Pakistan History Book: ಮುಸ್ಲಿಮರು ಹಿಂದೂಗಳು, ಬ್ರಿಟಿಷರನ್ನು ಎಂದೂ ನಂಬಲು ಸಾಧ್ಯವಿಲ್ಲ: ಪಾಕಿಸ್ತಾನದ ಇತಿಹಾಸ ಪುಸ್ತಕದಲ್ಲಿ ಭಾರತ, ಹಿಂದೂ ವಿರೋಧಿ ಸಾಲುಗಳು

ಪಾಕಿಸ್ತಾನದ ಶಾಲೆಗಳಲ್ಲಿ ಭಾರತದ ಬಗ್ಗೆ ವಿಷಬೀಜ ಬಿತ್ತುವಂತಹ ಕೆಲಸವಾಗುತ್ತಿದೆ ಎನ್ನುವ ವಿಚಾರ ತಿಳಿದುಬಂದಿದೆ. ಪಾಕಿಸ್ತಾನದ ಶಾಲೆಗಳಲ್ಲಿ ಭಾರತ ಹಾಗೂ ಹಿಂದೂಗಳ ವಿರುದ್ಧ ಇಲ್ಲಸಲ್ಲದ್ದನ್ನು ಬೋಧಿಸಲಾಗುತ್ತಿದೆ ಎಂದು ಆರೋಪಿಸಲಾಗಿದೆ.

Pakistan History Book: ಮುಸ್ಲಿಮರು ಹಿಂದೂಗಳು, ಬ್ರಿಟಿಷರನ್ನು ಎಂದೂ ನಂಬಲು ಸಾಧ್ಯವಿಲ್ಲ: ಪಾಕಿಸ್ತಾನದ ಇತಿಹಾಸ ಪುಸ್ತಕದಲ್ಲಿ ಭಾರತ, ಹಿಂದೂ ವಿರೋಧಿ ಸಾಲುಗಳು
ಸಾಂದರ್ಭಿಕ ಚಿತ್ರ( ಪಾಕಿಸ್ತಾನದ ಶಾಲೆ)
Image Credit source: Muslim Hands

Updated on: Mar 10, 2023 | 10:51 AM

ಪಾಕಿಸ್ತಾನದ ಶಾಲೆಗಳಲ್ಲಿ ಭಾರತದ ಬಗ್ಗೆ ವಿಷಬೀಜ ಬಿತ್ತುವಂತಹ ಕೆಲಸವಾಗುತ್ತಿದೆ ಎನ್ನುವ ವಿಚಾರ ತಿಳಿದುಬಂದಿದೆ.
ಪಾಕಿಸ್ತಾನದ ಶಾಲೆಗಳಲ್ಲಿ ಭಾರತ ಹಾಗೂ ಹಿಂದೂಗಳ ವಿರುದ್ಧ ಇಲ್ಲಸಲ್ಲದ್ದನ್ನು ಬೋಧಿಸಲಾಗುತ್ತಿದೆ ಎಂದು ಆರೋಪಿಸಲಾಗಿದೆ.  8ನೇ ತರಗತಿ ಇತಿಹಾಸ ಪುಟದಲ್ಲಿ ಬ್ರಿಟಿಷ್ ಆಳ್ವಿಕೆಯಿಂದ ಮುಕ್ತಿ ಕೊಡಿಸಿ ಭಾರತಕ್ಕೆ ಸ್ವಾತಂತ್ರ್ಯವನ್ನು ತಂದುಕೊಡಲು ಶ್ರಮಿಸಿದ ಮಹಾತ್ಮಾಗಾಂಧಿಯನ್ನು ಹಿಂದೂ ನಾಯಕ ಎಂದು ಬಿಂಬಿಸಿದ್ದಾರೆ.  ಈ ಕುರಿತು ನ್ಯೂಸ್​ 18 ವರದಿ ಮಾಡಿದೆ.

ಗಾಂಧಿ ಅವರ ಯುವ ಬೆಂಬಲಿಗರು ಕಾಂಗ್ರೆಸ್​ನ ಉಸ್ತುವಾರಿ ವಹಿಸಿಕೊಂಡು ಹಿಂದೂಗಳನ್ನು ರಕ್ಷಿಸುತ್ತಾ, ಮುಸ್ಲಿಮರ ಹಕ್ಕುಗಳನ್ನು ಕಡೆಗಣಿಸಿ, ದ್ವೇಷ, ಅಸೂಯೆ, ಸಂಕುಚಿತ ಮನೋಭಾವವನ್ನು ಸೃಷ್ಟಿಸಿದರು ಎಂದು ಬರೆಯಲಾಗಿದೆ.
ಮುಸ್ಲಿಂ ಹಕ್ಕುಗಳ ಹೋರಾಟದಲ್ಲಿ ಹಿಂದೂಗಳನ್ನು ನಂಬಲು ಸಾಧ್ಯವಾಗದಿರುವ ಬಗ್ಗೆ ಪುಸ್ತಕದಲ್ಲಿ ಹಲವಾರು ನಿದರ್ಶನಗಳಿವೆ.

ಹಿಂದೂ ಬಹುಸಂಖ್ಯಾತರಿಂದ ಯಾವುದೇ ನ್ಯಾಯೋಚಿತ ಮಾರ್ಗವನ್ನು ನಿರೀಕ್ಷಿಸಲು ಬಂಗಾಳದ ವಿಭಜನೆಯು ಮುಸ್ಲಿಮರಿಗೆ ಆ ಅರಿವನ್ನು ತಂದಿತು. ಆದ್ದರಿಂದ ನಮ್ಮ ಹಿತಾಸಕ್ತಿಗಳನ್ನು ಕಾಪಾಡಲು ಮುಸ್ಲಿಂ ನಾಯಕರು ತಮ್ಮ ಸಮುದಾಯಕ್ಕೆ ಪ್ರತ್ಯೇಕ ಮತದಾನ ಯೋಜನೆಯನ್ನು ರೂಪಿಸಿದರು ಎಂದು ಹೇಳಲಾಗಿದೆ.

ಮತ್ತಷ್ಟು ಓದಿ: Non Bailable Warrant: ಇಮ್ರಾನ್ ಖಾನ್ ಸಲ್ಲಿಸಿದ ಅರ್ಜಿ ವಜಾಗೊಳಿಸಿದ ಪಾಕ್ ಕೋರ್ಟ್

ಪಾಕಿಸ್ತಾನದ ಹುಟ್ಟಿನ ಬಗ್ಗೆ ಮಾತನಾಡುವ ಪ್ರತಿಯೊಂದು ಅಧ್ಯಾಯದಲ್ಲಿ ಬ್ರಿಟಿಷರ ಆಳ್ವಿಕೆಯಲ್ಲಿ ಭಾರತದ ಬಹುಪಾಲು ಭಾಗವಾಗಿದ್ದ ಮುಸ್ಲಿಮರನ್ನು ಹಿಂದೂಗಳಿಂದ ಪ್ರತ್ಯೇಕ ಭಾಗವಾಗಿ ಉಲ್ಲೇಖಿಸಲಾಗಿದೆ ಎಂದು ವರದಿಯಲ್ಲಿ ತಿಳಿಸಿದೆ.

ಮುಸ್ಲಿಮರು ಹಿಂದೂಗಳನ್ನು ಅಥವಾ ಬ್ರಿಟಿಷರನ್ನು ನಂಬಲು ಸಾಧ್ಯವಿಲ್ಲ. ಇದು ಅರಿವಾದ ಬಳಿಕ ಖಿಲಾಫತ್ ಚಳುವಳಿಯು ಭಾರತದ ಮುಸ್ಲಿಮರಿಗೆ ರಾಷ್ಟ್ರೀಯತೆಯ ಪರಿಕಲ್ಪನೆಯನ್ನು ತಂದಿತು. ಕಾಂಗ್ರೆಸ್ ರಾಷ್ಟ್ರೀಯ ಪಕ್ಷವೆಂದು ಹೇಳಿಕೊಂಡಿತು. ಆದರೆ ವಿಭಜನೆಯ ಪ್ರಶ್ನೆಯಲ್ಲಿ ಅದು ಮತೀಯ ಹಿಂದೂ ಸಂಘಟನೆಯಂತೆ ವರ್ತಿಸಿತು ಎಂದು ಬರೆಯಲಾಗಿದೆ.

9 ನೇ ತರಗತಿಯ ಪಠ್ಯದಲ್ಲಿ ನ್ಯಾಷನಲ್ ಕಾಂಗ್ರೆಸ್ ಉರ್ದುವನ್ನು ಹಿಂದಿಗೆ ಬದಲಿಸಲು ಕ್ರಮ ಕೈಗೊಂಡಿತು. ಮತ್ತು ಅಧಿಕೃತ ಗೀತೆಯಾಗಿ ಒಂದೇ ಮಾತರಂ ಅನ್ನು ಪರಿಚಯಿಸಲು ಪ್ರಯತ್ನಿಸಿತು. ಈ ಹಾಡು ಮುಸ್ಲಿಂ ವಿರೋಧಿ ಹಿನ್ನೆಲೆಯನ್ನು ಹೊಂದಿತ್ತು ಮತ್ತು ದ್ವೇಷವನ್ನು ಕೆರಳಿಸಿತು. ಪಾಕಿಸ್ತಾನದಲ್ಲಿ ವಿಭಜನೆಯ ನಂತರ ಹಿಂದೂಗಳು ಮತ್ತು ಮುಸ್ಲಿಮರಿಗೆ ಪ್ರತ್ಯೇಕ ಗುಣಮಟ್ಟದ ಆಹಾರ ನೀಡಲಾಯಿತು ಎಂದು ಬರೆಯಲಾಗಿದೆ.

ಭಾರತದ ಸರ್ಕಾರ ಸಾಮೂಹಿಕ ಹಿಂಸಾಚಾರವನ್ನು ನಡೆಸಿತು. ಮುಸ್ಲಿಂ ಹಕ್ಕುಗಳ ಹೋರಾಟದಲ್ಲಿ ಎಂದಿಗೂ ಹಿಂದೂಗಳನ್ನು ನಂಬಲು ಸಾಧ್ಯವಾಗದಿರುವ ಬಗ್ಗೆ ಪುಸ್ತಕದಲ್ಲಿ ಹಲವಾರು ನಿದರ್ಶನಗಳಿವೆ. ಬಂಗಾಳದ ವಿಭಜನೆಯು ಮುಸ್ಲಿಮರಿಗೆ ಆ ಅರಿವನ್ನು ತಂದಿತು.

 

ಅಂತಾರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

 

Nayana Rajeev

ನಯನಾ ರಾಜೀವ್- ಮೂಲತಃ ಸಾಗರದ ಬಾಳೆಗೆರೆಯವಳು, ಹಿಂದಿಯಲ್ಲಿ ಎಂ.ಎ ಮಾಡಿದ್ದೇನೆ, ಮಾಧ್ಯಮದಲ್ಲಿ 9 ವರ್ಷಗಳ ಅನುಭವವಿದೆ, ಕನ್ನಡ ಪ್ರಭ ದಿನಪತ್ರಿಕೆಯಲ್ಲಿ 3 ವರ್ಷಗಳ ಕಾಲ ಕೆಲಸ ಮಾಡಿದ್ದೇನೆ, ಒನ್​ ಇಂಡಿಯಾ ವೆಬ್​ಸೈಟ್​ನಲ್ಲಿ ನಾಲ್ಕೂವರೆ ವರ್ಷ ಕೆಲಸ ನಿರ್ವಹಿಸಿದ್ದೇನೆ. ಡಿಜಿಟಲ್ ವಿಭಾಗದಲ್ಲಿ ಕಳೆದ 6 ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಟಿವಿ 9 ಕನ್ನಡ ಡಿಜಿಟಲ್​ನಲ್ಲಿ ಸೀನಿಯರ್ ಸಬ್​ ಎಡಿಟರ್ ಆಗಿ ಕಳೆದ ಒಂದೂವರೆ ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಆಸಕ್ತಿಕರ ಕ್ಷೇತ್ರ ಟ್ರೆಕಿಂಗ್, ಸಂಗೀತ

Read More
Follow Us