AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಒಂದು ವಾರದಲ್ಲಿ ಮಸೂದ್​ನನ್ನು ಬಂಧಿಸಿ: ಪಾಕ್​ ಪೊಲೀಸರಿಗೆ ಕೋರ್ಟ್​ನಿಂದ ಖಡಕ್​ ಸೂಚನೆ

ಉಗ್ರ ಚಟುವಟಿಕೆಗೆ ಹಣ ನೀಡಿದ ಆರೋಪದ ಮೇಲೆ ಭಯೋತ್ಪಾದನೆ ವಿರೋಧಿ ನ್ಯಾಯಾಲಯ (ಎಟಿಸಿ) ಅಜರ್​ ವಿರುದ್ಧ ಅರೆಸ್ಟ್​ ವಾರಂಟ್​ ಜಾರಿ ಮಾಡಿದೆ. ಈ ಮೂಲಕ ಉಗ್ರ ಚಟುವಟಿಕೆಗೆ ಪಾಕಿಸ್ತಾನ ಕಡಿವಾಣ ಹಾಕಲು ಆರಂಭಿಸಿದೆ.

ಒಂದು ವಾರದಲ್ಲಿ ಮಸೂದ್​ನನ್ನು ಬಂಧಿಸಿ: ಪಾಕ್​ ಪೊಲೀಸರಿಗೆ ಕೋರ್ಟ್​ನಿಂದ ಖಡಕ್​ ಸೂಚನೆ
ಮಸೂದ್‌ ಅಜರ್‌
ರಾಜೇಶ್ ದುಗ್ಗುಮನೆ
|

Updated on: Jan 09, 2021 | 9:58 PM

Share

ಲಾಹೋರ್: ವಿಶ್ವಸಂಸ್ಥೆಯಿಂದ ಜಾಗತಿಕ ಉಗ್ರ ಎನ್ನುವ ಹಣೆಪಟ್ಟಿ ಹೊತ್ತಿರುವ ಜೈಷ್​-ಇ-ಮೊಹ್ಮದ್ ಸಂಘಟನೆಯ ಮುಖ್ಯಸ್ಥ ಮಸೂದ್​ ಅಜರ್​ನನ್ನು ಜನವರಿ 18ರ ಒಳಗೆ ಬಂಧಿಸುವಂತೆ ಪಾಕಿಸ್ತಾನ ಕೋರ್ಟ್​ ಪಂಜಾಬ್​ ಪೊಲೀಸರಿಗೆ ಸೂಚನೆ ನೀಡಿದೆ.

ಉಗ್ರ ಚಟುವಟಿಕೆಗೆ ಹಣ ನೀಡಿದ ಆರೋಪದ ಮೇಲೆ ಭಯೋತ್ಪಾದನೆ ವಿರೋಧಿ ನ್ಯಾಯಾಲಯ (ಎಟಿಸಿ) ಅಜರ್​ ವಿರುದ್ಧ ಅರೆಸ್ಟ್​ ವಾರಂಟ್​ ಜಾರಿ ಮಾಡಿದೆ. ಈ ಮೂಲಕ ಉಗ್ರ ಚಟುವಟಿಕೆಗೆ ಪಾಕಿಸ್ತಾನ ಕಡಿವಾಣ ಹಾಕಲು ಆರಂಭಿಸಿದೆ.

ಈ ಬಗ್ಗೆ ಕಠಿಣ ಸೂಚನೆ ಹೊರಡಿಸಿರುವ ಎಟಿಸಿ ಜಡ್ಜ್​ ನಟಾಶ ನಸೀಮ್​ ಸುಪ್ರಾ, ಜನವರಿ 18ರ ಒಳಗೆ ಮಸೂದ್​ನನ್ನು ಬಂಧಿಸಿ. ಒಂದೊಮ್ಮೆ ಬಂಧಿಸಲು ವಿಫಲವಾದರೆ ನ್ಯಾಯಾಲಯವು ಅವನನ್ನು ಘೋಷಿತ ಅಪರಾಧಿ ಎಂದು ಹೇಳಲು ಕ್ರಮಗಳನ್ನು ಪ್ರಾರಂಭಿಸಬಹುದು ಎಂದಿದೆ.

ಭಾರತದಲ್ಲಿ ನಡೆದ ಸಾಕಷ್ಟು ಉಗ್ರ ಚಟುವಟಿಕೆಯಲ್ಲಿ ಈತನ ಕೈವಾಡ ಇದೆ. 2019ರ ಪುಲ್ವಾಮಾ ದಾಳಿಯ ಮಾಸ್ಟರ್​ ಮೈಂಡ್​ ಈತನೇ ಎಂದು ಹೇಳಲಾಗಿತ್ತು.

ಬಾಲ್​ಕೋಟ್​ ದಾಳಿಯಲ್ಲಿ 300ಕ್ಕೂ ಹೆಚ್ಚು ಉಗ್ರರು ಮೃತಪಟ್ಟಿದ್ದಾರೆ: ಕೊನೆಗೂ ಸತ್ಯ ಒಪ್ಪಿಕೊಂಡ ಪಾಕಿಸ್ತಾನ

Follow Us
Rajesh Duggumane
Rajesh Duggumane

ಪತ್ರಿಕೋದ್ಯಮಕ್ಕೆ ಕಾಲಿಟ್ಟು 9 ವರ್ಷ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದೇನೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ನನ್ನ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದೇನೆ.

Read More
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?