AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪಾಕಿಸ್ತಾನ: ಬಲೂಚಿಸ್ತಾನದಲ್ಲಿ ಭದ್ರತಾ ಪಡೆಗಳಿದ್ದ ಬಸ್​ ಬಳಿ ಬಾಂಬ್ ಸ್ಫೋಟ, ಐವರು ಸಾವು

ಭದ್ರತಾ ಪಡೆಗಳಿದ್ದ ಬಸ್ ಬಳಿ ಬಾಂಬ್​ ಸ್ಫೋಟಗೊಂಡಿರುವ ಪರಿಣಾಮ ಐವರು ಅಧಿಕಾರಿಗಳು ಸಾವನ್ನಪ್ಪಿದ್ದು, 10 ಮಂದಿ ಗಾಯಗೊಂಡಿರುವ ಘಟನೆ ಪಾಕಿಸ್ತಾನದ ಬಲೂಚಿಸ್ತಾನದಲ್ಲಿ ನಡೆದಿದೆ. ಬಲೂಚಿಸ್ತಾನದ ನೌಷ್ಕಿ ಜಿಲ್ಲೆಯಲ್ಲಿ ಈ ದಾಳಿ ನಡೆದಿದೆ ಎಂದು ಸ್ಥಳೀಯ ಪೊಲೀಸ್ ಮುಖ್ಯಸ್ಥ ಜಾಫರ್ ಜಮಾನಾನಿ ತಿಳಿಸಿದ್ದಾರೆ. ಮೃತರು ಮತ್ತು ಗಾಯಾಳುಗಳನ್ನು ಹತ್ತಿರದ ಆಸ್ಪತ್ರೆಗೆ ಸಾಗಿಸಲಾಗಿದೆ. ಬಲೂಚಿಸ್ತಾನದ ಮುಖ್ಯಮಂತ್ರಿ ಸರ್ಫ್ರಾಜ್ ಬುಗ್ತಿ ಈ ದಾಳಿಯನ್ನು ಖಂಡಿಸಿದ್ದಾರೆ.

ಪಾಕಿಸ್ತಾನ: ಬಲೂಚಿಸ್ತಾನದಲ್ಲಿ ಭದ್ರತಾ ಪಡೆಗಳಿದ್ದ ಬಸ್​ ಬಳಿ ಬಾಂಬ್ ಸ್ಫೋಟ, ಐವರು ಸಾವು
ಬಸ್ Image Credit source: India TV
ನಯನಾ ರಾಜೀವ್
|

Updated on: Mar 16, 2025 | 3:01 PM

Share

ಬಲೂಚಿಸ್ತಾನ, ಮಾರ್ಚ್​ 16: ಭದ್ರತಾ ಪಡೆಗಳಿದ್ದ ಬಸ್ ಬಳಿ ಬಾಂಬ್​ ಸ್ಫೋಟಗೊಂಡಿರುವ ಪರಿಣಾಮ ಐವರು ಅಧಿಕಾರಿಗಳು ಸಾವನ್ನಪ್ಪಿದ್ದು, 10 ಮಂದಿ ಗಾಯಗೊಂಡಿರುವ ಘಟನೆ ಪಾಕಿಸ್ತಾನದ ಬಲೂಚಿಸ್ತಾನದಲ್ಲಿ ನಡೆದಿದೆ. ಬಲೂಚಿಸ್ತಾನದ ನೌಷ್ಕಿ ಜಿಲ್ಲೆಯಲ್ಲಿ ಈ ದಾಳಿ ನಡೆದಿದೆ ಎಂದು ಪೊಲೀಸ್ ಮುಖ್ಯಸ್ಥ ಜಾಫರ್ ಜಮಾನಾನಿ ತಿಳಿಸಿದ್ದಾರೆ. ಮೃತರು ಮತ್ತು ಗಾಯಾಳುಗಳನ್ನು ಹತ್ತಿರದ ಆಸ್ಪತ್ರೆಗೆ ಸಾಗಿಸಲಾಗಿದೆ. ಬಲೂಚಿಸ್ತಾನದ ಮುಖ್ಯಮಂತ್ರಿ ಸರ್ಫ್ರಾಜ್ ಬುಗ್ತಿ ಈ ದಾಳಿಯನ್ನು ಖಂಡಿಸಿದ್ದಾರೆ.

ಇಲ್ಲಿಯವರೆಗೆ ಬಾಂಬ್​ ಸ್ಫೋಟದ ಹೊಣೆಯನ್ನು ಯಾವ ಉಗ್ರ ಸಂಘಟನೆಗಳು ಹೊತ್ತುಕೊಂಡಿಲ್ಲ. ಕೆಲವು ದಿನಗಳ ಹಿಂದೆ ರೈಲಿನ ಮೇಲೆ ಹೊಂಚು ಹಾಕಿ, ಅದರಲ್ಲಿದ್ದ ಸುಮಾರು 400 ಜನರನ್ನು ಒತ್ತೆಯಾಳಾಗಿಟ್ಟುಕೊಂಡು 26 ಒತ್ತೆಯಾಳುಗಳನ್ನು ಕೊಂದ ಬಲೂಚ್ ಲಿಬರೇಶನ್ ಆರ್ಮಿಯ ಮೇಲೆ ಅನುಮಾನ ಮೂಡಿದೆ. ಭದ್ರತಾ ಪಡೆಗಳು ಕಾರ್ಯಾಚರಣೆ ನಡೆಸಿ ಎಲ್ಲಾ 33 ದಾಳಿಕೋರರನ್ನು ಕೊಂದಿದ್ದರು.

ತೈಲ ಮತ್ತು ಖನಿಜ ಸಮೃದ್ಧ ಬಲೂಚಿಸ್ತಾನ್ ಪಾಕಿಸ್ತಾನದ ಅತಿದೊಡ್ಡ ಮತ್ತು ಕಡಿಮೆ ಜನಸಂಖ್ಯೆ ಹೊಂದಿರುವ ಪ್ರಾಂತ್ಯವಾಗಿದೆ. ಬಲೂಚ್  ನಿವಾಸಿಗಳು ಕೇಂದ್ರ ಸರ್ಕಾರವು ತಾರತಮ್ಯವನ್ನು ತೋರಿಸುತ್ತಿದೆ ಎಂದು ಬಹಳ ಹಿಂದಿನಿಂದಲೂ ಆರೋಪಿಸುತ್ತಲೇ ಬಂದಿದ್ದಾರೆ ಇಸ್ಲಾಮಾಬಾದ್ ಈ ಆರೋಪವನ್ನು ನಿರಾಕರಿಸುತ್ತಲೇ ಬಂದಿದೆ.

ಮತ್ತಷ್ಟು ಓದಿ:ಪಾಕಿಸ್ತಾನದ ಮಸೀದಿಯಲ್ಲಿ ಭಾರೀ ಸ್ಫೋಟ; ಇಸ್ಲಾಮಿಕ್ ನಾಯಕ ಸೇರಿದಂತೆ ಮೂವರಿಗೆ ಗಾಯ

ಶನಿವಾರ ಮುಂಜಾನೆ, ಪಾಕಿಸ್ತಾನದ ಕ್ವೆಟ್ಟಾದಲ್ಲಿ ನಡೆದ ಸುಧಾರಿತ ಸ್ಫೋಟಕ ಸಾಧನ (ಐಇಡಿ) ಸ್ಫೋಟದಲ್ಲಿ ಒಬ್ಬ ಭಯೋತ್ಪಾದನಾ ನಿಗ್ರಹ ಪಡೆ (ಎಟಿಎಫ್) ಸಿಬ್ಬಂದಿ ಸಾವನ್ನಪ್ಪಿದ್ದರು ಮತ್ತು ಆರು ಮಂದಿ ಗಾಯಗೊಂಡಿದ್ದರು. ಕರಣಿ ಪ್ರದೇಶದ ಬರೋರಿ ರಸ್ತೆಯಲ್ಲಿ ಎಟಿಎಫ್ ಗಸ್ತು ವಾಹನವನ್ನು ಗುರಿಯಾಗಿಸಿಕೊಂಡು ಸ್ಫೋಟಿಸಲಾಯಿತು. ಈ ಸ್ಫೋಟದಲ್ಲಿ ಏಳು ಅಧಿಕಾರಿಗಳು ಗಾಯಗೊಂಡಿದ್ದು, ಅವರನ್ನು ಆಸ್ಪತ್ರೆಗೆ ದಾಖಲಿಸಲಾಯಿತು. ಆರು ಮಂದಿ ಗಾಯಗೊಂಡಿದ್ದರೆ, ಒಬ್ಬರು ಸಾವನ್ನಪ್ಪಿದ್ದಾರೆ.

ಅಂತಾರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Follow Us
ಕಸ ಗುಡಿಸುತ್ತಿದ್ದ ಮಹಿಳೆ ಮೇಲೆ ಹರಿದ ಕಾನ್ಸ್​ಟೇಬಲ್​ ಕಾರು
ಕಸ ಗುಡಿಸುತ್ತಿದ್ದ ಮಹಿಳೆ ಮೇಲೆ ಹರಿದ ಕಾನ್ಸ್​ಟೇಬಲ್​ ಕಾರು
ವಿದ್ಯುತ್ ಚಾಲಿತ ವಾಹನಗಳಿಗೂ ತೆರಿಗೆ​​: ಸರ್ಕಾರದ ನಿರ್ಧಾರಕ್ಕೆ ಜೋಶಿ ಕಿಡಿ
ವಿದ್ಯುತ್ ಚಾಲಿತ ವಾಹನಗಳಿಗೂ ತೆರಿಗೆ​​: ಸರ್ಕಾರದ ನಿರ್ಧಾರಕ್ಕೆ ಜೋಶಿ ಕಿಡಿ
ಅಭಿವೃದ್ಧಿಯಲ್ಲಿ ಬೆಂಗಳೂರಿಗಿಂತ ದಾವಣಗೆರೆಯೇ ಮುಂದು ಎಂದ ಡಿಕೆಶಿ
ಅಭಿವೃದ್ಧಿಯಲ್ಲಿ ಬೆಂಗಳೂರಿಗಿಂತ ದಾವಣಗೆರೆಯೇ ಮುಂದು ಎಂದ ಡಿಕೆಶಿ
ಪ್ರೇಮ ವಿವಾಹಕ್ಕೆ ಪೋಷಕರ ವಿರೋಧ! ರಾಜಿ ಆಗೋಣವೆಂದು ಕರೆದು ಹಲ್ಲೆ
ಪ್ರೇಮ ವಿವಾಹಕ್ಕೆ ಪೋಷಕರ ವಿರೋಧ! ರಾಜಿ ಆಗೋಣವೆಂದು ಕರೆದು ಹಲ್ಲೆ
ಈ ಸರ್ಕಾರದ ಲೂಟಿ ನೋಡಿಯೇ ಕೆಂಪಣ್ಣ ಸತ್ಹೋಗ್ಬಿಟ್ಟ: ಪ್ರತಾಪಸಿಂಹ
ಈ ಸರ್ಕಾರದ ಲೂಟಿ ನೋಡಿಯೇ ಕೆಂಪಣ್ಣ ಸತ್ಹೋಗ್ಬಿಟ್ಟ: ಪ್ರತಾಪಸಿಂಹ
ಕೋಲಾರ: ಸೆಷನ್ಸ್ ಕೋರ್ಟ್ ಒಳ ಸೇರಿಕೊಂಡಿದ್ದ ಹಾವು! ಆಮೇಲೇನಾಯ್ತು ನೋಡಿ
ಕೋಲಾರ: ಸೆಷನ್ಸ್ ಕೋರ್ಟ್ ಒಳ ಸೇರಿಕೊಂಡಿದ್ದ ಹಾವು! ಆಮೇಲೇನಾಯ್ತು ನೋಡಿ
ಮೈಮೇಲೆ ಹರಿದು ಕಾರು, ಕೆಲವೇ ಕ್ಷಣಗಳಲ್ಲಿ ಪವಾಡವೆಂಬಂತೆ ಎದ್ದು ನಿಂತ ಬಾಲಕ
ಮೈಮೇಲೆ ಹರಿದು ಕಾರು, ಕೆಲವೇ ಕ್ಷಣಗಳಲ್ಲಿ ಪವಾಡವೆಂಬಂತೆ ಎದ್ದು ನಿಂತ ಬಾಲಕ
‘ರಾಶಿಕಾಗಿಂತ ನನಗೆ ಅವರೇ ಹೆಚ್ಚು ಇಷ್ಟ’; ಓಪನ್ ಆಗಿ ಹೇಳಿದ ಸೂರಜ್ 
‘ರಾಶಿಕಾಗಿಂತ ನನಗೆ ಅವರೇ ಹೆಚ್ಚು ಇಷ್ಟ’; ಓಪನ್ ಆಗಿ ಹೇಳಿದ ಸೂರಜ್ 
ಮೈ ರೋಮಾಂಚನಗೊಳಿಸುವ ಕುಮಾರ - ಸಿರಿ ಭೇಟಿ
ಮೈ ರೋಮಾಂಚನಗೊಳಿಸುವ ಕುಮಾರ - ಸಿರಿ ಭೇಟಿ
ಅಯೋಧ್ಯೆಯಲ್ಲಿ ಬಂದೂಕು ತೋರಿಸಿ ಆಭರಣದಂಗಡಿ ದೋಚಿದ ಬುರ್ಖಾಧಾರಿ ಮಹಿಳೆ
ಅಯೋಧ್ಯೆಯಲ್ಲಿ ಬಂದೂಕು ತೋರಿಸಿ ಆಭರಣದಂಗಡಿ ದೋಚಿದ ಬುರ್ಖಾಧಾರಿ ಮಹಿಳೆ