Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಲೂಚಿಸ್ತಾನದಲ್ಲಿ ಸಂಭವಿಸಿದ ಎರಡು ಆತ್ಮಹತ್ಯಾ ಬಾಂಬ್ ಸ್ಫೋಟಗಳಿಗೆ ಭಾರತವೇ ಕಾರಣ ಎಂದ ಪಾಕಿಸ್ತಾನ

ಬಲೂಚಿಸ್ತಾನದಲ್ಲಿ ಶುಕ್ರವಾರ ನಡೆದ ಎರಡು ಆತ್ಮಹತ್ಯಾ ಬಾಂಬ್ ಸ್ಫೋಟಗಳಲ್ಲಿ ಭಾರತದ ಗುಪ್ತಚರ ಸಂಸ್ಥೆ ಭಾಗಿಯಾಗಿದೆ ಎಂದು ಪಾಕಿಸ್ತಾನ ಆರೋಪಿಸಿದೆ. ವಾಸ್ತವವಾಗಿ, ಪ್ರವಾದಿ ಮುಹಮ್ಮದ್ ಅವರ ಜನ್ಮದಿನವನ್ನು ಆಚರಿಸಲು ಜನರು ಗುಂಪು ಸೇರುತ್ತಿದ್ದಾಗ ಬಲೂಚಿಸ್ತಾನದ ಮಸ್ತಂಗ್ ಜಿಲ್ಲೆಯ ಮಸೀದಿಯ ಬಳಿ ಸ್ಫೋಟ ಸಂಭವಿಸಿದೆ. ಕೆಲವು ಗಂಟೆಗಳ ನಂತರ, ಖೈಬರ್ ಪಖ್ತುಂಖ್ವಾದ ಹಂಗುವಿನ ದೋಬಾ ಪೊಲೀಸ್ ಠಾಣೆ ಬಳಿಯ ಮಸೀದಿಯೊಳಗೆ ಸ್ಫೋಟ ಸಂಭವಿಸಿದೆ.

ಬಲೂಚಿಸ್ತಾನದಲ್ಲಿ ಸಂಭವಿಸಿದ ಎರಡು ಆತ್ಮಹತ್ಯಾ ಬಾಂಬ್ ಸ್ಫೋಟಗಳಿಗೆ ಭಾರತವೇ ಕಾರಣ ಎಂದ ಪಾಕಿಸ್ತಾನ
ಆತ್ಮಹತ್ಯಾ ಬಾಂಬ್ ದಾಳಿImage Credit source: IndiaToday
Follow us
ನಯನಾ ರಾಜೀವ್
|

Updated on: Oct 01, 2023 | 10:59 AM

ಬಲೂಚಿಸ್ತಾನದಲ್ಲಿ ಶುಕ್ರವಾರ ನಡೆದ ಎರಡು ಆತ್ಮಹತ್ಯಾ ಬಾಂಬ್ ಸ್ಫೋಟ(Bomb Blast)ಗಳಲ್ಲಿ ಭಾರತದ ಗುಪ್ತಚರ ಸಂಸ್ಥೆ ಭಾಗಿಯಾಗಿದೆ ಎಂದು ಪಾಕಿಸ್ತಾನ ಆರೋಪಿಸಿದೆ. ವಾಸ್ತವವಾಗಿ, ಪ್ರವಾದಿ ಮುಹಮ್ಮದ್ ಅವರ ಜನ್ಮದಿನವನ್ನು ಆಚರಿಸಲು ಜನರು ಗುಂಪು ಸೇರುತ್ತಿದ್ದಾಗ ಬಲೂಚಿಸ್ತಾನದ ಮಸ್ತಂಗ್ ಜಿಲ್ಲೆಯ ಮಸೀದಿಯ ಬಳಿ ಸ್ಫೋಟ ಸಂಭವಿಸಿದೆ. ಕೆಲವು ಗಂಟೆಗಳ ನಂತರ, ಖೈಬರ್ ಪಖ್ತುಂಖ್ವಾದ ಹಂಗುವಿನ ದೋಬಾ ಪೊಲೀಸ್ ಠಾಣೆ ಬಳಿಯ ಮಸೀದಿಯೊಳಗೆ ಸ್ಫೋಟ ಸಂಭವಿಸಿದೆ.

ಬಲೂಚಿಸ್ತಾನದ ರಾಜಧಾನಿ ಕ್ವೆಟ್ಟಾದಲ್ಲಿ ಪಾಕಿಸ್ತಾನದ ಗೃಹ ಸಚಿವ ಸರ್ಫರಾಜ್ ಬುಗ್ತಿ ಅವರು ಆತ್ಮಾಹುತಿ ದಾಳಿಯಲ್ಲಿ ಭಾರತದ ಸಂಶೋಧನೆ ಮತ್ತು ವಿಶ್ಲೇಷಣಾ ವಿಭಾಗ (RAW) ಭಾಗಿಯಾಗಿದ್ದಾರೆ ಎಂದು ಹೇಳಿದ್ದಾರೆ. ಬಾಂಬ್‌ನ ಡಿಎನ್‌ಎಯನ್ನು ಪರಿಶೀಲನೆಗೆ ಕಳುಹಿಸಲಾಗಿದೆ ಎಂದು ತಿಳಿಸಿದ್ದಾರೆ. ಅದೇ ಸಮಯದಲ್ಲಿ, ಅಪರಿಚಿತ ದಾಳಿಕೋರನ ವಿರುದ್ಧ ಕೊಲೆ ಮತ್ತು ಭಯೋತ್ಪಾದನೆಯ ಆರೋಪಗಳೊಂದಿಗೆ ಎಫ್‌ಐಆರ್ ದಾಖಲಿಸಲಾಗಿದೆ.

ಯಾವುದೇ ಗುಂಪು ಇಲ್ಲಿಯವರೆಗೆ ದಾಳಿಯ ಹೊಣೆಯನ್ನು ಹೊತ್ತುಕೊಂಡಿಲ್ಲ, ಆದಾಗ್ಯೂ, ನಿಷೇಧಿತ ತೆಹ್ರೀಕ್-ಎ-ತಾಲಿಬಾನ್ ಪಾಕಿಸ್ತಾನ್ (ಟಿಟಿಪಿ) ಶುಕ್ರವಾರದ ಸ್ಫೋಟದಲ್ಲಿ ತಾವು ಭಾಗಿಯಾಗಿಲ್ಲ ಎಂದು ವರದಿ ಹೇಳಿದೆ. ಘಟನೆಯ ಕುರಿತು ತನಿಖೆ ಮುಂದುವರೆದಿದೆ ಮತ್ತು ಇನ್ನೂ ಯಾರನ್ನೂ ಬಂಧಿಸಲಾಗಿಲ್ಲ.

ಮತ್ತಷ್ಟು ಓದಿ: Balochistan Bomb Blast:ಬಲೂಚಿಸ್ತಾನದ ಮಸೀದಿ ಬಳಿ ಬಾಂಬ್ ಸ್ಫೋಟ, 20ಕ್ಕೂ ಅಧಿಕ ಮಂದಿ ಸಾವು, ಹಲವರಿಗೆ ಗಾಯ

ಮಸೀದಿ ಬಳಿ ಪ್ರಬಲ ಬಾಂಬ್ ಸ್ಫೋಟಗೊಂಡಿದೆ. ಕನಿಷ್ಠ 58 ಜನರು ಸಾವನ್ನಪ್ಪಿದರು ಮತ್ತು 100 ಜನರು ಗಾಯಗೊಂಡರು. ಸಾವಿನ ಸಂಖ್ಯೆಯೂ ಹೆಚ್ಚಾಗಬಹುದು ಎಂದು ಅಂದಾಜಿಸಲಾಗಿದೆ, ಪ್ರವಾದಿ ಮುಹಮ್ಮದ್ ಅವರ ಜನ್ಮದಿನವನ್ನು ಆಚರಿಸಲು ಜನರು ರ್ಯಾಲಿಗಾಗಿ ಸೇರಿದ್ದಾಗ ಸ್ಫೋಟ ಸಂಭವಿಸಿದೆ. ಮಸ್ತುಂಗ್ ಜಿಲ್ಲೆಯಲ್ಲಿ ಸ್ಫೋಟ ಸಂಭವಿಸಿದೆ.

ಈ ಮಧ್ಯೆ, ಖೈಬರ್ ಪಖ್ತುಂಖ್ವಾದ ಹಂಗುವಿನ ದೋಬಾ ಪೊಲೀಸ್ ಠಾಣೆ ಬಳಿಯ ಮಸೀದಿಯೊಳಗೆ ಸ್ಫೋಟ ಸಂಭವಿಸಿದೆ. ಈ ಅವಧಿಯಲ್ಲಿ ಕನಿಷ್ಠ ಐದು ಜನರು ಸಾವನ್ನಪ್ಪಿದರು, 12 ಮಂದಿ ಗಾಯಗೊಂಡರು. ಸ್ಫೋಟದ ರಭಸಕ್ಕೆ ಮಸೀದಿಯ ಮೇಲ್ಛಾವಣಿ ಕುಸಿದಿದೆ. ಸುಮಾರು 30ರಿಂದ 40 ಮಂದಿ ಅವಶೇಷಗಳಡಿ ಸಿಲುಕಿದ್ದಾರೆ ಎಂದು ವರದಿಯಾಗಿದೆ. ದಾಳಿಯ ಹಿನ್ನೆಲೆಯಲ್ಲಿ ಬಲೂಚಿಸ್ತಾನದ ಉಸ್ತುವಾರಿ ಸರ್ಕಾರ ಮೂರು ದಿನಗಳ ಶೋಕಾಚರಣೆಯನ್ನು ಘೋಷಿಸಿತು.

ಅಂತಾರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ಮೋದಿ ತಾತ ಕೊಟ್ಟ ನವಿಲುಗರಿ ಹಿಡಿದು ಕುಣಿದಾಡಿದ ಜೆಡಿ ವ್ಯಾನ್ಸ್ ಮಕ್ಕಳು
ಮೋದಿ ತಾತ ಕೊಟ್ಟ ನವಿಲುಗರಿ ಹಿಡಿದು ಕುಣಿದಾಡಿದ ಜೆಡಿ ವ್ಯಾನ್ಸ್ ಮಕ್ಕಳು
ಓಂ ಪ್ರಕಾಶ್​ ಹತ್ಯೆ: ಏನಿದು ಸ್ಕಿಜೋಫ್ರೇನಿಯಾ ರೋಗ? ಎಷ್ಟು ಡೇಂಜರ್​?
ಓಂ ಪ್ರಕಾಶ್​ ಹತ್ಯೆ: ಏನಿದು ಸ್ಕಿಜೋಫ್ರೇನಿಯಾ ರೋಗ? ಎಷ್ಟು ಡೇಂಜರ್​?
ಕಾರು ಅಡ್ಡಗಟ್ಟಿ ಮಧ್ಯದ ಬೆರಳು ತೋರಿಸಿ ನಿಂದಿನಿಸಿದ ಆಟೋ ಚಾಲಕ
ಕಾರು ಅಡ್ಡಗಟ್ಟಿ ಮಧ್ಯದ ಬೆರಳು ತೋರಿಸಿ ನಿಂದಿನಿಸಿದ ಆಟೋ ಚಾಲಕ
ನಾಸಿಕ್‌ನಲ್ಲಿ ಕುಡಿಯುವ ನೀರಿಗಾಗಿ ಜೀವವನ್ನೇ ಪಣಕ್ಕಿಟ್ಟು ಬಾವಿಗಿಳಿದ ಮಹಿಳೆ
ನಾಸಿಕ್‌ನಲ್ಲಿ ಕುಡಿಯುವ ನೀರಿಗಾಗಿ ಜೀವವನ್ನೇ ಪಣಕ್ಕಿಟ್ಟು ಬಾವಿಗಿಳಿದ ಮಹಿಳೆ
ಬೆಂಗಳೂರಿನಲ್ಲಿ ರಾಯಲ್ ಎನ್ಫೀಲ್ಡ್ ಬುಲೆಟ್ ಓಡಿಸಿದ ಪುಟ್ಟ ಬಾಲಕ!
ಬೆಂಗಳೂರಿನಲ್ಲಿ ರಾಯಲ್ ಎನ್ಫೀಲ್ಡ್ ಬುಲೆಟ್ ಓಡಿಸಿದ ಪುಟ್ಟ ಬಾಲಕ!
ಕೊಲೆಯಾದ ನಿವೃತ್ತ ಐಪಿಎಸ್​​ ಓಂಪ್ರಕಾಶ್​ ಫಾರ್ಮ್ ಹೌಸ್ ಹೇಗಿದೆ ನೋಡಿ...!
ಕೊಲೆಯಾದ ನಿವೃತ್ತ ಐಪಿಎಸ್​​ ಓಂಪ್ರಕಾಶ್​ ಫಾರ್ಮ್ ಹೌಸ್ ಹೇಗಿದೆ ನೋಡಿ...!
ಯುಎಸ್ ಉಪಾಧ್ಯಕ್ಷ ಜೆಡಿ. ವ್ಯಾನ್ಸ್ ಕುಟುಂಬಕ್ಕೆ ಶಾಸ್ತ್ರೀಯ ನೃತ್ಯದ ಸ್ವಾಗತ
ಯುಎಸ್ ಉಪಾಧ್ಯಕ್ಷ ಜೆಡಿ. ವ್ಯಾನ್ಸ್ ಕುಟುಂಬಕ್ಕೆ ಶಾಸ್ತ್ರೀಯ ನೃತ್ಯದ ಸ್ವಾಗತ
VIDEO: ಮೊದಲು ಕಿತ್ತಾಟ... ಆಮೇಲೆ ಸ್ನೇಹಹಸ್ತ: ಇದು ವಿರಾಟ್ ಕೊಹ್ಲಿ
VIDEO: ಮೊದಲು ಕಿತ್ತಾಟ... ಆಮೇಲೆ ಸ್ನೇಹಹಸ್ತ: ಇದು ವಿರಾಟ್ ಕೊಹ್ಲಿ
ಹುಲಿಯನ್ನೇ ಅಟ್ಟಾಡಿಸಿದ ಒಂಟಿ ಸಲಗ: ಅಪರೂಪದ ವಿಡಿಯೋ ವೈರಲ್​
ಹುಲಿಯನ್ನೇ ಅಟ್ಟಾಡಿಸಿದ ಒಂಟಿ ಸಲಗ: ಅಪರೂಪದ ವಿಡಿಯೋ ವೈರಲ್​
VIDEO: ಅಣ್ಣನ ಬ್ಯಾಟಿಂಗ್ ಎಂಟ್ರಿಗೆ ಬಿಕ್ಕಳಿಸಿ ಅತ್ತ ತಮ್ಮ
VIDEO: ಅಣ್ಣನ ಬ್ಯಾಟಿಂಗ್ ಎಂಟ್ರಿಗೆ ಬಿಕ್ಕಳಿಸಿ ಅತ್ತ ತಮ್ಮ