AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅರಬ್ಬಿ ಸಮುದ್ರದಲ್ಲಿ ಪಾಕಿಸ್ತಾನದ ವಿಮಾನ ನಾಪತ್ತೆ, ಐವರು ಸಿಬ್ಬಂದಿಯ ಸುಳಿವಿಲ್ಲ

ಅರಬ್ಬಿ ಸಮುದ್ರದಲ್ಲಿ ಪಾಕಿಸ್ತಾನದ ಕೆ2 ಏರ್‌ವೇಸ್ ಸರಕು ವಿಮಾನವೊಂದು ನಾಪತ್ತೆಯಾಗಿದೆ. ಶಾರ್ಜಾದಿಂದ ಕರಾಚಿಗೆ ಹೊರಟಿದ್ದ ಈ ವಿಮಾನದಲ್ಲಿ ಐವರು ಸಿಬ್ಬಂದಿ ಇದ್ದರು. ತಾಂತ್ರಿಕ ದೋಷದಿಂದ ಸಂಪರ್ಕ ಕಡಿದುಕೊಂಡ ವಿಮಾನವು ರಾಡಾರ್‌ನಿಂದ ಕಣ್ಮರೆಯಾಗಿದೆ. ಸಮುದ್ರಕ್ಕೆ ಅಪ್ಪಳಿಸಿದ ಭೀತಿ ಎದುರಾಗಿದ್ದು, ಐವರು ಸಿಬ್ಬಂದಿ ಪತ್ತೆಗೆ ವ್ಯಾಪಕ ಶೋಧ ಮತ್ತು ರಕ್ಷಣಾ ಕಾರ್ಯಾಚರಣೆ ನಡೆಯುತ್ತಿದೆ.

ಅರಬ್ಬಿ ಸಮುದ್ರದಲ್ಲಿ ಪಾಕಿಸ್ತಾನದ ವಿಮಾನ ನಾಪತ್ತೆ, ಐವರು ಸಿಬ್ಬಂದಿಯ ಸುಳಿವಿಲ್ಲ
ವಿಮಾನ
ನಯನಾ ರಾಜೀವ್
|

Updated on: Jul 08, 2026 | 7:16 AM

Share

ಇಸ್ಲಾಮಾಬಾದ್, ಜುಲೈ 08: ಯುನೈಟೆಡ್ ಅರಬ್ ಎಮಿರೇಟ್ಸ್​​ನಿಂದ ಪಾಕಿಸ್ತಾನ(Pakistan)ಕ್ಕೆ ಹಾರುತ್ತಿದ್ದ ಸರಕು ವಿಮಾನವೊಂದು ಮಂಗಳವಾರ ರಾತ್ರಿ ಅರಬ್ಬಿ ಸಮುದ್ರದ ಮೇಲೆ ದಿಢೀರ್ ರಾಡಾರ್​ನಿಂದ ಕಣ್ಮರೆಯಾಗಿದೆ. ಐವರು ಸಿಬ್ಬಂದಿಯನ್ನು ಹೊತ್ತಿದ್ದ ಈ ‘ಕೆ2 ಏರ್‌ವೇಸ್’ ವಿಮಾನವನ್ನು ಪತ್ತೆಹಚ್ಚಲು ಇದೀಗ ಸಮುದ್ರದಲ್ಲಿ ಭಾರಿ ಶೋಧ ಮತ್ತು ರಕ್ಷಣಾ ಕಾರ್ಯಾಚರಣೆ ಆರಂಭಿಸಲಾಗಿದೆ.

ಘಟನೆ ನಡೆದಿದ್ದು ಹೇಗೆ? ಪಾಕಿಸ್ತಾನದ ವಿಮಾನ ನಿಲ್ದಾಣ ಪ್ರಾಧಿಕಾರ ನೀಡಿರುವ ಮಾಹಿತಿ ಪ್ರಕಾರ,ಶಾರ್ಜಾದಿಂದ ಕರಾಚಿಗೆ ಹೊರಟಿದ್ದ ಈ ಕಾರ್ಗೋ ವಿಮಾನದಲ್ಲಿ ಮಾರ್ಗಮಧ್ಯೆ ತಾಂತ್ರಿಕ ದೋಷ ಕಾಣಿಸಿಕೊಂಡಿತ್ತು. ವಿಮಾನದ ನ್ಯಾವಿಗೇಷನ್ ಸಿಸ್ಟಮ್‌ನಲ್ಲಿ ದೋಷ ಕಂಡುಬಂದಿದೆ ಎಂದು ಪೈಲಟ್ ಕರಾಚಿ ವಾಯು ಸಂಚಾರ ನಿಯಂತ್ರಣ ಕೇಂದ್ರಕ್ಕೆ ಮಾಹಿತಿ ನೀಡಿದ್ದರು. ತಕ್ಷಣವೇ ನಿಯಂತ್ರಣ ಕೇಂದ್ರದಿಂದ ವಿಮಾನಕ್ಕೆ ಸೂಕ್ತ ಮಾರ್ಗದರ್ಶನ ನೀಡಲಾಗಿತ್ತು.ರಾತ್ರಿ 9.18ಕ್ಕೆ ಕೊನೆಯ ಸಂಪರ್ಕ ಸಿಕ್ಕಿತ್ತು.

ಆದರೆ, ಸಮಸ್ಯೆ ತಿಳಿಸಿದ ಕೇವಲ 4 ನಿಮಿಷಗಳಲ್ಲಿ, ಅಂದರೆ ರಾತ್ರಿ 9.22 ರ ಸುಮಾರಿಗೆ ವಿಮಾನವು ಇದ್ದಕ್ಕಿದ್ದಂತೆ ತನ್ನ ದಿಕ್ಕನ್ನು ಬದಲಾಯಿಸಿ ಅತಿ ವೇಗವಾಗಿ ಕೆಳಮುಖವಾಗಿ ಇಳಿಯುವುದನ್ನು ರಾಡಾರ್‌ನಲ್ಲಿ ಗಮನಿಸಲಾಯಿತು.

ಮತ್ತಷ್ಟು ಓದಿ: ಭಾರತದ ಜಲ ದಿಗ್ಬಂಧನಕ್ಕೆ ಕಂಗೆಟ್ಟು ಚೀನಾ ಸಹಾಯ ಕೋರಿದ ಪಾಕಿಸ್ತಾನ

ಇದಾದ ಕೆಲವೇ ಸೆಕೆಂಡುಗಳಲ್ಲಿ ಕರಾಚಿಯಿಂದ ಪಶ್ಚಿಮಕ್ಕೆ ಸುಮಾರು 155 ನಾಟಿಕಲ್ ಮೈಲಿ ದೂರದಲ್ಲಿ ವಿಮಾನದ ಜೊತೆಗಿನ ಸಂಪರ್ಕ ಸಂಪೂರ್ಣವಾಗಿ ಕಡಿತಗೊಂಡಿದೆ. ವಿಮಾನವು ರಾಡಾರ್‌ನಿಂದ ಕಣ್ಮರೆಯಾಗಿದ್ದು, ಸಮುದ್ರಕ್ಕೆ ಅಪ್ಪಳಿಸಿರುವ ಭೀತಿ ಎದುರಾಗಿದೆ.

ರಕ್ಷಣಾ ಕಾರ್ಯಾಚರಣೆ ಚುರುಕು ಸಂಪರ್ಕ ಕಡಿತಗೊಂಡ ತಕ್ಷಣವೇ ಎಚ್ಚೆತ್ತ ಪಾಕಿಸ್ತಾನ ವಿಮಾನ ನಿಲ್ದಾಣ ಪ್ರಾಧಿಕಾರವು, ರಕ್ಷಣಾ ಸಮನ್ವಯ ಕೇಂದ್ರವನ್ನು ಸಕ್ರಿಯಗೊಳಿಸಿದೆ. ನಾಪತ್ತೆಯಾಗಿರುವ ವಿಮಾನ ಹಾಗೂ ಅದರಲ್ಲಿದ್ದ ಐವರು ಸಿಬ್ಬಂದಿಯನ್ನು ಪತ್ತೆಹಚ್ಚಲು ಹಲವು ಸಂಸ್ಥೆಗಳ ಜಂಟಿ ಕಾರ್ಯಾಚರಣೆಯನ್ನು ಸಮುದ್ರದಲ್ಲಿ ಆರಂಭಿಸಲಾಗಿದೆ.

ವಿಮಾನದಲ್ಲಿದ್ದ ಐವರು ಸಿಬ್ಬಂದಿ ಯಾರು ಎಂಬ ಬಗ್ಗೆ ಪ್ರಾಧಿಕಾರ ಇನ್ನೂ ಅಧಿಕೃತ ಮಾಹಿತಿ ಬಿಡುಗಡೆ ಮಾಡಿಲ್ಲ. ದಿಕ್ಕು ತೋರಿಸುವ ವ್ಯವಸ್ಥೆಯ ದೋಷದ ಜೊತೆಗೆ ವಿಮಾನ ಇದ್ದಕ್ಕಿದ್ದಂತೆ ಕೆಳಗೆ ಬೀಳಲು ಅಸಲಿ ಕಾರಣವೇನು ಎಂಬುದು ತನಿಖೆ ಮತ್ತು ವಿಮಾನ ಪತ್ತೆಯಾದ ನಂತರವಷ್ಟೇ ತಿಳಿಯಬೇಕಿದೆ.

ಅಂತಾರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Follow Us
ಪಶುವೈದ್ಯರ ನೇಮಕಾತಿಯಲ್ಲಿ ಅಕ್ರಮ ಪ್ರಕರಣ: CID ತನಿಖೆಗೆ ಆದೇಶ
ಪಶುವೈದ್ಯರ ನೇಮಕಾತಿಯಲ್ಲಿ ಅಕ್ರಮ ಪ್ರಕರಣ: CID ತನಿಖೆಗೆ ಆದೇಶ
ಮಳೆ ಅಭಾವ: ತುಮಕೂರಲ್ಲಿ ಸಂಪೂರ್ಣ ಬತ್ತಿದ 300ಕ್ಕೂ ಹೆಚ್ಚು ಕೆರೆಗಳು
ಮಳೆ ಅಭಾವ: ತುಮಕೂರಲ್ಲಿ ಸಂಪೂರ್ಣ ಬತ್ತಿದ 300ಕ್ಕೂ ಹೆಚ್ಚು ಕೆರೆಗಳು
ಅಳ್ನಾವರದಲ್ಲಿ ನಾಲ್ಕು ಗಂಟೆಗೂ ಹೆಚ್ಚು ರೈಲುಗಳ ನಿಲುಗಡೆ: ಪ್ರಯಾಣಿಕರ ಪರದಾಟ
ಅಳ್ನಾವರದಲ್ಲಿ ನಾಲ್ಕು ಗಂಟೆಗೂ ಹೆಚ್ಚು ರೈಲುಗಳ ನಿಲುಗಡೆ: ಪ್ರಯಾಣಿಕರ ಪರದಾಟ
ಆರ್​ಎಸ್​ಎಸ್ ನೋಂದಣಿ ಬಗ್ಗೆ ರಾಷ್ಟ್ರಮಟ್ಟದಲ್ಲಿ ಅಭಿಯಾನ
ಆರ್​ಎಸ್​ಎಸ್ ನೋಂದಣಿ ಬಗ್ಗೆ ರಾಷ್ಟ್ರಮಟ್ಟದಲ್ಲಿ ಅಭಿಯಾನ
ಕಾಮನ್‌ವೆಲ್ತ್ ಗೇಮ್ಸ್‌ನಲ್ಲಿ ಪದಕ ಗೆದ್ದ ಕನ್ನಡತಿ; ಭಾರತೀಯ ವನಿತೆಯರ ಕಮಾಲ್
ಕಾಮನ್‌ವೆಲ್ತ್ ಗೇಮ್ಸ್‌ನಲ್ಲಿ ಪದಕ ಗೆದ್ದ ಕನ್ನಡತಿ; ಭಾರತೀಯ ವನಿತೆಯರ ಕಮಾಲ್
ಚಾಮರಾಜೇಶ್ವರಸ್ವಾಮಿ ಆಷಾಢ ಮಾಸದ ರಥೋತ್ಸವಕ್ಕೆ ಕ್ಷಣಗಣನೆ ಆರಂಭ
ಚಾಮರಾಜೇಶ್ವರಸ್ವಾಮಿ ಆಷಾಢ ಮಾಸದ ರಥೋತ್ಸವಕ್ಕೆ ಕ್ಷಣಗಣನೆ ಆರಂಭ
‘ಟಾಕ್ಸಿಕ್ ನೋಡಿದವರು ವಾಟ್​ ದಿ ಹೆಲ್​ ವಾಸ್ ದ್ಯಾಟ್ ಅಂತ ಹೊರಗೆ ಬರ್ತಾರೆ’
‘ಟಾಕ್ಸಿಕ್ ನೋಡಿದವರು ವಾಟ್​ ದಿ ಹೆಲ್​ ವಾಸ್ ದ್ಯಾಟ್ ಅಂತ ಹೊರಗೆ ಬರ್ತಾರೆ’
ಸಿಟಿ ರವಿ ಚಿಕ್ಕಮಗಳೂರಿಗೆ ಬರದಂತೆ ತಡೀತೇವೆ, ಮುಸ್ಲಿಂ ಮುಖಂಡರ ಎಚ್ಚರಿಕೆ
ಸಿಟಿ ರವಿ ಚಿಕ್ಕಮಗಳೂರಿಗೆ ಬರದಂತೆ ತಡೀತೇವೆ, ಮುಸ್ಲಿಂ ಮುಖಂಡರ ಎಚ್ಚರಿಕೆ
ಭೀಕರ ಬರಕ್ಕೆ ತುತ್ತಾದ ರಾಯಚೂರು, ಲಿಂಗಸೂರಿನಲ್ಲಿ ಗುಳೆ ಹೊರಟ 40 ಸಾವಿರ ಜನ
ಭೀಕರ ಬರಕ್ಕೆ ತುತ್ತಾದ ರಾಯಚೂರು, ಲಿಂಗಸೂರಿನಲ್ಲಿ ಗುಳೆ ಹೊರಟ 40 ಸಾವಿರ ಜನ
ಬೆಂಗಳೂರು: ಕ್ಯಾಬ್ಗೆ ಕಾಯುತ್ತಿದ್ದ ಯುವತಿ ಜೊತೆ ವ್ಯಕ್ತಿ ಅಸಭ್ಯ ವರ್ತನೆ
ಬೆಂಗಳೂರು: ಕ್ಯಾಬ್ಗೆ ಕಾಯುತ್ತಿದ್ದ ಯುವತಿ ಜೊತೆ ವ್ಯಕ್ತಿ ಅಸಭ್ಯ ವರ್ತನೆ