AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಆರ್ಥಿಕ ಬಿಕ್ಕಟ್ಟಿನತ್ತ ಪಾಕಿಸ್ತಾನ: ಲಾಹೋರ್​ನಲ್ಲಿ ಪೆಟ್ರೋಲ್ ಸಿಗ್ತಿಲ್ಲ, ಎಟಿಎಂಗಳಲ್ಲಿ ನಗದು ಖಾಲಿ ಎಂದ ಕ್ರಿಕೆಟರ್ ಮೊಹಮದ್ ಹಫೀಜ್

ಶ್ರೀಲಂಕಾ ಮಾದರಿಯಲ್ಲಿಯೇ ಪಾಕಿಸ್ತಾನವೂ ದೀರ್ಘಾವಧಿ ಸಮಸ್ಯೆಗಳನ್ನು ಎದುರಿಸಬೇಕಾಗಬಹುದು ಎಂದು ಅರ್ಥಶಾಸ್ತ್ರಜ್ಞರು ಎಚ್ಚರಿಸಿದ್ದಾರೆ.

ಆರ್ಥಿಕ ಬಿಕ್ಕಟ್ಟಿನತ್ತ ಪಾಕಿಸ್ತಾನ: ಲಾಹೋರ್​ನಲ್ಲಿ ಪೆಟ್ರೋಲ್ ಸಿಗ್ತಿಲ್ಲ, ಎಟಿಎಂಗಳಲ್ಲಿ ನಗದು ಖಾಲಿ ಎಂದ ಕ್ರಿಕೆಟರ್ ಮೊಹಮದ್ ಹಫೀಜ್
ಪಾಕಿಸ್ತಾನದ ಕರೆನ್ಸಿ (ಪ್ರಾತಿನಿಧಿಕ ಚಿತ್ರ)
TV9 Web
| Edited By: |

Updated on: May 26, 2022 | 9:04 AM

Share

ಇಸ್ಲಾಮಾಬಾದ್: ಪಾಕಿಸ್ತಾನದಲ್ಲಿ ಆರ್ಥಿಕ ಪರಿಸ್ಥಿತಿ ದಿನದಿಂದ ದಿನಕ್ಕೆ ಹದಗೆಡುತ್ತಿದೆ (Pakistan Economy Crisis). ರಾಜಕೀಯ ಅಸ್ಥಿರತೆಯತ್ತ ಮುಖಮಾಡಿರುವ ಪಾಕಿಸ್ತಾನದಲ್ಲಿ ಅಲ್ಲಿನ ಸರ್ಕಾರ ಶೀಘ್ರದಲ್ಲಿಯೇ ಜವಾಬ್ದಾರಿಯುತ ನಿರ್ಣಯಗಳನ್ನು ತೆಗೆದುಕೊಳ್ಳದಿದ್ದರೆ ಜನಜೀವನ ಸಂಕಷ್ಟಕ್ಕೆ ಸಿಲುಕುತ್ತದೆ. ಶ್ರೀಲಂಕಾ ಮಾದರಿಯಲ್ಲಿಯೇ ದೀರ್ಘಾವಧಿ ಸಮಸ್ಯೆಗಳನ್ನು ಎದುರಿಸಬೇಕಾಗಬಹುದು ಎಂದು ಅರ್ಥಶಾಸ್ತ್ರಜ್ಞರು ಎಚ್ಚರಿಸಿದ್ದಾರೆ. ಇಷ್ಟು ದಿನ ಅಂಕಿಅಂಶಗಳನ್ನು ಎದುರಿಗಿಟ್ಟು ಅರ್ಥಶಾಸ್ತ್ರಜ್ಞರು ಮಾಡುತ್ತಿದ್ದ ಆರ್ಥಿಕ ಬಿಕ್ಕಟ್ಟಿನ ವಿಶ್ಲೇಷಣೆಗೆ ಜನಸಾಮಾನ್ಯರ ಉದಾಹರಣೆಯ ಮೂಲಕ ಪುಷ್ಟಿ ಒದಗಿಸಿದ್ದಾರೆ ಕ್ರಿಕೆಟ್ ಆಟಗಾರ ಮೊಹಮದ್ ಹಫೀಜ್ (Mohammad Hafeez). ಆಲ್​ರೌಂಡರ್ ಹಫೀಜ್ ಈ ಮೊದಲು ಪಾಕಿಸ್ತಾನದಲ್ಲಿ ಕ್ರಿಕೆಟ್ ಸುಧಾರಣೆಗಾಗಿ ದನಿಎತ್ತಿದ್ದರು. ಜನರ ಸಮಸ್ಯೆಗಳ ಕುರಿತು ಟ್ವೀಟ್ ಮಾಡಿರುವ ಅವರು ಹಲವು ರಾಜಕಾರಿಣಿಗಳನ್ನು ಟ್ಯಾಗ್ ಮಾಡಿದ್ದಾರೆ.

‘ಲಾಹೋರ್​ನ ಯಾವುದೇ ಬಂಕ್​ಗಳಲ್ಲಿ ಪೆಟ್ರೋಲ್ ಸಿಗುತ್ತಿಲ್ಲ. ಎಟಿಎಂಗಳಲ್ಲಿ ನಗದು ಬರುತ್ತಿಲ್ಲ. ರಾಜಕೀಯ ನಿರ್ಧಾರಗಳಿಂದ ಸಾಮಾನ್ಯ ಜನರೇಕೆ ಕಷ್ಟ ಅನುಭವಿಸಬೇಕು’ ಎಂದು ಅವರು ಪ್ರಶ್ನಿಸಿದ್ದಾರೆ. ಪಾಕಿಸ್ತಾನದ ಮಾಜಿ ಪ್ರಧಾನಿ ಇಮ್ರಾನ್ ಖಾನ್ ಮತ್ತು ಹಾಲಿ ಪ್ರಧಾನಿ ಶೆಹಬಾಜ್ ಷರೀಫ್ ಅವರನ್ನೂ ಟ್ಯಾಗ್ ಮಾಡಿದ್ದಾರೆ. ಪಾಕಿಸ್ತಾನದ 23ನೇ ಪ್ರಧಾನಿಯಾಗಿ ಪ್ರಮಾಣವಚನ ಸ್ವೀಕರಿಸಿರುವ ಶೆಹಬಾಜ್ ಷರೀಫ್ ದೇಶದಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡುವುದರೊಂದಿಗೆ ಆರ್ಥಿಕ ಸ್ಥಿರತೆ ಮೂಡಿಸಬೇಕಾದ ಸವಾಲನ್ನೂ ಎದುರಿಸುತ್ತಿದ್ದಾರೆ.

ಕ್ರಿಕೆಟ್​ನ ವೈವಿಧ್ಯಮಯ ಪ್ರಕಾರಗಳಲ್ಲಿ ಪಾಕಿಸ್ತಾನ ಕ್ರಿಕೆಟ್ ತಂಡವನ್ನು ಪ್ರತಿನಿಧಿಸಿದ್ದ ಹಫೀಜ್ 2017ರಲ್ಲಿ ಐಸಿಸಿ ಚಾಂಪಿಯನ್ಸ್​ ಟ್ರೋಫಿ ಗೆದ್ದವರು. ಅಂತರರಾಷ್ಟ್ರೀಯ ಕ್ರಿಕೆಟ್​ನಲ್ಲಿ 12,000 ರನ್ ಗಳಿಸಿದ್ದ ಅವರು 250ಕ್ಕೂ ಹೆಚ್ಚು ವಿಕೆಟ್​ಗಳನ್ನು ಪಡೆದವರು. ಪಾಕಿಸ್ತಾನದ ತಂಡದ ಕ್ಯಾಪ್ಟನ್ ಆಗಿಯೂ ಒಂದಿಷ್ಟು ಸಮಯ ಆಡಿದ್ದರು.

Follow Us
Web contact
Web contact

TV9 Kannada

Read More
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
ಇಂದಿರಾ ಗಾಂಧಿ ಬಳಿಕ ಮೋದಿಯೇ ಮಾಸ್​​ ಲೀಡರ್​​ ಎಂದ ಕೆ.ಎನ್​​. ರಾಜಣ್ಣ
ಇಂದಿರಾ ಗಾಂಧಿ ಬಳಿಕ ಮೋದಿಯೇ ಮಾಸ್​​ ಲೀಡರ್​​ ಎಂದ ಕೆ.ಎನ್​​. ರಾಜಣ್ಣ
ದಿಲೀಪ್ ಕೊನೆಯ ಕ್ಷಣಗಳನ್ನು ವಿವರಿಸಿದ ಆಟೋ ಚಾಲಕ
ದಿಲೀಪ್ ಕೊನೆಯ ಕ್ಷಣಗಳನ್ನು ವಿವರಿಸಿದ ಆಟೋ ಚಾಲಕ
ಪೊಲೀಸ್ ಠಾಣೆ ಎದುರೇ ಬೈಕ್ ಬಾಕ್ಸ್​ನಲ್ಲಿದ್ದ ಲಕ್ಷ ರೂ. ಹಣ ದೋಚಿದ ಕಳ್ಳರು!
ಪೊಲೀಸ್ ಠಾಣೆ ಎದುರೇ ಬೈಕ್ ಬಾಕ್ಸ್​ನಲ್ಲಿದ್ದ ಲಕ್ಷ ರೂ. ಹಣ ದೋಚಿದ ಕಳ್ಳರು!
ಚಿಕ್ಕೋಡಿ: ಭಾರಿ ಗಾಳಿ ಮಳೆಗೆ ಹಾರಿಹೋದ 5 ಮನೆಗಳ ಛಾವಣಿ
ಚಿಕ್ಕೋಡಿ: ಭಾರಿ ಗಾಳಿ ಮಳೆಗೆ ಹಾರಿಹೋದ 5 ಮನೆಗಳ ಛಾವಣಿ