AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Iran vs Pak: ನಮ್ಮ ಪಾರ್ಟ್ನರ್ ತಂಟೆಗೆ ಬಂದರೆ ಸುಮ್ಮನಿರಲ್ಲ: ಇರಾನ್​ಗೆ ಪಾಕಿಸ್ತಾನ ಎಚ್ಚರಿಕೆ

Pakistan openly reminds Iran of its defence pact with Saudi Arabia: ಸೌದಿ ಅರೇಬಿಯಾ ಜೊತೆ ಪಾಕಿಸ್ತಾನ ದ್ವಿಪಕ್ಷೀಯ ರಕ್ಷಣಾ ಒಪ್ಪಂದ ಹೊಂದಿದೆ. ಇದು ಇಡೀ ಜಗತ್ತಿಗೇ ಗೊತ್ತು. ಇರಾನ್​ನ ಗಮನಕ್ಕೆ ಇದು ಇರಬೇಕು. ಅದರ ಮೇಲೆ ದಾಳಿ ಮಾಡಿದರೆ ನಾವು ಬರಬೇಕಾಗುತ್ತದೆ ಎಂದು ಇರಾನ್ ದೇಶಕ್ಕೆ ಪಾಕಿಸ್ತಾನ ಎಚ್ಚರಿಕೆ ಕೊಟ್ಟಿದೆ. ಹಾಗೆಯೇ, ಇರಾನ್​ನಲ್ಲಿ ಆಡಳಿತ ಬದಲಾವಣೆ ಮಾಡಿರುವುದು ಪಾಕಿಸ್ತಾನದ ಪತನಕ್ಕೆ ಇಸ್ರೇಲಿಗಳು ಮಾಡಿರುವ ಕುತಂತ್ರ ಎಂದು ಪಾಕಿಸ್ತಾನದ ಸಚಿವರೊಬ್ಬರು ಆಪಾದಿಸಿದ್ದಾರೆ.

Iran vs Pak: ನಮ್ಮ ಪಾರ್ಟ್ನರ್ ತಂಟೆಗೆ ಬಂದರೆ ಸುಮ್ಮನಿರಲ್ಲ: ಇರಾನ್​ಗೆ ಪಾಕಿಸ್ತಾನ ಎಚ್ಚರಿಕೆ
ಇಶಾಕ್ ದರ್
ಸುಗ್ಗನಹಳ್ಳಿ ವಿಜಯಸಾರಥಿ
|

Updated on: Mar 04, 2026 | 8:07 PM

Share

ಇಸ್ಲಾಮಾಬಾದ್, ಮಾರ್ಚ್ 4: ಸೌದಿ ಅರೇಬಿಯಾ ಮೇಲೆ ದಾಳಿ ಮಾಡಿದರೆ ನಾವು ಸುಮ್ಮನಿರಲ್ಲ ಎಂದು ಇರಾನ್​ಗೆ ಪಾಕಿಸ್ತಾನ ಎಚ್ಚರಿಕೆಯ ಸಂದೇಶ ರವಾನಿಸಿದೆ. ಸೌದಿ ಅರೇಬಿಯಾ ಜೊತೆ ಪಾಕಿಸ್ತಾನ ಮಿಲಿಟರಿ ಒಪ್ಪಂದ (Pakistan Saudi Arabia bilateral defence pact) ಹೊಂದಿದೆ. ಈ ಒಪ್ಪಂದದ ಪ್ರಕಾರ ಈ ಇಬ್ಬರಲ್ಲಿ ಯಾರ ಮೇಲೆ ಆಕ್ರಮಣವಾದರೂ ಮತ್ತೊಬ್ಬರು ನೆರವಿಗೆ ಧಾವಿಸಬೇಕು. ಈಗ ಸೌದಿ ಅರೇಬಿಯಾದ ಪ್ರಮುಖ ನಗರಗಳ ಮೇಲೆ ಇರಾನ್ ದಾಳಿ ಎಸಗುತ್ತಿರುವುದರಿಂದ ಪಾಕಿಸ್ತಾನವು ಒಪ್ಪಂದದ ಕಟ್ಟುಪಾಡುಗಳಿಗೆ ಒಳಗಾಗಬೇಕಾಗಬಹುದು. ಹೀಗಾಗಿ, ಇರಾನ್​ಗೆ ಪಾಕಿಸ್ತಾನ ಎಚ್ಚರಿಕೆ ಕೊಟ್ಟಿದೆ.

ಸೌದಿ ಅರೇಬಿಯಾ ಜೊತೆ ಪಾಕಿಸ್ತಾನ ದ್ವಿಪಕ್ಷೀಯ ರಕ್ಷಣಾ ಒಪ್ಪಂದ ಹೊಂದಿದೆ. ಇದು ಇಡೀ ವಿಶ್ವಕ್ಕೆ ಗೊತ್ತಿದೆ. ಒಪ್ಪಂದಕ್ಕೆ ಪಾಕಿಸ್ತಾನ ಕಟ್ಟುಬಿದ್ದಿದೆ. ಈ ಒಪ್ಪಂದವು ಇರಾನ್ ಗಮನಕ್ಕಿರಬೇಕು. ಇರಾನ್​ನ ನಾಯಕತ್ವ ಸ್ಥಾನದಲ್ಲಿರುವ ನಮ್ಮ ಸಹೋದರರಿಗೆ ಇದನ್ನು ನೆನಪಿಸಲು ಇಚ್ಛಿಸುತ್ತೇನೆ ಎಂದು ಪಾಕಿಸ್ತಾನದ ಉಪಪ್ರಧಾನಿ ಮತ್ತು ವಿದೇಶಾಂಗ ಸಚಿವ ಇಶಾಕ್ ದರ್ ಹೇಳಿದ್ದಾರೆ.

ಇದನ್ನೂ ಓದಿ: ಪಾಕಿಸ್ತಾನದ ಮೇಲಿನ ದ್ವೇಷದಿಂದ ಭಾರತ, ಇರಾನ್, ಅಫ್ಘಾನ್ ಒಂದಾಗಿ ಸಂಚು; ಖವಾಜಾ ಆಸಿಫ್ ಆರೋಪ

ಸೌದಿ ಅರೇಬಿಯಾದಲ್ಲಿ ಇಸ್ಲಾಮ್ ಧರ್ಮದ ಆತ್ಮ ಇದೆ. ಮೆಕ್ಕಾ ಮಸೀದಿ ಮತ್ತು ಮದೀನಾದಲ್ಲಿ ಪ್ರವಾದಿಗಳ ಮಸೀದಿ ಇರುವುದು ಸೌದಿಯಲ್ಲೇ. ಇಸ್ಲಾಮ್ ಧರ್ಮ ಹುಟ್ಟಿದ್ದೂ ಇಲ್ಲೇ. ತನಗೆ ಈ ಧಾರ್ಮಿಕ ಸ್ಥಳದ ರಕ್ಷಣೆಯೇ ಮೊದಲ ಆದ್ಯತೆ ಎಂದು ಪಾಕಿಸ್ತಾನ ಹೇಳಿಕೊಂಡಿದೆ. ಪ್ರತಿಯೊಂದು ವೇದಿಕೆಯಲ್ಲೂ, ಪ್ರತಿಯೊಂದು ಕ್ಷೇತ್ರದಲ್ಲೂ ಸೌದಿ ಅರೇಬಿಯಾಗೆ ಬೆಂಬಲವಾಗಿ ನಿಂತಿದ್ದೇವೆ ಎಂದೂ ಪಾಕಿಸ್ತಾನ ಹೇಳುತ್ತಿದೆ.

ಪಾಕಿಸ್ತಾನದ ವಿರುದ್ಧ ಭಾರತ, ಅಫ್ಗಾನ್ ಮತ್ತು ಇರಾನ್ ಅನ್ನು ಛೂಬಿಡುವ ಪಿತೂರಿ: ಖವಾಜ ಆಸಿಫ್

ಪಾಕಿಸ್ತಾನದ ರಕ್ಷಣಾ ಸಚಿವ ಖವಾಜ ಆಸಿಫ್ ಸ್ಫೋಟಕ ಆರೋಪವೊಂದನ್ನು ಮಾಡಿದ್ದಾರೆ. ಇರಾನ್​ನಲ್ಲಿ ಆಡಳಿತ ಬದಲಾವಣೆ ಮಾಡುತ್ತಿರುವುದು ಪಾಕಿಸ್ತಾನವನ್ನು ಸಾಮಂತ ನಾಡನ್ನಾಗಿ ಮಾಡಲು ಝಯೋನಿಸ್ಟರು (ಇಸ್ರೇಲಿಗರು) ಮಾಡಿರುವ ಪಿತೂರಿ ಎಂದು ಸಚಿವರು ಆಪಾದಿಸಿದ್ದಾರೆ.

ಇದನ್ನೂ ಓದಿ: ಹಾರ್ಮುಜ್ ಮಾರ್ಗದಲ್ಲಿ ಚೀನಾಗೆ ಮಾತ್ರ ಅವಕಾಶ ಎಂದ ಇರಾನ್; ಭಾರತಕ್ಕೆ ನಾವು ತೈಲ ಕೊಡುತ್ತೇವೆ ಎಂದ ರಷ್ಯಾ

ಇರಾನ್​ನಲ್ಲಿ ಆಡಳಿತ ಬದಲಾದರೆ ಇರಾನ್, ಅಫ್ಗಾನಿಸ್ತಾನ್ ಮತ್ತು ಭಾರತದ ಮೂಲಕ ಪಾಕಿಸ್ತಾನಕ್ಕೆ ತೊಂದರೆ ಕೊಡುವ ಸಂಚು ನಡೆದಿದೆ. ಪಾಕಿಸ್ತಾನದ 25 ಕೋಟಿ ಜನರು ಈ ವಿಚಾರವನ್ನು ಅರ್ಥ ಮಾಡಿಕೊಳ್ಳಬೇಕು. ಶತ್ರುಗಳ ಉದ್ದೇಶವನ್ನು ಅರ್ಥ ಮಾಡಿಕೊಳ್ಳಬೇಕು ಎಂದು ಆಸಿಫ್ ಖವಾಜ ಕರೆ ನೀಡಿದ್ದಾರೆ.

ಇನ್ನಷ್ಟು ಅಂತರರಾಷ್ಟ್ರೀಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Follow Us
ಸೂಕ್ತ ಸಮಯಕ್ಕೆ ಚಿಕಿತ್ಸೆ ಸಿಕ್ಕಿದ್ರೆ ನನ್ನ ತಮ್ಮ ಬದುಕುತ್ತಿದ್ದ
ಸೂಕ್ತ ಸಮಯಕ್ಕೆ ಚಿಕಿತ್ಸೆ ಸಿಕ್ಕಿದ್ರೆ ನನ್ನ ತಮ್ಮ ಬದುಕುತ್ತಿದ್ದ
ಚಲಿಸುತ್ತಿದ್ದ ಬಸ್​​ನಿಂದ ಬಿದ್ದು ವೃದ್ಧೆ ಸಾವು
ಚಲಿಸುತ್ತಿದ್ದ ಬಸ್​​ನಿಂದ ಬಿದ್ದು ವೃದ್ಧೆ ಸಾವು
ತಮಿಳುನಾಡು ಎಲೆಕ್ಷನ್‌ ಪ್ರಚಾರದ ವೇಳೆ ಕನ್ನಡದಲ್ಲಿ ಅಶೋಕ್‌ ಮತಬೇಟೆ
ತಮಿಳುನಾಡು ಎಲೆಕ್ಷನ್‌ ಪ್ರಚಾರದ ವೇಳೆ ಕನ್ನಡದಲ್ಲಿ ಅಶೋಕ್‌ ಮತಬೇಟೆ
ನೀವು ದಲಿತ ವಿರೋಧಿ: ಶಾಸಕರ ಭಾಷಣಕ್ಕೆ ವ್ಯಕ್ತಿಯೋರ್ವನಿಂದ ಅಡ್ಡಿ
ನೀವು ದಲಿತ ವಿರೋಧಿ: ಶಾಸಕರ ಭಾಷಣಕ್ಕೆ ವ್ಯಕ್ತಿಯೋರ್ವನಿಂದ ಅಡ್ಡಿ
ಅನುಷಾ ರೈ ಜೊತೆ ಮದುವೆ ಆಗ್ತೀರಾ? ಧರ್ಮ ಕೀರ್ತಿರಾಜ್ ನೇರ ಉತ್ತರ
ಅನುಷಾ ರೈ ಜೊತೆ ಮದುವೆ ಆಗ್ತೀರಾ? ಧರ್ಮ ಕೀರ್ತಿರಾಜ್ ನೇರ ಉತ್ತರ
ಬೆಂಗಳೂರು: ಮಗಳನ್ನು ಕೊಂದು ಬಳಿಕ ತಾಯಿ ಆತ್ಮಹತ್ಯೆ, ಕಾರಣವೇನು?
ಬೆಂಗಳೂರು: ಮಗಳನ್ನು ಕೊಂದು ಬಳಿಕ ತಾಯಿ ಆತ್ಮಹತ್ಯೆ, ಕಾರಣವೇನು?
ಬಿಹಾರದ ಮುಖ್ಯಮಂತ್ರಿಯಾಗಿ ಆಯ್ಕೆಯಾದ ಸಾಮ್ರಾಟ್ ಚೌಧರಿ ಹೇಳಿದ್ದೇನು?
ಬಿಹಾರದ ಮುಖ್ಯಮಂತ್ರಿಯಾಗಿ ಆಯ್ಕೆಯಾದ ಸಾಮ್ರಾಟ್ ಚೌಧರಿ ಹೇಳಿದ್ದೇನು?
‘ಕ್ಯಾಲೆಂಡರ್’ ಸಿನಿಮಾ ಬಗ್ಗೆ ಸುಷ್ಮಿತಾ ಮತ್ತು ನಿವಿಷ್ಕಾ ಮಾತು
‘ಕ್ಯಾಲೆಂಡರ್’ ಸಿನಿಮಾ ಬಗ್ಗೆ ಸುಷ್ಮಿತಾ ಮತ್ತು ನಿವಿಷ್ಕಾ ಮಾತು
ಜಮೀರ್‌ ಅಹಮ್ಮದ್ ತಲೆದಂಡ: ಕಾಂಗ್ರೆಸ್ ಒಳ ಗುಟ್ಟು ಬಿಚ್ಚಿಟ್ಟ ರೇಣುಕಾಚಾರ್ಯ
ಜಮೀರ್‌ ಅಹಮ್ಮದ್ ತಲೆದಂಡ: ಕಾಂಗ್ರೆಸ್ ಒಳ ಗುಟ್ಟು ಬಿಚ್ಚಿಟ್ಟ ರೇಣುಕಾಚಾರ್ಯ
ಡೆಹ್ರಾಡೂನ್‌ನ ಕಾಳಿ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ಪ್ರಧಾನಿ ಮೋದಿ
ಡೆಹ್ರಾಡೂನ್‌ನ ಕಾಳಿ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ಪ್ರಧಾನಿ ಮೋದಿ