AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಶಾಶ್ವತ ಹಗೆತನದಲ್ಲಿ ನಂಬಿಕೆ ಇಲ್ಲ: ಭಾರತಕ್ಕೆ ಸಕಾರಾತ್ಮಕ ಸಂದೇಶ ಕಳುಹಿಸಿದ ಪಾಕ್

ಭಾರತಕ್ಕೆ ಪಾಕಿಸ್ತಾನವು ಸಕಾರಾತ್ಮಕ ಸಂದೇಶ ರವಾನೆ ಮಾಡಿದೆ. ನಾವು ಶಾಶ್ವತ ಹಗೆತನದಲ್ಲಿ ನಂಬಿಕೆ ಹೊಂದಿಲ್ಲ ಎಂದು ಪಾಕ್ ಉಪ ಪ್ರಧಾನಿ ಇಶಾಕ್​ ದಾರ್ ಹೇಳಿದ್ದಾರೆ. ಎಲ್ಲಾ ದೇಶಗಳೊಂದಿಗೆ ಶಾಂತಿಯುತ, ಸಹಕಾರಿ ಮತ್ತು ಉತ್ತಮ-ನೆರೆಹೊರೆಯ ಸಂಬಂಧಗಳನ್ನು ಕಾಪಾಡಿಕೊಳ್ಳಲು ಪಾಕಿಸ್ತಾನ ಸತತವಾಗಿ ಶ್ರಮಿಸುತ್ತಿದೆ ಎಂದು ದಾರ್ ಹೇಳಿದ್ದಾರೆ.

ಶಾಶ್ವತ ಹಗೆತನದಲ್ಲಿ ನಂಬಿಕೆ ಇಲ್ಲ: ಭಾರತಕ್ಕೆ ಸಕಾರಾತ್ಮಕ ಸಂದೇಶ ಕಳುಹಿಸಿದ ಪಾಕ್
ಇಶಕ್​ ದಾರ್
ನಯನಾ ರಾಜೀವ್
|

Updated on: Jun 26, 2024 | 9:16 AM

Share

ಪಾಕಿಸ್ತಾನ(Pakistan)ದ ಉಪಪ್ರಧಾನಿ ಮತ್ತು ವಿದೇಶಾಂಗ ಸಚಿವ ಇಶಕ್ ದಾರ್(Ishaq Dar)ಅವರು  ಭಾರತಕ್ಕೆ ಸಕಾರಾತ್ಮಕ ಸಂದೇಶ ಕಳುಹಿಸಿದ್ದಾರೆ. ತಮ್ಮ ದೇಶವು ಶಾಶ್ವತ ಹಗೆತನದಲ್ಲಿ ನಂಬಿಕೆ ಹೊಂದಿಲ್ಲ ಎಂದು ಅವರು ಹೇಳಿದ್ದಾರೆ. ಇಸ್ಲಾಮಾಬಾದ್‌ನ ಇನ್‌ಸ್ಟಿಟ್ಯೂಟ್ ಆಫ್ ಸ್ಟ್ರಾಟೆಜಿಕ್ ಸ್ಟಡೀಸ್ ಇಸ್ಲಾಮಾಬಾದ್ (ಐಎಸ್‌ಎಸ್‌ಐ) ನಲ್ಲಿ ನಡೆದ ಸೆಮಿನಾರ್‌ನಲ್ಲಿ ಮಾತನಾಡಿದ ಅವರು, ಪಾಕಿಸ್ತಾನ ಯಾವಾಗಲೂ ತನ್ನ ನೆರೆಯ ರಾಷ್ಟ್ರಗಳೊಂದಿಗೆ ಸೌಹಾರ್ದ ಸಂಬಂಧ ಹೊಂದುವುದರಲ್ಲಿ ಹೆಚ್ಚಿನ ನಂಬಿಕೆ ಹೊಂದಿದೆ ಎಂದು ಹೇಳಿದರು.

ದಕ್ಷಿಣ ಏಷ್ಯಾ ಈ ಪ್ರದೇಶವು ಬಡತನ, ನಿರುದ್ಯೋಗ, ಅನಕ್ಷರತೆ, ರೋಗ, ಆಹಾರ ಅಭದ್ರತೆ, ನೀರಿನ ಕೊರತೆ, ನೈಸರ್ಗಿಕ ವಿಕೋಪಗಳು, ಪರಿಸರ ಅವನತಿ ಮತ್ತು ಹವಾಮಾನ ಬದಲಾವಣೆಯ ಪರಿಣಾಮಗಳು ಸೇರಿದಂತೆ ಬೆದರಿಸುವ ಸವಾಲುಗಳಿಂದ ಸುತ್ತುವರೆದಿದೆ.

ಎಲ್ಲಾ ದೇಶಗಳೊಂದಿಗೆ ಶಾಂತಿಯುತ, ಸಹಕಾರಿ ಮತ್ತು ಉತ್ತಮ-ನೆರೆಹೊರೆಯ ಸಂಬಂಧಗಳನ್ನು ಕಾಪಾಡಿಕೊಳ್ಳಲು ಪಾಕಿಸ್ತಾನ ಸತತವಾಗಿ ಶ್ರಮಿಸುತ್ತಿದೆ ಎಂದು ದಾರ್ ಹೇಳಿದ್ದಾರೆ. ಕೆಲವು ಸಂದರ್ಭಗಳಲ್ಲಿ ಸವಾಲುಗಳು ಮತ್ತು ಹಿನ್ನಡೆಗಳ ಹೊರತಾಗಿಯೂ, ಪಾಕಿಸ್ತಾನದ ನಿರ್ಧಾರ ಸ್ಥಿರವಾಗಿರುತ್ತದೆ ಎಂದು ಹೇಳಿದರು.

ಮತ್ತಷ್ಟು ಓದಿ: ಪಾಕಿಸ್ತಾನಕ್ಕಿಂತ ಹೆಚ್ಚು ಪರಮಾಣು ಶಸ್ತ್ರಾಸ್ತ್ರಗಳನ್ನು ಹೊಂದಿದೆ ಭಾರತ

ನರೇಂದ್ರ ಮೋದಿ ಅವರು ಸತತ ಮೂರನೇ ಬಾರಿಗೆ ಭಾರತದ ಪ್ರಧಾನಿಯಾಗಿದ್ದಾರೆ. ಇತ್ತೀಚೆಗಷ್ಟೇ ನಡೆದ ಲೋಕಸಭಾ ಚುನಾವಣೆಯ ನಂತರ ಎನ್‌ಡಿಎ ಸಂಪೂರ್ಣ ಬಹುಮತ ಪಡೆದಿದೆ. ಮೋದಿ ಪ್ರಧಾನಿಯಾದ ನಂತರ ವಿಶ್ವದಾದ್ಯಂತದ ನಾಯಕರು ಅಭಿನಂದನಾ ಸಂದೇಶಗಳನ್ನು ನೀಡಿದರು.

ಅಲ್ಲದೆ, ಹಲವು ದೇಶಗಳು ಕೂಡ ಭಾರತದೊಂದಿಗೆ ಉತ್ತಮ ಬಾಂಧವ್ಯಕ್ಕೆ ಒತ್ತು ನೀಡುತ್ತಿವೆ. ಉಭಯ ದೇಶಗಳ ನಡುವಿನ ಸಂಬಂಧಕ್ಕೆ ಸಂಬಂಧಿಸಿದಂತೆ ನೆರೆಯ ರಾಷ್ಟ್ರ ಪಾಕಿಸ್ತಾನದಿಂದಲೂ ಮಹತ್ವದ ಹೇಳಿಕೆ ಬಂದಿದೆ.ಪಾಕಿಸ್ತಾನವು ಯಾವಾಗಲೂ ಭಾರತದೊಂದಿಗೆ ಉತ್ತಮ ಸಂಬಂಧವನ್ನು ಹೊಂದಲು ಉತ್ಸುಕವಾಗಿದೆ ಎಂದು ಹೇಳಿದರು.

ಅಂತಾರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ