AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕರ್ನಾಟಕ ಹಿಜಾಬ್​ ವಿವಾದದಲ್ಲಿ ಮೂಗು ತೂರಿಸಿದ ಪಾಕಿಸ್ತಾನ; ಭಾರತದಲ್ಲಿನ ಈ ಬೆಳವಣಿಗೆ ಸಚಿವರಿಗೆ ಭಯಹುಟ್ಟಿಸುತ್ತಿದೆಯಂತೆ !

ಮುಸ್ಲಿಮರನ್ನು ನಿರ್ಬಂಧಿಸಲು ಭಾರತ ಮಾಡುತ್ತಿರುವ ಇಂಥ ಪ್ರಯತ್ನಗಳನ್ನು ಜಗತ್ತು ಅರ್ಥ ಮಾಡಿಕೊಳ್ಳಬೇಕು ಎಂದು ಪಾಕ್ ವಿದೇಶಾಂಗ ಇಲಾಖೆ ಸಚಿವ ಶಾ ಮೊಹಮ್ಮದ್​ ಖುರೇಷಿ ಹೇಳಿದ್ದಾರೆ.

ಕರ್ನಾಟಕ ಹಿಜಾಬ್​ ವಿವಾದದಲ್ಲಿ ಮೂಗು ತೂರಿಸಿದ ಪಾಕಿಸ್ತಾನ; ಭಾರತದಲ್ಲಿನ ಈ ಬೆಳವಣಿಗೆ ಸಚಿವರಿಗೆ ಭಯಹುಟ್ಟಿಸುತ್ತಿದೆಯಂತೆ !
ಟ್ವೀಟ್ ಮಾಡಿರುವ ಇಬ್ಬರು ಸಚಿವರು
TV9 Web
| Edited By: |

Updated on:Feb 09, 2022 | 12:35 PM

Share

ಕರ್ನಾಟಕದಾದ್ಯಂತ ಕಾಲೇಜುಗಳಲ್ಲಿ ನಡೆಯುತ್ತಿರುವ ಹಿಜಾಬ್​-ಕೇಸರಿ ಶಾಲು (Hijab Row In Karnataka) ವಿವಾದಕ್ಕೆ ಪಾಕಿಸ್ತಾನದಿಂದ (Pakistan)ಪ್ರತಿಕ್ರಿಯೆ ವ್ಯಕ್ತವಾಗುತ್ತಿದೆ. ಹಿಜಾಬ್​ ಧರಿಸಿ ಹೋದ ಹೆಣ್ಣುಮಕ್ಕಳಿಗೆ ಕಾಲೇಜಿನ ಕ್ಲಾಸ್​​ರೂಮಿಗೆ ಪ್ರವೇಶ ನಿರಾಕರಿಸಿದ ಕ್ರಮವನ್ನು ಪಾಕ್​​ನ ಇಮ್ರಾನ್ ಖಾನ್​​ ಸರ್ಕಾರದ ಇಬ್ಬರು ಸಚಿವರು ಟ್ವೀಟ್​ ಮೂಲಕ ಖಂಡಿಸಿದ್ದಾರೆ.  ಪಾಕಿಸ್ತಾನದ ಹೆಣ್ಣು ಮಕ್ಕಳ ಶಿಕ್ಷಣ ಹೋರಾಟಗಾರ್ತಿ ಮಲಾಲಾ ಯೂಸುಫ್​​ಝಾಯ್​ ಕೂಡ ಕರ್ನಾಟಕ ಹಿಜಾಬ್​ ವಿವಾದದ ಬಗ್ಗೆ ಟ್ವೀಟ್​ ಮಾಡಿ, ಹೆಣ್ಣುಮಕ್ಕಳ ಶಿಕ್ಷಣಕ್ಕೆ ಹಿಜಾಬ್ (Hijab)​ ಅಡ್ಡಿಯಾಗುತ್ತಿರುವುದು ಭಯಾನಕ ಎಂದಿದ್ದಾರೆ. ಹಾಗೇ ಇಮ್ರಾನ್ ಖಾನ್​ ಸರ್ಕಾರದಲ್ಲಿ ಮಾಹಿತಿ ಇಲಾಖೆ ಸಚಿವರಾಗಿರುವ ಫಾವದ್​ ಚೌಧರಿ ಮತ್ತು ವಿದೇಶಾಂಗ ಇಲಾಖೆ ಸಚಿವ ಶಾ ಮೊಹಮ್ಮದ್​ ಖುರೇಷಿ ಟ್ವೀಟ್ ಮಾಡಿ, ಹಿಜಾಬ್​ ವಿವಾದದ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದ್ದಾರೆ.  ಭಾರತದಲ್ಲಿ ಆಗುತ್ತಿರುವ ಬೆಳವಣಿಗೆ ನಿಜಕ್ಕೂ ಭಯ ಹುಟ್ಟಿಸುವಂತಿದೆ ಎಂದು ಹೇಳಿದ್ದಾರೆ. 

ಮಾಹಿತಿ ಇಲಾಖೆ ಸಚಿವರಾಗಿರುವ ಫಾವದ್​ ಚೌಧರಿ ಟ್ವೀಟ್ ಮಾಡಿ, ಪ್ರಧಾನಿ ಮೋದಿಯವರ ಭಾರತದಲ್ಲಿ ಈಗೇನು ನಡೆಯುತ್ತಿದೆಯೋ ಅದು ಭಯಹುಟ್ಟಿಸುವಂತಿದೆ. ಅಸ್ಥಿರ ನಾಯಕತ್ವದಿಂದಾಗಿ ಭಾರತದ ಸಮಾಜ ಅತ್ಯಂತ ವೇಗವಾಗಿ ಅವನತಿಯಾಗುತ್ತಿದೆ. ಇತರ ನಾಗರಿಕರು ಉಳಿದ ಉಡುಪುಗಳನ್ನು ಧರಿಸುವುದು ಹೇಗೆ ಅವರ ವೈಯಕ್ತಿಕ ಆಯ್ಕೆಯೋ, ಹಿಜಾಬ್​ ಧರಿಸುವುದೂ ಕೂಡ ಮುಸ್ಲಿಂ ಹೆಣ್ಣುಮಕ್ಕಳ ವೈಯಕ್ತಿಕ ಆಯ್ಕೆ ಎಂದು ಹೇಳಿದ್ದಾರೆ.

ಇನ್ನೊಬ್ಬ ಸಚಿವ ಖುರೇಷಿ ಟ್ವೀಟ್ ಮಾಡಿ,  ಮುಸ್ಲಿಂ ಹೆಣ್ಣುಮಕ್ಕಳನ್ನು ಅವರು ಧರಿಸುವ ಹಿಜಾಬ್​ ಕಾರಣಕ್ಕೆ ಶಿಕ್ಷಣದಿಂದ ವಂಚಿತರನ್ನಾಗಿ ಮಾಡುವುದೆಂದರೆ ಅದು ಮಾನವ ಹಕ್ಕುಗಳನ್ನು ಸಂಪೂರ್ಣವಾಗಿ ಸಮಾಧಿ ಮಾಡಿದಂತೆ.  ಮುಸ್ಲಿಮರನ್ನು ನಿರ್ಬಂಧಿಸಲು ಭಾರತ ಮಾಡುತ್ತಿರುವ ಇಂಥ ಪ್ರಯತ್ನಗಳನ್ನು ಜಗತ್ತು ಅರ್ಥ ಮಾಡಿಕೊಳ್ಳಬೇಕು ಎಂದು ಹೇಳಿದ್ದಾರೆ.

ಕರ್ನಾಟಕದಲ್ಲಿ ಹಿಜಾಬ್​ ವಿವಾದ ಹೈಕೋರ್ಟ್​ ಮೆಟ್ಟಿಲೇರಿದೆ. ತಮಗೆ ತರಗತಿಗೆ ಹಿಜಾಬ್​ ಧರಿಸಿ ಹೋಗಲು ಅನುಮತಿ ನೀಡಬೇಕು ಎಂದು ಕೆಲವು ಮುಸ್ಲಿಂ ಹೆಣ್ಣುಮಕ್ಕಳು ಅರ್ಜಿ ಸಲ್ಲಿಸಿದ್ದಾರೆ. ಆದರೆ ಸದ್ಯ ಯಾವುದೇ ತೀರ್ಪನ್ನೂ ಕೋರ್ಟ್ ನೀಡಿಲ್ಲ. ಇನ್ನೊಂದೆಡೆ ಹಿಂದು ವಿದ್ಯಾರ್ಥಿಗಳು ಕೇಸರಿ ಶಾಲು ಹಾಕಿ ತರಗತಿಗೆ ಬರಲು ಪ್ರಾರಂಭಿಸಿದ್ದಾರೆ. ಸಮವಸ್ತ್ರಕ್ಕಿಂತಲೂ ಮುಸ್ಲಿಂ ಹೆಣ್ಣುಮಕ್ಕಳಿಗೆ ಅವರ ಧರ್ಮದ ಹಿಜಾಬ್​ ಮುಖ್ಯವಾದರೆ, ನಮಗೂ ನಮ್ಮ ಕೇಸರಿ ಶಾಲು ಮುಖ್ಯ ಎಂದು ಪಟ್ಟು ಹಿಡಿದಿದ್ದಾರೆ. ಸದ್ಯ ರಾಜ್ಯದಲ್ಲಿ ಮೂರುದಿನಗಳ ಕಾಲ ಕಾಲೇಜಿಗೆ ರಜೆ ಘೋಷಣೆ ಮಾಡಿ, ಸರ್ಕಾರ ಆದೇಶ ಹೊರಡಿಸಿದೆ. ಇದೆಲ್ಲದರ ಮಧ್ಯೆ ಹಿಜಾಬ್​ ವಿವಾದವೆಂಬುದು ರಾಷ್ಟ್ರ-ಅಂತಾರಾಷ್ಟ್ರೀಯ ಮಟ್ಟದಲ್ಲಿ ಗಮನಸೆಳೆದಿದೆ.

ವಿದ್ಯಾರ್ಥಿಗಳ ನಡುವೆ ಧಾರ್ಮಿಕ ವಿಷದ ಗೋಡೆ ನಿರ್ಮಾಣ ಆಗಿದೆ: ಹಿಜಾಬ್​ ವಿವಾದಕ್ಕೆ ಕಮಲ್​ ಹಾಸನ್​, ರಮ್ಯಾ ಪ್ರತಿಕ್ರಿಯೆ​

Published On - 12:24 pm, Wed, 9 February 22

ದೆಹಲಿಗೆ ಹೊರಟ ಪ್ರಧಾನಿ ಮೋದಿಗೆ ಓಮನ್​​​ನಲ್ಲಿ ಆತ್ಮೀಯ ವಿದಾಯ
ದೆಹಲಿಗೆ ಹೊರಟ ಪ್ರಧಾನಿ ಮೋದಿಗೆ ಓಮನ್​​​ನಲ್ಲಿ ಆತ್ಮೀಯ ವಿದಾಯ
ಬಿಗ್​​ಬಾಸ್ ಬಳಿಕ ಜೀವನ ಹೇಗಿದೆ? ಮಾಜಿ ಸ್ಪರ್ಧಿ ಸ್ನೇಹಿತ್ ಹೇಳಿದ್ದು ಹೀಗೆ
ಬಿಗ್​​ಬಾಸ್ ಬಳಿಕ ಜೀವನ ಹೇಗಿದೆ? ಮಾಜಿ ಸ್ಪರ್ಧಿ ಸ್ನೇಹಿತ್ ಹೇಳಿದ್ದು ಹೀಗೆ
ಸೀಕ್ರೆಟ್ ರೂಮ್​​ನಲ್ಲಿ ಮಿತಿ ಮೀರಿತು ರಕ್ಷಿತಾ ಶೆಟ್ಟಿ ಕೋಪ
ಸೀಕ್ರೆಟ್ ರೂಮ್​​ನಲ್ಲಿ ಮಿತಿ ಮೀರಿತು ರಕ್ಷಿತಾ ಶೆಟ್ಟಿ ಕೋಪ
ಹೈವೇನಲ್ಲಿ ಭಯಾನಕ ಅಪಘಾತ: ಬುಗುರಿ ತಿರುಗಿದಂತೆ ತಿರುಗಿದ ಕಾರು
ಹೈವೇನಲ್ಲಿ ಭಯಾನಕ ಅಪಘಾತ: ಬುಗುರಿ ತಿರುಗಿದಂತೆ ತಿರುಗಿದ ಕಾರು
ಪ್ರೀತಿ ಬಲೆಗೆ ಬಿದ್ದ ವಿದ್ಯಾರ್ಥಿನಿ ಲೈಫೇ ಬರ್ಬಾದ್​​: ಯುವತಿ ಮೇಲೆ ವಿಕೃತಿ
ಪ್ರೀತಿ ಬಲೆಗೆ ಬಿದ್ದ ವಿದ್ಯಾರ್ಥಿನಿ ಲೈಫೇ ಬರ್ಬಾದ್​​: ಯುವತಿ ಮೇಲೆ ವಿಕೃತಿ
ಮುಡಾ ಹಗರಣ: ಲೋಕಾಯುಕ್ತ ವಿರುದ್ಧವೇ ಸ್ನೇಹಮಯಿ ಕೃಷ್ಣ ಬಿಗ್​​ಬಾಂಬ್
ಮುಡಾ ಹಗರಣ: ಲೋಕಾಯುಕ್ತ ವಿರುದ್ಧವೇ ಸ್ನೇಹಮಯಿ ಕೃಷ್ಣ ಬಿಗ್​​ಬಾಂಬ್
ಕರ್ತವ್ಯದಲ್ಲಿದ್ದ ಎಎಸ್ಐ ಮಾಂಗಲ್ಯಸರವನ್ನೇ ಕದ್ದ ಕಳ್ಳರು!
ಕರ್ತವ್ಯದಲ್ಲಿದ್ದ ಎಎಸ್ಐ ಮಾಂಗಲ್ಯಸರವನ್ನೇ ಕದ್ದ ಕಳ್ಳರು!
ಬಿಗ್​​ಬಾಸ್ ಮನೆಯಲ್ಲಿ ತಮ್ಮ ಮೊದಲ ಪ್ರೀತಿಯ ಕತೆ ಹೇಳಿದ ರವಿಚಂದ್ರನ್
ಬಿಗ್​​ಬಾಸ್ ಮನೆಯಲ್ಲಿ ತಮ್ಮ ಮೊದಲ ಪ್ರೀತಿಯ ಕತೆ ಹೇಳಿದ ರವಿಚಂದ್ರನ್
ಸ್ಮಶಾನ, ಕೆರೆ ಜಮೀನು ಕೃಷ್ಣಭೈರೇಗೌಡರ ಪಿತ್ರಾರ್ಜಿತ ಆಸ್ತಿಯಾ?
ಸ್ಮಶಾನ, ಕೆರೆ ಜಮೀನು ಕೃಷ್ಣಭೈರೇಗೌಡರ ಪಿತ್ರಾರ್ಜಿತ ಆಸ್ತಿಯಾ?
ಶಕ್ತಿ ಯೋಜನೆಗೆ 4 ಸಾವಿರ ಕೋಟಿ ಬಾಕಿ ಒಪ್ಪಿಕೊಂಡ ಸಾರಿಗೆ ಸಚಿವ
ಶಕ್ತಿ ಯೋಜನೆಗೆ 4 ಸಾವಿರ ಕೋಟಿ ಬಾಕಿ ಒಪ್ಪಿಕೊಂಡ ಸಾರಿಗೆ ಸಚಿವ