AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Pakistan: ಪೊಲೀಸ್ ಚೌಕಿ ಮೇಲೆ ದಾಳಿ ನಡೆಸಿ ಇಬ್ಬರು ಪೊಲೀಸರನ್ನು ಅಪಹರಿಸಿದ ಡಕಾಯಿತರು

ಪಾಕಿಸ್ತಾನದಲ್ಲಿ ಪೊಲೀಸ್ ಚೌಕಿ ಮೇಲೆ ದಾಳಿ ನಡೆಸಿ ಇಬ್ಬರು ಪೊಲೀಸರನ್ನು ಅಪಹರಿಸಿರುವ ಘಟನೆ ನಡೆದಿದೆ. ಸಿಂಧ್‌ನ ಕಂಡ್‌ಕೋಟ್ ತೆಹ್ಸಿಲ್ ಬಳಿಯ ದುರಾನಿ ಮೆಹರ್‌ನ ಕಛಾ ಪ್ರದೇಶದಲ್ಲಿ ಡಕಾಯಿತರು ಶನಿವಾರ ಪೊಲೀಸ್ ಚೆಕ್‌ಪೋಸ್ಟ್ ಮೇಲೆ ದಾಳಿ ಮಾಡಿ ಇಬ್ಬರು ಪೊಲೀಸರನ್ನು ಅಪಹರಿಸಿದ್ದಾರೆ.

Pakistan: ಪೊಲೀಸ್ ಚೌಕಿ ಮೇಲೆ ದಾಳಿ ನಡೆಸಿ ಇಬ್ಬರು ಪೊಲೀಸರನ್ನು ಅಪಹರಿಸಿದ ಡಕಾಯಿತರು
ಸಾಂದರ್ಭಿಕ ಚಿತ್ರ-ಪಾಕಿಸ್ತಾನ ಪೊಲೀಸ್
ನಯನಾ ರಾಜೀವ್
|

Updated on: Mar 12, 2023 | 12:25 PM

Share

ಪಾಕಿಸ್ತಾನದಲ್ಲಿ ಪೊಲೀಸ್ ಚೌಕಿ ಮೇಲೆ ದಾಳಿ ನಡೆಸಿ ಇಬ್ಬರು ಪೊಲೀಸರನ್ನು ಅಪಹರಿಸಿರುವ ಘಟನೆ ನಡೆದಿದೆ. ಸಿಂಧ್‌ನ ಕಂಡ್‌ಕೋಟ್ ತೆಹ್ಸಿಲ್ ಬಳಿಯ ದುರಾನಿ ಮೆಹರ್‌ನ ಕಛಾ ಪ್ರದೇಶದಲ್ಲಿ ಡಕಾಯಿತರು ಶನಿವಾರ ಪೊಲೀಸ್ ಚೆಕ್‌ಪೋಸ್ಟ್ ಮೇಲೆ ದಾಳಿ ಮಾಡಿ ಇಬ್ಬರು ಪೊಲೀಸರನ್ನು ಅಪಹರಿಸಿದ್ದಾರೆ ಎಂದು ಪಾಕಿಸ್ತಾನ ಮೂಲದ ARY ನ್ಯೂಸ್ ವರದಿ ಮಾಡಿದೆ.

ಮಾಹಿತಿಗಳ ಪ್ರಕಾರ, ದುರಾನಿ ಮೆಹರ್‌ನ ಕಛಾ ಪ್ರದೇಶದ ಪೊಲೀಸ್ ಪೋಸ್ಟ್ ಮೇಲೆ ಡಕಾಯಿತರು ದಾಳಿ ಮಾಡಿದ ನಂತರ ಇಬ್ಬರು ಪೊಲೀಸರಾದ ಸಜ್ಜದ್ ಜಖ್ರಾನಿ ಮತ್ತು ಗಫಾರ್ ಅವರನ್ನು ಶನಿವಾರ ಅಪಹರಿಸಿದ್ದರು.

ದರೋಡೆಕೋರರು ತಮ್ಮ ವಶದಲ್ಲಿರುವ ಇಬ್ಬರು ವ್ಯಕ್ತಿಗಳ ವಿಡಿಯೋವನ್ನು ಬಿಡುಗಡೆ ಮಾಡಿ, ಈ ಹಿಂದೆ ಪೊಲೀಸರು ಬಂಧಿಸಿದ್ದ 13 ವರ್ಷದ ಶಂಕಿತ ವಾಜಿದ್​ನನ್ನು ಬಿಡುಗಡೆ ಮಾಡುವಂತೆ ಒತ್ತಾಯಿಸಿದ್ದಾರೆ.

ಇತ್ತೀಚೆಗೆ ಬಲೂಚಿಸ್ತಾನದ ಖುಜ್ದಾರ್​ ಜಿಲ್ಲೆಯಲ್ಲಿ ನಡೆದ ರಿಮೋಟ್ ನಿಯಂತ್ರಿತ ಸ್ಫೋಟದಲ್ಲಿ ಇಬ್ಬರು ಪೊಲೀಸರು ಮೃತಪಟ್ಟಿದ್ದರು. ಇಬ್ಬರು ಗಾಯಗೊಂಡಿದ್ದರು. ಸ್ಫೋಟ ಸಂಭವಿಸುವಾಗ ಎಸ್​ಪಿ ಖುಜ್ದಾರ್ ದಳವು ಆ ಪ್ರದೇಶದಲ್ಲಿ ಗಸ್ತು ತಿರುಗುತ್ತಿತ್ತು.

ಅಂತಾರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ