AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Imran Khan: ಇಸ್ಲಾಮಾಬಾದ್‌ ನ್ಯಾಯಾಂಗ ಸಂಕೀರ್ಣದಲ್ಲಿನ ಹಿಂಸಾಚಾರಕ್ಕೆ ಸಂಬಂಧಿಸಿದ 8 ಪ್ರಕರಣಗಳಲ್ಲಿ ಇಮ್ರಾನ್ ಖಾನ್‌ಗೆ ಜಾಮೀನು

ಮಾರ್ಚ್ 18 ರಂದು ಪಾಕಿಸ್ತಾನ್ ತೆಹ್ರೀಕ್-ಇ-ಇನ್ಸಾಫ್ (ಪಿಟಿಐ) ಪಕ್ಷದ ಮುಖ್ಯಸ್ಥರು ನ್ಯಾಯಾಂಗ ಸಂಕೀರ್ಣದಲ್ಲಿ ನ್ಯಾಯಾಲಯಕ್ಕೆ ಹಾಜರಾದಾಗ ಪೊಲೀಸರು ಮತ್ತು ಅವರ ಬೆಂಬಲಿಗರ ನಡುವೆ ಘರ್ಷಣೆ ಸಂಭವಿಸಿದ ನಂತರ 70 ವರ್ಷದ ಖಾನ್ ವಿರುದ್ಧ ಇಸ್ಲಾಮಾಬಾದ್‌ನ ವಿವಿಧ ಪೊಲೀಸ್ ಠಾಣೆಗಳಲ್ಲಿ ಪ್ರಕರಣಗಳು ದಾಖಲಾಗಿವೆ.

Imran Khan: ಇಸ್ಲಾಮಾಬಾದ್‌ ನ್ಯಾಯಾಂಗ ಸಂಕೀರ್ಣದಲ್ಲಿನ ಹಿಂಸಾಚಾರಕ್ಕೆ ಸಂಬಂಧಿಸಿದ 8 ಪ್ರಕರಣಗಳಲ್ಲಿ ಇಮ್ರಾನ್ ಖಾನ್‌ಗೆ ಜಾಮೀನು
ಇಮ್ರಾನ್ ಖಾನ್
ರಶ್ಮಿ ಕಲ್ಲಕಟ್ಟ
ರಶ್ಮಿ ಕಲ್ಲಕಟ್ಟ|

Updated on:May 23, 2023 | 2:07 PM

Share

ಮಾರ್ಚ್‌ನಲ್ಲಿ ಇಸ್ಲಾಮಾಬಾದ್ ನ್ಯಾಯಾಂಗ ಸಂಕೀರ್ಣದಲ್ಲಿ (Judicial Complex )ಭುಗಿಲೆದ್ದ ಹಿಂಸಾಚಾರಕ್ಕೆ ಸಂಬಂಧಿಸಿದ ಎಂಟು ಪ್ರಕರಣಗಳಲ್ಲಿ ಪಾಕಿಸ್ತಾನದ (Pakistan) ಭಯೋತ್ಪಾದನಾ ವಿರೋಧಿ ನ್ಯಾಯಾಲಯವು ಪಾಕಿಸ್ತಾನದ ಮಾಜಿ ಪ್ರಧಾನಿ ಇಮ್ರಾನ್ ಖಾನ್​​ಗೆ (Imran Khan) ಜೂನ್ 8ರವರೆಗೆ ಜಾಮೀನು ನೀಡಿದೆ.ಮಾರ್ಚ್ 18 ರಂದು ಪಾಕಿಸ್ತಾನ್ ತೆಹ್ರೀಕ್-ಇ-ಇನ್ಸಾಫ್ (ಪಿಟಿಐ) ಪಕ್ಷದ ಮುಖ್ಯಸ್ಥರು ನ್ಯಾಯಾಂಗ ಸಂಕೀರ್ಣದಲ್ಲಿ ನ್ಯಾಯಾಲಯಕ್ಕೆ ಹಾಜರಾದಾಗ ಪೊಲೀಸರು ಮತ್ತು ಅವರ ಬೆಂಬಲಿಗರ ನಡುವೆ ಘರ್ಷಣೆ ಸಂಭವಿಸಿದ ನಂತರ 70 ವರ್ಷದ ಖಾನ್ ವಿರುದ್ಧ ಇಸ್ಲಾಮಾಬಾದ್‌ನ ವಿವಿಧ ಪೊಲೀಸ್ ಠಾಣೆಗಳಲ್ಲಿ ಪ್ರಕರಣಗಳು ದಾಖಲಾಗಿವೆ.

ಇಮ್ರಾನ್ ಖಾನ್ ಅವರ ಮಧ್ಯಂತರ ಜಾಮೀನನ್ನು ಜೂನ್ 8 ರವರೆಗೆ ವಿಸ್ತರಿಸಲಾಯಿತು ಮತ್ತು ಬುಶ್ರಾ ಬೀಬಿಗೆ ಮೇ 31 ರವರೆಗೆ ಜಾಮೀನು ನೀಡಲಾಯಿತು. ಹಿಂದಿನ ದಿನ, ಅವರು ರಾಷ್ಟ್ರೀಯ ಉತ್ತರದಾಯಿತ್ವ ಬ್ಯೂರೋ (NAB) ನಿಂದ ತನ್ನ ಬಂಧನವನ್ನು ತಡೆಯಲು ಜಾಮೀನು ಕೋರಿ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದರು.

ಅಲ್-ಖಾದಿರ್ ಟ್ರಸ್ಟ್ ಪ್ರಕರಣಕ್ಕೆ ಸಂಬಂಧಿಸಿದಂತೆ ಪಿಟಿಐ ಮುಖ್ಯಸ್ಥರು ಇಸ್ಲಾಮಾಬಾದ್‌ನಲ್ಲಿ ಎನ್‌ಎಬಿ ಮುಂದೆ ಹಾಜರಾಗುವ ನಿರೀಕ್ಷೆಯಿದೆ.

ಮೇ 23 ರಂದು ಹಗರಣ ಪ್ರಕರಣದಲ್ಲಿ ಜಾಮೀನು ಅವಧಿ ಮುಗಿದ ಬುಶ್ರಾ ಬೀಬಿಗೆ ರಕ್ಷಣಾತ್ಮಕ ಜಾಮೀನು ಕೋರಿ ಇಮ್ರಾನ್ ಖಾನ್ ಮತ್ತು ಅವರ ಪತ್ನಿ ಮೊದಲು ಉತ್ತರದಾಯಿತ್ವ ನ್ಯಾಯಾಲಯದ ಮುಂದೆ ಹಾಜರಾದರು.

ಇದನ್ನೂ ಓದಿ: Modi Airways: ಮೋದಿಯವರ ಕಾರ್ಯಕ್ರಮಕ್ಕಾಗಿ ಸಿಡ್ನಿಗೆ ವಿಶೇಷ ವಿಮಾನದಲ್ಲಿ ತೆರಳಿದ ಆಸ್ಟ್ರೇಲಿಯಾದಲ್ಲಿರುವ ಭಾರತೀಯರು

ಪಿಕೆಆರ್ 500,000 ಮೌಲ್ಯದ ಜಾಮೀನು ಬಾಂಡ್‌ಗಳನ್ನು ಷರತ್ತು ಮೇರೆ ಮೇ 31 ರವರೆಗೆ ಆಕೆಯ ಜಾಮೀನನ್ನು ನ್ಯಾಯಾಲಯ ಅನುಮೋದಿಸಿತು.

ಮತ್ತಷ್ಟು ವಿದೇಶ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 1:40 pm, Tue, 23 May 23

Follow Us
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ