AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಭಾರತ-ಅಫ್ಘಾನಿಸ್ತಾನ ಜಂಟಿ ಹೇಳಿಕೆಯಲ್ಲಿ ಕಾಶ್ಮೀರದ ಹೆಸರು ಉಲ್ಲೇಖಿಸಿದ್ದಕ್ಕೆ ಪಾಕಿಸ್ತಾನ ಆಕ್ಷೇಪ

ಭಯೋತ್ಪಾದನೆ ಕೇವಲ ಪಾಕಿಸ್ತಾನದ ಆಂತರಿಕ ಸಮಸ್ಯೆ ಎಂಬ ತಾಲಿಬಾನ್ ನಾಯಕ ಅಮೀರ್ ಖಾನ್ ಮುತ್ತಕಿ ಅವರ ಹೇಳಿಕೆಯನ್ನು ಪಾಕಿಸ್ತಾನ ಟೀಕಿಸಿದೆ. ಭಯೋತ್ಪಾದಕ ಅಂಶಗಳು ಅಫ್ಘಾನ್ ಮಣ್ಣಿನಿಂದ ಕಾರ್ಯನಿರ್ವಹಿಸುತ್ತವೆ ಎಂದು ಪಾಕಿಸ್ತಾನ ಹೇಳಿದೆ. ಪಾಕಿಸ್ತಾನ ಶಾಂತಿಯುತ, ಸ್ಥಿರ, ಪ್ರಾದೇಶಿಕವಾಗಿ ಸಂಪರ್ಕ ಹೊಂದಿದ ಮತ್ತು ಸಮೃದ್ಧ ಅಫ್ಘಾನಿಸ್ತಾನವನ್ನು ನೋಡಲು ಬಯಸುತ್ತದೆ ಎಂದು ಪಾಕ್ ಹೇಳಿದೆ.

ಭಾರತ-ಅಫ್ಘಾನಿಸ್ತಾನ ಜಂಟಿ ಹೇಳಿಕೆಯಲ್ಲಿ ಕಾಶ್ಮೀರದ ಹೆಸರು ಉಲ್ಲೇಖಿಸಿದ್ದಕ್ಕೆ ಪಾಕಿಸ್ತಾನ ಆಕ್ಷೇಪ
Jaishankar With Mawlawi Amir Khan Muttaqi
ಸುಷ್ಮಾ ಚಕ್ರೆ
|

Updated on: Oct 12, 2025 | 1:14 PM

Share

ಇಸ್ಲಾಮಾಬಾದ್, ಅಕ್ಟೋಬರ್ 12: ಭಾರತಕ್ಕೆ ಆಗಮಿಸಿರುವ ಅಫ್ಘಾನಿಸ್ತಾನದ (Afghanistan) ವಿದೇಶಾಂಗ ಸಚಿವ ಅಮೀರ್ ಖಾನ್ ಮುತ್ತಕಿ ಜೊತೆಗೆ ಭಾರತದ ವಿದೇಶಾಂಗ ಸಚಿವ ಎಸ್. ಜೈಶಂಕರ್ ಜಂಟಿ ಪತ್ರಿಕಾ ಹೇಳಿಕೆ ನೀಡಿದ್ದರು. ಈ ವೇಳೆ ಜಮ್ಮು ಮತ್ತು ಕಾಶ್ಮೀರವನ್ನು ಉಲ್ಲೇಖಿಸಿ ಭಾರತ ಮತ್ತು ಅಫ್ಘಾನಿಸ್ತಾನದ ಜಂಟಿ ಹೇಳಿಕೆ ನೀಡಿದ್ದಕ್ಕೆ ಕೆರಳಿದ ಪಾಕಿಸ್ತಾನ ತನ್ನ ಆಕ್ಷೇಪ ವ್ಯಕ್ತಪಡಿಸಿದೆ. ಈ ಬಗ್ಗೆ ಅಫ್ಘಾನ್ ರಾಯಭಾರಿಯನ್ನು ಕರೆಸಿ ತನ್ನ ಆಕ್ಷೇಪಣೆಗಳನ್ನು ತಿಳಿಸಿದೆ.

ಜಮ್ಮು ಮತ್ತು ಕಾಶ್ಮೀರವನ್ನು ಭಾರತದ ಅವಿಭಾಜ್ಯ ಅಂಗವೆಂದು ಉಲ್ಲೇಖಿಸಿರುವುದು ವಿಶ್ವಸಂಸ್ಥೆಯ ಭದ್ರತಾ ಮಂಡಳಿಯ (UNSC) ನಿರ್ಣಯದ ಸ್ಪಷ್ಟ ಉಲ್ಲಂಘನೆಯಾಗಿದೆ ಎಂದು ಪಾಕಿಸ್ತಾನದ ವಿದೇಶಾಂಗ ಕಚೇರಿ ತನ್ನ ಹೇಳಿಕೆಯಲ್ಲಿ ತಿಳಿಸಿದೆ.

ಇದನ್ನೂ ಓದಿ: ಅಫ್ಘಾನ್ ಗಡಿಯಲ್ಲಿ ಸೇಡಿನ ದಾಳಿ; ತಾಲಿಬಾನ್​​ನಿಂದ 12 ಪಾಕಿಸ್ತಾನಿ ಸೈನಿಕರ ಹತ್ಯೆ

ಭಯೋತ್ಪಾದನೆ ಪಾಕಿಸ್ತಾನದ ಆಂತರಿಕ ಸಮಸ್ಯೆ ಎಂಬ ಅಫ್ಘಾನ್ ವಿದೇಶಾಂಗ ಸಚಿವ ಅಮೀರ್ ಖಾನ್ ಮುತ್ತಕಿ ಅವರ ಹೇಳಿಕೆಗೂ ಪಾಕಿಸ್ತಾನ ಆಕ್ಷೇಪ ವ್ಯಕ್ತಪಡಿಸಿದೆ. ಪಾಕಿಸ್ತಾನ “ಶಾಂತಿಯುತ, ಸ್ಥಿರ, ಪ್ರಾದೇಶಿಕವಾಗಿ ಸಂಪರ್ಕ ಹೊಂದಿದ ಮತ್ತು ಸಮೃದ್ಧ ಅಫ್ಘಾನಿಸ್ತಾನವನ್ನು ನೋಡಲು ಬಯಸುತ್ತದೆ” ಎಂದು ಪಾಕ್ ಹೇಳಿದೆ.

ಇನ್ನಷ್ಟು ಅಂತಾರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ 

Follow Us
Sushma Chakre
Sushma Chakre

ಮೂಲತಃ ಮಲೆನಾಡ ಹೆಬ್ಬಾಗಿಲು ಶಿವಮೊಗ್ಗದವಳು. ಬೆಂಗಳೂರಿನಲ್ಲಿ ವಾಸ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದೇನೆ. 10 ವರ್ಷಗಳಿಂದ ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡ, ಟಿವಿ9 ಡಿಜಿಟಲ್ ವಿಭಾಗದಲ್ಲಿ ಕೆಲಸ ಮಾಡಿದ ಅನುಭವವಿದೆ. ಸಾಹಿತ್ಯ, ಸಂಗೀತ, ಸಿನಿಮಾ, ಬರವಣಿಗೆಯಲ್ಲಿ ಆಸಕ್ತಿ.

Read More
ಅತಾವುಲ್ಲಾ ಹತ್ಯೆ ಪ್ರಕರಣದ ಬಗ್ಗೆ ಸ್ಫೋಟಕ ಹೇಳಿಕೆ ನೀಡಿದ ಪೊಲೀಸರು
ಅತಾವುಲ್ಲಾ ಹತ್ಯೆ ಪ್ರಕರಣದ ಬಗ್ಗೆ ಸ್ಫೋಟಕ ಹೇಳಿಕೆ ನೀಡಿದ ಪೊಲೀಸರು
34 ರನ್​ಗಳಿದ್ದಾಗ ಕ್ಯಾಚ್ ಬಿಟ್ಟ ಸಿರಾಜ್; 93 ರನ್ ಚಚ್ಚಿದ ಅಲೆನ್
34 ರನ್​ಗಳಿದ್ದಾಗ ಕ್ಯಾಚ್ ಬಿಟ್ಟ ಸಿರಾಜ್; 93 ರನ್ ಚಚ್ಚಿದ ಅಲೆನ್
9 ಗಂಟೆ ಕಾರ್ಯಾಚರಣೆ ಬಳಿಕ ಬೋರ್​​ವೆಲ್​ನಿಂದ 4 ವರ್ಷದ ಬಾಲಕನ ರಕ್ಷಣೆ!
9 ಗಂಟೆ ಕಾರ್ಯಾಚರಣೆ ಬಳಿಕ ಬೋರ್​​ವೆಲ್​ನಿಂದ 4 ವರ್ಷದ ಬಾಲಕನ ರಕ್ಷಣೆ!
ಬಿಸಿಸಿಐನ ರೋಬೋ ಶ್ವಾನ ಚಂಪಕ್ ಮೇಲೆ ಕೊಹ್ಲಿ ಅಸಮಾಧಾನ
ಬಿಸಿಸಿಐನ ರೋಬೋ ಶ್ವಾನ ಚಂಪಕ್ ಮೇಲೆ ಕೊಹ್ಲಿ ಅಸಮಾಧಾನ
ಲಕ್ಕುಂಡಿಯಲ್ಲಿ ಪತ್ತೆಯಾಗಿದ್ದ ನಿಧಿ ಮೌಲ್ಯ 8 ಕೋಟಿ ರೂ
ಲಕ್ಕುಂಡಿಯಲ್ಲಿ ಪತ್ತೆಯಾಗಿದ್ದ ನಿಧಿ ಮೌಲ್ಯ 8 ಕೋಟಿ ರೂ
ತಮಿಳು ನಟ ಜಯಂ ರವಿ ಕಣ್ಣೀರು, ಆಕ್ರೋಶ: ಆಗಿದ್ದೇನು? ವಿಡಿಯೋ ನೋಡಿ
ತಮಿಳು ನಟ ಜಯಂ ರವಿ ಕಣ್ಣೀರು, ಆಕ್ರೋಶ: ಆಗಿದ್ದೇನು? ವಿಡಿಯೋ ನೋಡಿ
ಝಲ್ಮುರಿ ಇಲ್ಲಿಗೂ ತಲುಪಿತೇ? ಮೋದಿ ಪ್ರಶ್ನೆಗೆ ಭಾರತೀಯ ವಲಸಿಗರ ಕರತಾಡನ
ಝಲ್ಮುರಿ ಇಲ್ಲಿಗೂ ತಲುಪಿತೇ? ಮೋದಿ ಪ್ರಶ್ನೆಗೆ ಭಾರತೀಯ ವಲಸಿಗರ ಕರತಾಡನ
ಹಾವೇರಿ: ಸಿನಿಮೀಯ ಶೈಲಿಯಲ್ಲಿ ಕಳ್ಳತನ; ಲಕ್ಷಾಂತರ ಮೌಲ್ಯದ ಚಿನ್ನಾಭರಣ ಲೂಟಿ
ಹಾವೇರಿ: ಸಿನಿಮೀಯ ಶೈಲಿಯಲ್ಲಿ ಕಳ್ಳತನ; ಲಕ್ಷಾಂತರ ಮೌಲ್ಯದ ಚಿನ್ನಾಭರಣ ಲೂಟಿ
ಜೆ.ಪಿ. ಪಾರ್ಕ್ ಫ್ಲೈಓವರ್ ಕೆಳಗೆ ಕಸದ ರಾಶಿ! GBA ನಿದ್ದೆ ಜಾರಿದೆಯೇ?
ಜೆ.ಪಿ. ಪಾರ್ಕ್ ಫ್ಲೈಓವರ್ ಕೆಳಗೆ ಕಸದ ರಾಶಿ! GBA ನಿದ್ದೆ ಜಾರಿದೆಯೇ?
ಸಿದ್ದರಾಮಯ್ಯ ಬಿಟ್ರೆ CM ಆಗುವ ಅರ್ಹತೆ ಖರ್ಗೆಗೆ ಮಾತ್ರ: ರಾಯರೆಡ್ಡಿ
ಸಿದ್ದರಾಮಯ್ಯ ಬಿಟ್ರೆ CM ಆಗುವ ಅರ್ಹತೆ ಖರ್ಗೆಗೆ ಮಾತ್ರ: ರಾಯರೆಡ್ಡಿ