AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಲೂಚಿಸ್ತಾನದಲ್ಲಿ ಸಂಭವಿಸಿದ ಎರಡು ಆತ್ಮಹತ್ಯಾ ಬಾಂಬ್ ಸ್ಫೋಟಗಳಿಗೆ ಭಾರತವೇ ಕಾರಣ ಎಂದ ಪಾಕಿಸ್ತಾನ

ಬಲೂಚಿಸ್ತಾನದಲ್ಲಿ ಶುಕ್ರವಾರ ನಡೆದ ಎರಡು ಆತ್ಮಹತ್ಯಾ ಬಾಂಬ್ ಸ್ಫೋಟಗಳಲ್ಲಿ ಭಾರತದ ಗುಪ್ತಚರ ಸಂಸ್ಥೆ ಭಾಗಿಯಾಗಿದೆ ಎಂದು ಪಾಕಿಸ್ತಾನ ಆರೋಪಿಸಿದೆ. ವಾಸ್ತವವಾಗಿ, ಪ್ರವಾದಿ ಮುಹಮ್ಮದ್ ಅವರ ಜನ್ಮದಿನವನ್ನು ಆಚರಿಸಲು ಜನರು ಗುಂಪು ಸೇರುತ್ತಿದ್ದಾಗ ಬಲೂಚಿಸ್ತಾನದ ಮಸ್ತಂಗ್ ಜಿಲ್ಲೆಯ ಮಸೀದಿಯ ಬಳಿ ಸ್ಫೋಟ ಸಂಭವಿಸಿದೆ. ಕೆಲವು ಗಂಟೆಗಳ ನಂತರ, ಖೈಬರ್ ಪಖ್ತುಂಖ್ವಾದ ಹಂಗುವಿನ ದೋಬಾ ಪೊಲೀಸ್ ಠಾಣೆ ಬಳಿಯ ಮಸೀದಿಯೊಳಗೆ ಸ್ಫೋಟ ಸಂಭವಿಸಿದೆ.

ಬಲೂಚಿಸ್ತಾನದಲ್ಲಿ ಸಂಭವಿಸಿದ ಎರಡು ಆತ್ಮಹತ್ಯಾ ಬಾಂಬ್ ಸ್ಫೋಟಗಳಿಗೆ ಭಾರತವೇ ಕಾರಣ ಎಂದ ಪಾಕಿಸ್ತಾನ
ಆತ್ಮಹತ್ಯಾ ಬಾಂಬ್ ದಾಳಿImage Credit source: IndiaToday
ನಯನಾ ರಾಜೀವ್
|

Updated on: Oct 01, 2023 | 10:59 AM

Share

ಬಲೂಚಿಸ್ತಾನದಲ್ಲಿ ಶುಕ್ರವಾರ ನಡೆದ ಎರಡು ಆತ್ಮಹತ್ಯಾ ಬಾಂಬ್ ಸ್ಫೋಟ(Bomb Blast)ಗಳಲ್ಲಿ ಭಾರತದ ಗುಪ್ತಚರ ಸಂಸ್ಥೆ ಭಾಗಿಯಾಗಿದೆ ಎಂದು ಪಾಕಿಸ್ತಾನ ಆರೋಪಿಸಿದೆ. ವಾಸ್ತವವಾಗಿ, ಪ್ರವಾದಿ ಮುಹಮ್ಮದ್ ಅವರ ಜನ್ಮದಿನವನ್ನು ಆಚರಿಸಲು ಜನರು ಗುಂಪು ಸೇರುತ್ತಿದ್ದಾಗ ಬಲೂಚಿಸ್ತಾನದ ಮಸ್ತಂಗ್ ಜಿಲ್ಲೆಯ ಮಸೀದಿಯ ಬಳಿ ಸ್ಫೋಟ ಸಂಭವಿಸಿದೆ. ಕೆಲವು ಗಂಟೆಗಳ ನಂತರ, ಖೈಬರ್ ಪಖ್ತುಂಖ್ವಾದ ಹಂಗುವಿನ ದೋಬಾ ಪೊಲೀಸ್ ಠಾಣೆ ಬಳಿಯ ಮಸೀದಿಯೊಳಗೆ ಸ್ಫೋಟ ಸಂಭವಿಸಿದೆ.

ಬಲೂಚಿಸ್ತಾನದ ರಾಜಧಾನಿ ಕ್ವೆಟ್ಟಾದಲ್ಲಿ ಪಾಕಿಸ್ತಾನದ ಗೃಹ ಸಚಿವ ಸರ್ಫರಾಜ್ ಬುಗ್ತಿ ಅವರು ಆತ್ಮಾಹುತಿ ದಾಳಿಯಲ್ಲಿ ಭಾರತದ ಸಂಶೋಧನೆ ಮತ್ತು ವಿಶ್ಲೇಷಣಾ ವಿಭಾಗ (RAW) ಭಾಗಿಯಾಗಿದ್ದಾರೆ ಎಂದು ಹೇಳಿದ್ದಾರೆ. ಬಾಂಬ್‌ನ ಡಿಎನ್‌ಎಯನ್ನು ಪರಿಶೀಲನೆಗೆ ಕಳುಹಿಸಲಾಗಿದೆ ಎಂದು ತಿಳಿಸಿದ್ದಾರೆ. ಅದೇ ಸಮಯದಲ್ಲಿ, ಅಪರಿಚಿತ ದಾಳಿಕೋರನ ವಿರುದ್ಧ ಕೊಲೆ ಮತ್ತು ಭಯೋತ್ಪಾದನೆಯ ಆರೋಪಗಳೊಂದಿಗೆ ಎಫ್‌ಐಆರ್ ದಾಖಲಿಸಲಾಗಿದೆ.

ಯಾವುದೇ ಗುಂಪು ಇಲ್ಲಿಯವರೆಗೆ ದಾಳಿಯ ಹೊಣೆಯನ್ನು ಹೊತ್ತುಕೊಂಡಿಲ್ಲ, ಆದಾಗ್ಯೂ, ನಿಷೇಧಿತ ತೆಹ್ರೀಕ್-ಎ-ತಾಲಿಬಾನ್ ಪಾಕಿಸ್ತಾನ್ (ಟಿಟಿಪಿ) ಶುಕ್ರವಾರದ ಸ್ಫೋಟದಲ್ಲಿ ತಾವು ಭಾಗಿಯಾಗಿಲ್ಲ ಎಂದು ವರದಿ ಹೇಳಿದೆ. ಘಟನೆಯ ಕುರಿತು ತನಿಖೆ ಮುಂದುವರೆದಿದೆ ಮತ್ತು ಇನ್ನೂ ಯಾರನ್ನೂ ಬಂಧಿಸಲಾಗಿಲ್ಲ.

ಮತ್ತಷ್ಟು ಓದಿ: Balochistan Bomb Blast:ಬಲೂಚಿಸ್ತಾನದ ಮಸೀದಿ ಬಳಿ ಬಾಂಬ್ ಸ್ಫೋಟ, 20ಕ್ಕೂ ಅಧಿಕ ಮಂದಿ ಸಾವು, ಹಲವರಿಗೆ ಗಾಯ

ಮಸೀದಿ ಬಳಿ ಪ್ರಬಲ ಬಾಂಬ್ ಸ್ಫೋಟಗೊಂಡಿದೆ. ಕನಿಷ್ಠ 58 ಜನರು ಸಾವನ್ನಪ್ಪಿದರು ಮತ್ತು 100 ಜನರು ಗಾಯಗೊಂಡರು. ಸಾವಿನ ಸಂಖ್ಯೆಯೂ ಹೆಚ್ಚಾಗಬಹುದು ಎಂದು ಅಂದಾಜಿಸಲಾಗಿದೆ, ಪ್ರವಾದಿ ಮುಹಮ್ಮದ್ ಅವರ ಜನ್ಮದಿನವನ್ನು ಆಚರಿಸಲು ಜನರು ರ್ಯಾಲಿಗಾಗಿ ಸೇರಿದ್ದಾಗ ಸ್ಫೋಟ ಸಂಭವಿಸಿದೆ. ಮಸ್ತುಂಗ್ ಜಿಲ್ಲೆಯಲ್ಲಿ ಸ್ಫೋಟ ಸಂಭವಿಸಿದೆ.

ಈ ಮಧ್ಯೆ, ಖೈಬರ್ ಪಖ್ತುಂಖ್ವಾದ ಹಂಗುವಿನ ದೋಬಾ ಪೊಲೀಸ್ ಠಾಣೆ ಬಳಿಯ ಮಸೀದಿಯೊಳಗೆ ಸ್ಫೋಟ ಸಂಭವಿಸಿದೆ. ಈ ಅವಧಿಯಲ್ಲಿ ಕನಿಷ್ಠ ಐದು ಜನರು ಸಾವನ್ನಪ್ಪಿದರು, 12 ಮಂದಿ ಗಾಯಗೊಂಡರು. ಸ್ಫೋಟದ ರಭಸಕ್ಕೆ ಮಸೀದಿಯ ಮೇಲ್ಛಾವಣಿ ಕುಸಿದಿದೆ. ಸುಮಾರು 30ರಿಂದ 40 ಮಂದಿ ಅವಶೇಷಗಳಡಿ ಸಿಲುಕಿದ್ದಾರೆ ಎಂದು ವರದಿಯಾಗಿದೆ. ದಾಳಿಯ ಹಿನ್ನೆಲೆಯಲ್ಲಿ ಬಲೂಚಿಸ್ತಾನದ ಉಸ್ತುವಾರಿ ಸರ್ಕಾರ ಮೂರು ದಿನಗಳ ಶೋಕಾಚರಣೆಯನ್ನು ಘೋಷಿಸಿತು.

ಅಂತಾರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ಬಿಗ್​​ಬಾಸ್ ಫಿನಾಲೆಗೆ ಕನ್ನಡತಿಯರ ಎಂಟ್ರಿ: ಗೆದ್ದವರಿಗೆ ಸಿಗುವ ಹಣವೆಷ್ಟು?
ಬಿಗ್​​ಬಾಸ್ ಫಿನಾಲೆಗೆ ಕನ್ನಡತಿಯರ ಎಂಟ್ರಿ: ಗೆದ್ದವರಿಗೆ ಸಿಗುವ ಹಣವೆಷ್ಟು?
ಮುಂದೆ ನಮ್ರತೆ ಕಲಿತುಕೊಳ್ಳೋಣ ಬಿಡಿ: ಮೋಹನ್ ದಾಸ್ ಪೈಗೆ ಡಿಕೆಶಿ ಟಾಂಗ್
ಮುಂದೆ ನಮ್ರತೆ ಕಲಿತುಕೊಳ್ಳೋಣ ಬಿಡಿ: ಮೋಹನ್ ದಾಸ್ ಪೈಗೆ ಡಿಕೆಶಿ ಟಾಂಗ್
8 ಮಂದಿ ಪೊಲೀಸ್ ಸಸ್ಪೆಂಡ್: ಅಧಿವೇಶನದಲ್ಲಿ ಸದ್ದು ಮಾಡಲಿದೆ ಖಾಕಿ ಕಳ್ಳಾಟ
8 ಮಂದಿ ಪೊಲೀಸ್ ಸಸ್ಪೆಂಡ್: ಅಧಿವೇಶನದಲ್ಲಿ ಸದ್ದು ಮಾಡಲಿದೆ ಖಾಕಿ ಕಳ್ಳಾಟ
ಬೆಳಗಾವಿಯ ಚಳಿಗಾಲದ ಅಧಿವೇಶನದ ನೇರಪ್ರಸಾರ
ಬೆಳಗಾವಿಯ ಚಳಿಗಾಲದ ಅಧಿವೇಶನದ ನೇರಪ್ರಸಾರ
ಚಿಕ್ಕಬಳ್ಳಾಪುರದಲ್ಲಿ ಸರಣಿ ಅಪಘಾತ: ತಪ್ಪಿದ ಭಾರಿ ಅನಾಹುತ
ಚಿಕ್ಕಬಳ್ಳಾಪುರದಲ್ಲಿ ಸರಣಿ ಅಪಘಾತ: ತಪ್ಪಿದ ಭಾರಿ ಅನಾಹುತ
ವೇದಿಕೆಯಲ್ಲಿ ವೈದ್ಯೆಯ ಹಿಜಾಬ್ ಎಳೆದ ಸಿಎಂ ನಿತೀಶ್ ಕುಮಾರ್
ವೇದಿಕೆಯಲ್ಲಿ ವೈದ್ಯೆಯ ಹಿಜಾಬ್ ಎಳೆದ ಸಿಎಂ ನಿತೀಶ್ ಕುಮಾರ್
ಧ್ರುವಂತ್​ನ ಸೀಕ್ರೆಟ್​ರೂಂನಲ್ಲಿ ಇಟ್ಟ ಬಗ್ಗೆ ಬಿಗ್ ಬಾಸ್​ಗೆ ಬೇಸರ?
ಧ್ರುವಂತ್​ನ ಸೀಕ್ರೆಟ್​ರೂಂನಲ್ಲಿ ಇಟ್ಟ ಬಗ್ಗೆ ಬಿಗ್ ಬಾಸ್​ಗೆ ಬೇಸರ?
‘ಸು ಫ್ರಮ್ ಸೋ’ ಯಶಸ್ಸಿನ ಮೂಲವನ್ನು‘45’ ನಿರ್ಮಾಪಕನಿಗೆ ಹಸ್ತಾಂತರಿಸಿದ ರಾಜ್
‘ಸು ಫ್ರಮ್ ಸೋ’ ಯಶಸ್ಸಿನ ಮೂಲವನ್ನು‘45’ ನಿರ್ಮಾಪಕನಿಗೆ ಹಸ್ತಾಂತರಿಸಿದ ರಾಜ್
ದೆಹಲಿ-ಆಗ್ರಾ ಎಕ್ಸ್​ಪ್ರೆಸ್​ವೇನಲ್ಲಿ ಹಲವು ಬಸ್​ಗಳಿಗೆ ಬೆಂಕಿ
ದೆಹಲಿ-ಆಗ್ರಾ ಎಕ್ಸ್​ಪ್ರೆಸ್​ವೇನಲ್ಲಿ ಹಲವು ಬಸ್​ಗಳಿಗೆ ಬೆಂಕಿ
ಧನುರ್ಮಾಸದಲ್ಲಿ ಶುಭಕಾರ್ಯಗಳನ್ನ ಮಾಡಬಾರದು ಯಾಕೆ ಗೊತ್ತಾ?
ಧನುರ್ಮಾಸದಲ್ಲಿ ಶುಭಕಾರ್ಯಗಳನ್ನ ಮಾಡಬಾರದು ಯಾಕೆ ಗೊತ್ತಾ?