AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಆರ್ಥಿಕ ಬಿಕ್ಕಟ್ಟಿನತ್ತ ಪಾಕಿಸ್ತಾನ: ಲಾಹೋರ್​ನಲ್ಲಿ ಪೆಟ್ರೋಲ್ ಸಿಗ್ತಿಲ್ಲ, ಎಟಿಎಂಗಳಲ್ಲಿ ನಗದು ಖಾಲಿ ಎಂದ ಕ್ರಿಕೆಟರ್ ಮೊಹಮದ್ ಹಫೀಜ್

ಶ್ರೀಲಂಕಾ ಮಾದರಿಯಲ್ಲಿಯೇ ಪಾಕಿಸ್ತಾನವೂ ದೀರ್ಘಾವಧಿ ಸಮಸ್ಯೆಗಳನ್ನು ಎದುರಿಸಬೇಕಾಗಬಹುದು ಎಂದು ಅರ್ಥಶಾಸ್ತ್ರಜ್ಞರು ಎಚ್ಚರಿಸಿದ್ದಾರೆ.

ಆರ್ಥಿಕ ಬಿಕ್ಕಟ್ಟಿನತ್ತ ಪಾಕಿಸ್ತಾನ: ಲಾಹೋರ್​ನಲ್ಲಿ ಪೆಟ್ರೋಲ್ ಸಿಗ್ತಿಲ್ಲ, ಎಟಿಎಂಗಳಲ್ಲಿ ನಗದು ಖಾಲಿ ಎಂದ ಕ್ರಿಕೆಟರ್ ಮೊಹಮದ್ ಹಫೀಜ್
ಪಾಕಿಸ್ತಾನದ ಕರೆನ್ಸಿ (ಪ್ರಾತಿನಿಧಿಕ ಚಿತ್ರ)
TV9 Web
| Updated By: Ghanashyam D M | ಡಿ.ಎಂ.ಘನಶ್ಯಾಮ|

Updated on: May 26, 2022 | 9:04 AM

Share

ಇಸ್ಲಾಮಾಬಾದ್: ಪಾಕಿಸ್ತಾನದಲ್ಲಿ ಆರ್ಥಿಕ ಪರಿಸ್ಥಿತಿ ದಿನದಿಂದ ದಿನಕ್ಕೆ ಹದಗೆಡುತ್ತಿದೆ (Pakistan Economy Crisis). ರಾಜಕೀಯ ಅಸ್ಥಿರತೆಯತ್ತ ಮುಖಮಾಡಿರುವ ಪಾಕಿಸ್ತಾನದಲ್ಲಿ ಅಲ್ಲಿನ ಸರ್ಕಾರ ಶೀಘ್ರದಲ್ಲಿಯೇ ಜವಾಬ್ದಾರಿಯುತ ನಿರ್ಣಯಗಳನ್ನು ತೆಗೆದುಕೊಳ್ಳದಿದ್ದರೆ ಜನಜೀವನ ಸಂಕಷ್ಟಕ್ಕೆ ಸಿಲುಕುತ್ತದೆ. ಶ್ರೀಲಂಕಾ ಮಾದರಿಯಲ್ಲಿಯೇ ದೀರ್ಘಾವಧಿ ಸಮಸ್ಯೆಗಳನ್ನು ಎದುರಿಸಬೇಕಾಗಬಹುದು ಎಂದು ಅರ್ಥಶಾಸ್ತ್ರಜ್ಞರು ಎಚ್ಚರಿಸಿದ್ದಾರೆ. ಇಷ್ಟು ದಿನ ಅಂಕಿಅಂಶಗಳನ್ನು ಎದುರಿಗಿಟ್ಟು ಅರ್ಥಶಾಸ್ತ್ರಜ್ಞರು ಮಾಡುತ್ತಿದ್ದ ಆರ್ಥಿಕ ಬಿಕ್ಕಟ್ಟಿನ ವಿಶ್ಲೇಷಣೆಗೆ ಜನಸಾಮಾನ್ಯರ ಉದಾಹರಣೆಯ ಮೂಲಕ ಪುಷ್ಟಿ ಒದಗಿಸಿದ್ದಾರೆ ಕ್ರಿಕೆಟ್ ಆಟಗಾರ ಮೊಹಮದ್ ಹಫೀಜ್ (Mohammad Hafeez). ಆಲ್​ರೌಂಡರ್ ಹಫೀಜ್ ಈ ಮೊದಲು ಪಾಕಿಸ್ತಾನದಲ್ಲಿ ಕ್ರಿಕೆಟ್ ಸುಧಾರಣೆಗಾಗಿ ದನಿಎತ್ತಿದ್ದರು. ಜನರ ಸಮಸ್ಯೆಗಳ ಕುರಿತು ಟ್ವೀಟ್ ಮಾಡಿರುವ ಅವರು ಹಲವು ರಾಜಕಾರಿಣಿಗಳನ್ನು ಟ್ಯಾಗ್ ಮಾಡಿದ್ದಾರೆ.

‘ಲಾಹೋರ್​ನ ಯಾವುದೇ ಬಂಕ್​ಗಳಲ್ಲಿ ಪೆಟ್ರೋಲ್ ಸಿಗುತ್ತಿಲ್ಲ. ಎಟಿಎಂಗಳಲ್ಲಿ ನಗದು ಬರುತ್ತಿಲ್ಲ. ರಾಜಕೀಯ ನಿರ್ಧಾರಗಳಿಂದ ಸಾಮಾನ್ಯ ಜನರೇಕೆ ಕಷ್ಟ ಅನುಭವಿಸಬೇಕು’ ಎಂದು ಅವರು ಪ್ರಶ್ನಿಸಿದ್ದಾರೆ. ಪಾಕಿಸ್ತಾನದ ಮಾಜಿ ಪ್ರಧಾನಿ ಇಮ್ರಾನ್ ಖಾನ್ ಮತ್ತು ಹಾಲಿ ಪ್ರಧಾನಿ ಶೆಹಬಾಜ್ ಷರೀಫ್ ಅವರನ್ನೂ ಟ್ಯಾಗ್ ಮಾಡಿದ್ದಾರೆ. ಪಾಕಿಸ್ತಾನದ 23ನೇ ಪ್ರಧಾನಿಯಾಗಿ ಪ್ರಮಾಣವಚನ ಸ್ವೀಕರಿಸಿರುವ ಶೆಹಬಾಜ್ ಷರೀಫ್ ದೇಶದಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡುವುದರೊಂದಿಗೆ ಆರ್ಥಿಕ ಸ್ಥಿರತೆ ಮೂಡಿಸಬೇಕಾದ ಸವಾಲನ್ನೂ ಎದುರಿಸುತ್ತಿದ್ದಾರೆ.

ಕ್ರಿಕೆಟ್​ನ ವೈವಿಧ್ಯಮಯ ಪ್ರಕಾರಗಳಲ್ಲಿ ಪಾಕಿಸ್ತಾನ ಕ್ರಿಕೆಟ್ ತಂಡವನ್ನು ಪ್ರತಿನಿಧಿಸಿದ್ದ ಹಫೀಜ್ 2017ರಲ್ಲಿ ಐಸಿಸಿ ಚಾಂಪಿಯನ್ಸ್​ ಟ್ರೋಫಿ ಗೆದ್ದವರು. ಅಂತರರಾಷ್ಟ್ರೀಯ ಕ್ರಿಕೆಟ್​ನಲ್ಲಿ 12,000 ರನ್ ಗಳಿಸಿದ್ದ ಅವರು 250ಕ್ಕೂ ಹೆಚ್ಚು ವಿಕೆಟ್​ಗಳನ್ನು ಪಡೆದವರು. ಪಾಕಿಸ್ತಾನದ ತಂಡದ ಕ್ಯಾಪ್ಟನ್ ಆಗಿಯೂ ಒಂದಿಷ್ಟು ಸಮಯ ಆಡಿದ್ದರು.

ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?