AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Pakistan Bomb Blast: ಪಾಕ್​ನಲ್ಲಿ ನಮಾಜ್ ವೇಳೆ ಸ್ಫೋಟ: ಭಾರತ, ಇಸ್ರೇಲ್​ನಲ್ಲಿ ಪ್ರಾರ್ಥನೆ ಸಮಯದಲ್ಲಿ ಎಂದೂ ದಾಳಿ ನಡೆದಿಲ್ಲ: ಪಾಕ್ ಸಚಿವ

ಭಾರತ, ಇಸ್ರೇಲ್​ ಎಲ್ಲಿಯೂ ಪ್ರಾರ್ಥನೆ ವೇಳೆ ದಾಳಿ ನಡೆದಿಲ್ಲ ಆದರೆ ಪಾಕಿಸ್ತಾನದಲ್ಲಿ ನಡೆದಿದೆ ಎಂದು ಪಾಕಿಸ್ತಾನದ ರಕ್ಷಣಾ ಸಚಿವ ಖ್ವಾಜಾ ಆಸಿಫ್ ಹೇಳಿದ್ದಾರೆ.

Pakistan Bomb Blast: ಪಾಕ್​ನಲ್ಲಿ ನಮಾಜ್ ವೇಳೆ ಸ್ಫೋಟ: ಭಾರತ, ಇಸ್ರೇಲ್​ನಲ್ಲಿ ಪ್ರಾರ್ಥನೆ ಸಮಯದಲ್ಲಿ ಎಂದೂ ದಾಳಿ ನಡೆದಿಲ್ಲ: ಪಾಕ್ ಸಚಿವ
ಪಾಕಿಸ್ತಾನ ರಕ್ಷಣಾ ಸಚಿವ ಖ್ವಾಜಾ ಆಸಿಫ್Image Credit source: NDTV
Follow us
ನಯನಾ ರಾಜೀವ್
|

Updated on:Feb 01, 2023 | 8:45 AM

ಭಾರತ, ಇಸ್ರೇಲ್​ ಎಲ್ಲಿಯೂ ಪ್ರಾರ್ಥನೆ ವೇಳೆ ದಾಳಿ ನಡೆದಿಲ್ಲ ಆದರೆ ಪಾಕಿಸ್ತಾನದಲ್ಲಿ ನಡೆದಿದೆ ಎಂದು ಪಾಕಿಸ್ತಾನದ ರಕ್ಷಣಾ ಸಚಿವ ಖ್ವಾಜಾ ಆಸಿಫ್ ಹೇಳಿದ್ದಾರೆ. ಜನವರಿ 30 ರಂದು ಪೇಶಾವರದ ಮಸೀದಿಯೊಂದರಲ್ಲಿ ನಡೆದ ಮಾರಣಾಂತಿಕ ಆತ್ಮಾಹುತಿ ಬಾಂಬ್ ದಾಳಿಗೆ ಸಂಬಂಧಿಸಿದಂತೆ ಪಾಕಿಸ್ತಾನದ ರಕ್ಷಣಾ ಸಚಿವ ಖ್ವಾಜಾ ಆಸಿಫ್ ಮಾತನಾಡಿದ್ದಾರೆ.  ರಾಷ್ಟ್ರೀಯ ಅಸೆಂಬ್ಲಿಯಲ್ಲಿ ನಡೆದ ದಾಳಿಯ ಕುರಿತು ಮಾತನಾಡಿದ ಆಸಿಫ್, ಭಾರತದಲ್ಲಿ ಅಥವಾ ಇಸ್ರೇಲ್‌ನಲ್ಲಿ ಪ್ರಾರ್ಥನೆಯ ಸಮಯದಲ್ಲಿ ಭಕ್ತರನ್ನು ಹತ್ಯೆಮಾಡಲಾಗಿಲ್ಲ, ಆದರೆ ಇದು ಪಾಕಿಸ್ತಾನದಲ್ಲಿ ನಡೆದಿದೆ ಎಂದು ಹೇಳಿದರು.

ಜನವರಿ 30 ರಂದು ಮಸೀದಿಯಲ್ಲಿ ಪ್ರಾರ್ಥನೆ ವೇಳೆ ಆತ್ಮಾಹುತಿ ದಾಳಿಯಲ್ಲಿ ಸತ್ತವರ ಸಂಖ್ಯೆ 100 ಕ್ಕೆ ಏರಿದೆ ಮತ್ತು 200 ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ. ಭದ್ರತಾ ಅಧಿಕಾರಿಗಳ ಪ್ರಕಾರ, ದಾಳಿಕೋರನು ಸೋಮವಾರ ಮಧ್ಯಾಹ್ನದ ಪ್ರಾರ್ಥನೆಯ ಸಮಯದಲ್ಲಿ ಮುಂದಿನ ಸಾಲಿನಲ್ಲಿದ್ದಾಗ ಸ್ಫೋಟಕಗಳನ್ನು ಸ್ಫೋಟಿಸಿದನು. ಸ್ಫೋಟದಿಂದಾಗಿ ಮಸೀದಿಯ ಮೇಲ್ಛಾವಣಿಯು ಕುಸಿದಿದೆ, ಇದರಿಂದಾಗಿ ಭಕ್ತರು ಅವಶೇಷಗಳ ಅಡಿಯಲ್ಲಿ ಹೂತುಹೋದರು.

2010-2017 ರ ಉಗ್ರಗಾಮಿ ಘಟನೆಗಳನ್ನು ನೆನಪಿಸಿಕೊಂಡ ಸಚಿವರು, ಈ ಹೋರಾಟವು ಪಿಪಿಪಿ ಅಧಿಕಾರಾವಧಿಯಲ್ಲಿ ಸ್ವಾತ್‌ನಿಂದ ಪ್ರಾರಂಭವಾಯಿತು ಮತ್ತು ಇದು ಪಿಎಂಎಲ್-ಎನ್‌ನ ಹಿಂದಿನ ಅಧಿಕಾರಾವಧಿಯಲ್ಲಿ ಕೊನೆಗೊಂಡಿತು ಮತ್ತು ಕರಾಚಿಯಿಂದ ಸ್ವಾತ್‌ವರೆಗೆ ದೇಶದಲ್ಲಿ ಶಾಂತಿ ಇದೆ.

ಪೇಶಾವರದಲ್ಲಿ ನಡೆದ ಉಗ್ರರ ದಾಳಿಯನ್ನು ಭಾರತ ಕೂಡ ತೀವ್ರವಾಗಿ ಖಂಡಿಸಿದೆ. ದಾಳಿಯಲ್ಲಿ ಮೃತಪಟ್ಟವರ ಕುಟುಂಬಗಳಿಗೆ ಭಾರತವು ತನ್ನ ಸಂತಾಪವನ್ನು ವ್ಯಕ್ತಪಡಿಸುತ್ತದೆ ಎಂದು ವಿದೇಶಾಂಗ ವ್ಯವಹಾರಗಳ ಸಚಿವಾಲಯದ ವಕ್ತಾರ ಅರಿಂದಮ್ ಬಾಗ್ಚಿ ಹೇಳಿದ್ದಾರೆ. ಜನವರಿ 30 ರಂದು ಬಾಂಬ್ ಸ್ಫೋಟದಲ್ಲಿ 100 ಜನರು ಸಾವನ್ನಪ್ಪಿದರು ಮತ್ತು 200 ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದರು.

ಅಂತಾರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 8:45 am, Wed, 1 February 23

ಮಹಿಳೆಯರು ಬಿಜೆಪಿ ಶಾಲು ಹೊದ್ದಿದ್ದರೆ ಭದ್ರತಾ ಲೋಪ ಗೊತ್ತಾಗುತಿತ್ತು: ಸಚಿವ
ಮಹಿಳೆಯರು ಬಿಜೆಪಿ ಶಾಲು ಹೊದ್ದಿದ್ದರೆ ಭದ್ರತಾ ಲೋಪ ಗೊತ್ತಾಗುತಿತ್ತು: ಸಚಿವ
ವ್ಯಾನಿಟಿ ಬ್ಯಾಗ್​ನಲ್ಲಿ ಚೂರಿ ಇರಲಿ: ಕಲ್ಲಡ್ಕ ಪ್ರಭಾಕರ ಭಟ್
ವ್ಯಾನಿಟಿ ಬ್ಯಾಗ್​ನಲ್ಲಿ ಚೂರಿ ಇರಲಿ: ಕಲ್ಲಡ್ಕ ಪ್ರಭಾಕರ ಭಟ್
ಸಿದ್ದರಾಮಯ್ಯ ಏನು ಮಾಡುತ್ತಾರೋ ಎಂಬ ಭಯವಂತೂ ಇದೆ: ನಾಡಗೌಡ
ಸಿದ್ದರಾಮಯ್ಯ ಏನು ಮಾಡುತ್ತಾರೋ ಎಂಬ ಭಯವಂತೂ ಇದೆ: ನಾಡಗೌಡ
ದೆವ್ವದ ಹಾಡಿಗೆ ಭಯಬಿದ್ದ ಸರಿಗಮಪ ಮನೋಜ್; ಇಲ್ಲಿದೆ ಫನ್ನಿ ವಿಡಿಯೋ
ದೆವ್ವದ ಹಾಡಿಗೆ ಭಯಬಿದ್ದ ಸರಿಗಮಪ ಮನೋಜ್; ಇಲ್ಲಿದೆ ಫನ್ನಿ ವಿಡಿಯೋ
ರಾಹುಲ್​ಗೆ ತಿರುಗೇಟು ನೀಡಲು ಪ್ಲ್ಯಾನ್ ರೂಪಿಸಿದ್ದ ವಿರಾಟ್ ಕೊಹ್ಲಿ
ರಾಹುಲ್​ಗೆ ತಿರುಗೇಟು ನೀಡಲು ಪ್ಲ್ಯಾನ್ ರೂಪಿಸಿದ್ದ ವಿರಾಟ್ ಕೊಹ್ಲಿ
14 ವರ್ಷದ ವೈಭವ್​ನ 11 ರಾಕೆಟ್ ಸಿಕ್ಸ್​ಗಳು: ವಿಡಿಯೋ ವೀಕ್ಷಿಸಿ
14 ವರ್ಷದ ವೈಭವ್​ನ 11 ರಾಕೆಟ್ ಸಿಕ್ಸ್​ಗಳು: ವಿಡಿಯೋ ವೀಕ್ಷಿಸಿ
VIDEO: ಅತ್ಯಂತ ಕೆಟ್ಟ ದಾಖಲೆ: ಒಂದೇ ಓವರ್​ನಲ್ಲಿ 30 ರನ್ ಚಚ್ಚಿದ ವೈಭವ್
VIDEO: ಅತ್ಯಂತ ಕೆಟ್ಟ ದಾಖಲೆ: ಒಂದೇ ಓವರ್​ನಲ್ಲಿ 30 ರನ್ ಚಚ್ಚಿದ ವೈಭವ್
ಬೆಂಗಳೂರು ವಿಮಾನ ನಿಲ್ದಾಣ ರಸ್ತೆಯಲ್ಲಿ ಸರಣಿ ಅಪಘಾತ, 4 ಕಾರುಗಳು ಜಖಂ
ಬೆಂಗಳೂರು ವಿಮಾನ ನಿಲ್ದಾಣ ರಸ್ತೆಯಲ್ಲಿ ಸರಣಿ ಅಪಘಾತ, 4 ಕಾರುಗಳು ಜಖಂ
ಸ್ತ್ರೀಯರು ಗರ್ಭಾವಸ್ಥೆಯಲ್ಲಿ ನೀತಿಕತೆಗಳನ್ನು ಯಾಕೆ ಕೇಳಬೇಕು?
ಸ್ತ್ರೀಯರು ಗರ್ಭಾವಸ್ಥೆಯಲ್ಲಿ ನೀತಿಕತೆಗಳನ್ನು ಯಾಕೆ ಕೇಳಬೇಕು?
ಮೇಷ ರಾಶಿಯವರಿಗಿಂದು ಐದು ರಾಶಿಗಳ ಶುಭ ಫಲ: ಉಳಿದ ರಾಶಿಗಳ ಫಲಾಫಲವೂ ಇಲ್ಲಿದೆ
ಮೇಷ ರಾಶಿಯವರಿಗಿಂದು ಐದು ರಾಶಿಗಳ ಶುಭ ಫಲ: ಉಳಿದ ರಾಶಿಗಳ ಫಲಾಫಲವೂ ಇಲ್ಲಿದೆ