AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪಾಕಿಸ್ತಾನ: ಉಪ ಚುನಾವಣೆ ಪ್ರಚಾರದ ವೇಳೆ ಬಾಂಬ್​ ಸ್ಫೋಟ, ಮೂವರು ಸಾವು

ಪಾಕಿಸ್ತಾನದಲ್ಲಿ ನಡೆದ ಬಾಂಬ್​ ಸ್ಫೋಟದಲ್ಲಿ ಮಾಜಿ ಸೆನೆಟರ್ ಸೇರಿ ಮೂವರು ಸಾವನ್ನಪ್ಪಿದ್ದಾರೆ. ಚುನಾವಣಾ ಪ್ರಚಾರದ ಸಮಯದಲ್ಲಿ ರಿಮೋಟ್​ ಕಂಟ್ರೋಲ್​ನಿಂದ ಬಾಂಬ್​ ಸ್ಫೋಟಿಸಲಾಗಿದೆ ಎನ್ನುವ ಮಾಹಿತಿ ಲಭ್ಯವಾಗಿದೆ.

ಪಾಕಿಸ್ತಾನ: ಉಪ ಚುನಾವಣೆ ಪ್ರಚಾರದ ವೇಳೆ ಬಾಂಬ್​ ಸ್ಫೋಟ, ಮೂವರು ಸಾವು
ಬಾಂಬ್ ಸ್ಫೋಟImage Credit source: India Today
ನಯನಾ ರಾಜೀವ್
|

Updated on: Jul 04, 2024 | 11:29 AM

Share

ಪಾಕಿಸ್ತಾನದಲ್ಲಿ ಸಂಭವಿಸಿದ ಬಾಂಬ್ ಸ್ಫೋಟ(Bomb Blast)ದಲ್ಲಿ ಮಾಜಿ ಸೆನೆಟರ್ ಸೇರಿ ಮೂವರು ಸಾವನ್ನಪ್ಪಿದ್ದಾರೆ ಎನ್ನುವ ಮಾಹಿತಿ ಲಭ್ಯವಾಗಿದೆ. ರಿಮೋಟ್ ಕಂಟ್ರೋಲ್ ಬಳಸಿ ಸ್ಫೋಟಿಸಲಾಗಿದೆ, ಅಪಘಾತದ ಸಮಯದಲ್ಲಿ, ಸೆನೆಟರ್ ಹಿದಾಯತುಲ್ಲಾ ಖಾನ್ ಮಮಂಡ್ ಬಜೌರ್ ಪ್ರದೇಶದ ದಾಮೋದೋಲಾ ಪ್ರದೇಶದಲ್ಲಿದ್ದರು.

ಘಟನೆಯ ಸಮಯದಲ್ಲಿ ಅವರು ಉಪಚುನಾವಣೆಯಲ್ಲಿ ತಮ್ಮ ಸೋದರಳಿಯ ನಜೀಬುಲ್ಲಾ ಖಾನ್ ಪರ ಪ್ರಚಾರ ನಡೆಸುತ್ತಿದ್ದರು. ಪಾಕಿಸ್ತಾನದ ಪಖ್ತುಂಖ್ವಾ ಪ್ರಾಂತ್ಯದಲ್ಲಿ ಜುಲೈ 12 ರಂದು ಉಪ ಚುನಾವಣೆ ನಡೆಯಲಿದೆ. ಅಫ್ಘಾನಿಸ್ತಾನ-ಪಾಕಿಸ್ತಾನ ಗಡಿಯಿಂದ 45 ಕಿಲೋಮೀಟರ್ ದೂರದಲ್ಲಿರುವ ಬುಡಕಟ್ಟು ಪ್ರದೇಶದಲ್ಲಿ ಬಾಂಬ್ ಸ್ಫೋಟ ಸಂಭವಿಸಿದೆ ಎಂದು ಹೇಳಲಾಗುತ್ತಿದೆ.

ಪಾಕಿಸ್ತಾನದ ಖೈಬರ್ ಪಖ್ತುಂಖ್ವಾ ಪ್ರಾಂತ್ಯದ ಮುಖ್ಯಮಂತ್ರಿ ಅಲಿ ಅಮೀನ್ ಗೊಂಡಾಪುರ್ ಮತ್ತು ಮುಖ್ಯ ಕಾರ್ಯದರ್ಶಿ ನದೀಮ್ ಅಸ್ಲಾಂ ಚೌಧರಿ ಕೂಡ ಈ ಸ್ಫೋಟವನ್ನು ಖಂಡಿಸಿದ್ದಾರೆ. ಮುಖ್ಯಮಂತ್ರಿ ಅಲಿ ಅಮೀನ್ ಅವರು ಪ್ರಕರಣದ ಪ್ರತಿಯೊಂದು ಅಂಶವನ್ನು ತನಿಖೆ ಮಾಡಿ ಪ್ರಾಂತೀಯ ಪೊಲೀಸರಿಂದ ವರದಿ ಕೇಳಿದ್ದಾರೆ.

ಮತ್ತಷ್ಟು ಓದಿ: Bomb Blast: ಹೂಗ್ಲಿಯಲ್ಲಿ ಬಾಂಬ್​ ಸ್ಫೋಟ, ಓರ್ವ ಸಾವು, ಇಬ್ಬರಿಗೆ ಗಾಯ

ಪಾಕಿಸ್ತಾನ ಅಧ್ಯಕ್ಷ ಆಸಿಫ್ ಅಲಿ ಜರ್ದಾರಿ ಕೂಡ ಘಟನೆಯನ್ನು ತೀವ್ರವಾಗಿ ಖಂಡಿಸಿದ್ದಾರೆ. ಅಲ್ಲದೆ ಮಾಜಿ ಸೆನೆಟರ್ ಮತ್ತು ಮೂವರ ಸಾವಿನ ಬಗ್ಗೆ ದುಃಖ ವ್ಯಕ್ತಪಡಿಸಿದ್ದಾರೆ.

ಮಾಜಿ ಸೆನೆಟರ್ ಎರಡು ಬಾರಿ ಸ್ವತಂತ್ರವಾಗಿ ಆಯ್ಕೆಯಾಗಿದ್ದರು. 2012 ರಿಂದ 2018 ರವರೆಗೆ ಒಮ್ಮೆ ಮತ್ತು 2018 ರಿಂದ 2024 ರವರೆಗೆ ಎರಡನೇ ಬಾರಿ. ಉಲ್ಲಾ ಅವರು ವಾಯುಯಾನದ ಅಧ್ಯಕ್ಷರಾಗಿ ಮೇಲ್ಮನೆಯ ಸ್ಥಾಯಿ ಸಮಿತಿ ಮತ್ತು ರಾಷ್ಟ್ರೀಯ ಭಯೋತ್ಪಾದನಾ ನಿಗ್ರಹ ಪ್ರಾಧಿಕಾರದ (NACTA) ಸದಸ್ಯರಾಗಿ ಸೇವೆ ಸಲ್ಲಿಸಿದ್ದಾರೆ.

ಅಂತಾರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ಲೇಡಿ ಗೆಟಪ್ ವಿಷಯಕ್ಕೆ ಶಿವಣ್ಣನ ಕಾಲೆಳೆದ ಉಪೇಂದ್ರ; ಎಷ್ಟು ಕ್ಯೂಟ್ ನೋಡಿ
ಲೇಡಿ ಗೆಟಪ್ ವಿಷಯಕ್ಕೆ ಶಿವಣ್ಣನ ಕಾಲೆಳೆದ ಉಪೇಂದ್ರ; ಎಷ್ಟು ಕ್ಯೂಟ್ ನೋಡಿ
ಬಿಗ್​​ಬಾಸ್ ಫಿನಾಲೆಗೆ ಕನ್ನಡತಿಯರ ಎಂಟ್ರಿ: ಗೆದ್ದವರಿಗೆ ಸಿಗುವ ಹಣವೆಷ್ಟು?
ಬಿಗ್​​ಬಾಸ್ ಫಿನಾಲೆಗೆ ಕನ್ನಡತಿಯರ ಎಂಟ್ರಿ: ಗೆದ್ದವರಿಗೆ ಸಿಗುವ ಹಣವೆಷ್ಟು?
ಮುಂದೆ ನಮ್ರತೆ ಕಲಿತುಕೊಳ್ಳೋಣ ಬಿಡಿ: ಮೋಹನ್ ದಾಸ್ ಪೈಗೆ ಡಿಕೆಶಿ ಟಾಂಗ್
ಮುಂದೆ ನಮ್ರತೆ ಕಲಿತುಕೊಳ್ಳೋಣ ಬಿಡಿ: ಮೋಹನ್ ದಾಸ್ ಪೈಗೆ ಡಿಕೆಶಿ ಟಾಂಗ್
8 ಮಂದಿ ಪೊಲೀಸ್ ಸಸ್ಪೆಂಡ್: ಅಧಿವೇಶನದಲ್ಲಿ ಸದ್ದು ಮಾಡಲಿದೆ ಖಾಕಿ ಕಳ್ಳಾಟ
8 ಮಂದಿ ಪೊಲೀಸ್ ಸಸ್ಪೆಂಡ್: ಅಧಿವೇಶನದಲ್ಲಿ ಸದ್ದು ಮಾಡಲಿದೆ ಖಾಕಿ ಕಳ್ಳಾಟ
ಬೆಳಗಾವಿಯ ಚಳಿಗಾಲದ ಅಧಿವೇಶನದ ನೇರಪ್ರಸಾರ
ಬೆಳಗಾವಿಯ ಚಳಿಗಾಲದ ಅಧಿವೇಶನದ ನೇರಪ್ರಸಾರ
ಚಿಕ್ಕಬಳ್ಳಾಪುರದಲ್ಲಿ ಸರಣಿ ಅಪಘಾತ: ತಪ್ಪಿದ ಭಾರಿ ಅನಾಹುತ
ಚಿಕ್ಕಬಳ್ಳಾಪುರದಲ್ಲಿ ಸರಣಿ ಅಪಘಾತ: ತಪ್ಪಿದ ಭಾರಿ ಅನಾಹುತ
ವೇದಿಕೆಯಲ್ಲಿ ವೈದ್ಯೆಯ ಹಿಜಾಬ್ ಎಳೆದ ಸಿಎಂ ನಿತೀಶ್ ಕುಮಾರ್
ವೇದಿಕೆಯಲ್ಲಿ ವೈದ್ಯೆಯ ಹಿಜಾಬ್ ಎಳೆದ ಸಿಎಂ ನಿತೀಶ್ ಕುಮಾರ್
ಧ್ರುವಂತ್​ನ ಸೀಕ್ರೆಟ್​ರೂಂನಲ್ಲಿ ಇಟ್ಟ ಬಗ್ಗೆ ಬಿಗ್ ಬಾಸ್​ಗೆ ಬೇಸರ?
ಧ್ರುವಂತ್​ನ ಸೀಕ್ರೆಟ್​ರೂಂನಲ್ಲಿ ಇಟ್ಟ ಬಗ್ಗೆ ಬಿಗ್ ಬಾಸ್​ಗೆ ಬೇಸರ?
‘ಸು ಫ್ರಮ್ ಸೋ’ ಯಶಸ್ಸಿನ ಮೂಲವನ್ನು‘45’ ನಿರ್ಮಾಪಕನಿಗೆ ಹಸ್ತಾಂತರಿಸಿದ ರಾಜ್
‘ಸು ಫ್ರಮ್ ಸೋ’ ಯಶಸ್ಸಿನ ಮೂಲವನ್ನು‘45’ ನಿರ್ಮಾಪಕನಿಗೆ ಹಸ್ತಾಂತರಿಸಿದ ರಾಜ್
ದೆಹಲಿ-ಆಗ್ರಾ ಎಕ್ಸ್​ಪ್ರೆಸ್​ವೇನಲ್ಲಿ ಹಲವು ಬಸ್​ಗಳಿಗೆ ಬೆಂಕಿ
ದೆಹಲಿ-ಆಗ್ರಾ ಎಕ್ಸ್​ಪ್ರೆಸ್​ವೇನಲ್ಲಿ ಹಲವು ಬಸ್​ಗಳಿಗೆ ಬೆಂಕಿ