AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Covid 19 Vaccine: ಚೀನಾ ಸಹಾಯದೊಂದಿಗೆ ಲಸಿಕೆ ಅಭಿವೃದ್ಧಿ ಪಡಿಸಿದ ಪಾಕಿಸ್ತಾನ; ನಿನ್ನೆ ಉದ್ಘಾಟನೆಯಾದ ‘ಪಾಕ್​​ವಾಕ್’​

ಕೊವಿಡ್​ 19ನಿಂದಾದ ಬಿಕ್ಕಟ್ಟಿನ ಸಂದರ್ಭವನ್ನು ಅವಕಾಶವನ್ನಾಗಿ ಪರಿವರ್ತಿಸಿಕೊಳ್ಳುವ ಅನಿವಾರ್ಯ ಪಾಕಿಸ್ತಾನಕ್ಕೆ ಇದೆ. ಇದಕ್ಕಾಗಿ ನಮ್ಮ ಮಿತ್ರರಾಷ್ಟ್ರ ಚೀನಾದ ಸಹಾಯ ತೆಗೆದುಕೊಂಡಿದ್ದೇವೆ ಎಂದು ಡಾ. ಸುಲ್ತಾನ್​ ತಿಳಿಸಿದ್ದಾರೆ.

Covid 19 Vaccine: ಚೀನಾ ಸಹಾಯದೊಂದಿಗೆ ಲಸಿಕೆ ಅಭಿವೃದ್ಧಿ ಪಡಿಸಿದ ಪಾಕಿಸ್ತಾನ; ನಿನ್ನೆ ಉದ್ಘಾಟನೆಯಾದ ‘ಪಾಕ್​​ವಾಕ್’​
ಪ್ರಾತಿನಿಧಿಕ ಚಿತ್ರ
TV9 Web
| Edited By: |

Updated on: Jun 02, 2021 | 9:16 AM

Share

ನೆರೆರಾಷ್ಟ್ರ ಪಾಕಿಸ್ತಾನದಲ್ಲಿ ಮೊದಲ ಕೊವಿಡ್​ 19 ಲಸಿಕೆ ನಿನ್ನೆ (ಜೂ.1) ಬಿಡುಗಡೆಯಾಗಿದೆ. ಪಾಕ್​ವಾಕ್​ (PakVac) ಎಂದು ಲಸಿಕೆಗೆ ಹೆಸರಿಸಲಾಗಿದೆ. ಪಾಕ್​ ತನ್ನ ಮಿತ್ರ ರಾಷ್ಟ್ರ ಚೀನಾದ ಸಹಕಾರದೊಂದಿಗೆ ಈ ಲಸಿಕೆ ಅಭಿವೃದ್ಧಿಪಡಿಸಿದ್ದಾಗಿ ಹೇಳಿಕೊಂಡಿದೆ. ಈ ಲಸಿಕೆಯನ್ನು ದೇಶದ ಜನರಿಗೆ ನೀಡಿ ಕೊರೊನಾ ವೈರಸ್​ ಪ್ರಸರಣ ಪ್ರಮಾಣವನ್ನು ನಿಯಂತ್ರಣ ಮಾಡುವುದಾಗಿ ಹೇಳಿಕೊಂಡಿದೆ.

ಪಾಕ್​​ನ ಪ್ರಮುಖ ವೈದ್ಯ ಡಾ. ಫೈಸಲ್​ ಸುಲ್ತಾನ್​ ಈ ಬಗ್ಗೆ ಮಾತನಾಡಿ, ಕೊವಿಡ್​ 19ನಿಂದಾದ ಬಿಕ್ಕಟ್ಟಿನ ಸಂದರ್ಭವನ್ನು ಅವಕಾಶವನ್ನಾಗಿ ಪರಿವರ್ತಿಸಿಕೊಳ್ಳುವ ಅನಿವಾರ್ಯ ಪಾಕಿಸ್ತಾನಕ್ಕೆ ಇದೆ. ಇದಕ್ಕಾಗಿ ನಮ್ಮ ಮಿತ್ರರಾಷ್ಟ್ರ ಚೀನಾದ ಸಹಾಯ ತೆಗೆದುಕೊಂಡಿದ್ದೇವೆ. ವ್ಯಾಕ್ಸಿನ್​​ಗೆ ಬೇಕಾದ ಕಚ್ಚಾ ವಸ್ತುಗಳನ್ನು ಚೀನಾ ಒದಗಿಸಿದೆ. ಅಷ್ಟಾದರೂ ನಮಗೆ ಅದನ್ನು ಅಭಿವೃದ್ಧಿ ಪಡಿಸುವುದು ಅಷ್ಟು ಸುಲಭವಾಗಿರಲಿಲ್ಲ ಎಂದು ಲಸಿಕೆ ಉದ್ಘಾಟನೆ ಸಮಾರಂಭದಲ್ಲಿ ಹೇಳಿಕೊಂಡಿದ್ದಾರೆ. ಇನ್ನು ಕೆಲವೇ ದಿನಗಳಲ್ಲಿ ಸ್ಥಳೀಯವಾಗಿ ಲಸಿಕೆ ಉತ್ಪಾದನೆ ಕಾರ್ಯ ಶುರುವಾಗುವುದಾಗಿಯೂ ತಿಳಿಸಿದ್ದಾರೆ. ಪಾಕಿಸ್ತಾನದ ಪಾಲಿಗೆ ಇದೊಂದು ವಿಶೇಷ ದಿನವೆಂದು ರಾಷ್ಟ್ರೀಯ ಕಮಾಂಡ್​ ಮತ್ತು ಕಾರ್ಯಾಚರಣೆ ಕೇಂದ್ರದ (NCOC) ಮುಖ್ಯಸ್ಥ ಆಸಾದ್​ ಉಮರ್​ ತಿಳಿಸಿದ್ದಾರೆ.

ಪಾಕ್​​ನಲ್ಲಿ ಸದ್ಯ ಕೊರೊನಾ ಪಾಸಿಟಿವಿಟಿ ಪ್ರಮಾಣ ಶೇ.4ಕ್ಕಿಂತಲೂ ಕಡಿಮೆ ಇದೆ. ಹಾಗೇ, ಬೇರೆ ದೇಶದ ಲಸಿಕೆಯನ್ನು ಖರೀದಿಸಿ ಇದುವರೆಗೆ 7.3 ಮಿಲಿಯನ್​ ಜನರಿಗೆ ಲಸಿಕೆ ನೀಡಲಾಗಿದೆ ಎಂದೂ ಪಾಕ್​ ತಿಳಿಸಿದೆ.

ಇದನ್ನೂ ಓದಿ: ಬಾಂಗ್ಲಾ ಯುವತಿ ಮೇಲೆ ಗ್ಯಾಂಗ್​ರೇಪ್​ ಪ್ರಕರಣ; ಮತ್ತೊಬ್ಬ ಆರೋಪಿಯ ಮೇಲೆ ಫೈರಿಂಗ್

Follow Us
ದೇವರಾಜ ಅರಸು ಅವರ ವಿಂಟೇಜ್ ಕಾರಿನಲ್ಲಿ ಡಿಸಿಎಂ, ಸಚಿವರ ಸವಾರಿ
ದೇವರಾಜ ಅರಸು ಅವರ ವಿಂಟೇಜ್ ಕಾರಿನಲ್ಲಿ ಡಿಸಿಎಂ, ಸಚಿವರ ಸವಾರಿ
‘ಜೈಲಿನಲ್ಲಿ ಅಧಿಕಾರಿಗಳಿಂದಲೇ ವೇಶ್ಯಾವಾಟಿಕೆ’: ಮಾಜಿ ಕೈದಿ ಗಂಭೀರ ಆರೋಪ
‘ಜೈಲಿನಲ್ಲಿ ಅಧಿಕಾರಿಗಳಿಂದಲೇ ವೇಶ್ಯಾವಾಟಿಕೆ’: ಮಾಜಿ ಕೈದಿ ಗಂಭೀರ ಆರೋಪ
RSS ಶಾಖೆಯಲ್ಲಿ ಸಂಘದ ಗೀತೆ ಬಿಟ್ಟು ರಾಷ್ಟ್ರಗೀತೆ ಹಾಡಲಿ: ಹರಿಪ್ರಸಾದ್
RSS ಶಾಖೆಯಲ್ಲಿ ಸಂಘದ ಗೀತೆ ಬಿಟ್ಟು ರಾಷ್ಟ್ರಗೀತೆ ಹಾಡಲಿ: ಹರಿಪ್ರಸಾದ್
ಸಚಿವ ಮಧು ಬಂಗಾರಪ್ಪ ಕ್ಷೇತ್ರದಲ್ಲೇ ತಪ್ಪದ ಬಸ್ ಗೋಳು
ಸಚಿವ ಮಧು ಬಂಗಾರಪ್ಪ ಕ್ಷೇತ್ರದಲ್ಲೇ ತಪ್ಪದ ಬಸ್ ಗೋಳು
ಹೈದರಾಬಾದ್ ಮೆಟ್ರೋದಲ್ಲಿ 'ಟಾಕ್ಸಿಕ್' ಹವಾ; ಯಶ್ ಸಿನಿಮಾಗೆ ಭರ್ಜರಿ ಪ್ರಚಾರ
ಹೈದರಾಬಾದ್ ಮೆಟ್ರೋದಲ್ಲಿ 'ಟಾಕ್ಸಿಕ್' ಹವಾ; ಯಶ್ ಸಿನಿಮಾಗೆ ಭರ್ಜರಿ ಪ್ರಚಾರ
ಕೆಎಂಎಫ್ ಪಶು ಆಹಾರ ಕಲಬೆರಕೆ ಹಗರಣ: ನಾಲ್ವರು ಅಧಿಕಾರಿಗಳ ಅಮಾನತು
ಕೆಎಂಎಫ್ ಪಶು ಆಹಾರ ಕಲಬೆರಕೆ ಹಗರಣ: ನಾಲ್ವರು ಅಧಿಕಾರಿಗಳ ಅಮಾನತು
440 ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳ ಪೈಕಿ 428 ರಲ್ಲಿ ಪ್ರಾಂಶುಪಾಲರೇ ಇಲ್ಲ
440 ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳ ಪೈಕಿ 428 ರಲ್ಲಿ ಪ್ರಾಂಶುಪಾಲರೇ ಇಲ್ಲ
ದೆಹಲಿಯಲ್ಲಿರುವ ಪಾಕ್ ಹೈಕಮಿಷನ್ ಹೊರಗಿನ ಬ್ಯಾರಿಕೇಡ್‌ಗಳ ತೆರವು
ದೆಹಲಿಯಲ್ಲಿರುವ ಪಾಕ್ ಹೈಕಮಿಷನ್ ಹೊರಗಿನ ಬ್ಯಾರಿಕೇಡ್‌ಗಳ ತೆರವು
ಚಿಕ್ಕಮಗಳೂರು: 3000 ಅಡಿ ಪ್ರಪಾತದ ಅಂಚಿನಲ್ಲಿ ಥಾರ್ ಜೀಪ್ ಓಡಿಸಿ ಹುಚ್ಚಾಟ
ಚಿಕ್ಕಮಗಳೂರು: 3000 ಅಡಿ ಪ್ರಪಾತದ ಅಂಚಿನಲ್ಲಿ ಥಾರ್ ಜೀಪ್ ಓಡಿಸಿ ಹುಚ್ಚಾಟ
ರಾಜ್ಯಾದ್ಯಂತ ಮೆಡಿಕಲ್ ಸ್ಟೋರ್‌ಗಳ ಪರಿಶೀಲನೆಗೆ ಮಹತ್ವದ ಆದೇಶ
ರಾಜ್ಯಾದ್ಯಂತ ಮೆಡಿಕಲ್ ಸ್ಟೋರ್‌ಗಳ ಪರಿಶೀಲನೆಗೆ ಮಹತ್ವದ ಆದೇಶ