AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಹಿಳೆಗೆ ಶಸ್ತ್ರ ಚಿಕಿತ್ಸೆ ಮಾಡಿದ ಸೆಕ್ಯೂರಿಟಿ ಗಾರ್ಡ್ ಅರೆಸ್ಟ್; ಸಾವಿನ ಹಿಂದಿನ ಅಸಲಿಯತ್ತು ಏನು?

ಆಕೆ ಸಾವಿಗೀಡಾಗಿರುವುದು ಶಸ್ತ್ರ ಚಿಕಿತ್ಸೆಯಿಂದಲೆ ಎಂಬುದನ್ನು ಖಚಿತಪಡಿಸಿಕೊಳ್ಳಲು ಮಹಿಳೆಯ ಶವವನ್ನು ಶವಪರೀಕ್ಷೆಗಾಗಿ ಇರಿಸಿಕೊಳ್ಳಲಾಗಿದೆ. ಸೆಕ್ಯೂರಿಟಿ ಗಾರ್ಡ್​ ಮೇಲೆ ಆರೋಪ ಕೇಳಿ ಬಂದಿದೆ. ಹಾಗೂ ಈತ ಪೊಲೀಸ್​ ಕಸ್ಟಡಿಯಲ್ಲಿದ್ದಾನೆ ಎಂದು ಪೊಲೀಸ್​ ವಕ್ತಾರರೋರ್ವರು ಮಾಹಿತಿ ಹಂಚಿಕೊಂಡಿದ್ದಾರೆ.

ಮಹಿಳೆಗೆ ಶಸ್ತ್ರ ಚಿಕಿತ್ಸೆ ಮಾಡಿದ ಸೆಕ್ಯೂರಿಟಿ ಗಾರ್ಡ್ ಅರೆಸ್ಟ್; ಸಾವಿನ ಹಿಂದಿನ ಅಸಲಿಯತ್ತು ಏನು?
ಮಹಿಳೆಗೆ ಶಸ್ತ್ರ ಚಿಕಿತ್ಸೆ ಮಾಡಿದ ಸೆಕ್ಯೂರಿಟಿ ಗಾರ್ಡ್ ಅರೆಸ್ಟ್
TV9 Web
| Edited By: |

Updated on:Jun 08, 2021 | 12:06 PM

Share

ಲಾಹೋರ್​: ಆಸ್ಪತ್ರೆಯ ಮಾಜಿ ಭದ್ರತಾ ಸಿಬ್ಬಂದಿ (ಸೆಕ್ಯುರಿಟಿ ಗಾರ್ಡ್​)​ ಚಿಕಿತ್ಸೆ ಪಡೆಯುತ್ತಿದ್ದ ಮಹಿಳೆಗೆ ಶಸ್ತ್ರ ಚಿಕಿತ್ಸೆ ಮಾಡಲು ಮುಂದಾಗಿದ್ದಾರೆ. ಇದರಿಂದ ಮಹಿಳೆ ಸಾವಿಗೀಡಾದ ಘಟನೆ ಪಾಕಿಸ್ತಾನದ ಆಸ್ಪತ್ರೆಯಲ್ಲಿ ನಡೆದಿದೆ. ವಿಚಾರಣೆ ಬಳಿಕ ಭದ್ರತಾ ಸಿಬ್ಬಂದಿಯನ್ನು ಬಂಧಿಸಲಾಗಿದೆ ಎಂದು ಪೊಲೀಸರು ಸೋಮವಾರ ತಿಳಿಸಿದ್ದಾರೆ. ಆರೋಪಿ ಮಹಮ್ಮದ್​ ವಹೀದ್​ ಬಟ್​ ಎಂಬುದು ತಿಳಿದು ಬಂದಿದೆ.

ತನ್ನ ಬೆನ್ನಿಗಾದ ಗಾಯಕ್ಕೆ ಚಿಕಿತ್ಸೆ ಪಡೆಯಲು ಮಹಿಳೆ ಲಾಹೋರ್​ನ ಸಾರ್ವಜನಿಕ ಆಸ್ಪತ್ರೆಯಲ್ಲಿ ದಾಖಲಾಗಿದ್ದರು. ಸೆಕ್ಯುರಿಟಿ ಗಾರ್ಡ್​ ಶಸ್ತ್ರ ಚಿಕಿತ್ಸೆ ನಡೆಸಿದ ಎರಡು ವಾರಗಳ ಬಳಿಕ 80 ವರ್ಷದ ಶಮೀಮಾ ಬೇಗಮ್​ ನಿಧನರಾಗಿದ್ದಾರೆ.

‘ಇದು ದೊಡ್ಡ ಆಸ್ಪತ್ರೆಯಾಗಿರುವುದರಿಂದ ಪ್ರತಿಯೊಬ್ಬ ವೈದ್ಯರು ಮತ್ತು ಎಲ್ಲಾ ಸಿಬ್ಬಂದಿಗಳು ಪ್ರತೀ ಸಮಯದಲ್ಲೂ ಏನು ಮಾಡುತ್ತಿದ್ದಾರೆ ಎಂಬುದನ್ನು ಗಮನದಲ್ಲಿಟ್ಟುಕೊಳ್ಳಲು ಆಗುವುದಿಲ್ಲ’ ಎಂದು ಲಾಹೋರ್​ನ ಮಾಯೊ ಆಸ್ಪತ್ರೆಯ ಆಡಳಿತ ಅಧಿಕಾರಿಯೊಬ್ಬರು ವಿವರಿಸಿದ್ದಾರೆ.

ಆಪರೇಟಿಂಗ್​ ಥಿಯೇಟರ್​ನಲ್ಲಿ ವಂಚಕರು ಯಾವ ರೀತಿ ಶಸ್ತ್ರ ಚಿಕಿತ್ಸೆ ನಡೆಸಿದ್ದಾರೆ ಎಂಬುದು ತಿಳಿದು ಬಂದಿಲ್ಲ. ಆದರೆ ಓರ್ವ ಅರ್ಹ ವೈದ್ಯರೂ ಇದ್ದರು ಎಂಬುದು ಬೆಳಕಿಗೆ ಬಂದಿದೆ.

ಆಕೆ ಸಾವಿಗೀಡಾಗಿರುವುದು ಶಸ್ತ್ರ ಚಿಕಿತ್ಸೆಯಿಂದಲೆ ಎಂಬುದನ್ನು ಖಚಿತಪಡಿಸಿಕೊಳ್ಳಲು ಮಹಿಳೆಯ ಶವವನ್ನು ಶವಪರೀಕ್ಷೆಗಾಗಿ ಇರಿಸಿಕೊಳ್ಳಲಾಗಿದೆ. ಸೆಕ್ಯೂರಿಟಿ ಗಾರ್ಡ್​ ಮೇಲೆ ಆರೋಪ ಕೇಳಿ ಬಂದಿದೆ. ಹಾಗೂ ಈತ ಪೊಲೀಸ್​ ಕಸ್ಟಡಿಯಲ್ಲಿದ್ದಾನೆ ಎಂದು ಪೊಲೀಸ್​ ವಕ್ತಾರರೋರ್ವರು ಮಾಹಿತಿ ಹಂಚಿಕೊಂಡಿದ್ದಾರೆ.

ಈ ಹಿಂದೆ ಸೆಕ್ಯುರಿಟಿ ಗಾರ್ಡ್​ ವೈದ್ಯರ ವೇಶ ಧರಿಸಿ ಪೋಸ್​ ನೀಡಿದ್ದರು. ಮತ್ತು ರೋಗಿಗಳ ಮನೆಗೆ ಭೇಟಿ ನೀಡಿದ್ದರು. ರೋಗಿಗಳಿಂದ ಹಣ ವಸೂಲಿ ಮಾಡಲು ಪ್ರತ್ನಿಸಿದ್ದಕ್ಕಾಗಿ ಎರಡು ವರ್ಷಗಳ ಹಿಂದೆ ಸೆಕ್ಯುರಿಟಿಯನ್ನು ಬಂಧಿಸಲಾಗುತ್ತು ಎಂದು ಮಾಯೊ ಆಸ್ಪತ್ರೆಯ ಸಿಬ್ಬಂದಿ ಹೇಳಿದ್ದಾರೆ.

ಇದನ್ನೂ ಓದಿ:

Coronavirus cases in India: ಎರಡು ತಿಂಗಳ ಅವಧಿಯಲ್ಲಿ ಮೊದಲ ಬಾರಿಗೆ 1 ಲಕ್ಷಕ್ಕಿಂತ ಕಡಿಮೆ ಹೊಸ ಕೊವಿಡ್ ಪ್ರಕರಣ, 2123 ಮಂದಿ ಸಾವು

ಪಶ್ಚಿಮಬಂಗಾಳದಲ್ಲಿ ಸಿಡಿಲು ದುರಂತಕ್ಕೆ 20 ಮಂದಿ ಸಾವು; ಮೃತರ ಕುಟುಂಬಗಳಿಗೆ ತಲಾ 2 ಲಕ್ಷ ರೂ.ಪರಿಹಾರ

Published On - 12:02 pm, Tue, 8 June 21

Follow Us
ದಕ್ಷಿಣ ಕನ್ನಡದಲ್ಲಿ ಭಾರಿ ಮಳೆ: ಶಾಲೆ, ಕಾಲೇಜುಗಳಿಗೆ ರಜೆ
ದಕ್ಷಿಣ ಕನ್ನಡದಲ್ಲಿ ಭಾರಿ ಮಳೆ: ಶಾಲೆ, ಕಾಲೇಜುಗಳಿಗೆ ರಜೆ
ಮೇಷಕ್ಕೆ ಹೂಡಿಕೆಯಲ್ಲಿ ಲಾಭ, ವೃಷಭಕ್ಕೆ ಉದ್ಯೋಗದಲ್ಲಿ ಸ್ಥಾನ ಪಲ್ಲಟದ ಯೋಗ
ಮೇಷಕ್ಕೆ ಹೂಡಿಕೆಯಲ್ಲಿ ಲಾಭ, ವೃಷಭಕ್ಕೆ ಉದ್ಯೋಗದಲ್ಲಿ ಸ್ಥಾನ ಪಲ್ಲಟದ ಯೋಗ
ಕುಮಾರ್ ಬಂಗಾರಪ್ಪ ಹೊಗಳಿಕೆ ಮಾತು ಕೇಳಿ ತಬ್ಬಿಕೊಂಡ ರಾಗಿಣಿ ದ್ವಿವೇದಿ
ಕುಮಾರ್ ಬಂಗಾರಪ್ಪ ಹೊಗಳಿಕೆ ಮಾತು ಕೇಳಿ ತಬ್ಬಿಕೊಂಡ ರಾಗಿಣಿ ದ್ವಿವೇದಿ
ಕೊಲೆ ಆರೋಪಿಗಳ ಪರೇಡ್; ಪೊಲೀಸರೆದುರೇ ಹಂತಕರಿಗೆ ಚಪ್ಪಲಿಯಲ್ಲಿ ಹೊಡೆದ ಮಹಿಳೆ
ಕೊಲೆ ಆರೋಪಿಗಳ ಪರೇಡ್; ಪೊಲೀಸರೆದುರೇ ಹಂತಕರಿಗೆ ಚಪ್ಪಲಿಯಲ್ಲಿ ಹೊಡೆದ ಮಹಿಳೆ
ನಟಿ ಪ್ರಿಯಾಂಕಾ ಉಪೇಂದ್ರ 50ನೇ ಸಿನಿಮಾ ‘ಡಿಟೆಕ್ಟಿವ್ ತೀಷ್ಣ’; ಏನಿದರ ಕಥೆ?
ನಟಿ ಪ್ರಿಯಾಂಕಾ ಉಪೇಂದ್ರ 50ನೇ ಸಿನಿಮಾ ‘ಡಿಟೆಕ್ಟಿವ್ ತೀಷ್ಣ’; ಏನಿದರ ಕಥೆ?
ಬಸ್ ಮೇಲೆ ಬಿದ್ದ ಬೃಹತ್ ಮರ; ಯುಕೆಜಿ ಬಾಲಕಿ ಚಿರನ್ವಿ ಸಾವು
ಬಸ್ ಮೇಲೆ ಬಿದ್ದ ಬೃಹತ್ ಮರ; ಯುಕೆಜಿ ಬಾಲಕಿ ಚಿರನ್ವಿ ಸಾವು
'ಮೊಟ್ಟೆ ಹೊಡೆಯುವ ಸಂಸ್ಕೃತಿ ಶುರು ಮಾಡಿದ್ದೇ ಬಿಜೆಪಿಯವರು': ಹರಿಪ್ರಸಾದ್
'ಮೊಟ್ಟೆ ಹೊಡೆಯುವ ಸಂಸ್ಕೃತಿ ಶುರು ಮಾಡಿದ್ದೇ ಬಿಜೆಪಿಯವರು': ಹರಿಪ್ರಸಾದ್
‘ಮುಂಗಾರು ಮಳೆ’, ‘ಕೆಜಿಎಫ್’ ಸಿನಿಮಾಗಳ ಸ್ಮರಿಸಿದ ತೆಲುಗು ನಟ: ವಿಡಿಯೋ
‘ಮುಂಗಾರು ಮಳೆ’, ‘ಕೆಜಿಎಫ್’ ಸಿನಿಮಾಗಳ ಸ್ಮರಿಸಿದ ತೆಲುಗು ನಟ: ವಿಡಿಯೋ
ಪತ್ನಿಗೆ ಗೃಹಲಕ್ಷ್ಮಿ ಹಣ ಬಂದಿಲ್ಲ: ಪತಿ ಏಕಾಂಗಿಯಾಗಿ ಪ್ರತಿಭಟನೆ
ಪತ್ನಿಗೆ ಗೃಹಲಕ್ಷ್ಮಿ ಹಣ ಬಂದಿಲ್ಲ: ಪತಿ ಏಕಾಂಗಿಯಾಗಿ ಪ್ರತಿಭಟನೆ
‘ಬಿಜೆಪಿಗರ ಮೇಲೆ ಮೊಟ್ಟೆ ಎಸೆತ ಪೂರ್ವ ನಿಯೋಜಿತ ಕೃತ್ಯ’ ಎಂದ ಆರ್​​ ಅಶೋಕ್
‘ಬಿಜೆಪಿಗರ ಮೇಲೆ ಮೊಟ್ಟೆ ಎಸೆತ ಪೂರ್ವ ನಿಯೋಜಿತ ಕೃತ್ಯ’ ಎಂದ ಆರ್​​ ಅಶೋಕ್