AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಲೂಚಿಸ್ತಾನ: ಶಾಲಾ ಬಸ್​ ಮೇಲೆ ಆತ್ಮಾಹುತಿ ಬಾಂಬ್ ದಾಳಿ, ನಾಲ್ವರು ಮಕ್ಕಳು ಸಾವು, 38 ಮಂದಿಗೆ ಗಾಯ

ಪಾಕಿಸ್ತಾನದ ಬಲೂಚಿಸ್ತಾನದಲ್ಲಿ ಶಾಲಾ ಬಸ್​ ಗುರಿಯಾಗಿಸಿಕೊಂಡು ಆತ್ಮಾಹುತಿ ಬಾಂಬ್ ದಾಳಿ ನಡೆಸಲಾಗಿದೆ. ಘಟನೆಯಲ್ಲಿ ನಾಲ್ವರು ಮಕ್ಕಳು ಪ್ರಾಣ ಕಳೆದುಕೊಂಡಿದ್ದಾರೆ, 38 ಮಂದಿಗೆ ಗಂಭೀರ ಗಾಯಗಳಾಗಿವೆ. ಯಾವುದೇ ಗುಂಪು ದಾಳಿಯ ಹೊಣೆಯನ್ನು ಹೊತ್ತುಕೊಂಡಿಲ್ಲ, ಆದರೆ ಈ ಪ್ರದೇಶದಲ್ಲಿ ಭದ್ರತಾ ಪಡೆಗಳು ಹಾಗೂನಾಗರಿಕರನ್ನು ಗುರಿಯಾಗಿಸಿಕೊಂಡು ದಾಳಿ ನಡೆಯುತ್ತಲೇ ಇರುತ್ತದೆ ಹೀಗಾಗಿ ಅನುಮಾನವು ಬಲೂಚ್ ಪ್ರತ್ಯೇಕವಾದಿಗಳ ಕಡೆಗೆ ಮೂಡುವುದು ಸಹಜ.

ಬಲೂಚಿಸ್ತಾನ: ಶಾಲಾ ಬಸ್​ ಮೇಲೆ ಆತ್ಮಾಹುತಿ ಬಾಂಬ್ ದಾಳಿ, ನಾಲ್ವರು ಮಕ್ಕಳು ಸಾವು, 38 ಮಂದಿಗೆ ಗಾಯ
ಬಸ್
ನಯನಾ ರಾಜೀವ್
|

Updated on:May 21, 2025 | 12:12 PM

Share

ಬಲೂಚಿಸ್ತಾನ, ಮೇ 21: ಪಾಕಿಸ್ತಾನ(Pakistan)ದಲ್ಲಿ ಶಾಲಾ ಬಸ್ ಮೇಲೆ ಆತ್ಮಾಹುತಿ ಬಾಂಬ್ ದಾಳಿ ನಡೆದಿದೆ. ಶಾಲಾ ಬಸ್​ಗೆ ಬಾಂಬ್​ ಇರಿಸಿದ್ದ ಕಾರು ಬಂದು ಡಿಕ್ಕಿ ಹೊಡೆದ ಪರಿಣಾಮ ನಾಲ್ವರು ಮಕ್ಕಳು ಸಜೀವ ದಹನವಾಗಿದ್ದಾರೆ. 30ಕ್ಕೂ ಅಧಿಕ ಮಂದಿ ಗಾಯಗೊಂಡಿದ್ದಾರೆ. ಬಲೂಚಿಸ್ತಾನ ಪ್ರಾಂತ್ಯದ ಖುಜ್ದಾರ್ ಜಿಲ್ಲೆಯಲ್ಲಿ ಬಸ್​ವೊಂದು ಶಾಲಾ ಮಕ್ಕಳನ್ನು ಕರೆದೊಯ್ಯುತ್ತಿದ್ದಾಗ ದಾಳಿ ನಡೆದಿದೆ. ಎಂದು ಸ್ಥಳೀಯ ಉಪ ಆಯುಕ್ತ ಯಾಸಿರ್ ಇಕ್ಬಾಲ್ ತಿಳಿಸಿದ್ದಾರೆ.

ಯಾವುದೇ ಗುಂಪು ದಾಳಿಯ ಹೊಣೆಯನ್ನು ಹೊತ್ತುಕೊಂಡಿಲ್ಲ, ಆದರೆ ಈ ಪ್ರದೇಶದಲ್ಲಿ ಭದ್ರತಾ ಪಡೆಗಳು ಹಾಗೂನಾಗರಿಕರನ್ನು ಗುರಿಯಾಗಿಸಿಕೊಂಡು ದಾಳಿ ನಡೆಯುತ್ತಲೇ ಇರುತ್ತದೆ ಹೀಗಾಗಿ ಅನುಮಾನವು ಬಲೂಚ್ ಪ್ರತ್ಯೇಕವಾದಿಗಳ ಕಡೆಗೆ ಮೂಡುವುದು ಸಹಜ.

ಇದನ್ನೂ ಓದಿ
Image
ಸೇನಾ ಕಾರ್ಯಾಚರಣೆಯ ಲೈವ್ ಬೇಡ: ಟಿವಿ ಚಾನೆಲ್​ಗಳಿಗೆ ರಕ್ಷಣಾ ಇಲಾಖೆ ಸೂಚನೆ
Image
ಪಾಕ್​ ಜನ ಪ್ರಧಾನಿ ಶೆಹಬಾಜ್ ವಿರುದ್ಧ ಗರಂ ಆಗಿದ್ದೇಕೆ?
Image
ಭಾರತೀಯ ಸೇನೆ ದಾಳಿ ಮಾಡಿದ ಪಾಕಿಸ್ತಾನದ ನಗರಗಳ ಇತಿಹಾಸವೇನು ಗೊತ್ತೇ?
Image
ಭಾರತದಿಂದ ಎರಡನೇ ಬಾರಿ ದಾಳಿ, ಅಕ್ಷರಶಃ ನಲುಗಿದ ಪಾಕ್, ಏನೇನಾಯ್ತು?

ಪಾಕಿಸ್ತಾನದ ಆಂತರಿಕ ಸಚಿವ ಮೊಹ್ಸಿನ್ ನಖ್ವಿ ಈ ದಾಳಿಯನ್ನು ತೀವ್ರವಾಗಿ ಖಂಡಿಸಿದ್ದಾರೆ. ಮಕ್ಕಳ ಸಾವಿನ ಬಗ್ಗೆ ದುಃಖ ವ್ಯಕ್ತಪಡಿಸಿದ್ದಾರೆ. ಅಪರಾಧಿಗಳನ್ನು ಮೃಗಗಳು ಎಂದು ಕರೆದಿದ್ದಾರೆ. ಮುಗ್ದ ಮಕ್ಕಳನ್ನುಗುರಿಯಾಗಿಸಿಕೊಂಡು ನಡೆಸಿರುವ ದಾಳಿ ಸಂಪೂರ್ಣ ಅನಾಗರಿಕತೆಯ ಕೃತ್ಯ ಎಂದಿದ್ದಾರೆ.

ಮತ್ತಷ್ಟು ಓದಿ: ಪಾಕಿಸ್ತಾನದ ಸೇನೆ ಮೇಲೆ ಬಲೂಚಿಸ್ತಾನ ಗ್ರೆನೇಡ್‌ ದಾಳಿ

ಬಲೂಚಿಸ್ತಾನ್ ದೀರ್ಘಕಾಲದ ದಂಗೆಯ ತಾಣವಾಗಿದ್ದು, 2019 ರಲ್ಲಿ ಯುನೈಟೆಡ್ ಸ್ಟೇಟ್ಸ್ ಭಯೋತ್ಪಾದಕ ಸಂಘಟನೆ ಎಂದು ಗೊತ್ತುಪಡಿಸಿದ ನಿಷೇಧಿತ ಬಲೂಚಿಸ್ತಾನ್ ಲಿಬರೇಶನ್ ಆರ್ಮಿ ಸೇರಿದಂತೆ ಪ್ರತ್ಯೇಕತಾವಾದಿ ಗುಂಪುಗಳು ಆಗಾಗ ದಾಳಿ ನಡೆಸುತ್ತಿರುತ್ತವೆ.

ಅಫ್ಘಾನಿಸ್ತಾನದ ಗಡಿಯಲ್ಲಿರುವ ಬಲೂಚಿಸ್ತಾನ್ ಪ್ರಾಂತ್ಯದ ಕಿಲ್ಲಾ ಅಬ್ದುಲ್ಲಾ ನಗರದ ಮಾರುಕಟ್ಟೆಯ ಬಳಿ ಕಾರ್ ಬಾಂಬ್ ದಾಳಿಯಲ್ಲಿ ನಾಲ್ವರು ಸಾವನ್ನಪ್ಪಿದ ಕೆಲವು ದಿನಗಳ ನಂತರ ಈ ದಾಳಿ ನಡೆದಿದೆ. ಇಂತಹ ಹೆಚ್ಚಿನ ದಾಳಿಗಳ ಹೊಣೆಯನ್ನು ಬಿಎಲ್‌ಎ ಹೊತ್ತಿದ್ದು, ಪಾಕಿಸ್ತಾನವು ನೆರೆಯ ಭಾರತದ ಬೆಂಬಲವನ್ನು ಹೊಂದಿದೆ ಎಂದು ಹೇಳಿಕೊಳ್ಳುತ್ತದೆ.

ಮಾರ್ಚ್‌ನಲ್ಲಿ ನಡೆದ ಅತ್ಯಂತ ಭೀಕರ ದಾಳಿಗಳಲ್ಲಿ ಒಂದಾದ ಬಿಎಲ್‌ಎ ದಂಗೆಕೋರರು ಬಲೂಚಿಸ್ತಾನದಲ್ಲಿ ನೂರಾರು ಪ್ರಯಾಣಿಕರನ್ನು ಹೊತ್ತೊಯ್ಯುತ್ತಿದ್ದ ರೈಲಿನ ಮೇಲೆ ನಡೆಸಿದ ದಾಳಿಯಲ್ಲಿ 33 ಜನರು ಸಾವನ್ನಪ್ಪಿದ್ದರು, ಅದರಲ್ಲಿ ಹೆಚ್ಚಿನವರು ಸೈನಿಕರಾಗಿದ್ದರು.

ಅಂತಾರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published On - 12:11 pm, Wed, 21 May 25

Follow Us
ಹಳೇ ಹುಬ್ಬಳ್ಳಿ ಆಸಾರ ಓಣಿ ಪುಷ್ಕರಣಿ ವಿವಾದ: ಹಿಂದೂಪರ ಸಂಘಟನೆಗಳ ಪ್ರತಿಭಟನೆ
ಹಳೇ ಹುಬ್ಬಳ್ಳಿ ಆಸಾರ ಓಣಿ ಪುಷ್ಕರಣಿ ವಿವಾದ: ಹಿಂದೂಪರ ಸಂಘಟನೆಗಳ ಪ್ರತಿಭಟನೆ
28 ಕೈದಿಗಳ ಬಿಡುಗಡೆಗೆ ಸಚಿವ ಸಂಪುಟ ಅಸ್ತು
28 ಕೈದಿಗಳ ಬಿಡುಗಡೆಗೆ ಸಚಿವ ಸಂಪುಟ ಅಸ್ತು
ಇಂದು ಶ್ರಾವಣ ಶನಿವಾರ; ವೆಂಕಟೇಶ್ವರನ ದರ್ಶನ ಹಾಗೂ ನಾಮಸ್ಮರಣೆಗೆ ಶುಭ ದಿನ
ಇಂದು ಶ್ರಾವಣ ಶನಿವಾರ; ವೆಂಕಟೇಶ್ವರನ ದರ್ಶನ ಹಾಗೂ ನಾಮಸ್ಮರಣೆಗೆ ಶುಭ ದಿನ
ಬಾಗಲಕೋಟೆಯಲ್ಲಿ ಅಜಾನ್ ವಿವಾದ: ಸಿಡಿದೆದ್ದ ಬಿಜೆಪಿ, ಹಿಂದೂ ಸಂಘಟನೆಗಳು
ಬಾಗಲಕೋಟೆಯಲ್ಲಿ ಅಜಾನ್ ವಿವಾದ: ಸಿಡಿದೆದ್ದ ಬಿಜೆಪಿ, ಹಿಂದೂ ಸಂಘಟನೆಗಳು
ಭಾರತ-ಬಾಂಗ್ಲಾ ಗಡಿ ಭದ್ರಪಡಿಸದೆ ಬಂಗಾಳ ಭದ್ರವಾಗಲು ಸಾಧ್ಯವಿಲ್ಲ; ಅಮಿತ್ ಶಾ
ಭಾರತ-ಬಾಂಗ್ಲಾ ಗಡಿ ಭದ್ರಪಡಿಸದೆ ಬಂಗಾಳ ಭದ್ರವಾಗಲು ಸಾಧ್ಯವಿಲ್ಲ; ಅಮಿತ್ ಶಾ
ಮಠದಲ್ಲೇ ಅಪ್ರಾಪ್ತೆ ಮೇಲೆರಗಿ ಅಟ್ಟಹಾಸ: ಸ್ವಾಮೀಜಿ ಅರೆಸ್ಟ್
ಮಠದಲ್ಲೇ ಅಪ್ರಾಪ್ತೆ ಮೇಲೆರಗಿ ಅಟ್ಟಹಾಸ: ಸ್ವಾಮೀಜಿ ಅರೆಸ್ಟ್
ನೈಸರ್ಗಿಕವಾಗಿ ಬಾಳೆಕಾಯಿ ಹಣ್ಣು ಮಾಡುವ ವಿಧಾನ ಹೇಗೆ? ವಿಡಿಯೋ ನೋಡಿ
ನೈಸರ್ಗಿಕವಾಗಿ ಬಾಳೆಕಾಯಿ ಹಣ್ಣು ಮಾಡುವ ವಿಧಾನ ಹೇಗೆ? ವಿಡಿಯೋ ನೋಡಿ
ನಾಗೇಂದ್ರ ಮತ್ತಷ್ಟು ಸಂಕಷ್ಟ: ಪ್ರಾಸಿಕ್ಯೂಷನ್‌ಗೆ ಅನುಮತಿ ಸಿಬಿಐ ಪತ್ರ!
ನಾಗೇಂದ್ರ ಮತ್ತಷ್ಟು ಸಂಕಷ್ಟ: ಪ್ರಾಸಿಕ್ಯೂಷನ್‌ಗೆ ಅನುಮತಿ ಸಿಬಿಐ ಪತ್ರ!
ಹೇಗೆ ನಡೀತಿದೆ ‘ಟಾಕ್ಸಿಕ್’ ಕಟೌಟ್ ತಯಾರಿ? ವಿಡಿಯೋ ನೋಡಿ
ಹೇಗೆ ನಡೀತಿದೆ ‘ಟಾಕ್ಸಿಕ್’ ಕಟೌಟ್ ತಯಾರಿ? ವಿಡಿಯೋ ನೋಡಿ
2 ಕೋಟಿ ರೂ. ವೆಚ್ಚದಲ್ಲಿ 700 ವರ್ಷಗಳ ಪುರಾತನ ದೇಗುಲ ಜೀರ್ಣೋದ್ಧಾರ
2 ಕೋಟಿ ರೂ. ವೆಚ್ಚದಲ್ಲಿ 700 ವರ್ಷಗಳ ಪುರಾತನ ದೇಗುಲ ಜೀರ್ಣೋದ್ಧಾರ