AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪಾಕ್​ ಸೇನಾ ಮುಖ್ಯಸ್ಥನ ರಾಜೀನಾಮೆಗೆ ಆಗ್ರಹಿಸಿದ ಕಂಪ್ಯೂಟರ್​ ಇಂಜಿನಿಯರ್​ಗೆ 5 ವರ್ಷ ಜೈಲು ಶಿಕ್ಷೆ; ಹೈಕೋರ್ಟ್​ ಮೆಟ್ಟಿಲೇರಿದ ಸೇನಾ ನಿವೃತ್ತ ಅಧಿಕಾರಿ

ಹಸನ್​ ಅಸ್ಕಾರಿ ಕಂಪ್ಯೂಟರ್​ ಇಂಜಿನಿಯರ್ ಆಗಿದ್ದು, ಕಳೆದ ವರ್ಷ ಸೆಪ್ಟೆಂಬರ್​​ನಲ್ಲಿ ಕಮರ್​ ಜಾವೇದ್​​ಗೆ ಪತ್ರ ಬರೆದಿದ್ದರು. ಆಡಳಿತ ಅವಧಿ ವಿಸ್ತರಣೆಯಾಗಿದ್ದನ್ನು ಕಟುವಾಗಿ ಟೀಕಿಸಿದ್ದಲ್ಲದೆ, ರಾಜೀನಾಮೆ ನೀಡಿ ಎಂದು ಆಗ್ರಹಿಸಿದ್ದರು. 

ಪಾಕ್​ ಸೇನಾ ಮುಖ್ಯಸ್ಥನ ರಾಜೀನಾಮೆಗೆ ಆಗ್ರಹಿಸಿದ ಕಂಪ್ಯೂಟರ್​ ಇಂಜಿನಿಯರ್​ಗೆ 5 ವರ್ಷ ಜೈಲು ಶಿಕ್ಷೆ; ಹೈಕೋರ್ಟ್​ ಮೆಟ್ಟಿಲೇರಿದ ಸೇನಾ ನಿವೃತ್ತ ಅಧಿಕಾರಿ
ಜನರಲ್​ ಕಮರ್​ ಜಾವೇದ್​ ಬಜ್ವಾ
TV9 Web
| Updated By: Lakshmi Hegde|

Updated on: Oct 30, 2021 | 3:45 PM

Share

ಕರಾಚಿ: ಪಾಕ್​ ಸೇನಾ ಮುಖ್ಯಸ್ಥ ಜನರಲ್​  ಕಮರ್ ಜಾವೇದ್ ಬಾಜ್ವಾ(General Qamar Javed Bajwa) ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿದ್ದ ಸೇನೆಯ ನಿವೃತ್ತ ಮೇಜರ್​ ಜನರಲ್​ವೊಬ್ಬರ ಪುತ್ರನಿಗೆ ಪಾಕಿಸ್ತಾನ ಮಿಲಿಟರಿ ನ್ಯಾಯಾಲಯ (Pakistan Military Court) ಐದು ವರ್ಷಗಳ ಕಾಲ ಜೈಲುಶಿಕ್ಷೆ ವಿಧಿಸಿದೆ. ನಿವೃತ್ತ ಮೇಜರ್​ ಜನರಲ್​ ಜಫರ್​ ಮೆಹ್ದಿ ಅಸ್ಕಾರಿ ಅವರ ಪುತ್ರ ಹಸನ್​ ಅಸ್ಕಾರಿ ಇದೀಗ ಜೈಲು ಶಿಕ್ಷೆಗೆ ಗುರಿಯಾದವರು. ಪಾಕಿಸ್ತಾನ ಸೇನಾ ಮುಖ್ಯಸ್ಥ ಕಮರ್​ ಜಾವೇದ್​​ ಬಾಜ್ವಾರ ಅಧಿಕಾರ ಅವಧಿ ವಿಸ್ತರಿಸಿದ್ದನ್ನು ಟೀಕಿಸಿ, ರಾಜೀನಾಮೆ ನೀಡುವಂತೆ ಆಗ್ರಹಿಸಿ ಅವರಿಗೇ ಪತ್ರ ಬರೆದಿದ್ದರು ಎಂದು ಬಿಬಿಸಿ ಉರ್ದು ಮಾಧ್ಯಮ ವರದಿ ಮಾಡಿದೆ.  

ಈ ಹಸನ್​ ಅಸ್ಕಾರಿ ಕಂಪ್ಯೂಟರ್​ ಇಂಜಿನಿಯರ್ ಆಗಿದ್ದು, ಕಳೆದ ವರ್ಷ ಸೆಪ್ಟೆಂಬರ್​​ನಲ್ಲಿ ಕಮರ್​ ಜಾವೇದ್​​ಗೆ ಪತ್ರ ಬರೆದಿದ್ದರು. ಆಡಳಿತ ಅವಧಿ ವಿಸ್ತರಣೆಯಾಗಿದ್ದನ್ನು ಕಟುವಾಗಿ ಟೀಕಿಸಿದ್ದಲ್ಲದೆ, ರಾಜೀನಾಮೆ ನೀಡಿ ಎಂದು ಆಗ್ರಹಿಸಿದ್ದರು.  ಜನವರಿಯಲ್ಲಿ  ಇಸ್ಲಮಾಬಾದ್​​ ಹೈಕೋರ್ಟ್​ ಈ ಪ್ರಕರಣದ ವಿಚಾರಣೆ ನಡೆಸಿತ್ತು. ಅದಾದ ಬಳಿಕ ಜುಲೈನಿಂದ ಪಾಕಿಸ್ತಾನ ಮಿಲಿಟರಿ ಕೋರ್ಟ್​ ವಿಚಾರಣೆ ಕೈಗೆತ್ತಿಕೊಂಡಿದೆ. ಜುಲೈನಲ್ಲಿ ನಡೆದ ವಿಚಾರಣೆ ವೇಳೆ ಪಾಕಿಸ್ತಾನ ಸೇನಾ ನ್ಯಾಯಾಲಯದಲ್ಲಿ ಅಧಿಕಾರಿಯೊಬ್ಬರು ಹಸನ್​ ಅಸ್ಕಾರಿಯನ್ನು ಪ್ರತಿನಿಧಿಸಿದ್ದರು. ಸಾಹಿವಾಲ್​​ನ ಉನ್ನತ ಭದ್ರತೆಯುಳ್ಳ ಜೈಲಿನಲ್ಲಿ ತನ್ನ ಮಗನನ್ನು ಇಟ್ಟಿದ್ದರಿಂದ, ಆತನನ್ನು ಭೇಟಿಯಾಗಲು ತುಂಬ ಕಷ್ಟಪಡುತ್ತಿದ್ದೇನೆ ಎಂದು ಇದೇ ವೇಳೆ ಅಸ್ಕಾರಿ ತಂದೆ ಕೋರ್ಟ್​​ನಲ್ಲಿ ಹೇಳಿಕೊಂಡಿದ್ದರು.

ಸದ್ಯ ಇದನ್ನೊಂದು ದೇಶದ್ರೋಹ ಪ್ರಕರಣವೆಂದು ಪರಿಗಣಿಸಿ ಸೇನಾ ಕೋರ್ಟ್​ ಆದೇಶ ನೀಡಿದೆ. ಈ ಆದೇಶದ ವಿರುದ್ಧ ಲಾಹೋರ್​ ಹೈಕೋರ್ಟ್​ನ ರಾವಲ್ಪಿಂಡಿ ಪೀಠಕ್ಕೆ ಹಸನ್​ ತಂದೆ ನಿವೃತ್ತ ಮೇಜರ್​ ಜನರಲ್​ ಜಫರ್​ ಮೆಹ್ದಿ ಅಸ್ಕಾರಿ ಅರ್ಜಿ ಸಲ್ಲಿಸಿದ್ದಾರೆ. ತನ್ನ ಮಗನನ್ನು ವಿಚಾರಣೆ ನಡೆಸುವ ಸಂದರ್ಭದಲ್ಲಿ ಬೇಕಾದಂತೆ ವಕೀಲರ ನೇಮಕ ಮಾಡಿಕೊಳ್ಳಲೂ ನಮಗೆ ಅವಕಾಶ ಸಿಗಲಿಲ್ಲ ಎಂದು ಹೇಳಿದ್ದಾರೆ. ಅಷ್ಟೇ ಅಲ್ಲ, ತಮ್ಮ ಮಗನನ್ನು  ರಾವಲ್ಪಿಂಡಿಯ ಅಡಿಯಾಲಾ ಜೈಲಿಗೆ ಸ್ಥಳಾಂತರಿಸುವಂತೆ ಕೂಡ ಒತ್ತಾಯಿಸಿದ್ದಾರೆ.

ಇದನ್ನೂ ಓದಿ: Galaxy M52 5G: ಸ್ಯಾಮ್​ಸಂಗ್ ವೆಬ್​ಸೈಟ್​ನಲ್ಲಿ ದೀಪಾವಳಿಗೆ ಬಂಪರ್ ಆಫರ್: ಕೈಗೆಟಕುವ ದರದಲ್ಲಿ ಗ್ಯಾಲಕ್ಸಿ M52 5G

Puneeth Rajkumar: ‘ನಾನೂ ಅವರ ಕುಟುಂಬದವಳಾಗಿದ್ದೆ’: ಅಪ್ಪು ಅಂತಿಮ ನಮನದ ಬಳಿಕ ರಾಧಿಕಾ ಕುಮಾರಸ್ವಾಮಿ ಮಾತು

ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ