AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪಾಕ್​ ಸೇನಾ ಮುಖ್ಯಸ್ಥನ ರಾಜೀನಾಮೆಗೆ ಆಗ್ರಹಿಸಿದ ಕಂಪ್ಯೂಟರ್​ ಇಂಜಿನಿಯರ್​ಗೆ 5 ವರ್ಷ ಜೈಲು ಶಿಕ್ಷೆ; ಹೈಕೋರ್ಟ್​ ಮೆಟ್ಟಿಲೇರಿದ ಸೇನಾ ನಿವೃತ್ತ ಅಧಿಕಾರಿ

ಹಸನ್​ ಅಸ್ಕಾರಿ ಕಂಪ್ಯೂಟರ್​ ಇಂಜಿನಿಯರ್ ಆಗಿದ್ದು, ಕಳೆದ ವರ್ಷ ಸೆಪ್ಟೆಂಬರ್​​ನಲ್ಲಿ ಕಮರ್​ ಜಾವೇದ್​​ಗೆ ಪತ್ರ ಬರೆದಿದ್ದರು. ಆಡಳಿತ ಅವಧಿ ವಿಸ್ತರಣೆಯಾಗಿದ್ದನ್ನು ಕಟುವಾಗಿ ಟೀಕಿಸಿದ್ದಲ್ಲದೆ, ರಾಜೀನಾಮೆ ನೀಡಿ ಎಂದು ಆಗ್ರಹಿಸಿದ್ದರು. 

ಪಾಕ್​ ಸೇನಾ ಮುಖ್ಯಸ್ಥನ ರಾಜೀನಾಮೆಗೆ ಆಗ್ರಹಿಸಿದ ಕಂಪ್ಯೂಟರ್​ ಇಂಜಿನಿಯರ್​ಗೆ 5 ವರ್ಷ ಜೈಲು ಶಿಕ್ಷೆ; ಹೈಕೋರ್ಟ್​ ಮೆಟ್ಟಿಲೇರಿದ ಸೇನಾ ನಿವೃತ್ತ ಅಧಿಕಾರಿ
ಜನರಲ್​ ಕಮರ್​ ಜಾವೇದ್​ ಬಜ್ವಾ
TV9 Web
| Edited By: |

Updated on: Oct 30, 2021 | 3:45 PM

Share

ಕರಾಚಿ: ಪಾಕ್​ ಸೇನಾ ಮುಖ್ಯಸ್ಥ ಜನರಲ್​  ಕಮರ್ ಜಾವೇದ್ ಬಾಜ್ವಾ(General Qamar Javed Bajwa) ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿದ್ದ ಸೇನೆಯ ನಿವೃತ್ತ ಮೇಜರ್​ ಜನರಲ್​ವೊಬ್ಬರ ಪುತ್ರನಿಗೆ ಪಾಕಿಸ್ತಾನ ಮಿಲಿಟರಿ ನ್ಯಾಯಾಲಯ (Pakistan Military Court) ಐದು ವರ್ಷಗಳ ಕಾಲ ಜೈಲುಶಿಕ್ಷೆ ವಿಧಿಸಿದೆ. ನಿವೃತ್ತ ಮೇಜರ್​ ಜನರಲ್​ ಜಫರ್​ ಮೆಹ್ದಿ ಅಸ್ಕಾರಿ ಅವರ ಪುತ್ರ ಹಸನ್​ ಅಸ್ಕಾರಿ ಇದೀಗ ಜೈಲು ಶಿಕ್ಷೆಗೆ ಗುರಿಯಾದವರು. ಪಾಕಿಸ್ತಾನ ಸೇನಾ ಮುಖ್ಯಸ್ಥ ಕಮರ್​ ಜಾವೇದ್​​ ಬಾಜ್ವಾರ ಅಧಿಕಾರ ಅವಧಿ ವಿಸ್ತರಿಸಿದ್ದನ್ನು ಟೀಕಿಸಿ, ರಾಜೀನಾಮೆ ನೀಡುವಂತೆ ಆಗ್ರಹಿಸಿ ಅವರಿಗೇ ಪತ್ರ ಬರೆದಿದ್ದರು ಎಂದು ಬಿಬಿಸಿ ಉರ್ದು ಮಾಧ್ಯಮ ವರದಿ ಮಾಡಿದೆ.  

ಈ ಹಸನ್​ ಅಸ್ಕಾರಿ ಕಂಪ್ಯೂಟರ್​ ಇಂಜಿನಿಯರ್ ಆಗಿದ್ದು, ಕಳೆದ ವರ್ಷ ಸೆಪ್ಟೆಂಬರ್​​ನಲ್ಲಿ ಕಮರ್​ ಜಾವೇದ್​​ಗೆ ಪತ್ರ ಬರೆದಿದ್ದರು. ಆಡಳಿತ ಅವಧಿ ವಿಸ್ತರಣೆಯಾಗಿದ್ದನ್ನು ಕಟುವಾಗಿ ಟೀಕಿಸಿದ್ದಲ್ಲದೆ, ರಾಜೀನಾಮೆ ನೀಡಿ ಎಂದು ಆಗ್ರಹಿಸಿದ್ದರು.  ಜನವರಿಯಲ್ಲಿ  ಇಸ್ಲಮಾಬಾದ್​​ ಹೈಕೋರ್ಟ್​ ಈ ಪ್ರಕರಣದ ವಿಚಾರಣೆ ನಡೆಸಿತ್ತು. ಅದಾದ ಬಳಿಕ ಜುಲೈನಿಂದ ಪಾಕಿಸ್ತಾನ ಮಿಲಿಟರಿ ಕೋರ್ಟ್​ ವಿಚಾರಣೆ ಕೈಗೆತ್ತಿಕೊಂಡಿದೆ. ಜುಲೈನಲ್ಲಿ ನಡೆದ ವಿಚಾರಣೆ ವೇಳೆ ಪಾಕಿಸ್ತಾನ ಸೇನಾ ನ್ಯಾಯಾಲಯದಲ್ಲಿ ಅಧಿಕಾರಿಯೊಬ್ಬರು ಹಸನ್​ ಅಸ್ಕಾರಿಯನ್ನು ಪ್ರತಿನಿಧಿಸಿದ್ದರು. ಸಾಹಿವಾಲ್​​ನ ಉನ್ನತ ಭದ್ರತೆಯುಳ್ಳ ಜೈಲಿನಲ್ಲಿ ತನ್ನ ಮಗನನ್ನು ಇಟ್ಟಿದ್ದರಿಂದ, ಆತನನ್ನು ಭೇಟಿಯಾಗಲು ತುಂಬ ಕಷ್ಟಪಡುತ್ತಿದ್ದೇನೆ ಎಂದು ಇದೇ ವೇಳೆ ಅಸ್ಕಾರಿ ತಂದೆ ಕೋರ್ಟ್​​ನಲ್ಲಿ ಹೇಳಿಕೊಂಡಿದ್ದರು.

ಸದ್ಯ ಇದನ್ನೊಂದು ದೇಶದ್ರೋಹ ಪ್ರಕರಣವೆಂದು ಪರಿಗಣಿಸಿ ಸೇನಾ ಕೋರ್ಟ್​ ಆದೇಶ ನೀಡಿದೆ. ಈ ಆದೇಶದ ವಿರುದ್ಧ ಲಾಹೋರ್​ ಹೈಕೋರ್ಟ್​ನ ರಾವಲ್ಪಿಂಡಿ ಪೀಠಕ್ಕೆ ಹಸನ್​ ತಂದೆ ನಿವೃತ್ತ ಮೇಜರ್​ ಜನರಲ್​ ಜಫರ್​ ಮೆಹ್ದಿ ಅಸ್ಕಾರಿ ಅರ್ಜಿ ಸಲ್ಲಿಸಿದ್ದಾರೆ. ತನ್ನ ಮಗನನ್ನು ವಿಚಾರಣೆ ನಡೆಸುವ ಸಂದರ್ಭದಲ್ಲಿ ಬೇಕಾದಂತೆ ವಕೀಲರ ನೇಮಕ ಮಾಡಿಕೊಳ್ಳಲೂ ನಮಗೆ ಅವಕಾಶ ಸಿಗಲಿಲ್ಲ ಎಂದು ಹೇಳಿದ್ದಾರೆ. ಅಷ್ಟೇ ಅಲ್ಲ, ತಮ್ಮ ಮಗನನ್ನು  ರಾವಲ್ಪಿಂಡಿಯ ಅಡಿಯಾಲಾ ಜೈಲಿಗೆ ಸ್ಥಳಾಂತರಿಸುವಂತೆ ಕೂಡ ಒತ್ತಾಯಿಸಿದ್ದಾರೆ.

ಇದನ್ನೂ ಓದಿ: Galaxy M52 5G: ಸ್ಯಾಮ್​ಸಂಗ್ ವೆಬ್​ಸೈಟ್​ನಲ್ಲಿ ದೀಪಾವಳಿಗೆ ಬಂಪರ್ ಆಫರ್: ಕೈಗೆಟಕುವ ದರದಲ್ಲಿ ಗ್ಯಾಲಕ್ಸಿ M52 5G

Puneeth Rajkumar: ‘ನಾನೂ ಅವರ ಕುಟುಂಬದವಳಾಗಿದ್ದೆ’: ಅಪ್ಪು ಅಂತಿಮ ನಮನದ ಬಳಿಕ ರಾಧಿಕಾ ಕುಮಾರಸ್ವಾಮಿ ಮಾತು

Follow Us
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ
ಸಚಿವ ಮುನಿಯಪ್ಪ ಮೇಲೆ ಕೆಪಿಸಿಸಿ ವಕ್ತಾರ ಲಕ್ಷ್ಮಣ್​​ ಗರಂ!
ಸಚಿವ ಮುನಿಯಪ್ಪ ಮೇಲೆ ಕೆಪಿಸಿಸಿ ವಕ್ತಾರ ಲಕ್ಷ್ಮಣ್​​ ಗರಂ!
ಟಾರ್ಗೆಟ್ ಮುಗಿಸಿದ ಖುಷಿಯಲ್ಲಿ ಎಲ್ಲ ಉದ್ಯೋಗಿಗಳಿಗೆ 4 ದಿನಗಳ ಗೋವಾ ಪ್ರವಾಸ
ಟಾರ್ಗೆಟ್ ಮುಗಿಸಿದ ಖುಷಿಯಲ್ಲಿ ಎಲ್ಲ ಉದ್ಯೋಗಿಗಳಿಗೆ 4 ದಿನಗಳ ಗೋವಾ ಪ್ರವಾಸ
ಬುರ್ಖಾ ಧರಿಸಿ ಬಂದವಳಿಂದ ಲಕ್ಷಾಂತರ ಮೌಲ್ಯದ ಚಿನ್ನದ ಸರ ಲೂಟಿ
ಬುರ್ಖಾ ಧರಿಸಿ ಬಂದವಳಿಂದ ಲಕ್ಷಾಂತರ ಮೌಲ್ಯದ ಚಿನ್ನದ ಸರ ಲೂಟಿ
ಹುಬ್ಬಳ್ಳಿಯಲ್ಲಿ ಮತ್ತೊಂದು ಲವ್ ಜಿಹಾದ್: ಯುವತಿಯನ್ನ ಮತಾಂತರಕ್ಕೆ ಯತ್ನ
ಹುಬ್ಬಳ್ಳಿಯಲ್ಲಿ ಮತ್ತೊಂದು ಲವ್ ಜಿಹಾದ್: ಯುವತಿಯನ್ನ ಮತಾಂತರಕ್ಕೆ ಯತ್ನ
ಕಸ ಗುಡಿಸುತ್ತಿದ್ದ ಮಹಿಳೆ ಮೇಲೆ ಹರಿದ ಕಾನ್ಸ್​ಟೇಬಲ್​ ಕಾರು
ಕಸ ಗುಡಿಸುತ್ತಿದ್ದ ಮಹಿಳೆ ಮೇಲೆ ಹರಿದ ಕಾನ್ಸ್​ಟೇಬಲ್​ ಕಾರು
ವಿದ್ಯುತ್ ಚಾಲಿತ ವಾಹನಗಳಿಗೂ ತೆರಿಗೆ​​: ಸರ್ಕಾರದ ನಿರ್ಧಾರಕ್ಕೆ ಜೋಶಿ ಕಿಡಿ
ವಿದ್ಯುತ್ ಚಾಲಿತ ವಾಹನಗಳಿಗೂ ತೆರಿಗೆ​​: ಸರ್ಕಾರದ ನಿರ್ಧಾರಕ್ಕೆ ಜೋಶಿ ಕಿಡಿ