AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Pakistan: ಪಾಕಿಸ್ತಾನ ಸೇನೆಯ ಕಮಾಂಡರ್, ಹಿರಿಯ ಅಧಿಕಾರಿಗಳಿದ್ದ ಸೇನಾ ಹೆಲಿಕಾಪ್ಟರ್​ ನಾಪತ್ತೆ

Pakistan News: ಪಾಕಿಸ್ತಾನದ ಪ್ರವಾಹ ಪೀಡಿತ ಪ್ರದೇಶವಾದ ನೈಋತ್ಯ ಭಾಗದಲ್ಲಿ ರಕ್ಷಣಾ ಮತ್ತು ಪರಿಹಾರ ಕಾರ್ಯಾಚರಣೆಯಲ್ಲಿ ಸೇನಾ ಹೆಲಿಕಾಪ್ಟರ್ ಹಾರಾಟ ನಡೆಸುತ್ತಿತ್ತು. ಈ ವೇಳೆ ಪ್ರಾದೇಶಿಕ ಕಂಟ್ರೋಲ್ ಟವರ್ ಸಂಪರ್ಕ ಕಳೆದುಕೊಂಡಿದ್ದು, ನಾಪತ್ತೆಯಾಗಿದೆ.

Pakistan: ಪಾಕಿಸ್ತಾನ ಸೇನೆಯ ಕಮಾಂಡರ್, ಹಿರಿಯ ಅಧಿಕಾರಿಗಳಿದ್ದ ಸೇನಾ ಹೆಲಿಕಾಪ್ಟರ್​ ನಾಪತ್ತೆ
ಹೆಲಿಕಾಪ್ಟರ್Image Credit source: India.com
TV9 Web
| Edited By: |

Updated on:Aug 02, 2022 | 9:57 AM

Share

ಕರಾಚಿ: ಉನ್ನತ ಕಮಾಂಡರ್ ಸೇರಿದಂತೆ 6 ಸಿಬ್ಬಂದಿ ಪ್ರಯಾಣಿಸುತ್ತಿದ್ದ ಪಾಕಿಸ್ತಾನ ಸೇನೆಯ (Pakistan Army)  ಹೆಲಿಕಾಪ್ಟರ್ ನಾಪತ್ತೆಯಾಗಿದೆ ಎಂದು ಪಾಕಿಸ್ತಾನದ ಇಂಟರ್-ಸರ್ವೀಸಸ್ ಪಬ್ಲಿಕ್ ರಿಲೇಷನ್ಸ್ ಖಚಿತಪಡಿಸಿದೆ. ದೇಶದ ಪ್ರವಾಹ ಪೀಡಿತ ಪ್ರದೇಶವಾದ ನೈಋತ್ಯ ಭಾಗದಲ್ಲಿ ರಕ್ಷಣಾ ಮತ್ತು ಪರಿಹಾರ ಕಾರ್ಯಾಚರಣೆಯಲ್ಲಿ ಸೇನಾ ಹೆಲಿಕಾಪ್ಟರ್ (Army Helicopter) ಹಾರಾಟ ನಡೆಸುತ್ತಿತ್ತು. ಈ ವೇಳೆ ಪ್ರಾದೇಶಿಕ ಕಂಟ್ರೋಲ್ ಟವರ್ ಸಂಪರ್ಕ ಕಳೆದುಕೊಂಡಿದ್ದು, ನಾಪತ್ತೆಯಾಗಿದೆ ಎಂದು ಸೇನೆ ತಿಳಿಸಿದೆ.

ಹೆಲಿಕಾಪ್ಟರ್‌ನಲ್ಲಿ XII ಕಾರ್ಪ್ಸ್‌ನ ಕಮಾಂಡರ್ ಜನರಲ್ ಸರ್ಫರಾಜ್ ಅಲಿ ಮತ್ತು ಇತರ ಐವರು ಹಿರಿಯ ಸೇನಾ ಅಧಿಕಾರಿಗಳು ಬಲೂಚಿಸ್ತಾನದಲ್ಲಿ ನಡೆಸಲಾಗುತ್ತಿರುವ ಪ್ರವಾಹ ಪರಿಹಾರ ಕಾರ್ಯಾಚರಣೆಗಳ ಮೇಲ್ವಿಚಾರಣೆ ನಡೆಸುತ್ತಿದ್ದರು ಎಂದು ಟ್ವಿಟ್ಟರ್‌ನಲ್ಲಿ ಪಾಕಿಸ್ತಾನದ ಸಶಸ್ತ್ರ ಪಡೆಗಳ ISPRನ ಮಾಧ್ಯಮ ವಿಭಾಗ ಹೇಳಿದೆ.

ಇದನ್ನೂ ಓದಿ: Pakistan Floods: ಇದ್ದಕ್ಕಿದ್ದಂತೆ ಸುರಿದ ಭಾರಿ ಮಳೆ, ನೀರಿನಲ್ಲಿ ಮುಳಗಿತು ಪಾಕಿಸ್ತಾನದ 50 ಹಳ್ಳಿಗಳು

ಬಲೂಚಿಸ್ತಾನದ ಲಾಸ್ಬೆಲಾದಲ್ಲಿ ಪ್ರವಾಹ ಪರಿಹಾರ ಕಾರ್ಯಾಚರಣೆಯಲ್ಲಿದ್ದ ಪಾಕಿಸ್ತಾನ ಸೇನೆಯ ವಾಯುಯಾನದ ಹೆಲಿಕಾಪ್ಟರ್ ಎಟಿಸಿ ಸಂಪರ್ಕ ಕಳೆದುಕೊಂಡಿದೆ. ಬಲೂಚಿಸ್ತಾನದಲ್ಲಿ ಪ್ರವಾಹ ಪರಿಹಾರ ಕಾರ್ಯಾಚರಣೆಯನ್ನು ಮೇಲ್ವಿಚಾರಣೆ ಮಾಡುತ್ತಿದ್ದ ಕಮಾಂಡರ್ 12 ಕಾರ್ಪ್ಸ್ ಸೇರಿದಂತೆ ಆರು ವ್ಯಕ್ತಿಗಳು ವಿಮಾನದಲ್ಲಿದ್ದರು. ನಾಪತ್ತೆಯಾದವರಿಗಾಗಿ ಶೋಧ ಕಾರ್ಯಾಚರಣೆ ನಡೆಯುತ್ತಿದೆ ಎಂದು ಟ್ವೀಟ್ ಮಾಡಲಾಗಿದೆ.

ಹೆಲಿಕಾಪ್ಟರ್ ಏರ್ ಟ್ರಾಫಿಕ್ ಕಂಟೋಲ್ (ಎಟಿಸಿ) ನೊಂದಿಗೆ ಸಂಪರ್ಕ ಕಳೆದುಕೊಂಡು ಕಳೆದ 5 ಗಂಟೆಗಳಿಂದ ನಾಪತ್ತೆಯಾಗಿದೆ ಎಂದು ಪಾಕಿಸ್ತಾನ ಮಾಧ್ಯಮ ವರದಿಗಳು ತಿಳಿಸಿವೆ.

Published On - 9:56 am, Tue, 2 August 22

ಜಮ್ಮು-ಕಾಶ್ಮೀರದ ಗಡಿಯಲ್ಲಿ 5 ಪಾಕಿಸ್ತಾನಿ ಡ್ರೋನ್​ಗಳು ಪತ್ತೆ, ಹೈ ಅಲರ್ಟ್​
ಜಮ್ಮು-ಕಾಶ್ಮೀರದ ಗಡಿಯಲ್ಲಿ 5 ಪಾಕಿಸ್ತಾನಿ ಡ್ರೋನ್​ಗಳು ಪತ್ತೆ, ಹೈ ಅಲರ್ಟ್​
ಪತಿಯ ಅಂತ್ಯಕ್ರಿಯೆಗೆ ಕಂದನ ಜತೆ ಸ್ಟ್ರೆಚರ್​ನಲ್ಲಿ ಬಂದ ಸೈನಿಕನ ಪತ್ನಿ
ಪತಿಯ ಅಂತ್ಯಕ್ರಿಯೆಗೆ ಕಂದನ ಜತೆ ಸ್ಟ್ರೆಚರ್​ನಲ್ಲಿ ಬಂದ ಸೈನಿಕನ ಪತ್ನಿ
ಶುಕ್ರವಾರದಂದು ಹುಳಿ ಪದಾರ್ಥ ತಿನ್ನಲೇಬಾರದು ಯಾಕೆ ಗೊತ್ತಾ?
ಶುಕ್ರವಾರದಂದು ಹುಳಿ ಪದಾರ್ಥ ತಿನ್ನಲೇಬಾರದು ಯಾಕೆ ಗೊತ್ತಾ?
ಇಂದು ಈ ರಾಶಿಯವರಿಗೆ ಹಣಕಾಸು ವಿಚಾರದಲ್ಲಿ ಅದೃಷ್ಟ!
ಇಂದು ಈ ರಾಶಿಯವರಿಗೆ ಹಣಕಾಸು ವಿಚಾರದಲ್ಲಿ ಅದೃಷ್ಟ!
ಬೆಂಗಳೂರಿನಲ್ಲಿ ಅಕ್ರಮವಾಗಿ ನೆಲೆಸಿದ್ದ ಬಾಂಗ್ಲಾ ವಲಸಿಗರ ಬಂಧನ
ಬೆಂಗಳೂರಿನಲ್ಲಿ ಅಕ್ರಮವಾಗಿ ನೆಲೆಸಿದ್ದ ಬಾಂಗ್ಲಾ ವಲಸಿಗರ ಬಂಧನ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!