AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪಾಕಿಸ್ತಾನ ಚುನಾವಣೆ: ಅಭ್ಯರ್ಥಿ ಕಚೇರಿಯ ಹೊರಗೆ ಬಾಂಬ್​​ ಸ್ಫೋಟ, 12 ಮಂದಿ ಸಾವು

Pakistan Bomb blast : ಪಾಕಿಸ್ತಾನದಲ್ಲಿ ಚುನಾವಣೆ ಹತ್ತಿರವಾಗುತ್ತಿದಂತೆ, ಅನೇಕ ಅಹಿತಕರ ಘಟನೆಗಳು ನಡೆದಿದೆ. ಇಂದು (ಫೆ.7) ಬಲೂಚಿಸ್ತಾನ ಪಿಶಿನ್‌ನಲ್ಲಿರುವ ಸ್ವತಂತ್ರ ಅಭ್ಯರ್ಥಿಯ ಪಕ್ಷದ ಕಚೇರಿಯ ಹೊರಗೆ ಬಾಂಬ್​​ ಸ್ಫೋಟಗೊಂಡಿದ್ದು, ಹನ್ನೆರಡು ಜನ ಸಾವನ್ನಪ್ಪಿದ್ದಾರೆ. 30 ಜನ ಗಾಯಗಗೊಂಡಿದ್ದಾರೆ

ಪಾಕಿಸ್ತಾನ ಚುನಾವಣೆ: ಅಭ್ಯರ್ಥಿ ಕಚೇರಿಯ ಹೊರಗೆ ಬಾಂಬ್​​ ಸ್ಫೋಟ, 12 ಮಂದಿ ಸಾವು
ಸಾಂದರ್ಭಿಕ ಚಿತ್ರ
ಅಕ್ಷಯ್​ ಪಲ್ಲಮಜಲು​​
|

Updated on:Feb 07, 2024 | 3:11 PM

Share

ಬಲೂಚಿಸ್ತಾನ, ಫೆ.7: ಪಾಕಿಸ್ತಾನದಲ್ಲಿ (Pakistan) ಚುನಾವಣೆ ವೇಳೆ ಬಾಂಬ್​​​​ಗಳ ಸದ್ದು ಹೆಚ್ಚಾಗಿದೆ. ಪಾಕಿಸ್ತಾನದ ಬಲೂಚಿಸ್ತಾನ ಪಿಶಿನ್‌ನಲ್ಲಿರುವ ಸ್ವತಂತ್ರ ಅಭ್ಯರ್ಥಿಯ ಪಕ್ಷದ ಕಚೇರಿಯ ಹೊರಗೆ ಇಂದು (ಫೆ.7) ಬಾಂಬ್​​ ಸ್ಫೋಟಗೊಂಡಿದ್ದು, ಹನ್ನೆರಡು ಜನ ಸಾವನ್ನಪ್ಪಿದ್ದಾರೆ. 30 ಜನ ಗಾಯಗಗೊಂಡಿದ್ದಾರೆ ಎಂದು ಜಿಯೋ ನ್ಯೂಸ್ ವರದಿ ಮಾಡಿದೆ. ಪಾಕಿಸ್ತಾನದ ಪಿಶಿನ್‌ನ ಖನೋಜೈ ಪ್ರದೇಶದಲ್ಲಿ ಸ್ವತಂತ್ರ ಅಭ್ಯರ್ಥಿ ಅಸ್ಫಂಡ್ ಯಾರ್ ಖಾನ್ ಕಾಕರ್ ಅವರ ಕಚೇರಿಯ ಹೊರಗೆ ಬಾಂಬ್​​​ ಸ್ಫೋಟ ಮಾಡಲಾಗಿದೆ. ಇನ್ನು ಸ್ಫೋಟದ ಸಂದರ್ಭದಲ್ಲಿ ಸ್ವತಂತ್ರ ಅಭ್ಯರ್ಥಿ ಅಸ್ಫಂಡ್ ಯಾರ್ ಖಾನ್ ಕಾಕರ್ ಅವರು ತಮ್ಮ ಕಚೇರಿಯಲ್ಲಿ ಇರಲಿಲ್ಲ.

ಈ ಘಟನೆಯ ಕುರಿತು ಪಾಕಿಸ್ತಾನದ ಚುನಾವಣಾ ಆಯೋಗವು ಪ್ರಾಂತೀಯ ಮುಖ್ಯ ಕಾರ್ಯದರ್ಶಿ ಮತ್ತು ಪ್ರಾಂತೀಯ ಪೊಲೀಸ್ ಮುಖ್ಯಸ್ಥರಿಂದ ತಕ್ಷಣದ ವರದಿಗಳನ್ನು ಕೇಳಿದೆ. ಈ ಘಟನೆಯಲ್ಲಿ ಭಾಗಿಯಾಗಿರುವವರ ವಿರುದ್ಧ ಕ್ರಮ ಕೈಗೊಳ್ಳಲು ಆದೇಶವನ್ನು ನೀಡಲಾಗಿದೆ ಎಂದು ಹೇಳಲಾಗಿದೆ. ಅಸ್ಫಂಡ್ ಯಾರ್ ಖಾನ್ ಕಾಕರ್ ಅವರ ಮೋಟಾರ್‌ ಬೈಕ್‌ನಲ್ಲಿ ಬಾಂಬ್ ಇಡಲಾಗಿತ್ತು ಎಂದು ಜಿಲ್ಲಾಧಿಕಾರಿ ಜುಮಾ ದಾದ್ ತಿಳಿಸಿದ್ದಾರೆ.

ಇದನ್ನೂ ಓದಿ: ಪಾಕಿಸ್ತಾನ ಚುನಾವಣೆಗೆ ಕೆಲವೇ ದಿನ ಬಾಕಿ: ಬಲೂಚಿಸ್ತಾನದ ಚುನಾವಣಾ ಆಯೋಗದ ಹೊರಗೆ ಸ್ಫೋಟ

ಸ್ಫೋಟದಲ್ಲಿ ಗಾಯಗೊಂಡಿರುವ ಅವರನ್ನು ಸ್ಥಳೀಯ ಆಸ್ಪತ್ರೆಗೆ ಕೆರದುಕೊಂಡು ಹೋಗಲಾಗಿದೆ. ಬಲೂಚಿಸ್ತಾನದ ಗೃಹ ಮತ್ತು ಬುಡಕಟ್ಟು ವ್ಯವಹಾರಗಳ ಉಸ್ತುವಾರಿ ಸಚಿವ ಮಿರ್ ಜುಬೇರ್ ಖಾನ್ ಜಮಾಲಿ ಸಾವು ಮತ್ತು ಗಾಯಗಳ ಬಗ್ಗೆ ವಿಷಾದ ವ್ಯಕ್ತಪಡಿಸಿದ್ದಾರೆ ಮತ್ತು ಜಿಲ್ಲಾಧಿಕಾರಿಯಿಂದ ವರದಿಯನ್ನು ಕೇಳಿದ್ದಾರೆ.

ಪಾಕಿಸ್ತಾನ ಚುನಾವಣಾ ಆಯೋಗದ ಕಚೇರಿಯ ಹೊರಗೆ ಬಾಂಬ್ ಸ್ಫೋಟ

ಬಲೂಚಿಸ್ತಾನದ ನುಷ್ಕಿ ಜಿಲ್ಲೆಯ ಪಾಕಿಸ್ತಾನ ಚುನಾವಣಾ ಆಯೋಗದ (ಇಸಿಪಿ) ಕಚೇರಿಯ ಹೊರಗೆ ಮತ್ತೊಂದು ಬಾಂಬ್ ಸ್ಫೋಟ(Blast) ಸಂಭವಿಸಿದೆ. ಇದುವರೆಗೆ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ. ಪೊಲೀಸ್ ಹೇಳಿಕೆಯ ಪ್ರಕಾರ, ಇಸಿಪಿ ಕಚೇರಿಯ ಗೇಟ್‌ನ ಹೊರಗೆ ಸ್ಫೋಟಿಸಲಾಗಿದೆ. ಪ್ರದೇಶವನ್ನು ಸುತ್ತುವರಿದಿದ್ದು, ಆರೋಪಿಗಳನ್ನು ಸೆರೆಹಿಡಿಯಲು ಶೋಧ ಕಾರ್ಯ ನಡೆಯುತ್ತಿದೆ. ARY ನ್ಯೂಸ್ ವರದಿ ಮಾಡಿದಂತೆ ಸ್ಫೋಟದ ಸ್ವರೂಪವನ್ನು ನಿರ್ಧರಿಸಲು ವಿಚಾರಣೆಯನ್ನು ಸಹ ಪ್ರಾರಂಭಿಸಲಾಗಿದೆ. ಸಾರ್ವತ್ರಿಕ ಚುನಾವಣೆಗೂ ಮುನ್ನ ಸಂಭವಿಸಿದ ಸ್ಫೋಟ ಇದೇ ಮೊದಲಲ್ಲ. ಕಳೆದ ವಾರ, ಪಾಕಿಸ್ತಾನದ ಚುನಾವಣಾ ಆಯೋಗದ (ECP) ಕರಾಚಿ ಕಚೇರಿಯ ಹೊರಗೆ ಸ್ಫೋಟ ಸಂಭವಿಸಿದೆ ಎಂದು ವರದಿಯಾಗಿದೆ.

ಅಂತಾರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published On - 3:08 pm, Wed, 7 February 24

ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್