ಕಳೆದ ಒಂದು ತಿಂಗಳಿನಿಂದ ಉಭಯ ದೇಶಗಳ ನಡುವೆ ಗಡಿ ಸಂಘರ್ಷ ತೀವ್ರಗೊಂಡಿದೆ. ಅಫ್ಘಾನಿಸ್ತಾನವು ತನ್ನ ನೆಲದಲ್ಲಿ ಭಯೋತ್ಪಾದಕರಿಗೆ ಆಶ್ರಯ ನೀಡುತ್ತಿದೆ ಎಂದು ಪಾಕಿಸ್ತಾನ ಆರೋಪಿಸುತ್ತಿದ್ದರೆ, ಅಫ್ಘಾನಿಸ್ತಾನವು ಪಾಕಿಸ್ತಾನದ ದಾಳಿಯನ್ನು ತನ್ನ ಸಾರ್ವಭೌಮತ್ವದ ಉಲ್ಲಂಘನೆ ಎಂದು ಕರೆದಿದೆ.

ವಿದೇಶದ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 9:10 am, Tue, 17 March 26

Follow Us
Akshay Pallamajalu
Akshay Pallamajalu

ನನ್ನ ಹೆಸರು ಅಕ್ಷಯ್ ಕುಮಾರ್ ಪಲ್ಲಮಜಲು, ನನ್ನ ಊರು ದಕ್ಷಿಣ ಕನ್ನಡ ಜಿಲ್ಲೆ, ಬಂಟ್ವಾಳ ತಾಲ್ಲೂಕು, ಡಿಜಿಟಲ್​ ವಿಭಾಗದಲ್ಲಿ 3 ವರ್ಷಗಳ ಅನುಭವ, ಇದರ ಜತೆಗೆ ಸೋಶಿಯಲ್ ಮೀಡಿಯಾದ ಬಗ್ಗೆ ಹೆಚ್ಚಿನ ಆಸಕ್ತಿಯನ್ನು ಹೊಂದಿದ್ದು, ಟಿವಿ9ನಲ್ಲೂ ಸೋಶಿಯಲ್​​​ ಮೀಡಿಯಾವನ್ನು ನೋಡಿಕೊಳ್ಳುತ್ತಿದ್ದೇನೆ. ಡಿಜಿಟಲ್ ಕ್ಷೇತ್ರದಲ್ಲಿ ಆಸಕ್ತಿಯನ್ನು ಹೊಂದಿದ್ದು, ಸೋಶಿಯಲ್​​​ ಮೀಡಿಯಾದಲ್ಲಿ ಇನ್ನೂ ಹೆಚ್ಚಿನ ವಿಚಾರಗಳನ್ನು ತಿಳಿದುಕೊಳ್ಳವ ಆಸಕ್ತಿ ಇದೆ. ಇದರ ಜತೆಗೆ ರಾಷ್ಟ್ರೀಯ ಲೇಖನಗಳನ್ನು ಬರೆಯುತ್ತೇನೆ.

Read More