AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕರ್ನಾಟಕ ಹಿಜಾಬ್​ ವಿವಾದದಲ್ಲಿ ಮೂಗು ತೂರಿಸಿದ ಪಾಕಿಸ್ತಾನ; ಭಾರತದಲ್ಲಿನ ಈ ಬೆಳವಣಿಗೆ ಸಚಿವರಿಗೆ ಭಯಹುಟ್ಟಿಸುತ್ತಿದೆಯಂತೆ !

ಮುಸ್ಲಿಮರನ್ನು ನಿರ್ಬಂಧಿಸಲು ಭಾರತ ಮಾಡುತ್ತಿರುವ ಇಂಥ ಪ್ರಯತ್ನಗಳನ್ನು ಜಗತ್ತು ಅರ್ಥ ಮಾಡಿಕೊಳ್ಳಬೇಕು ಎಂದು ಪಾಕ್ ವಿದೇಶಾಂಗ ಇಲಾಖೆ ಸಚಿವ ಶಾ ಮೊಹಮ್ಮದ್​ ಖುರೇಷಿ ಹೇಳಿದ್ದಾರೆ.

ಕರ್ನಾಟಕ ಹಿಜಾಬ್​ ವಿವಾದದಲ್ಲಿ ಮೂಗು ತೂರಿಸಿದ ಪಾಕಿಸ್ತಾನ; ಭಾರತದಲ್ಲಿನ ಈ ಬೆಳವಣಿಗೆ ಸಚಿವರಿಗೆ ಭಯಹುಟ್ಟಿಸುತ್ತಿದೆಯಂತೆ !
ಟ್ವೀಟ್ ಮಾಡಿರುವ ಇಬ್ಬರು ಸಚಿವರು
TV9 Web
| Edited By: |

Updated on:Feb 09, 2022 | 12:35 PM

Share

ಕರ್ನಾಟಕದಾದ್ಯಂತ ಕಾಲೇಜುಗಳಲ್ಲಿ ನಡೆಯುತ್ತಿರುವ ಹಿಜಾಬ್​-ಕೇಸರಿ ಶಾಲು (Hijab Row In Karnataka) ವಿವಾದಕ್ಕೆ ಪಾಕಿಸ್ತಾನದಿಂದ (Pakistan)ಪ್ರತಿಕ್ರಿಯೆ ವ್ಯಕ್ತವಾಗುತ್ತಿದೆ. ಹಿಜಾಬ್​ ಧರಿಸಿ ಹೋದ ಹೆಣ್ಣುಮಕ್ಕಳಿಗೆ ಕಾಲೇಜಿನ ಕ್ಲಾಸ್​​ರೂಮಿಗೆ ಪ್ರವೇಶ ನಿರಾಕರಿಸಿದ ಕ್ರಮವನ್ನು ಪಾಕ್​​ನ ಇಮ್ರಾನ್ ಖಾನ್​​ ಸರ್ಕಾರದ ಇಬ್ಬರು ಸಚಿವರು ಟ್ವೀಟ್​ ಮೂಲಕ ಖಂಡಿಸಿದ್ದಾರೆ.  ಪಾಕಿಸ್ತಾನದ ಹೆಣ್ಣು ಮಕ್ಕಳ ಶಿಕ್ಷಣ ಹೋರಾಟಗಾರ್ತಿ ಮಲಾಲಾ ಯೂಸುಫ್​​ಝಾಯ್​ ಕೂಡ ಕರ್ನಾಟಕ ಹಿಜಾಬ್​ ವಿವಾದದ ಬಗ್ಗೆ ಟ್ವೀಟ್​ ಮಾಡಿ, ಹೆಣ್ಣುಮಕ್ಕಳ ಶಿಕ್ಷಣಕ್ಕೆ ಹಿಜಾಬ್ (Hijab)​ ಅಡ್ಡಿಯಾಗುತ್ತಿರುವುದು ಭಯಾನಕ ಎಂದಿದ್ದಾರೆ. ಹಾಗೇ ಇಮ್ರಾನ್ ಖಾನ್​ ಸರ್ಕಾರದಲ್ಲಿ ಮಾಹಿತಿ ಇಲಾಖೆ ಸಚಿವರಾಗಿರುವ ಫಾವದ್​ ಚೌಧರಿ ಮತ್ತು ವಿದೇಶಾಂಗ ಇಲಾಖೆ ಸಚಿವ ಶಾ ಮೊಹಮ್ಮದ್​ ಖುರೇಷಿ ಟ್ವೀಟ್ ಮಾಡಿ, ಹಿಜಾಬ್​ ವಿವಾದದ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದ್ದಾರೆ.  ಭಾರತದಲ್ಲಿ ಆಗುತ್ತಿರುವ ಬೆಳವಣಿಗೆ ನಿಜಕ್ಕೂ ಭಯ ಹುಟ್ಟಿಸುವಂತಿದೆ ಎಂದು ಹೇಳಿದ್ದಾರೆ. 

ಮಾಹಿತಿ ಇಲಾಖೆ ಸಚಿವರಾಗಿರುವ ಫಾವದ್​ ಚೌಧರಿ ಟ್ವೀಟ್ ಮಾಡಿ, ಪ್ರಧಾನಿ ಮೋದಿಯವರ ಭಾರತದಲ್ಲಿ ಈಗೇನು ನಡೆಯುತ್ತಿದೆಯೋ ಅದು ಭಯಹುಟ್ಟಿಸುವಂತಿದೆ. ಅಸ್ಥಿರ ನಾಯಕತ್ವದಿಂದಾಗಿ ಭಾರತದ ಸಮಾಜ ಅತ್ಯಂತ ವೇಗವಾಗಿ ಅವನತಿಯಾಗುತ್ತಿದೆ. ಇತರ ನಾಗರಿಕರು ಉಳಿದ ಉಡುಪುಗಳನ್ನು ಧರಿಸುವುದು ಹೇಗೆ ಅವರ ವೈಯಕ್ತಿಕ ಆಯ್ಕೆಯೋ, ಹಿಜಾಬ್​ ಧರಿಸುವುದೂ ಕೂಡ ಮುಸ್ಲಿಂ ಹೆಣ್ಣುಮಕ್ಕಳ ವೈಯಕ್ತಿಕ ಆಯ್ಕೆ ಎಂದು ಹೇಳಿದ್ದಾರೆ.

ಇನ್ನೊಬ್ಬ ಸಚಿವ ಖುರೇಷಿ ಟ್ವೀಟ್ ಮಾಡಿ,  ಮುಸ್ಲಿಂ ಹೆಣ್ಣುಮಕ್ಕಳನ್ನು ಅವರು ಧರಿಸುವ ಹಿಜಾಬ್​ ಕಾರಣಕ್ಕೆ ಶಿಕ್ಷಣದಿಂದ ವಂಚಿತರನ್ನಾಗಿ ಮಾಡುವುದೆಂದರೆ ಅದು ಮಾನವ ಹಕ್ಕುಗಳನ್ನು ಸಂಪೂರ್ಣವಾಗಿ ಸಮಾಧಿ ಮಾಡಿದಂತೆ.  ಮುಸ್ಲಿಮರನ್ನು ನಿರ್ಬಂಧಿಸಲು ಭಾರತ ಮಾಡುತ್ತಿರುವ ಇಂಥ ಪ್ರಯತ್ನಗಳನ್ನು ಜಗತ್ತು ಅರ್ಥ ಮಾಡಿಕೊಳ್ಳಬೇಕು ಎಂದು ಹೇಳಿದ್ದಾರೆ.

ಕರ್ನಾಟಕದಲ್ಲಿ ಹಿಜಾಬ್​ ವಿವಾದ ಹೈಕೋರ್ಟ್​ ಮೆಟ್ಟಿಲೇರಿದೆ. ತಮಗೆ ತರಗತಿಗೆ ಹಿಜಾಬ್​ ಧರಿಸಿ ಹೋಗಲು ಅನುಮತಿ ನೀಡಬೇಕು ಎಂದು ಕೆಲವು ಮುಸ್ಲಿಂ ಹೆಣ್ಣುಮಕ್ಕಳು ಅರ್ಜಿ ಸಲ್ಲಿಸಿದ್ದಾರೆ. ಆದರೆ ಸದ್ಯ ಯಾವುದೇ ತೀರ್ಪನ್ನೂ ಕೋರ್ಟ್ ನೀಡಿಲ್ಲ. ಇನ್ನೊಂದೆಡೆ ಹಿಂದು ವಿದ್ಯಾರ್ಥಿಗಳು ಕೇಸರಿ ಶಾಲು ಹಾಕಿ ತರಗತಿಗೆ ಬರಲು ಪ್ರಾರಂಭಿಸಿದ್ದಾರೆ. ಸಮವಸ್ತ್ರಕ್ಕಿಂತಲೂ ಮುಸ್ಲಿಂ ಹೆಣ್ಣುಮಕ್ಕಳಿಗೆ ಅವರ ಧರ್ಮದ ಹಿಜಾಬ್​ ಮುಖ್ಯವಾದರೆ, ನಮಗೂ ನಮ್ಮ ಕೇಸರಿ ಶಾಲು ಮುಖ್ಯ ಎಂದು ಪಟ್ಟು ಹಿಡಿದಿದ್ದಾರೆ. ಸದ್ಯ ರಾಜ್ಯದಲ್ಲಿ ಮೂರುದಿನಗಳ ಕಾಲ ಕಾಲೇಜಿಗೆ ರಜೆ ಘೋಷಣೆ ಮಾಡಿ, ಸರ್ಕಾರ ಆದೇಶ ಹೊರಡಿಸಿದೆ. ಇದೆಲ್ಲದರ ಮಧ್ಯೆ ಹಿಜಾಬ್​ ವಿವಾದವೆಂಬುದು ರಾಷ್ಟ್ರ-ಅಂತಾರಾಷ್ಟ್ರೀಯ ಮಟ್ಟದಲ್ಲಿ ಗಮನಸೆಳೆದಿದೆ.

ವಿದ್ಯಾರ್ಥಿಗಳ ನಡುವೆ ಧಾರ್ಮಿಕ ವಿಷದ ಗೋಡೆ ನಿರ್ಮಾಣ ಆಗಿದೆ: ಹಿಜಾಬ್​ ವಿವಾದಕ್ಕೆ ಕಮಲ್​ ಹಾಸನ್​, ರಮ್ಯಾ ಪ್ರತಿಕ್ರಿಯೆ​

Published On - 12:24 pm, Wed, 9 February 22

Follow Us
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್
ಬಿಎಸ್​ವೈ ಅಭಿಮಾನೋತ್ಸವದಲ್ಲಿ ಮಾಜಿ ಸಿಎಂಗೆ ಅದೃಷ್ಟ ತಂದ ಕಾರಿನ ಪ್ರದರ್ಶನ
ಬಿಎಸ್​ವೈ ಅಭಿಮಾನೋತ್ಸವದಲ್ಲಿ ಮಾಜಿ ಸಿಎಂಗೆ ಅದೃಷ್ಟ ತಂದ ಕಾರಿನ ಪ್ರದರ್ಶನ