ಇಮ್ರಾನ್ ಖಾನ್ ಬಂಧನ ಖಂಡಿಸಿ ಬೆಂಬಲಿಗರಿಂದ ಪ್ರತಿಭಟನೆ; ರಾವಲ್ಪಿಂಡಿಯಲ್ಲಿ ಪಾಕ್ ಸೇನಾ ಕಚೇರಿ ಮೇಲೆ ದಾಳಿ, ಉದ್ವಿಗ್ನ ವಾತಾವರಣ

Imran Khan Arrest:ಪಿಟಿಐ ಬೆಂಬಲಿಗರು ರಾವಲ್ಪಿಂಡಿಯಲ್ಲಿ ಪಾಕ್ ಸೇನಾ ಪ್ರಧಾನ ಕಚೇರಿ ಮೇಲೆ ದಾಳಿ ಮಾಡಿದ್ದು ಸರ್ಗೋಧಾದಲ್ಲಿ ವಾಯುಪಡೆಯ ಸ್ಮಾರಕವನ್ನು ಧ್ವಂಸಗೊಳಿಸಿದ್ದಾರೆ

ಇಮ್ರಾನ್ ಖಾನ್ ಬಂಧನ ಖಂಡಿಸಿ ಬೆಂಬಲಿಗರಿಂದ ಪ್ರತಿಭಟನೆ; ರಾವಲ್ಪಿಂಡಿಯಲ್ಲಿ ಪಾಕ್ ಸೇನಾ ಕಚೇರಿ ಮೇಲೆ ದಾಳಿ, ಉದ್ವಿಗ್ನ ವಾತಾವರಣ
ಪಾಕಿಸ್ತಾನದಲ್ಲಿ ಪ್ರತಿಭಟನೆ
Follow us
|

Updated on: May 09, 2023 | 7:52 PM

ಪಾಕಿಸ್ತಾನದ (Pakistan) ಭ್ರಷ್ಟಾಚಾರ ವಿರೋಧಿ ಸಂಸ್ಥೆ  (Anti-corruption agency)ಮಂಗಳವಾರ ಇಸ್ಲಾಮಾಬಾದ್ ಹೈಕೋರ್ಟ್‌ನಲ್ಲಿ ಮಾಜಿ ಪ್ರಧಾನಿ ಇಮ್ರಾನ್ ಖಾನ್ (Imran Khan)ಅವರನ್ನು ಬಂಧಿಸಿದ್ದು, ಖಾನ್ ಅವರ ಪಕ್ಷ ಪಿಟಿಐ  ರಾಷ್ಟ್ರವ್ಯಾಪಿ ಪ್ರತಿಭಟನೆಗೆ ಕರೆ ನೀಡಿದೆ. ಇಸ್ಲಾಮಾಬಾದ್‌ನ ಉಚ್ಚ ನ್ಯಾಯಾಲಯವು ನ್ಯಾಯಾಲಯದ ಆವರಣದಲ್ಲಿ ಖಾನ್‌ರನ್ನು ಬಂಧಿಸಿರುವುದನ್ನು ವಿವರಿಸಲು ಅಧಿಕಾರಿಗಳಿಗೆ ಸಮನ್ಸ್ ನೀಡಿದೆ. ಬಂಧನದ ನಂತರ ಪ್ರಮುಖ ನಗರಗಳಲ್ಲಿ ಪ್ರತಿಭಟನೆಗಳು ನಡೆದಿದೆ. ನೂರಾರು ಬೆಂಬಲಿಗರು ಖಾನ್ ಅವರ ತವರು ಪಟ್ಟಣವಾದ ಲಾಹೋರ್‌ನಲ್ಲಿ ಬೀದಿಗಳನ್ನು ತಡೆದರು. ಅಲ್ಲಿ ಹೆಚ್ಚಿನ ಪೊಲೀಸರನ್ನು ನಿಯೋಜಿಸಲಾಗಿದೆ. ರಾಯಿಟರ್ಸ್ ವರದಿ ಪ್ರಕಾರ, ಬಂದರು ನಗರವಾದ ಕರಾಚಿಯಲ್ಲಿ ಪ್ರತಿಭಟನಾಕಾರರು ಪ್ರಮುಖ ರಸ್ತೆಯನ್ನು ತಡೆದಿದ್ದಾರೆ. ಪಿಟಿಐ ಬೆಂಬಲಿಗರು ರಾವಲ್ಪಿಂಡಿಯಲ್ಲಿ ಪಾಕ್ ಸೇನಾ ಪ್ರಧಾನ ಕಚೇರಿ ಮೇಲೆ ದಾಳಿ ಮಾಡಿದ್ದು ಸರ್ಗೋಧಾದಲ್ಲಿ ವಾಯುಪಡೆಯ ಸ್ಮಾರಕವನ್ನು ಧ್ವಂಸಗೊಳಿಸಿದ್ದಾರೆ

ಪಾಕಿಸ್ತಾನದಲ್ಲಿ ಬಂದ್​​ಗೆ  ಕರೆ

ಖಾನ್ ಅವರನ್ನು ಬುಧವಾರ ಭ್ರಷ್ಟಾಚಾರ ನಿಗ್ರಹ ನ್ಯಾಯಾಲಯದ ಮುಂದೆ ಹಾಜರುಪಡಿಸಲಾಗುವುದು ಎಂದು ಜಿಯೋ ಟಿವಿ ತಿಳಿಸಿದೆ. ಖಾನ್ ಅವರ ಪಾಕಿಸ್ತಾನ್ ತೆಹ್ರೀಕ್-ಇ-ಇನ್ಸಾಫ್ (ಪಿಟಿಐ) ಪಕ್ಷವು ಪಾಕಿಸ್ತಾನದಲ್ಲಿ ಬಂದ್ ಆಚರಣೆಗೆ ಕರೆ ನೀಡಿದೆ.ಪಾಕಿಸ್ತಾನದ ಜನರೇ, ನಿಮ್ಮ ಸಮಯ. ಖಾನ್ ಯಾವಾಗಲೂ ನಿಮ್ಮ ಪರವಾಗಿ ನಿಂತಿದ್ದಾರೆ, ಈಗ ಅವರ ಪರವಾಗಿ ನಿಲ್ಲುವ ಸಮಯ ಎಂದು ಪಿಟಿಐ ಟ್ವಿಟರ್‌ನಲ್ಲಿ ಬರೆದುಕೊಂಡಿದೆ.

ಪಾಕಿಸ್ತಾನ್ ತೆಹ್ರೀಕ್-ಎ-ಇನ್ಸಾಫ್ (ಪಿಟಿಐ) ಸಾಮಾಜಿಕ ಮಾಧ್ಯಮ ಸದಸ್ಯರು ಮಾಜಿ ಪ್ರಧಾನಿ ಇಮ್ರಾನ್ ಖಾನ್ ಅವರ ಬಂಧನವನ್ನು ವಿರೋಧಿಸಿ ಕಾರ್ಪ್ಸ್ ಕಮಾಂಡರ್ ಲಾಹೋರ್ ಹೌಸ್‌ಗೆ ಹೆಚ್ಚಿನ ಸಂಖ್ಯೆಯ ಜನರು ಮೆರವಣಿಗೆ ನಡೆಸುತ್ತಿರುವ ವಿಡಿಯೊವನ್ನು ಹಂಚಿಕೊಂಡಿದ್ದಾರೆ.

ಶಾಂತಿಯುತ ಪ್ರತಿಭಟನೆಗೆ ಕರೆ

ಪಾಕಿಸ್ತಾನ್ ತೆಹ್ರೀಕ್-ಇ-ಇನ್ಸಾಫ್ ಉಪಾಧ್ಯಕ್ಷ ಶಾ ಮಹಮೂದ್ ಖುರೇಷಿ ಅವರು ಇಮ್ರಾನ್ ಖಾನ್ ಬಂಧನದ ವಿರುದ್ಧ ಶಾಂತಿಯುತ ಪ್ರತಿಭಟನೆಗಾಗಿ ಪಿಟಿಐ ಕರೆಯನ್ನು ಪುನರುಚ್ಚರಿಸಿದ್ದಾರೆ.

ಇದನ್ನೂ ಓದಿ: Imran Khan: ಪಾಕಿಸ್ತಾನದ ಮಾಜಿ ಪಿಎಂ ಇಮ್ರಾನ್ ಖಾನ್ ಬಂಧನ; ಯಾವುದಿದು ಅಲ್ ಖಾದೀರ್ ಟ್ರಸ್ಟ್ ಪ್ರಕರಣ?

ಅದೇ ವೇಳೆ ಮಾಜಿ ಪ್ರಧಾನಿ ಮತ್ತು ಪಿಟಿಐ ಅಧ್ಯಕ್ಷ ಇಮ್ರಾನ್ ಖಾನ್ ಅವರನ್ನು ವೈದ್ಯಕೀಯ ಪರೀಕ್ಷೆಗಾಗಿ ಇಸ್ಲಾಮಾಬಾದ್‌ನ ಪಾಲಿ ಕ್ಲಿನಿಕ್‌ನಲ್ಲಿ ಏಳು ಸದಸ್ಯರ ವೈದ್ಯಕೀಯ ಮಂಡಳಿಗೆ ಕಳುಹಿಸಲಾಗಿದೆ ಎಂದು ಪಾಕಿಸ್ತಾನದ ARY ನ್ಯೂಸ್ ವರದಿ ಮಾಡಿದೆ.

ಮತ್ತಷ್ಟು ವಿದೇಶ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಹುಬ್ಬಳ್ಳಿ: ಕಚ್ಚಿದ ಹಾವಿನೊಂದಿಗೆ ಆಸ್ಪತ್ರೆಗೆ ಬಂದ ಯುವಕ
ಹುಬ್ಬಳ್ಳಿ: ಕಚ್ಚಿದ ಹಾವಿನೊಂದಿಗೆ ಆಸ್ಪತ್ರೆಗೆ ಬಂದ ಯುವಕ
ಹಳೆ ಬೈಕ್‌ಗೆ ಬಣ್ಣ ಬಳಿದು ಕೊಟ್ಟು ರೈತನಿಗೆ ಮೋಸ ಮಾಡಿದ್ರಾ ಶೋ ರೂಮ್‌ನವರು?
ಹಳೆ ಬೈಕ್‌ಗೆ ಬಣ್ಣ ಬಳಿದು ಕೊಟ್ಟು ರೈತನಿಗೆ ಮೋಸ ಮಾಡಿದ್ರಾ ಶೋ ರೂಮ್‌ನವರು?
ನಟ ಮಯೂರ್ ಪಟೇಲ್ ವಿನಯವನ್ನು ಕೊಂಡಾಡಿದ ದುನಿಯಾ ವಿಜಯ್
ನಟ ಮಯೂರ್ ಪಟೇಲ್ ವಿನಯವನ್ನು ಕೊಂಡಾಡಿದ ದುನಿಯಾ ವಿಜಯ್
ವಿಮಾನ ಟೇಕ್ ಆಫ್ ಆಗುವಾಗ ರನ್​ವೇಯಲ್ಲಿ ಮರಿಗಳ ಜೊತೆ ಕಾಣಿಸಿಕೊಂಡ ಚಿರತೆ
ವಿಮಾನ ಟೇಕ್ ಆಫ್ ಆಗುವಾಗ ರನ್​ವೇಯಲ್ಲಿ ಮರಿಗಳ ಜೊತೆ ಕಾಣಿಸಿಕೊಂಡ ಚಿರತೆ
ಭರ್ಜರಿ ಸಿಕ್ಸರ್ ಸಿಡಿಸಿದ ಅಶ್ವಿನ್​ಗೆ ಅಜ್ಜಿಯ ಮೆಚ್ಚುಗೆ; ವಿಡಿಯೋ ನೋಡಿ
ಭರ್ಜರಿ ಸಿಕ್ಸರ್ ಸಿಡಿಸಿದ ಅಶ್ವಿನ್​ಗೆ ಅಜ್ಜಿಯ ಮೆಚ್ಚುಗೆ; ವಿಡಿಯೋ ನೋಡಿ
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ರಾಷ್ಟ್ರಪತಿ
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ರಾಷ್ಟ್ರಪತಿ
ಹಾಲಿನ ದರ ಏರಿಕೆ ಬಿಸಿ: ಎಷ್ಟು ಹೆಚ್ಚಳ? KMF ಅಧ್ಯಕ್ಷ ಹೇಳಿದ್ದಿಷ್ಟು
ಹಾಲಿನ ದರ ಏರಿಕೆ ಬಿಸಿ: ಎಷ್ಟು ಹೆಚ್ಚಳ? KMF ಅಧ್ಯಕ್ಷ ಹೇಳಿದ್ದಿಷ್ಟು
ಪ್ಯಾಲೆಸ್ತೀನ್ ಧ್ವಜ ಹಿಡಿದರೆ ತಪ್ಪೇನು? ಸಚಿವ ಜಮೀರ್ ಅಹ್ಮದ್ ಪ್ರಶ್ನೆ
ಪ್ಯಾಲೆಸ್ತೀನ್ ಧ್ವಜ ಹಿಡಿದರೆ ತಪ್ಪೇನು? ಸಚಿವ ಜಮೀರ್ ಅಹ್ಮದ್ ಪ್ರಶ್ನೆ
ಅಮೆಜಾನ್ ವಿಶೇಷ ಆಫರ್ ಸೇಲ್ ಮುಂದಿನ ವಾರವೇ ಆರಂಭ!
ಅಮೆಜಾನ್ ವಿಶೇಷ ಆಫರ್ ಸೇಲ್ ಮುಂದಿನ ವಾರವೇ ಆರಂಭ!
ಭಾವ್​ನಗರದಲ್ಲಿ ಗುಜರಾತ್​ನ ಮೊಟ್ಟಮೊದಲ ಧಾನ್ಯಗಳ ಎಟಿಎಂ ಸ್ಥಾಪನೆ
ಭಾವ್​ನಗರದಲ್ಲಿ ಗುಜರಾತ್​ನ ಮೊಟ್ಟಮೊದಲ ಧಾನ್ಯಗಳ ಎಟಿಎಂ ಸ್ಥಾಪನೆ