Pakistan: ಪಾಕಿಸ್ತಾನದಲ್ಲಿ ತೀವ್ರ ಆರ್ಥಿಕ ಬಿಕ್ಕಟ್ಟು; ಉಚಿತ ಗೋಧಿ ಹಿಟ್ಟು ಪಡೆಯಲು ಮುಗಿಬಿದ್ದ ಜನರು

Economic Crisis in Pakistan: ಘಟನೆಯ ದೃಶ್ಯಗಳನ್ನು ಹಂಚಿಕೊಂಡ ಟ್ವೀಟಿಗರೊಬ್ಬರು ಪಾಕಿಸ್ತಾನ ಸರ್ಕಾರವು ಸಂಬರಿಯಾಲ್‌ನ ಹಿಟ್ಟಿನ ಗಿರಣಿಗಳಿಗೆ ಗೋಧಿಯನ್ನು ಪೂರೈಸಿದೆ, ಇದರಿಂದ ಉಚಿತ ಹಿಟ್ಟನ್ನು ನೀಡಲಾಗುತ್ತಿದೆ. ಏತನ್ಮಧ್ಯೆ, ಪೇಶಾವರದಲ್ಲಿ ಜನರು ಉಚಿತ ಗೋಧಿ ಹಿಟ್ಟಿಗಾಗಿ ಜಗಳವಾಡುತ್ತಿದ್ದಾರೆ ಎಂದು ಬರೆದಿದ್ದಾರೆ.

Pakistan: ಪಾಕಿಸ್ತಾನದಲ್ಲಿ ತೀವ್ರ ಆರ್ಥಿಕ ಬಿಕ್ಕಟ್ಟು; ಉಚಿತ ಗೋಧಿ ಹಿಟ್ಟು ಪಡೆಯಲು ಮುಗಿಬಿದ್ದ ಜನರು
ಗೋದಿ ಹಿಟ್ಟು ವಿತರಿಸುತ್ತಿರುವ ಟ್ರಕ್ ಮೇಲೆ ಮುಗಿಬಿದ್ದ ಜನರು
Follow us
|

Updated on:Mar 29, 2023 | 5:41 PM

ಪಾಕಿಸ್ತಾನವು (Pakistan) ಪ್ರಸ್ತುತ ತನ್ನ ಅತ್ಯಂತ ಕೆಟ್ಟ ಆರ್ಥಿಕ ಬಿಕ್ಕಟ್ಟನ್ನು (Economic crises) ಎದುರಿಸುತ್ತಿದೆ. ಗಗನಕ್ಕೇರುತ್ತಿರುವ ಹಣದುಬ್ಬರದಿಂದ ಸಾಮಾನ್ಯ ಜನರು ತಮ್ಮ ಮೂಲಭೂತ ಅಗತ್ಯಗಳನ್ನು ಪೂರೈಸಲು ಹೆಣಗಾಡುತ್ತಿದ್ದಾರೆ. ಹಣದುಬ್ಬರವನ್ನು ನಿಯಂತ್ರಿಸುವುದಕ್ಕಾಗಿ ವಿಶೇಷವಾಗಿ ಪಂಜಾಬ್ ಪ್ರಾಂತ್ಯದ ಬಡವರಿಗೆ ರಂಜಾನ್ ಪ್ಯಾಕೇಜ್ ಅಡಿಯಲ್ಲಿ ಉಚಿತ ಹಿಟ್ಟು ನೀಡುವ ಯೋಜನೆಯನ್ನು ಪ್ರಾರಂಭಿಸಲಾಯಿತು. ಪೇಶಾವರದಲ್ಲಿ ನೂರಾರು ಪಾಕಿಸ್ತಾನಿಗಳು ಬಡವರಿಗೆ ಮೀಸಲಾದ ಗೋಧಿ ಹಿಟ್ಟನ್ನು (wheat flour) ಸಾಗಿಸುತ್ತಿದ್ದ ಟ್ರಕ್‌ನ ಹಿಂದೆ ಓಡುತ್ತಿರುವುದನ್ನು ತೋರಿಸುವ ವಿಡಿಯೊ ಇದೀಗ ಟ್ವಿಟರ್‌ನಲ್ಲಿ ಕಾಣಿಸಿಕೊಂಡಿದೆ. ವಿಡಿಯೊದಲ್ಲಿ ನಾಗರಿಕರು ಟ್ರಕ್‌ನಲ್ಲಿ ಉಚಿತವಾಗಿ ಗೋಧಿ ಹಿಟ್ಟನ್ನು ಪಡೆಯಲು ಒಬ್ಬರನ್ನೊಬ್ಬರು ತಳ್ಳಿಕೊಂಡಿರುವುದನ್ನು ಕಾಣಬಹುದು. ಹೀಗೆ ಮಾಡಿದುದದರಿಂದ ವಿತರಣಾ ಕೇಂದ್ರಕ್ಕೆ ತಲುಪುವ ಮೊದಲೇ ಸ್ಥಳೀಯರು ಟ್ರಕ್ ಅನ್ನು ಲೂಟಿ ಮಾಡಿದ್ದಾರೆ ಎಂದು ವರದಿಯಾಗಿದೆ.

ಘಟನೆಯ ದೃಶ್ಯಗಳನ್ನು ಹಂಚಿಕೊಂಡ ಟ್ವೀಟಿಗರೊಬ್ಬರು ಪಾಕಿಸ್ತಾನ ಸರ್ಕಾರವು ಸಂಬರಿಯಾಲ್‌ನ ಹಿಟ್ಟಿನ ಗಿರಣಿಗಳಿಗೆ ಗೋಧಿಯನ್ನು ಪೂರೈಸಿದೆ, ಇದರಿಂದ ಉಚಿತ ಹಿಟ್ಟನ್ನು ನೀಡಲಾಗುತ್ತಿದೆ. ಏತನ್ಮಧ್ಯೆ, ಪೇಶಾವರದಲ್ಲಿ ಜನರು ಉಚಿತ ಗೋಧಿ ಹಿಟ್ಟಿಗಾಗಿ ಜಗಳವಾಡುತ್ತಿದ್ದಾರೆ ಎಂದು ಬರೆದಿದ್ದಾರೆ.

ಹಿಟ್ಟು ಪಡೆಯಲು ಗಂಟೆಗಟ್ಟಲೆ ಸರತಿ ಸಾಲಿನಲ್ಲಿ ನಿಂತರೂ 10 ಕಿಲೋಗ್ರಾಂ ತೂಕದ ಚೀಲ ಕೈಗೆ ಸಿಗದೇ ಇದ್ದಾಗ ಜನರು ರಸ್ತೆ ತಡೆ ನಡೆಸಿದರು. ದೇಶದ ಹಿಂದುಳಿದ ವರ್ಗಗಳಿಗೆ ಮೀಸಲಾದ ಈ ಪ್ಯಾಕೇಜ್ ಬಡವರಿಗೆ ಮಹತ್ವದ ಪರಿಹಾರ ಎಂದು ವಿವರಿಸಲಾಗಿದೆ ಎಂದು ಡೈಲಿ ಟೈಮ್ಸ್ ವರದಿ ಮಾಡಿದೆ.

ಏತನ್ಮಧ್ಯೆ, ಉಚಿತ ಹಿಟ್ಟು ಸಂಗ್ರಹಿಸಲು ಪ್ರಯತ್ನಿಸುತ್ತಿರುವಾಗ ಕಳೆದ ಕೆಲವು ದಿನಗಳಲ್ಲಿ ಕನಿಷ್ಠ ನಾಲ್ವರು ವೃದ್ಧರು ಸಾವನ್ನಪ್ಪಿದ್ದಾರೆ ಎಂದು ಪಿಟಿಐ ವರದಿ ಮಾಡಿದೆ. ಸಾರ್ವಜನಿಕರಿಗೆ ಉಚಿತ ಹಿಟ್ಟು ವಿತರಿಸಲು ಸರ್ಕಾರ ಸ್ಥಾಪಿಸಿರುವ ವಿತರಣಾ ಕೇಂದ್ರಗಳಲ್ಲಿ ಜನರ ನೂಕುನುಗ್ಗಲು ಮತ್ತು ಸೌಲಭ್ಯಗಳ ಕೊರತೆಯಿಂದಾಗಿ ಈ ಘಟನೆಗಳು ಸಂಭವಿಸಿವೆ ಎಂದು ಅವರು ಹೇಳಿದರು.

“ಅವರಲ್ಲಿ ಇಬ್ಬರು ಕಾಲ್ತುಳಿತದಿಂದ ಸಾವನ್ನಪ್ಪಿದ್ದಾರೆ ಮತ್ತು ಇತರ ಇಬ್ಬರು ದೀರ್ಘ ಗಂಟೆಗಳ ಕಾಲ ಸರದಿಯಲ್ಲಿ ನಿಂತಾಗ ಸುಸ್ತಾಗಿ ಸಾವನ್ನಪ್ಪಿದ್ದಾರೆ” ಎಂದು ಅವರು ಹೇಳಿದರು. ಮತ್ತೊಂದೆಡೆ, ಉಚಿತ ಹಿಟ್ಟು ಕೇಳುತ್ತಿದ್ದ ಜನರನ್ನು ಸರದಿಯಲ್ಲಿ ನಿಲ್ಲುವಂತೆ ಒತ್ತಾಯಿಸಲು ಪೊಲೀಸರು ಲಾಠಿ ಚಾರ್ಜ್ ಮಾಡಿದರು.

ಇದನ್ನೂ ಓದಿ:Kabul Earthquake: ಕಾಬೂಲ್​ನಲ್ಲಿ 4.3 ತೀವ್ರತೆಯ ಭೂಕಂಪ

ದೇಶದ ಆರ್ಥಿಕತೆಯು ಪ್ರಕ್ಷುಬ್ಧ ಸ್ಥಿತಿಯಲ್ಲಿದೆ, ವಿದೇಶಿ ವಿನಿಮಯ ಮೀಸಲು ಸುಮಾರು USD 3 ಬಿಲಿಯನ್‌ಗೆ ಕುಸಿದಿರುವ ಕಾರಣ ಪಾಕಿಸ್ತಾನಕ್ಕೆ ಹಣಕಾಸು ನೆರವು ಅತ್ಯಗತ್ಯವಾಗಿದೆ.

ಮತ್ತಷ್ಟು ವಿದೇಶ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 4:46 pm, Wed, 29 March 23

ತ್ರಿವರ್ಣ ಧ್ವಜದಲ್ಲಿ ಉರ್ದು ವಾಕ್ಯ ಬರೆದು ದರ್ಗಾಕ್ಕೆ ಕಟ್ಟಿದ ಯುವಕ:ವಿಡಿಯೋ
ತ್ರಿವರ್ಣ ಧ್ವಜದಲ್ಲಿ ಉರ್ದು ವಾಕ್ಯ ಬರೆದು ದರ್ಗಾಕ್ಕೆ ಕಟ್ಟಿದ ಯುವಕ:ವಿಡಿಯೋ
ದಸರಾ ಉದ್ಘಾಟನೆ ಅನಿರೀಕ್ಷಿತವಾಗಿ ಬಂದ ಸಂತೋಷದ ಕ್ಷಣ; ಹಂಪಾ ನಾಗರಾಜಯ್ಯ
ದಸರಾ ಉದ್ಘಾಟನೆ ಅನಿರೀಕ್ಷಿತವಾಗಿ ಬಂದ ಸಂತೋಷದ ಕ್ಷಣ; ಹಂಪಾ ನಾಗರಾಜಯ್ಯ
ಬಯೋಲಾಜಿಕಲ್ ವಾರ್ ರೀತಿ ಏಡ್ಸ್ ಇರುವವರನ್ನು ಬಳಸಿದ್ದಾರೆ: ಡಿಕೆ ಸುರೇಶ್​
ಬಯೋಲಾಜಿಕಲ್ ವಾರ್ ರೀತಿ ಏಡ್ಸ್ ಇರುವವರನ್ನು ಬಳಸಿದ್ದಾರೆ: ಡಿಕೆ ಸುರೇಶ್​
ಹೆಚ್​ಡಿ ಕುಮಾರಸ್ವಾಮಿ ಸುದ್ದಿಗೋಷ್ಠಿ
ಹೆಚ್​ಡಿ ಕುಮಾರಸ್ವಾಮಿ ಸುದ್ದಿಗೋಷ್ಠಿ
ನಕ್ಸಲರ ದಾಳಿಗೆ ತುತ್ತಾದ ಜನರ ಸಂಕಟ ತೆರೆದಿಡುವ ಸಾಕ್ಷ್ಯಚಿತ್ರವಿದು
ನಕ್ಸಲರ ದಾಳಿಗೆ ತುತ್ತಾದ ಜನರ ಸಂಕಟ ತೆರೆದಿಡುವ ಸಾಕ್ಷ್ಯಚಿತ್ರವಿದು
ಅಡ್ಡಲಾಗಿ ಬಿದ್ದ 10 ಚಕ್ರದ ಲಾರಿ, ರಿಂಗ್‌ ರೋಡಲ್ಲಿ ಫುಲ್ ಟ್ರಾಫಿಕ್ ಜಾಮ್
ಅಡ್ಡಲಾಗಿ ಬಿದ್ದ 10 ಚಕ್ರದ ಲಾರಿ, ರಿಂಗ್‌ ರೋಡಲ್ಲಿ ಫುಲ್ ಟ್ರಾಫಿಕ್ ಜಾಮ್
ಹೊಸ ಹಾನರ್ ಸ್ಮಾರ್ಟ್​ಫೋನ್​ನಲ್ಲಿದೆ 108 ಮೆಗಾಪಿಕ್ಸೆಲ್ ಸಖತ್ ಎಐ ಕ್ಯಾಮೆರಾ
ಹೊಸ ಹಾನರ್ ಸ್ಮಾರ್ಟ್​ಫೋನ್​ನಲ್ಲಿದೆ 108 ಮೆಗಾಪಿಕ್ಸೆಲ್ ಸಖತ್ ಎಐ ಕ್ಯಾಮೆರಾ
ಮುನಿರತ್ನ ವಿರುದ್ಧದ ಪ್ರಕರಣಗಳ ತನಿಖೆಗೆ SIT ರಚಿಸಿ: ಸಿಎಂಗೆ ಮನವಿ
ಮುನಿರತ್ನ ವಿರುದ್ಧದ ಪ್ರಕರಣಗಳ ತನಿಖೆಗೆ SIT ರಚಿಸಿ: ಸಿಎಂಗೆ ಮನವಿ
ಕಾಡಿಗೆ ಹೋಗುವ ದಾರಿ ಗೊತ್ತು ಅಂತ ಅರಣ್ಯ ಸಿಬ್ಬಂದಿ ಮೇಲೆ ತಿರುಗಿ ಬಿದ್ದ ಆನೆ
ಕಾಡಿಗೆ ಹೋಗುವ ದಾರಿ ಗೊತ್ತು ಅಂತ ಅರಣ್ಯ ಸಿಬ್ಬಂದಿ ಮೇಲೆ ತಿರುಗಿ ಬಿದ್ದ ಆನೆ
ರೈಲಿನಡಿ ಬೀಳಲಿದ್ದ ಮಹಿಳೆ ಸ್ವಲ್ಪದರಲ್ಲೇ ಬಚಾವ್
ರೈಲಿನಡಿ ಬೀಳಲಿದ್ದ ಮಹಿಳೆ ಸ್ವಲ್ಪದರಲ್ಲೇ ಬಚಾವ್