AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪಾಕ್ ಪ್ರಧಾನಿ ಸೇರಿದಂತೆ ಮೂವರ ಆಣತಿಯಂತೆ ಗುಂಡಿನ ದಾಳಿ: ಇಮ್ರಾನ್ ಖಾನ್

ಶೆಹಬಾಜ್ ಶರೀಫ್, ರಾಣಾ ಸನಾವುಲ್ಲಾ ಮತ್ತು ಮೇಜರ್ ಜನರಲ್ ಫೈಸಲ್ ಎಂಬ ಮೂವರು ವ್ಯಕ್ತಿಗಳ ಆಜ್ಞೆಯ ಮೇರೆಗೆ ಗುಂಡಿನ ದಾಳಿ ನಡೆಸಲಾಗಿದೆ ಎಂದು ಇಮ್ರಾನ್ ಖಾನ್ ಶಂಕಿಸಿದ್ದಾಗಿ ಪಿಟಿಐ ಹೇಳಿದೆ.

ಪಾಕ್ ಪ್ರಧಾನಿ ಸೇರಿದಂತೆ ಮೂವರ ಆಣತಿಯಂತೆ ಗುಂಡಿನ ದಾಳಿ: ಇಮ್ರಾನ್ ಖಾನ್
ಪಾಕ್ ಪ್ರಧಾನಿ ಸೇರಿದಂತೆ ಮೂವರ ಆಣತಿಯಂತೆ ಗುಂಡಿನ ದಾಳಿ: ಇಮ್ರಾನ್ ಖಾನ್
TV9 Web
| Edited By: |

Updated on: Nov 04, 2022 | 7:34 AM

Share

ಪಾಕಿಸ್ತಾನದ ಮಾಜಿ ಪ್ರಧಾನಿ ಇಮ್ರಾನ್ ಖಾನ್ (Imran Khan) ಮೇಲೆ ನಡೆದ ಗುಂಡಿನ ದಾಳಿ ಪ್ರಕರಣ ಸಂಬಂಧ ಪಾಕಿಸ್ತಾನ್ ತೆಹ್ರೀಕ್-ಇ-ಇನ್ಸಾಫ್ ಪಕ್ಷವು ಪಾಕ್ ಪ್ರಧಾನಿ ಸೇರಿದಂತೆ ಮೂವರ ಮೇಲೆ ಅನುಮಾನ ವ್ಯಕ್ತಪಡಿಸಿದೆ. ಪಾಕಿಸ್ತಾನದ ಪ್ರಧಾನಿ ಶೆಹಬಾಜ್ ಶರೀಫ್ (Pakistan PM Shehbaz Sharif), ರಾಣಾ ಸನಾವುಲ್ಲಾ ಮತ್ತು ಮೇಜರ್ ಜನರಲ್ ಫೈಸಲ್ ವ್ಯಕ್ತಿಗಳ ಆಜ್ಞೆಯ ಮೇರೆಗೆ ಈ ಕೃತ್ಯ ಎಸಗಿದ್ದಾರೆ ಎಂದು ಇಮ್ರಾನ್ ಖಾನ್ ನಂಬುತ್ತಾರೆ. ಈ ಬಗ್ಗೆ ಮಾಹಿತಿ ಪಡೆಯುತ್ತಿದ್ದು, ಅದರ ಆಧಾರದ ಮೇಲೆ ಇದನ್ನು ಹೇಳುತ್ತಿದ್ದಾರೆ ಎಂದು ಪಾಕಿಸ್ತಾನ್ ತೆಹ್ರೀಕ್-ಇ-ಇನ್ಸಾಫ್ ನಾಯಕರಾದ ಅಸಾದ್ ಉಮರ್ ಮತ್ತು ಮಿಯಾನ್ ಅಸ್ಲಾಮ್ ಇಕ್ಬಾಲ್ ಹೇಳಿದ್ದಾರೆ.

ರಾಣಾ ಸನಾವುಲ್ಲಾ ಪಾಕಿಸ್ತಾನದ ಆಂತರಿಕ ಸಚಿವರಾಗಿದ್ದಾರೆ ಮತ್ತು ಮೇಜರ್ ಜನರಲ್ ಫೈಸಲ್ ನಾಸೀರ್ ಅವರು ಐಎಸ್ಐ ಮಹಾನಿರ್ದೇಶಕ (ಸಿ) ಆಗಿದ್ದಾರೆ. ಇಮ್ರಾನ್ ಖಾನ್ ಅವರ ಆರೋಗ್ಯ ಸ್ಥಿತಿ ಸ್ಥಿರವಾಗಿದೆ, ಅವರು ಅಪಾಯದಿಂದ ಪಾರಾಗಿದ್ದಾರೆ ಎಂದು ಪಿಟಿಐ ನಾಯಕರು ಹೇಳಿದ್ದಾರೆ.

ಪಕ್ಷವು ಪೋಸ್ಟ್ ಮಾಡಿದ ವಿಡಿಯೋದಲ್ಲಿ ಪಿಟಿಐ ಪ್ರಧಾನ ಕಾರ್ಯದರ್ಶಿಯಾಗಿರುವ ಅಸಾದ್ ಉಮರ್ ಅವರು ಶಂಕಿತ ಮೂವರನ್ನು ಹುದ್ದೆಗಳಿಂದ ತೆಗೆದುಹಾಕಬೇಕು ಎಂದು ಒತ್ತಾಯಿಸಿದ್ದಾರೆ. “ಇಮ್ರಾನ್ ಖಾನ್ ಅಪಾಯದಲ್ಲಿದ್ದಾರೆ ಎಂದು ನಮಗೆ ವರದಿಗಳು ಬರುತ್ತಿರುವುದರಿಂದ ನಾನು ಇಮ್ರಾನ್ ಖಾನ್ ಅವರೊಂದಿಗೆ ಮಾತನಾಡಿದ್ದೇನೆ. ಆದಾಗ್ಯೂ, ನಾವು ಇದನ್ನು ಅಲ್ಲಾಹನಿಗೆ ಬಿಡಬೇಕು ಎಂದು ಅವರು ಹೇಳಿದರು. ಇಮ್ರಾನ್ ಖಾನ್ ಅವರ ಅನುಮತಿಗಾಗಿ ನಾವು ಕಾಯುತ್ತಿದ್ದೇವೆ. ಮೂವರನ್ನು ಹುದ್ದೆಯಿಂದ ತೆಗೆದುಹಾಕದಿದ್ದರೆ ದೇಶವ್ಯಾಪಿ ಪ್ರತಿಭಟನೆ ನಡೆಸಲಾಗುವುದು” ಎಂದರು. ಹೇಳಿದರು.

ಪಿಟಿಐನ ಲಾಂಗ್ ಮಾರ್ಚ್‌ನಲ್ಲಿ ಗುಂಡಿನ ದಾಳಿ ನಡೆಸಿದ್ದಕ್ಕಾಗಿ ಪಾಕಿಸ್ತಾನದಲ್ಲಿ ಪೊಲೀಸರಿಗೆ ಸಿಕ್ಕಿಬಿದ್ದ ಶಂಕಿತ ಆರೋಪಿ, “ಸಾರ್ವಜನಿಕರನ್ನು ದಾರಿತಪ್ಪಿಸುತ್ತಿದ್ದ ಕಾರಣ ಮಾಜಿ ಪ್ರಧಾನಿ ಇಮ್ರಾನ್ ಖಾನ್ ಅವರನ್ನು ಕೊಲ್ಲಲು ಬಯಸಿದ್ದೆ” ಎಂದಿದ್ದನು. ಪಾಕಿಸ್ತಾನದ ಪಂಜಾಬ್ ಪ್ರಾಂತ್ಯದ ವಜೀರಾಬಾದ್‌ನಲ್ಲಿ ಆಡಳಿತಾರೂಢ ಸಮ್ಮಿಶ್ರ ಸರ್ಕಾರದ ವಿರುದ್ಧ ಲಾಂಗ್ ಮಾರ್ಚ್‌ ನಡೆಸುತ್ತಿದ್ದಾಗ ಇಮ್ರಾನ್ ಖಾನ್ ಅವರ ಮೇಲೆ ಗುಂಡಿನ ದಾಳಿ ನಡೆಸಲಾಗಿತ್ತು. ಘಟನೆಯಲ್ಲಿ ಇಮ್ರಾನ್ ಖಾನ್ ಗಾಯಗೊಂಡಿದ್ದರು.

ಸೂಕ್ಷ್ಮವಾಗಿ ಗಮನಿಸುತ್ತಿರುವ ಭಾರತ

ಪಾಕಿಸ್ತಾನದಲ್ಲಿನ ಬೆಳವಣಿಗೆಗಳನ್ನು ಸೂಕ್ಷ್ಮವಾಗಿ ಗಮನಿಸುತ್ತಿದ್ದೇವೆ ಎಂದು ಭಾರತದ ವಿದೇಶಾಂಗ ಸಚಿವಾಲಯ ಹೇಳಿದೆ. ನಾವು ಸೂಕ್ಷ್ಮವಾಗಿ ಗಮನಿಸುತ್ತಿದ್ದೇವೆ ಮತ್ತು ನಡೆಯುತ್ತಿರುವ ಬೆಳವಣಿಗೆಗಳನ್ನು ನಾವು ಮೇಲ್ವಿಚಾರಣೆ ಮಾಡುವುದನ್ನು ಮುಂದುವರಿಸುತ್ತೇವೆ ಎಂದು ವಿದೇಶಾಂಗ ಇಲಾಖೆಯ ವಕ್ತಾರ ಅರಿಂದಮ್ ಬಾಗ್ಚಿ ಹೇಳಿದ್ದಾರೆ. ಅಲ್ಲದೆ ಮಾಜಿ ಪ್ರಧಾನಿ ಮೇಲಿನ ದಾಳಿಯನ್ನು ಸೌದಿ ಅರೇಬಿಯಾದ ವಿದೇಶಾಂಗ ಸಚಿವಾಲಯ ಕೂಡ ಖಂಡಿಸಿದೆ.

ಮತ್ತಷ್ಟು ವಿದೇಶ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಇದ್ದಕ್ಕಿದ್ದಂತೆ ಜನರು, ಹಸುಗಳ ಮೇಲೆ ಕಾಡು ಕರಡಿ ದಾಳಿ; ವಿಡಿಯೋ ವೈರಲ್
ಇದ್ದಕ್ಕಿದ್ದಂತೆ ಜನರು, ಹಸುಗಳ ಮೇಲೆ ಕಾಡು ಕರಡಿ ದಾಳಿ; ವಿಡಿಯೋ ವೈರಲ್
ಮೈಸೂರು ರಿಂಗ್ ರಸ್ತೆಯ ಪರಿಸ್ಥಿತಿ ಹೇಗಿದೆ? ವಿಡಿಯೋ ಮೂಲಕ ತಿಳಿಸಿದ ಅನಿರುದ್
ಮೈಸೂರು ರಿಂಗ್ ರಸ್ತೆಯ ಪರಿಸ್ಥಿತಿ ಹೇಗಿದೆ? ವಿಡಿಯೋ ಮೂಲಕ ತಿಳಿಸಿದ ಅನಿರುದ್
ನರಕ ಸದೃಶ್ಯವಾಗಿತ್ತು ಖಳನಟ ವಜ್ರಮುನಿ ಕೊನೆಯ ದಿನಗಳು
ನರಕ ಸದೃಶ್ಯವಾಗಿತ್ತು ಖಳನಟ ವಜ್ರಮುನಿ ಕೊನೆಯ ದಿನಗಳು
ಉತ್ತರಾಖಂಡದ ಜೋಶಿಮಠದಲ್ಲಿರುವ ಸೇನಾ ಶಿಬಿರದಲ್ಲಿ ಬೆಂಕಿ ಅವಘಡ
ಉತ್ತರಾಖಂಡದ ಜೋಶಿಮಠದಲ್ಲಿರುವ ಸೇನಾ ಶಿಬಿರದಲ್ಲಿ ಬೆಂಕಿ ಅವಘಡ
ಪತಿ ಮತ್ತು ಮಾವನಿಂದ ಚಿತ್ರಹಿಂಸೆ
ಪತಿ ಮತ್ತು ಮಾವನಿಂದ ಚಿತ್ರಹಿಂಸೆ
ಬಳ್ಳಾರಿ ಗಲಭೆ: ಶಾಸಕ ಜನಾರ್ದನರೆಡ್ಡಿ ನಿವಾಸದಲ್ಲಿ ಮತ್ತೊಂದು ಬುಲೆಟ್ ಪತ್ತೆ
ಬಳ್ಳಾರಿ ಗಲಭೆ: ಶಾಸಕ ಜನಾರ್ದನರೆಡ್ಡಿ ನಿವಾಸದಲ್ಲಿ ಮತ್ತೊಂದು ಬುಲೆಟ್ ಪತ್ತೆ
ಗಿಲ್ಲಿ-ಅಶ್ವಿನಿ ನಡುವೆ ಮತ್ತೆ ಜಗಳ, ಯೋಗ್ಯತೆ ಬಗ್ಗೆ ಮಾತು: ವಿಡಿಯೋ
ಗಿಲ್ಲಿ-ಅಶ್ವಿನಿ ನಡುವೆ ಮತ್ತೆ ಜಗಳ, ಯೋಗ್ಯತೆ ಬಗ್ಗೆ ಮಾತು: ವಿಡಿಯೋ
ರಿವರ್ಸ್ ವೇಳೆ ನಿಯಂತ್ರಣ ತಪ್ಪಿದ ಕಾರು: ವಿಡಿಯೋ ನೋಡಿದ್ರೆ ಹೌಹಾರ್ತೀರಿ
ರಿವರ್ಸ್ ವೇಳೆ ನಿಯಂತ್ರಣ ತಪ್ಪಿದ ಕಾರು: ವಿಡಿಯೋ ನೋಡಿದ್ರೆ ಹೌಹಾರ್ತೀರಿ
ಬಳ್ಳಾರಿ ಘರ್ಷಣೆಯಲ್ಲಿ ಕೈ ಕಾರ್ಯಕರ್ತ ಬಲಿ: ಗಲಾಟೆ ಶುರುವಾಗಿದ್ದು ಹೇಗೆ?
ಬಳ್ಳಾರಿ ಘರ್ಷಣೆಯಲ್ಲಿ ಕೈ ಕಾರ್ಯಕರ್ತ ಬಲಿ: ಗಲಾಟೆ ಶುರುವಾಗಿದ್ದು ಹೇಗೆ?
ಸರ್ಕಾರಿ ಶಾಲಾ ಮಕ್ಕಳಿಗೆ ಶಿಕ್ಷಕರಿಂದ ಔತಣಕೂಟ: ವಿಶೇಷವೇನು?
ಸರ್ಕಾರಿ ಶಾಲಾ ಮಕ್ಕಳಿಗೆ ಶಿಕ್ಷಕರಿಂದ ಔತಣಕೂಟ: ವಿಶೇಷವೇನು?