AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

12 ಡ್ರೋನ್​ಗಳನ್ನು ಹೊಡೆದುರುಳಿಸಲಾಗಿದೆ ಎಂದ ಪಾಕ್ ಸೇನೆ: ಭಾರತ ಹೇಳಿದ್ದೇನು?

12 ಭಾರತೀಯ ಡ್ರೋನ್‌ಗಳು ಪಾಕಿಸ್ತಾನ ವಾಯು ಪ್ರದೇಶ ಉಲ್ಲಂಘಿಸಿದ್ದು, ಅವುಗಳನ್ನು ಹೊಡೆದುರುಳಿಸಲಾಗಿದೆ ಎಂದು ಪಾಕಿಸ್ತಾನ ಸೇನೆ ಹೇಳಿದೆ. ಇದೇ ಸಂದರ್ಭದಲ್ಲಿ ಲಾಹೋರ್ ಮತ್ತು ಕರಾಚಿಯಲ್ಲಿ ಸ್ಫೋಟಗಳು ಸಂಭವಿಸಿವೆ. ಆದರೆ, ಭಾರತ ಬೇರೆಯದ್ದೇ ಹೇಳಿಕೆ ನೀಡಿದೆ. ಒಟ್ಟಿನಲ್ಲಿ, ಪಹಲ್ಗಾಮ್ ದಾಳಿ ಹಾಗೂ ಆಪರೇಷನ್ ಸಿಂದೂರ್ ನಂತರ ಉಭಯ ದೇಶಗಳ ಮಧ್ಯೆ ಉದ್ವಿಗ್ನತೆ ಹೆಚ್ಚಿದೆ.

12 ಡ್ರೋನ್​ಗಳನ್ನು ಹೊಡೆದುರುಳಿಸಲಾಗಿದೆ ಎಂದ ಪಾಕ್ ಸೇನೆ: ಭಾರತ ಹೇಳಿದ್ದೇನು?
ಸಾಂದರ್ಭಿಕ ಚಿತ್ರ
Follow us
Ganapathi Sharma
|

Updated on:May 08, 2025 | 2:30 PM

ಲಾಹೋರ್, ಮೇ 8: ಪಾಕಿಸ್ತಾನದ ವಾಯುಪ್ರದೇಶ ಉಲ್ಲಂಘಿಸಿದ ಭಾರತದ 12 ಡ್ರೋನ್‌ಗಳನ್ನು (Indian Drones) ಪಾಕಿಸ್ತಾನ (Pakistan) ಹೊಡೆದುರುಳಿಸಿದೆ ಎಂದು ಪಾಕಿಸ್ತಾನ ಸೇನೆ ಗುರುವಾರ ತಿಳಿಸಿರುವುದಾಗಿ ‘ರಾಯಿಟರ್ಸ್’ ಸುದ್ದಿ ಸಂಸ್ಥೆ ವರದಿ ಮಾಡಿದೆ. ಭಾರತೀಯ ಸೇನೆಯ ಆಪರೇಷನ್ ಸಿಂದೂರ್ ನಂತರ ಭಾರತ ಹಾಗೂ ಪಾಕಿಸ್ತಾನ ಮಧ್ಯೆ ಉದ್ವಿಗ್ನತೆ ಹೆಚ್ಚಿದ್ದು ಕಾಶ್ಮೀರ ಗಡಿಯಲ್ಲಿ ಸುಮಾರು 15 ನಾಗರಿಕರನ್ನು ಪಾಕಿಸ್ತಾನ ಸೇನೆ ಗುಂಡಿನ ದಾಳಿ ಮೂಲಕ ಹತ್ಯೆ ಮಾಡಿದೆ. ಇದರ ಬೆನ್ನಲ್ಲೇ, ಗುರುವಾರ ಬೆಳಗ್ಗೆ ಲಾಹೋರ್​​​ನಲ್ಲಿ ಸ್ಫೋಟ ಸಂಭವಿಸಿತ್ತು. ಅದಾದ ನಂತರ ಕರಾಚಿಯಲ್ಲೂ ಸ್ಫೋಟ ಸಂಭವಿಸಿದೆ ಎಂದು ಕೆಲವು ಮೂಲಗಳು ತಿಳಿಸಿವೆ.

ಭಾರತವು ಇಸ್ರೇಲಿ ಹರೋಪ್ ಡ್ರೋನ್‌ಗಳನ್ನು ಕರಾಚಿ ಮತ್ತು ಲಾಹೋರ್‌ನ ಸೇರಿದಂತೆ ಹಲವು ಸ್ಥಳಗಳಿಗೆ ಕಳುಹಿಸಿದೆ. ಅವುಗಳನ್ನು ಹೊಡೆದುರುಳಿಸಿದ್ದೇವೆ. ಅವುಗಳ ಅವಶೇಷಗಳನ್ನು ಸಂಗ್ರಹಿಸಲಾಗುತ್ತಿದೆ ಎಂದು ಪಾಕಿಸ್ತಾನದ ಮಿಲಿಟರಿ ವಕ್ತಾರ ಅಹ್ಮದ್ ಷರೀಫ್ ಚೌಧರಿ ತಿಳಿಸಿರುವುದಾಗಿ ‘ರಾಯಿಟರ್ಸ್’ ವರದಿ ತಿಳಿಸಿದೆ.

ಭಾರತ ಹೇಳಿದ್ಧೇನು?

ಪಹಲ್ಗಾಮ್ ದಾಳಿಗೆ ಪ್ರತೀಕಾರವಾಗಿ ನಡೆಸಿರುವ ಸಿಂದೂರ್ ಕಾರ್ಯಾಚರಣೆಯನ್ನು ನಿಲ್ಲಿಸಲಾಗಿದೆ. ಹಾಗೆಂದು, ನಮ್ಮ ಮೇಲೆ ದಾಳಿ ನಡೆಸಿದರೆ ಸುಮ್ಮನಿರುವ ಮಾತೇ ಇಲ್ಲ ಎಂದು ಭಾರತದ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಸರ್ವಪಕ್ಷ ಸಭೆಯಲ್ಲಿ ಹೇಳಿದ್ದಾರೆ. ಆಪರೇಷನ್ ಸಿಂದೂರ್​​ನಲ್ಲಿ ಪಾಕಿಸ್ತಾನದಲ್ಲಿ ಆಶ್ರಯ ಪಡೆದಿರುವ 100 ಉಗ್ರರನ್ನು ಹತ್ಯೆ ಮಾಡಲಾಗಿದೆ ಎಂದೂ ಅವರು ಮಾಹಿತಿ ನೀಡಿದ್ದಾರೆ.

ಇದನ್ನೂ ಓದಿ
Image
ಆಪರೇಷನ್ ಸಿಂಧೂರ್ ಎಂದರೇನು? ಈ ದಾಳಿಗೆ ಭಾರತ ಇದೇ ಹೆಸರಿಟ್ಟಿದ್ದೇಕೆ?
Image
ಮಾಕ್ ಡ್ರಿಲ್​ಗೆ ಭಾರತ ಸಜ್ಜು, ಇಸ್ರೇಲ್​ನಂತೆ ದಾಳಿ ನಡೆಯಲಿದೆ ಎಂದ ಪಾಕ್
Image
800 ಕಿ.ಮೀ. ನಾಶ; ಇದು ಭಾರತದ ಮಿಲಿಟರಿಯ ಬ್ರಹ್ಮೋಸ್ ಕ್ಷಿಪಣಿಯ ತಾಕತ್ತು
Image
ಗಂಗಾ ಎಕ್ಸ್‌ಪ್ರೆಸ್‌ವೇಯಲ್ಲಿ ವಾಯುಪಡೆಯಿಂದ ಯುದ್ಧವಿಮಾನಗಳ ತಾಲೀಮು

ಲಾಹೋರ್, ಕರಾಚಿಯಲ್ಲಿ ಸ್ಫೋಟ

ಗುರವಾರ ಬೆಳಗ್ಗೆ ಲಾಹೋರ್​ನಲ್ಲಿ ಬಾಂಬ್ ಸ್ಫೋಟ ಸಂಭವಿಸಿತ್ತು. ಈಗ ಪಾಕಿಸ್ತಾನದ ಆರ್ಥಿಕ ರಾಜಧಾನಿ ಎಂದು ಪರಿಗಣಿಸಲಾಗಿರುವ ಕರಾಚಿಯಲ್ಲಿ ಕೂಡ ಸ್ಫೋಟ ಸಂಭವಿಸಿದ ಬಗ್ಗೆ ವರದಿಯಾಗಿವೆ. ಕರಾಚಿಯಲ್ಲಿ ಸಂಭವಿಸಿದ ಸ್ಫೋಟವು ಪಾಕಿಸ್ತಾನದಾದ್ಯಂತ ಭೀತಿಯನ್ನು ಸೃಷ್ಟಿಸಿದೆ. ಸ್ಫೋಟದ ನಂತರ ಇಡೀ ಪ್ರದೇಶವನ್ನು ಸೀಲ್ ಮಾಡಲಾಗಿದೆ ಎಂದು ವರದಿಯಾಗಿದೆ.

ಪಾಕಿಸ್ತಾನಿ ಮಾಧ್ಯಮಗಳ ಪ್ರಕಾರ, ಕರಾಚಿಯಲ್ಲಿ ಡ್ರೋನ್ ಸ್ಫೋಟ ಸಂಭವಿಸಿದ್ದು, ಆ ನಂತರ ಇಡೀ ಪ್ರದೇಶದಲ್ಲಿ ಭೀತಿಯ ವಾತಾವರಣವಿದೆ. ಸೇನೆಯು ಆ ಪ್ರದೇಶವನ್ನು ತನ್ನ ಹಿಡಿತಕ್ಕೆ ತೆಗೆದುಕೊಂಡಿದೆ. ಪಾಕಿಸ್ತಾನದ ಎಲ್ಲಾ ಪರಮಾಣು ಬಾಂಬ್‌ಗಳು ಕರಾಚಿಯಲ್ಲಿ ಸಂಗ್ರಹಿಸಲ್ಪಟ್ಟಿವೆ ಎಂಬುದು ಗಮನಾರ್ಹ.

ಇದನ್ನೂ ಓದಿ: ಭಾರತ ಉಗ್ರರ ಟಾರ್ಗೆಟ್ ಮಾಡಿದ್ರೆ ಪಾಕಿಸ್ತಾನ ಸೇನೆ ಮೇಲೆಯೇ ದಾಳಿ ನಡೆಸಿದ ಬಲೂಚ್ ಆರ್ಮಿ: 12 ಪಾಕ್ ಸೈನಿಕರು ಸಾವು

ಕರಾಚಿಯಲ್ಲಿ ಡ್ರೋನ್ ಸ್ಫೋಟ ಸಂಭವಿಸಿರುವುದು ಪಾಕಿಸ್ತಾನದ ಭದ್ರತಾ ವ್ಯವಸ್ಥೆಯ ಬಗ್ಗೆ ಪ್ರಶ್ನೆಗಳನ್ನು ಹುಟ್ಟುಹಾಕಿದೆ. ಕರಾಚಿ ಸ್ಫೋಟವನ್ನು ಭದ್ರತಾ ವ್ಯವಸ್ಥೆಯ ಪ್ರಮುಖ ಉಲ್ಲಂಘನೆ ಎಂದು ಬಣ್ಣಿಸಲಾಗುತ್ತಿದೆ. ಲಾಹೋರ್‌ನ ನೌಕಾ ನೆಲೆ ಮತ್ತು ಕರಾಚಿಯ ಸೇನಾ ನೆಲೆಯ ಬಳಿ ಸ್ಫೋಟಗಳು ಸಂಭವಿಸಿವೆ ಎಂದು ವರದಿಗಳು ತಿಳಿಸಿವೆ.

ಇನ್ನಷ್ಟು ಅಂತಾರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 2:29 pm, Thu, 8 May 25

ಸರ್ಕಾರ ಆಯೋಜಿಸಿರೋದು ಶೂನ್ಯ ಸಾಧನೆ ಸಮಾವೇಶ: ವಿಜಯೇಂದ್ರ
ಸರ್ಕಾರ ಆಯೋಜಿಸಿರೋದು ಶೂನ್ಯ ಸಾಧನೆ ಸಮಾವೇಶ: ವಿಜಯೇಂದ್ರ
ಸೈಂಟ್ ಮೇರಿಸ್ ದ್ವೀಪಕ್ಕೆ ಪ್ರವಾಸ ಪ್ಲ್ಯಾನ್ ಮಾಡಿದ್ದೀರಾ? ಈ ಸಂದೇಶ ಗಮನಿಸಿ
ಸೈಂಟ್ ಮೇರಿಸ್ ದ್ವೀಪಕ್ಕೆ ಪ್ರವಾಸ ಪ್ಲ್ಯಾನ್ ಮಾಡಿದ್ದೀರಾ? ಈ ಸಂದೇಶ ಗಮನಿಸಿ
ಗುಂಡಿ ತಪ್ಪಿಸಲು ಹೋಗಿ 3 ಕಾರು, ಲಾರಿ ಮಧ್ಯೆ ಸರಣಿ ಅಪಘಾತ: ಟ್ರಾಫಿಕ್ ಜಾಮ್
ಗುಂಡಿ ತಪ್ಪಿಸಲು ಹೋಗಿ 3 ಕಾರು, ಲಾರಿ ಮಧ್ಯೆ ಸರಣಿ ಅಪಘಾತ: ಟ್ರಾಫಿಕ್ ಜಾಮ್
ರಸ್ತೆಗಳು ಹಾಳಾಗೋದಿಕ್ಕೆ ಮೆಟ್ರೋ ಕಾಮಗಾರಿಯೂ ಕಾರಣವಾಗುತ್ತಿದೆಯೇ?
ರಸ್ತೆಗಳು ಹಾಳಾಗೋದಿಕ್ಕೆ ಮೆಟ್ರೋ ಕಾಮಗಾರಿಯೂ ಕಾರಣವಾಗುತ್ತಿದೆಯೇ?
ಜಾಫರ್​ ಎಕ್ಸ್​ಪ್ರೆಸ್​ ಹೈಜಾಕ್ ವಿಡಿಯೋ ಬಿಡುಗಡೆ ಮಾಡಿದ ಬಿಎಲ್​ಎ
ಜಾಫರ್​ ಎಕ್ಸ್​ಪ್ರೆಸ್​ ಹೈಜಾಕ್ ವಿಡಿಯೋ ಬಿಡುಗಡೆ ಮಾಡಿದ ಬಿಎಲ್​ಎ
ಮುಡಾ ಹಗರಣದಲ್ಲಿ ಸಿದ್ದರಾಮಯ್ಯ ಕುಟುಂಬದಿಂದ ಎಷ್ಟು ನಷ್ಟವಾಗಿದೆ? ವಿಶ್ವನಾಥ
ಮುಡಾ ಹಗರಣದಲ್ಲಿ ಸಿದ್ದರಾಮಯ್ಯ ಕುಟುಂಬದಿಂದ ಎಷ್ಟು ನಷ್ಟವಾಗಿದೆ? ವಿಶ್ವನಾಥ
ಸಂಗೀತ ಕ್ಷೇತ್ರದಲ್ಲಿ ಅರ್ಜುನ್ ಜನ್ಯ ಮಗಳ ಸಾಧನೆ; ತಂದೆಯಾಗಿ ಹೆಮ್ಮೆಯ ಕ್ಷಣ
ಸಂಗೀತ ಕ್ಷೇತ್ರದಲ್ಲಿ ಅರ್ಜುನ್ ಜನ್ಯ ಮಗಳ ಸಾಧನೆ; ತಂದೆಯಾಗಿ ಹೆಮ್ಮೆಯ ಕ್ಷಣ
ರಾತ್ರಿ ಸುರಿದ ಮಳೆಯಿಂದ ನಡುಗಡ್ಡೆಯಾಗಿ ಮಾರ್ಪಟ್ಟಿರುವ ಸಾಯಿ ಲೇಔಟ್
ರಾತ್ರಿ ಸುರಿದ ಮಳೆಯಿಂದ ನಡುಗಡ್ಡೆಯಾಗಿ ಮಾರ್ಪಟ್ಟಿರುವ ಸಾಯಿ ಲೇಔಟ್
ನಗರದ ಲ್ಯಾಂಡ್ ಮಾರ್ಕ್​ ಎನಿಸಿಕೊಂಡಿರುವ ಸ್ಟೇಡಿಯಂ ಸ್ಥಿತಿ ಹೇಗಿದೆ ನೋಡಿ
ನಗರದ ಲ್ಯಾಂಡ್ ಮಾರ್ಕ್​ ಎನಿಸಿಕೊಂಡಿರುವ ಸ್ಟೇಡಿಯಂ ಸ್ಥಿತಿ ಹೇಗಿದೆ ನೋಡಿ
ಬದುಕಿರುವವರು ಸತ್ತಂತೆ ಕನಸಿನಲ್ಲಿ ಬಂದರೆ ಏನರ್ಥ? ವಿಡಿಯೋ ನೋಡಿ
ಬದುಕಿರುವವರು ಸತ್ತಂತೆ ಕನಸಿನಲ್ಲಿ ಬಂದರೆ ಏನರ್ಥ? ವಿಡಿಯೋ ನೋಡಿ