AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಇಮ್ರಾನ್ ಖಾನ್ ಬಂಧನ ಖಂಡಿಸಿ ಬೆಂಬಲಿಗರಿಂದ ಪ್ರತಿಭಟನೆ; ರಾವಲ್ಪಿಂಡಿಯಲ್ಲಿ ಪಾಕ್ ಸೇನಾ ಕಚೇರಿ ಮೇಲೆ ದಾಳಿ, ಉದ್ವಿಗ್ನ ವಾತಾವರಣ

Imran Khan Arrest:ಪಿಟಿಐ ಬೆಂಬಲಿಗರು ರಾವಲ್ಪಿಂಡಿಯಲ್ಲಿ ಪಾಕ್ ಸೇನಾ ಪ್ರಧಾನ ಕಚೇರಿ ಮೇಲೆ ದಾಳಿ ಮಾಡಿದ್ದು ಸರ್ಗೋಧಾದಲ್ಲಿ ವಾಯುಪಡೆಯ ಸ್ಮಾರಕವನ್ನು ಧ್ವಂಸಗೊಳಿಸಿದ್ದಾರೆ

ಇಮ್ರಾನ್ ಖಾನ್ ಬಂಧನ ಖಂಡಿಸಿ ಬೆಂಬಲಿಗರಿಂದ ಪ್ರತಿಭಟನೆ; ರಾವಲ್ಪಿಂಡಿಯಲ್ಲಿ ಪಾಕ್ ಸೇನಾ ಕಚೇರಿ ಮೇಲೆ ದಾಳಿ, ಉದ್ವಿಗ್ನ ವಾತಾವರಣ
ಪಾಕಿಸ್ತಾನದಲ್ಲಿ ಪ್ರತಿಭಟನೆ
ರಶ್ಮಿ ಕಲ್ಲಕಟ್ಟ
ರಶ್ಮಿ ಕಲ್ಲಕಟ್ಟ|

Updated on: May 09, 2023 | 7:52 PM

Share

ಮುಖ್ಯಾಂಶಗಳು

  • ಖಾನ್ ಅವರನ್ನು ಬುಧವಾರ ಭ್ರಷ್ಟಾಚಾರ ನಿಗ್ರಹ ನ್ಯಾಯಾಲಯದ ಮುಂದೆ ಹಾಜರುಪಡಿಸಲಾಗುವುದು ಎಂದು ಜಿಯೋ ಟಿವಿ ತಿಳಿಸಿದೆ
  • ನೂರಾರು ಬೆಂಬಲಿಗರು ಖಾನ್ ಅವರ ತವರು ಪಟ್ಟಣವಾದ ಲಾಹೋರ್‌ನಲ್ಲಿ ಬೀದಿಗಳನ್ನು ತಡೆದರು. ಅಲ್ಲಿ ಹೆಚ್ಚಿನ ಪೊಲೀಸರನ್ನು ನಿಯೋಜಿಸಲಾಗಿದೆ.
  • ಪಾಕಿಸ್ತಾನದ ಜನರೇ, ನಿಮ್ಮ ಸಮಯ. ಖಾನ್ ಯಾವಾಗಲೂ ನಿಮ್ಮ ಪರವಾಗಿ ನಿಂತಿದ್ದಾರೆ, ಈಗ ಅವರ ಪರವಾಗಿ ನಿಲ್ಲುವ ಸಮಯ ಎಂದು ಪಿಟಿಐ ಟ್ವೀಟ್

ಪಾಕಿಸ್ತಾನದ (Pakistan) ಭ್ರಷ್ಟಾಚಾರ ವಿರೋಧಿ ಸಂಸ್ಥೆ  (Anti-corruption agency)ಮಂಗಳವಾರ ಇಸ್ಲಾಮಾಬಾದ್ ಹೈಕೋರ್ಟ್‌ನಲ್ಲಿ ಮಾಜಿ ಪ್ರಧಾನಿ ಇಮ್ರಾನ್ ಖಾನ್ (Imran Khan)ಅವರನ್ನು ಬಂಧಿಸಿದ್ದು, ಖಾನ್ ಅವರ ಪಕ್ಷ ಪಿಟಿಐ  ರಾಷ್ಟ್ರವ್ಯಾಪಿ ಪ್ರತಿಭಟನೆಗೆ ಕರೆ ನೀಡಿದೆ. ಇಸ್ಲಾಮಾಬಾದ್‌ನ ಉಚ್ಚ ನ್ಯಾಯಾಲಯವು ನ್ಯಾಯಾಲಯದ ಆವರಣದಲ್ಲಿ ಖಾನ್‌ರನ್ನು ಬಂಧಿಸಿರುವುದನ್ನು ವಿವರಿಸಲು ಅಧಿಕಾರಿಗಳಿಗೆ ಸಮನ್ಸ್ ನೀಡಿದೆ. ಬಂಧನದ ನಂತರ ಪ್ರಮುಖ ನಗರಗಳಲ್ಲಿ ಪ್ರತಿಭಟನೆಗಳು ನಡೆದಿದೆ. ನೂರಾರು ಬೆಂಬಲಿಗರು ಖಾನ್ ಅವರ ತವರು ಪಟ್ಟಣವಾದ ಲಾಹೋರ್‌ನಲ್ಲಿ ಬೀದಿಗಳನ್ನು ತಡೆದರು. ಅಲ್ಲಿ ಹೆಚ್ಚಿನ ಪೊಲೀಸರನ್ನು ನಿಯೋಜಿಸಲಾಗಿದೆ. ರಾಯಿಟರ್ಸ್ ವರದಿ ಪ್ರಕಾರ, ಬಂದರು ನಗರವಾದ ಕರಾಚಿಯಲ್ಲಿ ಪ್ರತಿಭಟನಾಕಾರರು ಪ್ರಮುಖ ರಸ್ತೆಯನ್ನು ತಡೆದಿದ್ದಾರೆ. ಪಿಟಿಐ ಬೆಂಬಲಿಗರು ರಾವಲ್ಪಿಂಡಿಯಲ್ಲಿ ಪಾಕ್ ಸೇನಾ ಪ್ರಧಾನ ಕಚೇರಿ ಮೇಲೆ ದಾಳಿ ಮಾಡಿದ್ದು ಸರ್ಗೋಧಾದಲ್ಲಿ ವಾಯುಪಡೆಯ ಸ್ಮಾರಕವನ್ನು ಧ್ವಂಸಗೊಳಿಸಿದ್ದಾರೆ

ಪಾಕಿಸ್ತಾನದಲ್ಲಿ ಬಂದ್​​ಗೆ  ಕರೆ

ಖಾನ್ ಅವರನ್ನು ಬುಧವಾರ ಭ್ರಷ್ಟಾಚಾರ ನಿಗ್ರಹ ನ್ಯಾಯಾಲಯದ ಮುಂದೆ ಹಾಜರುಪಡಿಸಲಾಗುವುದು ಎಂದು ಜಿಯೋ ಟಿವಿ ತಿಳಿಸಿದೆ. ಖಾನ್ ಅವರ ಪಾಕಿಸ್ತಾನ್ ತೆಹ್ರೀಕ್-ಇ-ಇನ್ಸಾಫ್ (ಪಿಟಿಐ) ಪಕ್ಷವು ಪಾಕಿಸ್ತಾನದಲ್ಲಿ ಬಂದ್ ಆಚರಣೆಗೆ ಕರೆ ನೀಡಿದೆ.ಪಾಕಿಸ್ತಾನದ ಜನರೇ, ನಿಮ್ಮ ಸಮಯ. ಖಾನ್ ಯಾವಾಗಲೂ ನಿಮ್ಮ ಪರವಾಗಿ ನಿಂತಿದ್ದಾರೆ, ಈಗ ಅವರ ಪರವಾಗಿ ನಿಲ್ಲುವ ಸಮಯ ಎಂದು ಪಿಟಿಐ ಟ್ವಿಟರ್‌ನಲ್ಲಿ ಬರೆದುಕೊಂಡಿದೆ.

ಪಾಕಿಸ್ತಾನ್ ತೆಹ್ರೀಕ್-ಎ-ಇನ್ಸಾಫ್ (ಪಿಟಿಐ) ಸಾಮಾಜಿಕ ಮಾಧ್ಯಮ ಸದಸ್ಯರು ಮಾಜಿ ಪ್ರಧಾನಿ ಇಮ್ರಾನ್ ಖಾನ್ ಅವರ ಬಂಧನವನ್ನು ವಿರೋಧಿಸಿ ಕಾರ್ಪ್ಸ್ ಕಮಾಂಡರ್ ಲಾಹೋರ್ ಹೌಸ್‌ಗೆ ಹೆಚ್ಚಿನ ಸಂಖ್ಯೆಯ ಜನರು ಮೆರವಣಿಗೆ ನಡೆಸುತ್ತಿರುವ ವಿಡಿಯೊವನ್ನು ಹಂಚಿಕೊಂಡಿದ್ದಾರೆ.

ಶಾಂತಿಯುತ ಪ್ರತಿಭಟನೆಗೆ ಕರೆ

ಪಾಕಿಸ್ತಾನ್ ತೆಹ್ರೀಕ್-ಇ-ಇನ್ಸಾಫ್ ಉಪಾಧ್ಯಕ್ಷ ಶಾ ಮಹಮೂದ್ ಖುರೇಷಿ ಅವರು ಇಮ್ರಾನ್ ಖಾನ್ ಬಂಧನದ ವಿರುದ್ಧ ಶಾಂತಿಯುತ ಪ್ರತಿಭಟನೆಗಾಗಿ ಪಿಟಿಐ ಕರೆಯನ್ನು ಪುನರುಚ್ಚರಿಸಿದ್ದಾರೆ.

ಇದನ್ನೂ ಓದಿ: Imran Khan: ಪಾಕಿಸ್ತಾನದ ಮಾಜಿ ಪಿಎಂ ಇಮ್ರಾನ್ ಖಾನ್ ಬಂಧನ; ಯಾವುದಿದು ಅಲ್ ಖಾದೀರ್ ಟ್ರಸ್ಟ್ ಪ್ರಕರಣ?

ಅದೇ ವೇಳೆ ಮಾಜಿ ಪ್ರಧಾನಿ ಮತ್ತು ಪಿಟಿಐ ಅಧ್ಯಕ್ಷ ಇಮ್ರಾನ್ ಖಾನ್ ಅವರನ್ನು ವೈದ್ಯಕೀಯ ಪರೀಕ್ಷೆಗಾಗಿ ಇಸ್ಲಾಮಾಬಾದ್‌ನ ಪಾಲಿ ಕ್ಲಿನಿಕ್‌ನಲ್ಲಿ ಏಳು ಸದಸ್ಯರ ವೈದ್ಯಕೀಯ ಮಂಡಳಿಗೆ ಕಳುಹಿಸಲಾಗಿದೆ ಎಂದು ಪಾಕಿಸ್ತಾನದ ARY ನ್ಯೂಸ್ ವರದಿ ಮಾಡಿದೆ.

ಮತ್ತಷ್ಟು ವಿದೇಶ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
ಮೈದುಂಬಿದ ದೂದ್‌ಸಾಗರ ಜಲಪಾತ: ಫಾಲ್ಸ್​​ ಸೌಂದರ್ಯಕ್ಕೆ ಪ್ರವಾಸಿಗರು ಫಿದಾ
ಮೈದುಂಬಿದ ದೂದ್‌ಸಾಗರ ಜಲಪಾತ: ಫಾಲ್ಸ್​​ ಸೌಂದರ್ಯಕ್ಕೆ ಪ್ರವಾಸಿಗರು ಫಿದಾ
ಸಂಪುಟ ವಿಸ್ತರಣೆ ಚರ್ಚೆ: ಜು 17ರೊಳಗೆ ಸಚಿವಾಕಾಂಕ್ಷಿಗಳ ಪಟ್ಟಿ ಫೈನಲ್​?
ಸಂಪುಟ ವಿಸ್ತರಣೆ ಚರ್ಚೆ: ಜು 17ರೊಳಗೆ ಸಚಿವಾಕಾಂಕ್ಷಿಗಳ ಪಟ್ಟಿ ಫೈನಲ್​?
ಕಾವೇರಿ ನದಿಯಲ್ಲಿ ಎಸ್. ಜಾನಕಿ ಅಸ್ಥಿ ವಿಸರ್ಜನೆ ಮಾಡಿದ ಕುಟುಂಬಸ್ಥರು
ಕಾವೇರಿ ನದಿಯಲ್ಲಿ ಎಸ್. ಜಾನಕಿ ಅಸ್ಥಿ ವಿಸರ್ಜನೆ ಮಾಡಿದ ಕುಟುಂಬಸ್ಥರು
ಕುಡಿಯುವ ನೀರಿನ ಯೋಜನೆ ಕಾಮಗಾರಿ ವಿಳಂಬಕ್ಕೆ ಸಚಿವ ಯತೀಂದ್ರ ಗರಂ
ಕುಡಿಯುವ ನೀರಿನ ಯೋಜನೆ ಕಾಮಗಾರಿ ವಿಳಂಬಕ್ಕೆ ಸಚಿವ ಯತೀಂದ್ರ ಗರಂ
ಬಿಡದಿ ಟೌನ್​ಶಿಪ್ ವಿವಾದ: ಶಾಂತಿಯುತವಾಗಿ ಪ್ರತಿಭಟಿಸಿ; ಹೆಚ್​ಡಿಕೆ ಮನವಿ
ಬಿಡದಿ ಟೌನ್​ಶಿಪ್ ವಿವಾದ: ಶಾಂತಿಯುತವಾಗಿ ಪ್ರತಿಭಟಿಸಿ; ಹೆಚ್​ಡಿಕೆ ಮನವಿ
GBA ಅಸ್ತಿತ್ವಕ್ಕೆ ಬಂದರೂ ನಗರದಲ್ಲಿ ರಾರಾಜಿಸುತ್ತಿವೆ  BBMP ನಾಮಫಲಕಗಳು!
GBA ಅಸ್ತಿತ್ವಕ್ಕೆ ಬಂದರೂ ನಗರದಲ್ಲಿ ರಾರಾಜಿಸುತ್ತಿವೆ  BBMP ನಾಮಫಲಕಗಳು!
ವಿಪಕ್ಷ ನಾಯಕ ಆರ್​. ಅಶೋಕ್​​ಗೆ ರೈತರಿಂದ ಘೇರಾವ್​​
ವಿಪಕ್ಷ ನಾಯಕ ಆರ್​. ಅಶೋಕ್​​ಗೆ ರೈತರಿಂದ ಘೇರಾವ್​​
5 ದಿನ ಕಳೆದ್ರೂ ಸೆರೆಯಾಗದ ಚಿರತೆ! ರಸ್ತೆಯಲ್ಲಿ ಓಡಾಡಲೂ ಜನ ಹಿಂದೇಟು
5 ದಿನ ಕಳೆದ್ರೂ ಸೆರೆಯಾಗದ ಚಿರತೆ! ರಸ್ತೆಯಲ್ಲಿ ಓಡಾಡಲೂ ಜನ ಹಿಂದೇಟು
ಮೈಸೂರು ದಸರಾ ಕಂಬಳ ವಿವಾದ: ಅನುಮತಿ ಇಲ್ಲದೆ ಮರ‌ ಕಡಿದ ಆರೋಪ; FIR ದಾಖಲು
ಮೈಸೂರು ದಸರಾ ಕಂಬಳ ವಿವಾದ: ಅನುಮತಿ ಇಲ್ಲದೆ ಮರ‌ ಕಡಿದ ಆರೋಪ; FIR ದಾಖಲು
ಹುಲಿ ಹಿಡಿಯದಿದ್ರೆ ನಿಮ್ಮನ್ನೇ ಬೋನಿಗೆ ಹಾಕುತ್ತೇವೆ: ರೈತರ ಎಚ್ಚರಿಕೆ
ಹುಲಿ ಹಿಡಿಯದಿದ್ರೆ ನಿಮ್ಮನ್ನೇ ಬೋನಿಗೆ ಹಾಕುತ್ತೇವೆ: ರೈತರ ಎಚ್ಚರಿಕೆ