AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Covid 19 Vaccine: ಚೀನಾ ಸಹಾಯದೊಂದಿಗೆ ಲಸಿಕೆ ಅಭಿವೃದ್ಧಿ ಪಡಿಸಿದ ಪಾಕಿಸ್ತಾನ; ನಿನ್ನೆ ಉದ್ಘಾಟನೆಯಾದ ‘ಪಾಕ್​​ವಾಕ್’​

ಕೊವಿಡ್​ 19ನಿಂದಾದ ಬಿಕ್ಕಟ್ಟಿನ ಸಂದರ್ಭವನ್ನು ಅವಕಾಶವನ್ನಾಗಿ ಪರಿವರ್ತಿಸಿಕೊಳ್ಳುವ ಅನಿವಾರ್ಯ ಪಾಕಿಸ್ತಾನಕ್ಕೆ ಇದೆ. ಇದಕ್ಕಾಗಿ ನಮ್ಮ ಮಿತ್ರರಾಷ್ಟ್ರ ಚೀನಾದ ಸಹಾಯ ತೆಗೆದುಕೊಂಡಿದ್ದೇವೆ ಎಂದು ಡಾ. ಸುಲ್ತಾನ್​ ತಿಳಿಸಿದ್ದಾರೆ.

Covid 19 Vaccine: ಚೀನಾ ಸಹಾಯದೊಂದಿಗೆ ಲಸಿಕೆ ಅಭಿವೃದ್ಧಿ ಪಡಿಸಿದ ಪಾಕಿಸ್ತಾನ; ನಿನ್ನೆ ಉದ್ಘಾಟನೆಯಾದ ‘ಪಾಕ್​​ವಾಕ್’​
ಪ್ರಾತಿನಿಧಿಕ ಚಿತ್ರ
TV9 Web
| Edited By: |

Updated on: Jun 02, 2021 | 9:16 AM

Share

ನೆರೆರಾಷ್ಟ್ರ ಪಾಕಿಸ್ತಾನದಲ್ಲಿ ಮೊದಲ ಕೊವಿಡ್​ 19 ಲಸಿಕೆ ನಿನ್ನೆ (ಜೂ.1) ಬಿಡುಗಡೆಯಾಗಿದೆ. ಪಾಕ್​ವಾಕ್​ (PakVac) ಎಂದು ಲಸಿಕೆಗೆ ಹೆಸರಿಸಲಾಗಿದೆ. ಪಾಕ್​ ತನ್ನ ಮಿತ್ರ ರಾಷ್ಟ್ರ ಚೀನಾದ ಸಹಕಾರದೊಂದಿಗೆ ಈ ಲಸಿಕೆ ಅಭಿವೃದ್ಧಿಪಡಿಸಿದ್ದಾಗಿ ಹೇಳಿಕೊಂಡಿದೆ. ಈ ಲಸಿಕೆಯನ್ನು ದೇಶದ ಜನರಿಗೆ ನೀಡಿ ಕೊರೊನಾ ವೈರಸ್​ ಪ್ರಸರಣ ಪ್ರಮಾಣವನ್ನು ನಿಯಂತ್ರಣ ಮಾಡುವುದಾಗಿ ಹೇಳಿಕೊಂಡಿದೆ.

ಪಾಕ್​​ನ ಪ್ರಮುಖ ವೈದ್ಯ ಡಾ. ಫೈಸಲ್​ ಸುಲ್ತಾನ್​ ಈ ಬಗ್ಗೆ ಮಾತನಾಡಿ, ಕೊವಿಡ್​ 19ನಿಂದಾದ ಬಿಕ್ಕಟ್ಟಿನ ಸಂದರ್ಭವನ್ನು ಅವಕಾಶವನ್ನಾಗಿ ಪರಿವರ್ತಿಸಿಕೊಳ್ಳುವ ಅನಿವಾರ್ಯ ಪಾಕಿಸ್ತಾನಕ್ಕೆ ಇದೆ. ಇದಕ್ಕಾಗಿ ನಮ್ಮ ಮಿತ್ರರಾಷ್ಟ್ರ ಚೀನಾದ ಸಹಾಯ ತೆಗೆದುಕೊಂಡಿದ್ದೇವೆ. ವ್ಯಾಕ್ಸಿನ್​​ಗೆ ಬೇಕಾದ ಕಚ್ಚಾ ವಸ್ತುಗಳನ್ನು ಚೀನಾ ಒದಗಿಸಿದೆ. ಅಷ್ಟಾದರೂ ನಮಗೆ ಅದನ್ನು ಅಭಿವೃದ್ಧಿ ಪಡಿಸುವುದು ಅಷ್ಟು ಸುಲಭವಾಗಿರಲಿಲ್ಲ ಎಂದು ಲಸಿಕೆ ಉದ್ಘಾಟನೆ ಸಮಾರಂಭದಲ್ಲಿ ಹೇಳಿಕೊಂಡಿದ್ದಾರೆ. ಇನ್ನು ಕೆಲವೇ ದಿನಗಳಲ್ಲಿ ಸ್ಥಳೀಯವಾಗಿ ಲಸಿಕೆ ಉತ್ಪಾದನೆ ಕಾರ್ಯ ಶುರುವಾಗುವುದಾಗಿಯೂ ತಿಳಿಸಿದ್ದಾರೆ. ಪಾಕಿಸ್ತಾನದ ಪಾಲಿಗೆ ಇದೊಂದು ವಿಶೇಷ ದಿನವೆಂದು ರಾಷ್ಟ್ರೀಯ ಕಮಾಂಡ್​ ಮತ್ತು ಕಾರ್ಯಾಚರಣೆ ಕೇಂದ್ರದ (NCOC) ಮುಖ್ಯಸ್ಥ ಆಸಾದ್​ ಉಮರ್​ ತಿಳಿಸಿದ್ದಾರೆ.

ಪಾಕ್​​ನಲ್ಲಿ ಸದ್ಯ ಕೊರೊನಾ ಪಾಸಿಟಿವಿಟಿ ಪ್ರಮಾಣ ಶೇ.4ಕ್ಕಿಂತಲೂ ಕಡಿಮೆ ಇದೆ. ಹಾಗೇ, ಬೇರೆ ದೇಶದ ಲಸಿಕೆಯನ್ನು ಖರೀದಿಸಿ ಇದುವರೆಗೆ 7.3 ಮಿಲಿಯನ್​ ಜನರಿಗೆ ಲಸಿಕೆ ನೀಡಲಾಗಿದೆ ಎಂದೂ ಪಾಕ್​ ತಿಳಿಸಿದೆ.

ಇದನ್ನೂ ಓದಿ: ಬಾಂಗ್ಲಾ ಯುವತಿ ಮೇಲೆ ಗ್ಯಾಂಗ್​ರೇಪ್​ ಪ್ರಕರಣ; ಮತ್ತೊಬ್ಬ ಆರೋಪಿಯ ಮೇಲೆ ಫೈರಿಂಗ್

Follow Us
ಸಚಿವ ಸಂಪುಟ ಸಭೆಯಲ್ಲಿ ಒಳ ಮೀಸಲಾತಿ ಬಗ್ಗೆ ಭಾರೀ ಚರ್ಚೆ: ಫೈನಲಿ ಏನಾಯ್ತು?
ಸಚಿವ ಸಂಪುಟ ಸಭೆಯಲ್ಲಿ ಒಳ ಮೀಸಲಾತಿ ಬಗ್ಗೆ ಭಾರೀ ಚರ್ಚೆ: ಫೈನಲಿ ಏನಾಯ್ತು?
ವಿಚಾರಣೆಗೆ ಬಂದಿದ್ದ ಮಲ್ಲಿಕಾರ್ಜುನ ಮುತ್ಯಾಗೆ ಶಾಕ್ ಕೊಟ್ಟ ಪೊಲೀಸ್ರು
ವಿಚಾರಣೆಗೆ ಬಂದಿದ್ದ ಮಲ್ಲಿಕಾರ್ಜುನ ಮುತ್ಯಾಗೆ ಶಾಕ್ ಕೊಟ್ಟ ಪೊಲೀಸ್ರು
ಬುರ್ಖಾ ಧರಿಸಿ ಹೋಳಿ ಆಚರಣೆ: ಅಪಮಾನ ಮಾಡಿದ್ದಾರೆಂದು ದಲಿತ ಮುಖಂಡ ದೂರು
ಬುರ್ಖಾ ಧರಿಸಿ ಹೋಳಿ ಆಚರಣೆ: ಅಪಮಾನ ಮಾಡಿದ್ದಾರೆಂದು ದಲಿತ ಮುಖಂಡ ದೂರು
ಫೋಕ್ಸೋ ಕೇಸ್: ಮಲ್ಲಿಕಾರ್ಜುನ ಮುತ್ಯಾಗೆ ಆಸ್ಪತ್ರೆಯಲ್ಲಿ ಮೆಡಿಕಲ್ ಟೆಸ್ಟ್
ಫೋಕ್ಸೋ ಕೇಸ್: ಮಲ್ಲಿಕಾರ್ಜುನ ಮುತ್ಯಾಗೆ ಆಸ್ಪತ್ರೆಯಲ್ಲಿ ಮೆಡಿಕಲ್ ಟೆಸ್ಟ್
ಅಜೆರ್ಬೈಜಾನ್ ವಿಮಾನ ನಿಲ್ದಾಣದ ಮೇಲೆ ಇರಾನ್​ನ ಡ್ರೋನ್ ದಾಳಿ
ಅಜೆರ್ಬೈಜಾನ್ ವಿಮಾನ ನಿಲ್ದಾಣದ ಮೇಲೆ ಇರಾನ್​ನ ಡ್ರೋನ್ ದಾಳಿ
ಪತಿ, ಅತ್ತೆ-ಮಾವನಿಗೆ ಪತ್ನಿಯಿಂದ ಕಿರುಕುಳ
ಪತಿ, ಅತ್ತೆ-ಮಾವನಿಗೆ ಪತ್ನಿಯಿಂದ ಕಿರುಕುಳ
ಜನ ಮನೆಯಲ್ಲಿ ಕಾಯುತ್ತಿದ್ದರೆ, ಇತ್ತ ನದಿಯಲ್ಲಿ ತೇಲಿಬಂದವು ಆಧಾರ್ ಕಾರ್ಡ್
ಜನ ಮನೆಯಲ್ಲಿ ಕಾಯುತ್ತಿದ್ದರೆ, ಇತ್ತ ನದಿಯಲ್ಲಿ ತೇಲಿಬಂದವು ಆಧಾರ್ ಕಾರ್ಡ್
ವಿಷ್ಣುವರ್ಧನ್ ಅವರ ‘ಸೂರ್ಯವಂಶ’ ಪಾತ್ರ ನೆನಪಿಸಿಕೊಂಡ ಎಸ್ ನಾರಾಯಣ್
ವಿಷ್ಣುವರ್ಧನ್ ಅವರ ‘ಸೂರ್ಯವಂಶ’ ಪಾತ್ರ ನೆನಪಿಸಿಕೊಂಡ ಎಸ್ ನಾರಾಯಣ್
ವಿಷಕಾರಿ ಅಂಶ ಪತ್ತೆ: ಮಕ್ಕಳಿಗೆ ತಂಪು ಪಾನೀಯ ಕುಡಿಯುವವರೇ ಎಚ್ಚರ!
ವಿಷಕಾರಿ ಅಂಶ ಪತ್ತೆ: ಮಕ್ಕಳಿಗೆ ತಂಪು ಪಾನೀಯ ಕುಡಿಯುವವರೇ ಎಚ್ಚರ!
ರಶ್ಮಿಕಾ ಮಂದಣ್ಣ-ವಿಜಯ್ ದೇವರಕೊಂಡ ಆರತಕ್ಷತೆ ಬಂದ ಅತಿಥಿಗಳು: ವಿಡಿಯೋ
ರಶ್ಮಿಕಾ ಮಂದಣ್ಣ-ವಿಜಯ್ ದೇವರಕೊಂಡ ಆರತಕ್ಷತೆ ಬಂದ ಅತಿಥಿಗಳು: ವಿಡಿಯೋ