AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪಾಕಿಸ್ತಾನಕ್ಕೆ ಪ್ರಧಾನಿ ಮೋದಿಯಂತಹ ನಾಯಕಬೇಕು: ಪಾಕಿಸ್ತಾನಿ ಉದ್ಯಮಿ

ಪ್ರಧಾನಿ ಮೋದಿ ಹಾಗೂ ಭಾರತದ ಅಭಿವೃದ್ಧಿ ಬಗ್ಗೆ ಪಾಕಿಸ್ತಾನಿ ಅಮೆರಿಕನ್ ಉದ್ಯಮಿ ಸಾಜಿದ್ ತರಾರ್ ಧಾನಿ ಅವರು ಮಾತನಾಡಿದ್ದಾರೆ. ಪ್ರಧಾನಿ ಮೋದಿಯಂತಹ ನಾಯಕ ನಮ್ಮ ದೇಶಕ್ಕೂ ಬೇಕು. ಪಾಕ್​​ನಲ್ಲಿರುವ ಅನೇಕ ಸಮಸ್ಯೆಗಳಿಗೆ ಮುಕ್ತಿ ಬೇಕಾಗಿದೆ. ಹಾಗಾಗಿ ಮೋದಿಯವರಂತಹ ಆಡಳಿತ ಬೇಕು ಎಂದು ಹೇಳಿದರು. 

ಪಾಕಿಸ್ತಾನಕ್ಕೆ ಪ್ರಧಾನಿ ಮೋದಿಯಂತಹ ನಾಯಕಬೇಕು: ಪಾಕಿಸ್ತಾನಿ ಉದ್ಯಮಿ
ಅಕ್ಷಯ್​ ಪಲ್ಲಮಜಲು​​
|

Updated on: May 15, 2024 | 10:32 AM

Share

ಪ್ರಧಾನಿ ನರೇಂದ್ರ ಮೋದಿಯವರನ್ನು (Narendra MOdi) ಈ ಹಿಂದೆ ಪಾಕಿಸ್ತಾನದ ಸಂಸತ್​​​ನಲ್ಲಿ ಹಾಡಿಹೊಗಳಲಾಗಿತ್ತು. ಇದೀಗ ಮೋದಿ ಅವರನ್ನು ಭಾರತವನ್ನು ಹೊಸ ಎತ್ತರಕ್ಕೆ ಕೊಂಡೊಯ್ದ ಪ್ರಬಲ ನಾಯಕ ಹಾಗೂ ಮೂರನೇ ಅವಧಿಗೆ ದೇಶದ ಪ್ರಧಾನಿಯಲಾಗಿದ್ದಾರೆ ಎಂದು ಪಾಕಿಸ್ತಾನಿ-ಅಮೆರಿಕನ್ ಉದ್ಯಮಿ ಸಾಜಿದ್ ತರಾರ್ ಹೇಳಿದ್ದಾರೆ. ಬಾಲ್ಟಿಮೋರ್ ಮೂಲದ ಪಾಕಿಸ್ತಾನಿ ಅಮೆರಿಕನ್ ಉದ್ಯಮಿ ಸಾಜಿದ್ ತರಾರ್ ಧಾನಿ ಮೋದಿ ಭಾರತಕ್ಕೆ ಮಾತ್ರವಲ್ಲ ಜಗತ್ತಿಗೆ ಒಳ್ಳೆಯದು ಪಾಕಿಸ್ತಾನಕ್ಕೂ ಅವರಂತಹ ನಾಯಕ ಸಿಗಲಿ ಎಂದು ಹೇಳಿದ್ದಾರೆ.

ಮೋದಿ ಅವರು ಗಮನಾರ್ಹ ನಾಯಕ. ಅವರು ಸಹಜ ನಾಯಕ. ಪಾಕಿಸ್ತಾನಕ್ಕೆ ಸಂಕಷ್ಟ ಬಂದಾಗ ಪ್ರಧಾನಿ ಮೋದಿ ಭೇಟಿ ನೀಡಿದ್ದಾರೆ. ಎಲ್ಲ ರಾಜಕೀಯ ಗೊಂದಲಗಳನ್ನು ಬಿಟ್ಟು ನಮ್ಮ ದೇಶದ ಜತೆಗೆ ಮಾತುಕತೆ ಮತ್ತು ವ್ಯಾಪಾರವನ್ನು ಪ್ರಾರಂಭಿಸುತ್ತಾರೆ ಎಂಬ ನಿರೀಕ್ಷೆ ಇದೆ ಎಂದು ಸಾಜಿದ್ ತರಾರ್ ಹೇಳಿದ್ದಾರೆ.

ಭಾರತಕ್ಕೆ ಶಾಂತಿಯುತವಾದ ಪಾಕಿಸ್ತಾನದ ಅಗತ್ಯ ಇದೆ ಎಂದು ಹೇಳಿದ್ದಾರೆ. ಪ್ರಧಾನಿ ಮೋದಿ ಅವರು ಮೂರನೇ ಭಾರಿ ಪ್ರಧಾನಿಯಾಗುವುದು ಖಂಡಿತ ಎಂದು ಹೇಳಿದ್ದಾರೆ. ಸಾಜಿದ್ ತರಾರ್ 1990ರ ದಶಕದಲ್ಲಿ USಗೆ ತೆರಳಿ, ಅಲ್ಲಿ ಪಾಕಿಸ್ತಾನಿ ಕಂಪನಿಯನ್ನು ಸ್ಥಾಪನೆ ಮಾಡಿ. ಹೆಸರು ಗಳಿಸಿದ್ದಾರೆ. ಭಾರತದಲ್ಲಿ 97 ಕೋಟಿ ಜನರು ತಮ್ಮ ಹಕ್ಕುಗಳನ್ನು ಚಲಾಯಿಸುತ್ತಿರುವುದು ಪವಾಡವಲ್ಲದೆ ಬೇರೇನೂ ಅಲ್ಲ, ಭಾರತವು ಅತಿದೊಡ್ಡ ಪ್ರಜಾಪ್ರಭುತ್ವ ರಾಷ್ಟ್ರವಾಗಿದೆ ಎಂದರು.

ಅನೇಕ ಸಂದರ್ಭದಲ್ಲಿ ಮೋದಿ ಅವರ ಜನಪ್ರಿಯತೆಯನ್ನು ನಾನು ಕಂಡಿದ್ದೇನೆ. ಭಾರತ ಈಗಾಗಲೇ ಅಭಿವೃದ್ಧಿಯಾಗಿದೆ. ಹಾಗೂ ಮುಂದಿನ ದಿನಗಳಲ್ಲಿ ಭಾರತದ ಪ್ರಜಾಪ್ರಭುತ್ವ ಜಗತ್ತಿನ ಜನರಿಗೆ ಮಾದರಿಯಾಗಲಿದ್ದಾರೆ ಎಂದರು. ಪಾಕಿಸ್ತಾನದ ಬಗ್ಗೆ ಸಾಜಿದ್ ತರಾರ್ ಅವರಲ್ಲಿ ಕೇಳಿದಾಗ ಪಾಕಿಸ್ತಾನ ಆರ್ಥಿಕ ಬಿಕ್ಕಟ್ಟಿನಲ್ಲಿದೆ. ದರ ಪರಿಣಾಮವಾಗಿ ಪಾಕ್ ಆಕ್ರಮಿತ ಕಾಶ್ಮೀರ (ಪಿಒಕೆ) ಸೇರಿದಂತೆ ದೇಶದ ಹಲವು ಭಾಗಗಳಲ್ಲಿ ಸಾಮಾಜಿಕ ಅಶಾಂತಿ ಉಂಟಾಗಿದೆ. ಹಣದುಬ್ಬರ ಹೆಚ್ಚಾಗಿದೆ. ಪೆಟ್ರೋಲ್ ಬೆಲೆ ಹೆಚ್ಚಾಗಿದೆ. ಐಎಂಎಫ್ ತೆರಿಗೆಗಳನ್ನು ಹೆಚ್ಚಿಸಲು ಬಯಸಿದೆ. ವಿದ್ಯುತ್ ವೆಚ್ಚ ಹೆಚ್ಚಾಗಿದೆ. ನಮಗೆ ರಫ್ತು ಮಾಡಲು ಸಾಧ್ಯವಾಗುತ್ತಿಲ್ಲ ಎಂದರು.

ಇದನ್ನೂ ಓದಿ: ಭಾರತ ಸೂಪರ್​​​ ಪವರ್​​ ಆಗುತ್ತಿದೆ, ನಾವು ಭಿಕ್ಷೆ ಬೇಡುತ್ತಿದ್ದೇವೆ, ಸಂಸತ್ತಿನಲ್ಲಿ ಗುಡುಗಿದ ಪಾಕ್​​​ ನಾಯಕ

ಪಿಒಕೆ ಜನರಿಗೆ ಆರ್ಥಿಕ ನೆರವು ನೀಡುವ ಪಾಕಿಸ್ತಾನದ ಪ್ರಧಾನಿಯ ನಿರ್ಧಾರವನ್ನು ಅವರು ಪ್ರಶ್ನಿಸಿದ್ದಾರೆ. ಹಣ ಎಲ್ಲಿಂದ ಬರಲಿದೆ? ಇದು IMF ನಿಂದ ಹೊಸ ನೆರವು ಪ್ಯಾಕೇಜ್​​​ಗೆ ಬೇಡಿಕೆ ಇಟ್ಟಿದೆ. ದುರದೃಷ್ಟವಶಾತ್, ತಳಮಟ್ಟದ ಸಮಸ್ಯೆಗಳನ್ನು ಪರಿಹರಿಸಲು ಪಾಕಿಸ್ತಾನ ಯಾವುದೇ ಕ್ರಮವನ್ನು ತೆಗೆದುಕೊಳ್ಳುತ್ತಿಲ್ಲ ಎಂದು ಹೇಳಿದರು. ರಫ್ತು ಹೆಚ್ಚಿಸುವುದು ಹೇಗೆ. ಭಯೋತ್ಪಾದನೆಯನ್ನು ನಿಯಂತ್ರಣಕ್ಕೆ ತರುವುದು ಮತ್ತು ಕಾನೂನು ಮತ್ತು ಸುವ್ಯವಸ್ಥೆಯನ್ನು ಸುಧಾರಿಸುವುದು ಹೇಗೆ. ಪ್ರಸ್ತುತ, ಪಾಕ್ ಆಕ್ರಮಿತ ಕಾಶ್ಮೀರದಲ್ಲಿ (ಪಿಒಕೆ) ಅಶಾಂತಿ ಇದೆ ಮತ್ತು ರಾಜಕೀಯ ಅಸ್ಥಿರತೆ ಇದೆ. ಈ ಎಲ್ಲಾ ಸಮಸ್ಯೆಗಳಿಂದ ನಮ್ಮನ್ನು ಮುಕ್ತಿಗೊಳಿಸುವ ನಾಯಕತ್ವ ಬೇಕು ಎಂದು ಹೇಳಿದರು.

ವಿದೇಶಿ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

ಟಿ20 ಕ್ರಿಕೆಟ್‌ನಲ್ಲಿ ವಿಕೆಟ್​ಗಳ ಶತಕ ಪೂರೈಸಿದ ಹಾರ್ದಿಕ್ ಪಾಂಡ್ಯ
ಟಿ20 ಕ್ರಿಕೆಟ್‌ನಲ್ಲಿ ವಿಕೆಟ್​ಗಳ ಶತಕ ಪೂರೈಸಿದ ಹಾರ್ದಿಕ್ ಪಾಂಡ್ಯ
ಶಾಮನೂರು ಶಿವಶಂಕರಪ್ಪನವರಿಗೆ ಏನಾಗಿತ್ತು?ಆಸ್ಪತ್ರೆ ಮುಖ್ಯಸ್ಥ ಹೇಳಿದ್ದಿಷ್ಟು
ಶಾಮನೂರು ಶಿವಶಂಕರಪ್ಪನವರಿಗೆ ಏನಾಗಿತ್ತು?ಆಸ್ಪತ್ರೆ ಮುಖ್ಯಸ್ಥ ಹೇಳಿದ್ದಿಷ್ಟು
‘ಮಾರ್ಕ್’-‘45’ ಒಂದೇ ದಿನ ಬಿಡುಗಡೆ: ಸುದೀಪ್ ಹೇಳಿದ್ದೇನು?
‘ಮಾರ್ಕ್’-‘45’ ಒಂದೇ ದಿನ ಬಿಡುಗಡೆ: ಸುದೀಪ್ ಹೇಳಿದ್ದೇನು?
ಬೌಲಿಂಗ್‌ನಲ್ಲಿ ಪಾಕ್ ನಾಯಕನ ವಿಕೆಟ್ ಎಗರಿಸಿದ ವೈಭವ್
ಬೌಲಿಂಗ್‌ನಲ್ಲಿ ಪಾಕ್ ನಾಯಕನ ವಿಕೆಟ್ ಎಗರಿಸಿದ ವೈಭವ್
ರಾಜಕೀಯಕ್ಕೆ ಬಂದ್ರೆ ಸ್ಟೈಲ್ ಆಗಿ ಬರ್ತೀನಿ: ಸುದೀಪ್
ರಾಜಕೀಯಕ್ಕೆ ಬಂದ್ರೆ ಸ್ಟೈಲ್ ಆಗಿ ಬರ್ತೀನಿ: ಸುದೀಪ್
ಬಿಬಿಎಲ್ ಚೊಚ್ಚಲ ಪಂದ್ಯದಲ್ಲಿ ಮುಗ್ಗರಿಸಿದ ಬಾಬರ್ ಆಝಂ
ಬಿಬಿಎಲ್ ಚೊಚ್ಚಲ ಪಂದ್ಯದಲ್ಲಿ ಮುಗ್ಗರಿಸಿದ ಬಾಬರ್ ಆಝಂ
ಶಿವಾಜಿ ಇಲ್ಲದಿದ್ದರೆ ಎಲ್ಲರ ಸುನ್ನತಿ ಆಗುತ್ತಿತ್ತು: ಯತ್ನಾಳ್
ಶಿವಾಜಿ ಇಲ್ಲದಿದ್ದರೆ ಎಲ್ಲರ ಸುನ್ನತಿ ಆಗುತ್ತಿತ್ತು: ಯತ್ನಾಳ್
ಪ್ರೀತಿಸಿ ಮೋಸ: ಪ್ರಿಯಕರನ ಮದ್ವೆಗೆ ನುಗ್ಗಿ ರಣಚಂಡಿ ಅವತಾರ ತಾಳಿದ ಪ್ರೇಯಿಸಿ
ಪ್ರೀತಿಸಿ ಮೋಸ: ಪ್ರಿಯಕರನ ಮದ್ವೆಗೆ ನುಗ್ಗಿ ರಣಚಂಡಿ ಅವತಾರ ತಾಳಿದ ಪ್ರೇಯಿಸಿ
ರಾತ್ರಿಯಾದ್ರೆ ಸಾಕು ಬೆಡ್ ರೂಂ ಬಳಿ ಸೈಕೋ ಪ್ರತ್ಯಕ್ಷ! ಬೇಸತ್ತ ವೈದ್ಯೆ
ರಾತ್ರಿಯಾದ್ರೆ ಸಾಕು ಬೆಡ್ ರೂಂ ಬಳಿ ಸೈಕೋ ಪ್ರತ್ಯಕ್ಷ! ಬೇಸತ್ತ ವೈದ್ಯೆ
ಕಾಮಚೇಷ್ಟೆ ಮಾಡ್ತಿದ್ದ ಸೈಕೋಪಾತ್​​​ಗೆ ಮಹಿಳೆಯರಿಂದ ಬಿಸಿ ಬಿಸಿ ಕಜ್ಜಾಯ!
ಕಾಮಚೇಷ್ಟೆ ಮಾಡ್ತಿದ್ದ ಸೈಕೋಪಾತ್​​​ಗೆ ಮಹಿಳೆಯರಿಂದ ಬಿಸಿ ಬಿಸಿ ಕಜ್ಜಾಯ!