ಪಾಕಿಸ್ತಾನ ಸೇನೆಯಿಂದ ಐಎಸ್‌ಐ ಮಾಜಿ ಮುಖ್ಯಸ್ಥ ಫೈಜ್ ಹಮೀದ್‌ ಬಂಧನ

ಪಾಕಿಸ್ತಾನದ ಮಾಜಿ ಬೇಹುಗಾರಿಕಾ ಮುಖ್ಯಸ್ಥ, ನಿವೃತ್ತ ಲೆಫ್ಟಿನೆಂಟ್ ಜನರಲ್ ಫೈಜ್ ಹಮೀದ್ ಅವರನ್ನು ಮಿಲಿಟರಿ ಕಸ್ಟಡಿಗೆ ತೆಗೆದುಕೊಳ್ಳಲಾಗಿದೆ. ಈಗಾಗಲೇ ಕೋರ್ಟ್ ಮಾರ್ಷಲ್ ಪ್ರಾರಂಭಿಸಲಾಗಿದೆ. ನಿವೃತ್ತಿಯ ನಂತರ ಪಾಕಿಸ್ತಾನದ ಸೇನಾ ಕಾಯಿದೆಯ ಉಲ್ಲಂಘನೆ ಮಾಡಿದ್ದರಿಂದ ಅವರನ್ನು ವಶಕ್ಕೆ ಪಡೆಯಲಾಗಿದೆ.

ಪಾಕಿಸ್ತಾನ ಸೇನೆಯಿಂದ ಐಎಸ್‌ಐ ಮಾಜಿ ಮುಖ್ಯಸ್ಥ ಫೈಜ್ ಹಮೀದ್‌ ಬಂಧನ
ಫೈಜ್ ಹಮೀದ್
Follow us
|

Updated on: Aug 12, 2024 | 10:26 PM

ಲಾಹೋರ್: ಸಿಟಿ ವಸತಿ ಯೋಜನೆ ಹಗರಣಕ್ಕೆ ಸಂಬಂಧಿಸಿದಂತೆ ಪಾಕಿಸ್ತಾನದ ಮಾಜಿ ಗುಪ್ತಚರ ಮುಖ್ಯಸ್ಥ ಫೈಜ್ ಹಮೀದ್ ಅವರನ್ನು ಮಿಲಿಟರಿ ಕಸ್ಟಡಿಗೆ ತೆಗೆದುಕೊಳ್ಳಲಾಗಿದೆ ಮತ್ತು ಅವರ ಕೋರ್ಟ್ ಮಾರ್ಷಲ್ ಪ್ರಕ್ರಿಯೆಯು ಪ್ರಾರಂಭವಾಗಿದೆ ಎಂದು ಪಾಕಿಸ್ತಾನದ ಮಾಧ್ಯಮವು ಇಂದು ಪಾಕ್ ಸೇನೆಯ ಮಾಧ್ಯಮ ವಿಭಾಗವನ್ನು ಉಲ್ಲೇಖಿಸಿ ವರದಿ ಮಾಡಿದೆ.

ಪಾಕಿಸ್ತಾನದ ಇತಿಹಾಸದಲ್ಲಿ ಇದೇ ಮೊದಲ ಬಾರಿಗೆ ಮಾಜಿ ಗುಪ್ತಚರ ಮುಖ್ಯಸ್ಥರ ವಿರುದ್ಧ ಕೋರ್ಟ್ ಮಾರ್ಷಲ್ ಪ್ರಾರಂಭಿಸಲಾಗಿದೆ. ಲೆಫ್ಟಿನೆಂಟ್ ಜನರಲ್ ಫೈಜ್ ಹಮೀದ್ (ನಿವೃತ್ತ) ವಿರುದ್ಧ ಮಾಡಿದ ಟಾಪ್ ಸಿಟಿ ಕೇಸ್‌ನಲ್ಲಿನ ದೂರುಗಳ ನಿಖರತೆಯನ್ನು ಖಚಿತಪಡಿಸಿಕೊಳ್ಳಲು ಪಾಕಿಸ್ತಾನದ ಸುಪ್ರೀಂ ಕೋರ್ಟ್‌ನ ಆದೇಶಗಳನ್ನು ಅನುಸರಿಸಿ, ಪಾಕಿಸ್ತಾನದ ಸೇನೆಯು ವಿಸ್ತೃತ ತನಿಖಾ ನ್ಯಾಯಾಲಯವನ್ನು ಕೈಗೊಂಡಿದೆ.

ಇದನ್ನೂ ಓದಿ: ಪಾಕಿಸ್ತಾನ: ವಿವಾಹ ವಿಚ್ಛೇದನಕ್ಕೆ ಅರ್ಜಿ ಸಲ್ಲಿಸಿದ ಮಗಳ ಕಾಲು ಕತ್ತರಿಸಿದ ಅಪ್ಪ

ಇದರ ಪರಿಣಾಮವಾಗಿ, ಪಾಕಿಸ್ತಾನ ಸೇನಾ ಕಾಯಿದೆಯ ನಿಬಂಧನೆಗಳ ಅಡಿಯಲ್ಲಿ ನಿವೃತ್ತ ಲೆಫ್ಟಿನೆಂಟ್ ಜನರಲ್ ಫೈಜ್ ಹಮೀದ್ ಅವರ ವಿರುದ್ಧ ಸೂಕ್ತ ಶಿಸ್ತು ಕ್ರಮವನ್ನು ಪ್ರಾರಂಭಿಸಲಾಗಿದೆ ಎಂದು ಇಂಟರ್ ಸರ್ವೀಸಸ್ ಪಬ್ಲಿಕ್ ರಿಲೇಶನ್ಸ್ (ISPR) ಹೊರಡಿಸಲಾದ ಪತ್ರಿಕಾ ಪ್ರಕಟಣೆ ತಿಳಿಸಿದೆ ಎಂದು ಪಾಕಿಸ್ತಾನದ ಡಾನ್ ನ್ಯೂಸ್ ವರದಿ ಮಾಡಿದೆ.

ಇದರ ಜೊತೆಗೆ, ನಿವೃತ್ತಿಯ ನಂತರ ಪಾಕಿಸ್ತಾನದ ಸೇನಾ ಕಾಯಿದೆಯ ಉಲ್ಲಂಘನೆಯ ಅನೇಕ ನಿದರ್ಶನಗಳನ್ನು ಸಹ ಸ್ಥಾಪಿಸಲಾಗಿದೆ. ಫೀಲ್ಡ್ ಜನರಲ್ ಕೋರ್ಟ್ ಮಾರ್ಷಲ್ ಪ್ರಕ್ರಿಯೆಯನ್ನು ಪ್ರಾರಂಭಿಸಲಾಗಿದೆ ಮತ್ತು ಲೆಫ್ಟಿನೆಂಟ್ ಜನರಲ್ ಫೈಜ್ ಹಮೀದ್ (ನಿವೃತ್ತ) ಅವರನ್ನು ಮಿಲಿಟರಿ ಕಸ್ಟಡಿಗೆ ತೆಗೆದುಕೊಳ್ಳಲಾಗಿದೆ.

ಇದನ್ನೂ ಓದಿ: ಟ್ರಂಪ್​ ಮೇಲಿನ ಮಾರಣಾಂತಿಕ ದಾಳಿ ಪ್ರಕರಣ, ಪಾಕಿಸ್ತಾನಿ ವ್ಯಕ್ತಿಯ ಬಂಧನ

ಏನಿದು ಪ್ರಕರಣ?:

ಇಂಟರ್ ಸರ್ವಿಸಸ್ ಇಂಟೆಲಿಜೆನ್ಸ್ (ISI) ಮಾಜಿ ಮುಖ್ಯಸ್ಥರ ವಿರುದ್ಧ ಅಧಿಕಾರ ದುರುಪಯೋಗದ ಆರೋಪದ ಬಗ್ಗೆ ತನಿಖೆ ನಡೆಸಲು ಪಾಕಿಸ್ತಾನಿ ಮಿಲಿಟರಿ ಏಪ್ರಿಲ್‌ನಲ್ಲಿ ತನಿಖಾ ಸಮಿತಿಯನ್ನು ರಚಿಸಿತ್ತು. ನವೆಂಬರ್ 14ರಂದು ನೀಡಿದ ತನ್ನ ಲಿಖಿತ ಆದೇಶದಲ್ಲಿ ಪಾಕಿಸ್ತಾನದ ಸುಪ್ರೀಂ ಕೋರ್ಟ್ ಮಾಜಿ ಸ್ಪೈಮಾಸ್ಟರ್ ನಿವೃತ್ತ ಲೆಫ್ಟಿನೆಂಟ್ ಜನರಲ್ ಫೈಜ್ ಹಮೀದ್ ವಿರುದ್ಧದ “ಅತ್ಯಂತ ಗಂಭೀರ ಸ್ವರೂಪದ” ಆರೋಪಗಳನ್ನು ಗಮನಿಸದೆ ಬಿಡಲಾಗುವುದಿಲ್ಲ. ಏಕೆಂದರೆ ಅದು ದೇಶದ ಪ್ರತಿಷ್ಠೆಗೆ ಧಕ್ಕೆ ತರುತ್ತದೆ ಎಂದು ಹೇಳಿತ್ತು. “ಅವರ ಮೇಲಿನ ಆರೋಪಗಳು ಅತ್ಯಂತ ಗಂಭೀರ ಸ್ವರೂಪದ್ದಾಗಿವೆ. ಅದು ನಿಜವಾಗಿದ್ದರೆ, ನಿಸ್ಸಂದೇಹವಾಗಿ ಫೆಡರಲ್ ಸರ್ಕಾರ, ಸಶಸ್ತ್ರ ಪಡೆಗಳು, ಐಎಸ್ಐ ಮತ್ತು ಪಾಕಿಸ್ತಾನ ರೇಂಜರ್‌ಗಳ ಪ್ರತಿಷ್ಠೆಗೆ ಧಕ್ಕೆ ತರುತ್ತದೆ. ಆದ್ದರಿಂದ ಅವುಗಳನ್ನು ಗಮನಿಸದೆ ಬಿಡಲಾಗುವುದಿಲ್ಲ” ಎಂದು ಉಲ್ಲೇಖಿಸಿತ್ತು.

ಇನ್ನಷ್ಟು ಅಂತಾರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ನಿರಪರಾಧಿ ಅಫ್ಜಲ್ ಗುರು ವಿರುದ್ಧ ಪೊಲೀಸರ ಸಂಚು; ಜೆಡಿಯು ನಾಯಕ ವಿವಾದ
ನಿರಪರಾಧಿ ಅಫ್ಜಲ್ ಗುರು ವಿರುದ್ಧ ಪೊಲೀಸರ ಸಂಚು; ಜೆಡಿಯು ನಾಯಕ ವಿವಾದ
ದಿಲ್ಲಿಯಲ್ಲಿ ಕುಮಾರಸ್ವಾಮಿಯನ್ನು ಭೇಟಿಯಾದ ಎಂಬಿ ಪಾಟೀಲ್
ದಿಲ್ಲಿಯಲ್ಲಿ ಕುಮಾರಸ್ವಾಮಿಯನ್ನು ಭೇಟಿಯಾದ ಎಂಬಿ ಪಾಟೀಲ್
ಉದಾಹರಣೆ ಮೂಲಕ ಇಕ್ಕಟ್ಟಿನ ಪರಿಸ್ಥಿತಿ ವಿವರಿಸಿದ ರಮೇಶ್ ಅರವಿಂದ್
ಉದಾಹರಣೆ ಮೂಲಕ ಇಕ್ಕಟ್ಟಿನ ಪರಿಸ್ಥಿತಿ ವಿವರಿಸಿದ ರಮೇಶ್ ಅರವಿಂದ್
ಗೋಡೌನ್‌ನಲ್ಲಿ ಮೂಟೆಗಳ ಅಡಿ ಸಿಲುಕಿದ ಕಾರ್ಮಿಕರು; ಓರ್ವ ಸಾವು
ಗೋಡೌನ್‌ನಲ್ಲಿ ಮೂಟೆಗಳ ಅಡಿ ಸಿಲುಕಿದ ಕಾರ್ಮಿಕರು; ಓರ್ವ ಸಾವು
ಹಬ್ಬ ಮುಗಿಯುತ್ತಿದ್ದಂತೆಯೇ ಗಣೇಶನಿಗೆ ಹೀಗಾ ಅವಮಾನ ಮಾಡುವುದು..!
ಹಬ್ಬ ಮುಗಿಯುತ್ತಿದ್ದಂತೆಯೇ ಗಣೇಶನಿಗೆ ಹೀಗಾ ಅವಮಾನ ಮಾಡುವುದು..!
ಸ್ಫೋಟಕ್ಕೆ ಉಗ್ರರ ಸಂಚು: ಕರ್ನಾಟಕ ಬಿಜೆಪಿ ಮುಖ್ಯ ಕಚೇರಿಗೆ ಭದ್ರತೆ ಹೆಚ್ಚಳ
ಸ್ಫೋಟಕ್ಕೆ ಉಗ್ರರ ಸಂಚು: ಕರ್ನಾಟಕ ಬಿಜೆಪಿ ಮುಖ್ಯ ಕಚೇರಿಗೆ ಭದ್ರತೆ ಹೆಚ್ಚಳ
ಧ್ರುವ ಸರ್ಜಾ ಮ್ಯಾನೇಜರ್​ ಬಂಧನದ ಬಗ್ಗೆ ಮಾಹಿತಿ ನೀಡಿದ ಪೊಲೀಸ್ ಕಮಿಷನರ್​
ಧ್ರುವ ಸರ್ಜಾ ಮ್ಯಾನೇಜರ್​ ಬಂಧನದ ಬಗ್ಗೆ ಮಾಹಿತಿ ನೀಡಿದ ಪೊಲೀಸ್ ಕಮಿಷನರ್​
ಮದ್ಯ ಸೇವಿಸಿ ಆಸ್ಪತ್ರೆಗೆ ಬಂದ ವೈದ್ಯ; ಕುಡಿದ ಮತ್ತಿನಲ್ಲಿ ಬಿದ್ದು ಹೊರಳಾಟ
ಮದ್ಯ ಸೇವಿಸಿ ಆಸ್ಪತ್ರೆಗೆ ಬಂದ ವೈದ್ಯ; ಕುಡಿದ ಮತ್ತಿನಲ್ಲಿ ಬಿದ್ದು ಹೊರಳಾಟ
ಗೃಹಲಕ್ಷ್ಮಿ ಯೋಜನೆಗೆ ನೀಡಲು ಸರ್ಕಾರದ ಬಳಿ ಹಣ ಇಲ್ವಾ?
ಗೃಹಲಕ್ಷ್ಮಿ ಯೋಜನೆಗೆ ನೀಡಲು ಸರ್ಕಾರದ ಬಳಿ ಹಣ ಇಲ್ವಾ?
ವಿವೋ ಹೊಸ ಸ್ಮಾರ್ಟ್​​ಫೋನ್ ಕ್ಯಾಮೆರಾದ ಫೋಟೊ ಕ್ಲಾರಿಟಿ ಸೂಪರ್ಬ್
ವಿವೋ ಹೊಸ ಸ್ಮಾರ್ಟ್​​ಫೋನ್ ಕ್ಯಾಮೆರಾದ ಫೋಟೊ ಕ್ಲಾರಿಟಿ ಸೂಪರ್ಬ್