AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮತ್ತೆ ಅಮೆರಿಕಕ್ಕೆ ಹೊರಟ ಪಾಕ್ ಸೇನಾ ಮುಖ್ಯಸ್ಥ ಆಸಿಮ್ ಮುನೀರ್, ಎರಡು ತಿಂಗಳಲ್ಲಿ ಎರಡನೇ ಭೇಟಿ

ಒಂದೆಡೆ, ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಪ್ರಪಂಚದ ವಿರುದ್ಧ ಸುಂಕದ ಯುದ್ಧವನ್ನು ನಡೆಸುತ್ತಿದ್ದರೆ, ಮತ್ತೊಂದೆಡೆ, ಪಾಕಿಸ್ತಾನದ ಮೇಲಿನ ಅವರ ಪ್ರೀತಿ ಹೆಚ್ಚುತ್ತಿರುವಂತೆ ಕಾಣುತ್ತಿದೆ. ಪಾಕಿಸ್ತಾನ ಸೇನಾ ಮುಖ್ಯಸ್ಥ ಆಸಿಮ್ ಮುನೀರ್ ಎರಡು ತಿಂಗಳಲ್ಲಿ ಎರಡನೇ ಬಾರಿಗೆ ಅಮೆರಿಕಕ್ಕೆ ಭೇಟಿ ನೀಡಲಿದ್ದಾರೆ. ಇದಕ್ಕೂ ಮೊದಲು, ಜೂನ್‌ನಲ್ಲಿ ಮುನೀರ್ ಅಮೆರಿಕಕ್ಕೆ ಭೇಟಿ ನೀಡಿದ್ದರು. ಅಸಿಮ್ ಮುನೀರ್ ನಂತರ, ಪಾಕಿಸ್ತಾನ ವಾಯುಪಡೆಯ ಮುಖ್ಯಸ್ಥ ಜಹೀರ್ ಅಹ್ಮದ್ ಬಾಬರ್ ಸಿಧು ಕೂಡ ಅಮೆರಿಕಕ್ಕೆ ಭೇಟಿ ನೀಡಿದ್ದರು.

ಮತ್ತೆ ಅಮೆರಿಕಕ್ಕೆ ಹೊರಟ ಪಾಕ್ ಸೇನಾ ಮುಖ್ಯಸ್ಥ ಆಸಿಮ್ ಮುನೀರ್, ಎರಡು ತಿಂಗಳಲ್ಲಿ ಎರಡನೇ ಭೇಟಿ
ಡೊನಾಲ್ಡ್​ ಟ್ರಂಪ್-ಮುನೀರ್
ನಯನಾ ರಾಜೀವ್
|

Updated on: Aug 07, 2025 | 10:46 AM

Share

ಇಸ್ಲಾಮಾಬಾದ್, ಆಗಸ್ಟ್​ 07: ಪಾಕಿಸ್ತಾನ ಸೇನಾ ಮುಖ್ಯಸ್ಥ ಆಸಿಮ್ ಮುನೀರ್(Asim Munir) ಮತ್ತೆ ಅಮೆರಿಕಕ್ಕೆ ಭೇಟಿ ನೀಡಲಿದ್ದಾರೆ. ಎರಡು ತಿಂಗಳಲ್ಲಿ ಎರಡನೇ ಭೇಟಿ ಇದಾಗಿದೆ. ಅಮೆರಿಕ ಮತ್ತು ಪಾಕಿಸ್ತಾನ ನಡುವೆ ಕೆಲವು ಪ್ರಮುಖ ಚರ್ಚೆಗಳು ನಡೆಯುವ ಸಾಧ್ಯತೆಗಳಿವೆ.ಈ ಸಮಯದಲ್ಲಿ ಅವರು ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರನ್ನು ಭೇಟಿಯಾಗುತ್ತಾರೋ ಇಲ್ಲವೋ ಎಂಬುದು ಇನ್ನೂ ಸ್ಪಷ್ಟವಾಗಿಲ್ಲ. ಇದಕ್ಕೂ ಮೊದಲು, ಅವರು ಶ್ವೇತಭವನದಲ್ಲಿ ಆಯೋಜಿಸಲಾದ ಔತಣಕೂಟದಲ್ಲಿ ಭಾಗವಹಿಸಿದ್ದರು. ಹಿಂದಿನ ಭೇಟಿಯ ಸಮಯದಲ್ಲಿ, ಅವರು ಟ್ರಂಪ್ ಅವರೊಂದಿಗೆ ಭೋಜನ ಮಾಡಿದ್ದರು.

ವಿಶೇಷವೆಂದರೆ ಅಮೆರಿಕದ ಇತಿಹಾಸದಲ್ಲಿ ಇದೇ ಮೊದಲ ಬಾರಿಗೆ ಅಮೆರಿಕ ಅಧ್ಯಕ್ಷರು ಯಾವುದೇ ಪಾಕಿಸ್ತಾನಿ ಅಧಿಕಾರಿಯ ಉಪಸ್ಥಿತಿಯಿಲ್ಲದೆ ಮಿಲಿಟರಿ ಅಧಿಕಾರಿಯನ್ನು ಆಹ್ವಾನಿಸಿದ್ದರು. ಸುಮಾರು ಎರಡು ಗಂಟೆಗಳ ಕಾಲ ನಡೆದ ಸಭೆಯಲ್ಲಿ ವ್ಯಾಪಾರ, ಆರ್ಥಿಕ ಅಭಿವೃದ್ಧಿ ಮತ್ತು ಕ್ರಿಪ್ಟೋಕರೆನ್ಸಿ ಕುರಿತು ಇಬ್ಬರ ನಡುವೆ ಚರ್ಚೆಗಳು ನಡೆದವು ಎಂದು ವರದಿಯಾಗಿದೆ. ಭಾರತ ಮತ್ತು ಪಾಕಿಸ್ತಾನ ನಡುವಿನ ಉದ್ವಿಗ್ನತೆಯನ್ನು ಕೊನೆಗೊಳಿಸುವಲ್ಲಿ ಮುನೀರ್ ಅವರ ಪಾತ್ರವನ್ನು ಟ್ರಂಪ್ ಶ್ಲಾಘಿಸಿದ್ದರು.

ರಷ್ಯಾದ ತೈಲ ಖರೀದಿಗೆ ಹೆಚ್ಚುವರಿಯಾಗಿ ಶೇ.25 ರಷ್ಟು ಸುಂಕ ವಿಧಿಸುವುದಾಗಿ ಟ್ರಂಪ್ ಘೋಷಿಸಿದ್ದಾರೆ. ಇದಕ್ಕೂ ಮುನ್ನ ಅಮೆರಿಕ ಭಾರತದ ಮೇಲೆ ಶೇ.25 ರಷ್ಟು ಸುಂಕ ವಿಧಿಸಿತ್ತು. ಜನರಲ್ ಆಸಿಮ್ ಮುನೀರ್ ಅವರು ಯುಎಸ್ ಸೆಂಟ್ರಲ್ ಕಮಾಂಡ್ (CENTCOM) ಕಮಾಂಡರ್ ಜನರಲ್ ಮೈಕೆಲ್ ಇ ಕುರಿಲ್ಲಾ ಅವರ ಬೀಳ್ಕೊಡುಗೆ ಸಮಾರಂಭದಲ್ಲಿ ಭಾಗವಹಿಸಲು ಅಮೆರಿಕಕ್ಕೆ ಭೇಟಿ ನೀಡಲಿದ್ದಾರೆ. ಕುರಿಲ್ಲಾ ಅವರ ಬೀಳ್ಕೊಡುಗೆ ಸಮಾರಂಭವು ಫ್ಲೋರಿಡಾದ ಟ್ಯಾಂಪಾದಲ್ಲಿರುವ CENTCOM ಪ್ರಧಾನ ಕಚೇರಿಯಲ್ಲಿ ನಡೆಯಲಿದೆ ಎಂದು ನಂಬಲಾಗಿದೆ. CENTCOM ಕಮಾಂಡರ್ ಜನರಲ್ ಮೈಕೆಲ್ ಇ ಕುರಿಲ್ಲಾ ಜುಲೈ ಅಂತ್ಯದಲ್ಲಿ ಪಾಕಿಸ್ತಾನಕ್ಕೆ ಭೇಟಿ ನೀಡಿದ್ದರು.

ಮತ್ತಷ್ಟು ಓದಿ: ಜೈಲಿನಲ್ಲಿ ನನಗೇನೇ ಆದರೂ ಸೇನಾ ಮುಖ್ಯಸ್ಥ ಅಸಿಮ್ ಮುನೀರ್ ಕಾರಣ; ಪಾಕಿಸ್ತಾನದ ಮಾಜಿ ಪ್ರಧಾನಿ ಇಮ್ರಾನ್ ಖಾನ್

ಯುಎಸ್ ಸೆಂಟ್‌ಕಾಮ್ ಕಮಾಂಡರ್ ಜನರಲ್ ಕುರಿಲ್ಲಾ ಪಾಕಿಸ್ತಾನದ ಬಗ್ಗೆ ಆಳವಾದ ಪ್ರೀತಿಯನ್ನು ಹೊಂದಿದ್ದಾರೆ ಮತ್ತು ಭಯೋತ್ಪಾದನೆ ವಿರುದ್ಧದ ಹೋರಾಟದಲ್ಲಿ, ವಿಶೇಷವಾಗಿ ಇಸ್ಲಾಮಿಕ್ ಸ್ಟೇಟ್ – ಖೊರಾಸನ್ (ಐಎಸ್ಐಎಸ್-ಕೆ) ವಿರುದ್ಧದ ಹೋರಾಟದಲ್ಲಿ ಇಸ್ಲಾಮಾಬಾದ್‌ನ ಪಾತ್ರವನ್ನು ಆಗಾಗ ಶ್ಲಾಘಿಸಿದ್ದಾರೆ.

ಆದಾಗ್ಯೂ, ಭಾರತ ಮತ್ತು ಪಾಕಿಸ್ತಾನ ಎರಡರೊಂದಿಗೂ ಅಮೆರಿಕ ಉತ್ತಮ ಸಂಬಂಧವನ್ನು ಹೊಂದಿರಬೇಕು ಎಂದು ಕುರಿಲ್ಲಾ ವಾದಿಸಿದ್ದಾರೆ. ಇತ್ತೀಚೆಗೆ ಅಮೆರಿಕ ವಿಧಿಸಿದ ಸುಂಕಗಳಲ್ಲಿ ಪಾಕಿಸ್ತಾನಕ್ಕೆ ದೊಡ್ಡ ವಿನಾಯಿತಿ ನೀಡಲಾಗಿದೆ. ಟ್ರಂಪ್ ಆಡಳಿತವು ಪಾಕಿಸ್ತಾನದ ಮೇಲಿನ ಸುಂಕವನ್ನು ಶೇಕಡಾ 29 ರಿಂದ 19 ಕ್ಕೆ ಇಳಿಸಿದೆ. ಅಮೆರಿಕ ಇತ್ತೀಚೆಗೆ ಪಾಕಿಸ್ತಾನದೊಂದಿಗೆ ತೈಲ ಒಪ್ಪಂದಕ್ಕೂ ಸಹಿ ಹಾಕಿದೆ. ಇದು ಮಾತ್ರವಲ್ಲದೆ, ಅಂತಾರಾಷ್ಟ್ರೀಯ ಹಣಕಾಸು ನಿಧಿಯಿಂದ (IMF) ಪಾಕಿಸ್ತಾನ ಪಡೆದ ಸಹಾಯದಲ್ಲಿ ಅಮೆರಿಕವು ದೊಡ್ಡ ಪಾತ್ರವನ್ನು ವಹಿಸಿದೆ.

ಅಂತಾರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Follow Us
ಥಾಣೆಯಲ್ಲಿ ಕಟ್ಟಡದಿಂದ ವಾಹನಗಳ ಮೇಲೆ ಬಿದ್ದ ಕ್ರೇನ್, ಓರ್ವ ಸಾವು
ಥಾಣೆಯಲ್ಲಿ ಕಟ್ಟಡದಿಂದ ವಾಹನಗಳ ಮೇಲೆ ಬಿದ್ದ ಕ್ರೇನ್, ಓರ್ವ ಸಾವು
ಆಧುನೀಕರಣಗೊಂಡ 75 ರೈಲ್ವೆ ನಿಲ್ದಾಣಗಳು ನಾಳೆ ಮೋದಿಯಿಂದ ಲೋಕಾರ್ಪಣೆ
ಆಧುನೀಕರಣಗೊಂಡ 75 ರೈಲ್ವೆ ನಿಲ್ದಾಣಗಳು ನಾಳೆ ಮೋದಿಯಿಂದ ಲೋಕಾರ್ಪಣೆ
ಅಯೋಧ್ಯೆ ಹಗರಣ: ರಾಜ್ಯದ ಎಲ್ಲಾ ದೇವಾಲಯದ ಹುಂಡಿಗಳ ರಕ್ಷಣೆಗೆ ಬಿಗಿ ಭದ್ರತೆ
ಅಯೋಧ್ಯೆ ಹಗರಣ: ರಾಜ್ಯದ ಎಲ್ಲಾ ದೇವಾಲಯದ ಹುಂಡಿಗಳ ರಕ್ಷಣೆಗೆ ಬಿಗಿ ಭದ್ರತೆ
ನ್ಯಾಯಬೆಲೆ ಅಂಗಡಿಯಲ್ಲಾಗುವ ಮೋಸ ತಡೆಯಲು ಬರಲಿದೆ ಹೊಸ ಯೋಜನೆ: ಏನದು?
ನ್ಯಾಯಬೆಲೆ ಅಂಗಡಿಯಲ್ಲಾಗುವ ಮೋಸ ತಡೆಯಲು ಬರಲಿದೆ ಹೊಸ ಯೋಜನೆ: ಏನದು?
ಪೂಜೆ ನೆಪದಲ್ಲಿ 43 ಗ್ರಾಂ ಚಿನ್ನ, ನಗದು ಕದ್ದು ಸ್ವಾಮೀಜಿ ಎಸ್ಕೇಪ್​​!
ಪೂಜೆ ನೆಪದಲ್ಲಿ 43 ಗ್ರಾಂ ಚಿನ್ನ, ನಗದು ಕದ್ದು ಸ್ವಾಮೀಜಿ ಎಸ್ಕೇಪ್​​!
ರೇಷನ್ ಕಾರ್ಡ್ ಕರೆಕ್ಟ್ ಮಾಡಿಕೊಳ್ಳಲು 15 ದಿನ ಟೈಮ್ ಕೊಟ್ಟ ಮುನಿಯಪ್ಪ
ರೇಷನ್ ಕಾರ್ಡ್ ಕರೆಕ್ಟ್ ಮಾಡಿಕೊಳ್ಳಲು 15 ದಿನ ಟೈಮ್ ಕೊಟ್ಟ ಮುನಿಯಪ್ಪ
ಕರ್ನಾಟಕದಲ್ಲಿ ಬರ ಪರಿಸ್ಥಿತಿ: ಪ್ರಧಾನಿ ಮೋದಿಗೆ ಡಿಸಿಎಂ ಪರಮೇಶ್ವರ್ ಪತ್ರ
ಕರ್ನಾಟಕದಲ್ಲಿ ಬರ ಪರಿಸ್ಥಿತಿ: ಪ್ರಧಾನಿ ಮೋದಿಗೆ ಡಿಸಿಎಂ ಪರಮೇಶ್ವರ್ ಪತ್ರ
ಕೋರ್ಟ್ ಆರ್ಡರ್ ತಂದು ಸಿನಿಮಾ ರಿಲೀಸ್ ಮಾಡಬೇಕಾಗುತ್ತೆ: ಡಾಲಿ ಧನಂಜಯ್
ಕೋರ್ಟ್ ಆರ್ಡರ್ ತಂದು ಸಿನಿಮಾ ರಿಲೀಸ್ ಮಾಡಬೇಕಾಗುತ್ತೆ: ಡಾಲಿ ಧನಂಜಯ್
ಸಚಿವ ಸಂಪುಟ ವಿಸ್ತರಣೆ ವಿಳಂಬ: ಬಿಗ್ ಅಪ್ಡೇಟ್ ಕೊಟ್ಟ KPCC ಅಧ್ಯಕ್ಷ
ಸಚಿವ ಸಂಪುಟ ವಿಸ್ತರಣೆ ವಿಳಂಬ: ಬಿಗ್ ಅಪ್ಡೇಟ್ ಕೊಟ್ಟ KPCC ಅಧ್ಯಕ್ಷ
ಸಂಪುಟ ವಿಸ್ತರಣೆ: ದೆಹಲಿಯಲ್ಲಿ ಮಹತ್ವದ ಸಭೆ, ಯಾರಿಗೆಲ್ಲಾ ಮಂತ್ರಿ ಸ್ಥಾನ?
ಸಂಪುಟ ವಿಸ್ತರಣೆ: ದೆಹಲಿಯಲ್ಲಿ ಮಹತ್ವದ ಸಭೆ, ಯಾರಿಗೆಲ್ಲಾ ಮಂತ್ರಿ ಸ್ಥಾನ?