ಸಿಂಧೂ ಜಲ ಒಪ್ಪಂದ, ಭಾರತದ ಎದುರು ಎಂದೂ ತಲೆ ಬಾಗುವುದಿಲ್ಲ: ಆಸಿಮ್ ಮುನೀರ್
ಭಾರತ ಮತ್ತು ಪಾಕಿಸ್ತಾನ ನಡುವೆ ಹಲವು ದಿನಗಳ ಮಿಲಿಟರಿ ಸಂಘರ್ಷದ ನಂತರ ಕದನ ವಿರಾಮ ಒಪ್ಪಂದಕ್ಕೆ ಬಂದ ವಾರಗಳ ನಂತರ, ಪಾಕಿಸ್ತಾನ ಸೇನಾ ಮುಖ್ಯಸ್ಥ ಫೀಲ್ಡ್ ಮಾರ್ಷಲ್ ಅಸಿಮ್ ಮುನೀರ್, ಇಸ್ಲಾಮಾಬಾದ್ ಭಾರತದ ಪ್ರಾಬಲ್ಯವನ್ನು ಎಂದಿಗೂ ಒಪ್ಪಿಕೊಳ್ಳುವುದಿಲ್ಲ ಎಂದು ಹೇಳಿದ್ದಾರೆ. ಪಹಲ್ಗಾಮ್ ದಾಳಿಯ ನಂತರ ಭಾರತ ಮತ್ತು ಪಾಕಿಸ್ತಾನದ ನಡುವೆ ಉದ್ವಿಗ್ನತೆ ತೀವ್ರವಾಗಿ ಹೆಚ್ಚಾಗಿದೆ. ಭಾರತವು ಮೇ 7 ರಂದು ಪಾಕಿಸ್ತಾನ ಮತ್ತು ಪಾಕ್ ಆಕ್ರಮಿತ ಕಾಶ್ಮೀರದಲ್ಲಿನ ಭಯೋತ್ಪಾದಕ ಮೂಲಸೌಕರ್ಯಗಳ ಮೇಲೆ ಆಪರೇಷನ್ ಸಿಂಧೂರ್ ನಡೆಸಿತ್ತು.

ಇಸ್ಲಾಮಾಬಾದ್, ಜೂನ್ 04: ಸಿಂಧೂ ಜಲ ಒಪ್ಪಂದ(Indus Waters Treaty)ದಲ್ಲಿ ಭಾರತದ ಪ್ರಾಬಲ್ಯವನ್ನು ಎಂದೂ ಒಪ್ಪುವುದಿಲ್ಲ, ಭಾರತದ ಎದುರು ಪಾಕಿಸ್ತಾನ(Pakistan) ತಲೆ ಬಾಗುವುದಿಲ್ಲ, ನೀರಿನ ವಿಚಾರದಲ್ಲಿ ಎಂದಿಗೂ ರಾಜಿ ಮಾಡಿಕೊಳ್ಳುವುದಿಲ್ಲ ಎಂದು ಪಾಕಿಸ್ತಾನ ಸೇನಾ ಮುಖ್ಯಸ್ಥ ಆಸಿಮ್ ಮುನೀರ್ ಹೇಳಿದ್ದಾರೆ.
240 ಮಿಲಿಯನ್ ಪಾಕಿಸ್ತಾನಿಗಳ ಈ ಮೂಲಭೂತ ಹಕ್ಕಿನ ಮೇಲೆ ನಾವು ಯಾವುದೇ ರಾಜಿ ಮಾಡಿಕೊಳ್ಳಲು ಅವಕಾಶ ನೀಡುವುದಿಲ್ಲ. ಏಪ್ರಿಲ್ 22 ರಂದು 26 ಜನರನ್ನು ಬಲಿತೆಗೆದುಕೊಂಡ ಪಹಲ್ಗಾಮ್ ಭಯೋತ್ಪಾದಕ ದಾಳಿಯ ನಂತರ ಸಿಂಧೂ ಜಲ ಒಪ್ಪಂದವನ್ನು ಸ್ಥಗಿತಗೊಳಿಸುವ ಭಾರತದ ಇತ್ತೀಚಿನ ನಿರ್ಧಾರವನ್ನು ಉಲ್ಲೇಖಿಸಿ ಮಾತನಾಡಿದ್ದಾರೆ.
ಬಲೂಚಿಸ್ತಾನದಲ್ಲಿ ಭಯೋತ್ಪಾದಕ ಚಟುವಟಿಕೆ
ಬಲೂಚಿಸ್ತಾನದಲ್ಲಿ ಭಯೋತ್ಪಾದಕ ಚಟುವಟಿಕೆಗಳನ್ನು ಭಾರತ ಬೆಂಬಲಿಸುತ್ತಿದೆ ಎಂದು ಮುನೀರ್ ಆರೋಪಿಸಿದರು, ಬಲೂಚ್ ಉಗ್ರಗಾಮಿಗಳು ಮತ್ತು ಭಾರತೀಯ ಗುಪ್ತಚರ ಇಲಾಖೆಯ ನಡುವಿನ ಸಂಪರ್ಕವನ್ನು ಅವರು ಪ್ರತಿಪಾದಿಸಿದರು. ಪಹಲ್ಗಾಮ್ ದಾಳಿಯ ನಂತರ ಭಾರತ ಮತ್ತು ಪಾಕಿಸ್ತಾನದ ನಡುವೆ ಉದ್ವಿಗ್ನತೆ ತೀವ್ರವಾಗಿ ಹೆಚ್ಚಾಗಿದೆ. ಭಾರತವು ಮೇ 7 ರಂದು ಪಾಕಿಸ್ತಾನ ಮತ್ತು ಪಾಕ್ ಆಕ್ರಮಿತ ಕಾಶ್ಮೀರದಲ್ಲಿನ ಭಯೋತ್ಪಾದಕ ಮೂಲಸೌಕರ್ಯಗಳ ಮೇಲೆ ಆಪರೇಷನ್ ಸಿಂಧೂರ್ ನಡೆಸಿತ್ತು.
ಪಾಕಿಸ್ತಾನವು ಮೇ 8, 9 ಮತ್ತು 10 ರಂದು ದಾಳಿ ಮಾಡಲು ಪ್ರಯತ್ನಿಸಿತು, ಆದರೆ ಭಾರತೀಯ ಸಶಸ್ತ್ರ ಪಡೆಗಳು ಅವುಗಳನ್ನು ಯಶಸ್ವಿಯಾಗಿ ತಟಸ್ಥಗೊಳಿಸಿದವು. ನಂತರ, ಭಾರತವು ಪಾಕಿಸ್ತಾನದ ಅನೇಕ ವಾಯು ನೆಲೆಗಳನ್ನು ಗುರಿಯಾಗಿಸಿಕೊಂಡಿತು.
ಮತ್ತಷ್ಟು ಓದಿ: ಪಾಕ್ ಬಳಸಿದ ಚೀನಾ ಶಸ್ತ್ರಾಸ್ತ್ರಗಳ ಕಾರ್ಯಕ್ಷಮತೆ ಬಗ್ಗೆ ಪ್ರಶ್ನೆ, ಚೀನಾ ಹೇಳಿದ್ದೇನು?
ಮೇ 10 ರಂದು ಎರಡೂ ಕಡೆಯ ನಡುವಿನ ಮಾತುಕತೆಯ ನಂತರ ಉದ್ವಿಗ್ನತೆ ಕಡಿಮೆಯಾಯಿತು, ಇದರ ಪರಿಣಾಮವಾಗಿ ಮುಂದಿನ ಮಿಲಿಟರಿ ಕಾರ್ಯಾಚರಣೆಗಳಿಗೆ ತಾತ್ಕಾಲಿಕ ನಿಲುಗಡೆ ದೊರೆಯಿತು. ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಭದ್ರತಾ ಸಂಪುಟ ಸಮಿತಿ (ಸಿಸಿಎಸ್), 1960 ರಲ್ಲಿ ಸಹಿ ಹಾಕಿದ ನಂತರ ಮೊದಲ ಬಾರಿಗೆ ಐಡಬ್ಲ್ಯೂಟಿಯನ್ನು ಸ್ಥಗಿತಗೊಳಿಸಲು ನಿರ್ಧರಿಸಿತು.
ವಿಶೇಷವಾಗಿ ಸಿಂಧೂ ನದಿ ನೀರು ಒಪ್ಪಂದದ ವಿಷಯದಲ್ಲಿ ಪಾಕಿಸ್ತಾನ ಭಾರತಕ್ಕೆ ಬೆದರಿಕೆ ಹಾಕುತ್ತಿದೆ. ಸಿಂಧೂ ನದಿ ನೀರು ಒಪ್ಪಂದದ ಪ್ರಕಾರ, ನದಿ ನೀರನ್ನು ಭಾರತ ಮತ್ತು ಪಾಕಿಸ್ತಾನದ ನಡುವೆ ವಿಂಗಡಿಸಲಾಗಿದೆ. ಭಾರತವು ಪಾಕಿಸ್ತಾನಕ್ಕೆ ನೀರು ಹರಿಸುವುದನ್ನು ನಿಲ್ಲಿಸುವ ಸುಳಿವು ನೀಡಿದ ನಂತರ ಇಸ್ಲಾಮಾಬಾದ್ನಲ್ಲಿ ಕಳವಳ ಹೆಚ್ಚುತ್ತಿದೆ.
ಇಂತಹ ಪರಿಸ್ಥಿತಿಯಲ್ಲಿ, ಪಾಕಿಸ್ತಾನಿ ನಾಯಕರು ಮತ್ತು ಸೇನಾ ಅಧಿಕಾರಿಗಳು ಈ ಬಗ್ಗೆ ನಿರಂತರವಾಗಿ ಹೇಳಿಕೆಗಳನ್ನು ನೀಡುತ್ತಿದ್ದಾರೆ. ಪಾಕಿಸ್ತಾನ ಭಯೋತ್ಪಾದನೆಗೆ ಪ್ರಾಯೋಜಕತ್ವ ನೀಡುವುದನ್ನು ನಿಲ್ಲಿಸುವವರೆಗೆ ಒಪ್ಪಂದವು ಸ್ಥಗಿತಗೊಳ್ಳುತ್ತದೆ ಎಂದು ಭಾರತ ಹೇಳಿದೆ.
ಭಾರತವು ನೀರನ್ನು ಹಂಚಿಕೊಂಡಿದ್ದಲ್ಲದೆ, ಐಡಬ್ಲ್ಯೂಟಿಯ ಭಾಗವಾಗಿ ನೀರಿನ ವ್ಯವಸ್ಥೆಗಳನ್ನು ನಿರ್ಮಿಸಲು ಪಾಕಿಸ್ತಾನಕ್ಕೆ ಸಹಾಯ ಮಾಡಲು ಸಾಕಷ್ಟು ಹಣವನ್ನು ಖರ್ಚು ಮಾಡಿತ್ತು.
ಅಂತಾರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ








