AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪಾಕ್​ ಪ್ರಧಾನಿ ಇಮ್ರಾನ್ ಖಾನ್​ ಪತ್ನಿ ಮೇಲೆ ಗುಂಡಿನ ದಾಳಿ; ಮಾಜಿ ಪತಿಯನ್ನು ಟೀಕಿಸಿ, ಹೇಡಿಗಳ ರಾಜ್ಯವೆಂದ ರೇಹಮ್​ ಖಾನ್​

ನನಗೆ ಗಾಯವಾಗದೆ ಇದ್ದರೂ ಘಟನೆಯಿಂದ ತುಂಬ ಕೋಪ ಬಂದಿದೆ. ಹಾಗೇ, ಜನಸಾಮಾನ್ಯರ ಬಗ್ಗೆ ಆತಂಕವಾಗುತ್ತಿದೆ. ಇದೊಂದು ಹೇಡಿತನದ ಕೃತ್ಯ ಎಂದು ಹೇಳಿದ್ದಾರೆ.  ರೇಹಮ್​ ಖಾನ್​ ಅವರು ಬ್ರಿಟಿಷ್​-ಪಾಕಿಸ್ತಾನಿ ಮೂಲದವರು.

ಪಾಕ್​ ಪ್ರಧಾನಿ ಇಮ್ರಾನ್ ಖಾನ್​ ಪತ್ನಿ ಮೇಲೆ ಗುಂಡಿನ ದಾಳಿ; ಮಾಜಿ ಪತಿಯನ್ನು ಟೀಕಿಸಿ, ಹೇಡಿಗಳ ರಾಜ್ಯವೆಂದ ರೇಹಮ್​ ಖಾನ್​
ರಹೇಮ್ ಖಾನ್​
TV9 Web
| Edited By: |

Updated on: Jan 03, 2022 | 9:30 AM

Share

ಪಾಕಿಸ್ತಾನದ ಪ್ರಧಾನಮಂತ್ರಿ ಇಮ್ರಾನ್ ಖಾನ್ (Imrah Khan)​ ಮಾಜಿ ಪತ್ನಿ ರೇಹಮ್​ ಖಾನ್​ ಪ್ರಯಾಣಿಸುತ್ತಿದ್ದ ವಾಹನದ ಮೇಲೆ ಗುಂಡಿನ ದಾಳಿಯಾಗಿದೆ. ಈ ಬಗ್ಗೆ ರೇಹಮ್​ ಟ್ವೀಟ್ ಮಾಡಿ ತಿಳಿಸಿದ್ದಾರೆ. ಹಾಗೇ, ತಮ್ಮ ಮಾಜಿ ಪತಿ ಇಮ್ರಾನ್​ ಖಾನ್​ ವಿರುದ್ಧ ಕಟು ವಾಗ್ದಾಳಿ ನಡೆಸಿದ್ದಾರೆ. ಟ್ವೀಟ್ ಮಾಡಿರುವ ರೇಹಮ್​ ಖಾನ್​, ನಾನು ನನ್ನ ಸಂಬಂಧಿಯೊಬ್ಬರ ವಿವಾಹ ಸಮಾರಂಭದಿಂದ ಭಾನುವಾರ ರಾತ್ರಿ ವಾಪಸ್​ ಬರುತ್ತಿದ್ದೆ. ಆಗ ನನ್ನ ಕಾರಿನ ಮೇಲೆ ಗುಂಡಿನ ದಾಳಿಯಾಗಿದೆ. ಮೋಟರ್​ ಸೈಕಲ್​ ಮೇಲೆ ಬಂದ ಇಬ್ಬರು ಅಪರಿಚಿತರು ಗುಂಡು ಹಾರಿಸಿದ್ದಾರೆ. ನನ್ನ ವೈಯಕ್ತಿಕ ಕಾರ್ಯದರ್ಶಿ ಮತ್ತು ಚಾಲಕ ಕೂಡ ಕಾರಿನಲ್ಲಿ ಇದ್ದರು. ಅದೃಷ್ಟಕ್ಕೆ ಏನೂ ಅಪಾಯ ಆಗಲಿಲ್ಲ. ಈ ಇಮ್ರಾನ್​ ಖಾನ್​ ಆಡಳಿತದ ಹೊಸ ಪಾಕಿಸ್ತಾನ !.ಈಗ ಇದು ಹೇಡಿಗಳು, ಕೊಲೆಗೆಡುಕರು, ದುರಾಸೆಬುರುಕರ ರಾಜ್ಯವಾಗಿದೆ ಎಂದು ಹೇಳಿದ್ದಾರೆ. ಈ ಮೂಲಕ ಇಮ್ರಾನ್​ ಖಾನ್​​ರನ್ನು ಟೀಕಿಸಿದ್ದಾರೆ. 

ನನಗೆ ಗಾಯವಾಗದೆ ಇದ್ದರೂ ಘಟನೆಯಿಂದ ತುಂಬ ಕೋಪ ಬಂದಿದೆ. ಹಾಗೇ, ಜನಸಾಮಾನ್ಯರ ಬಗ್ಗೆ ಆತಂಕವಾಗುತ್ತಿದೆ. ಇದೊಂದು ಹೇಡಿತನದ ಕೃತ್ಯ ಎಂದು ಹೇಳಿದ್ದಾರೆ.  ರೇಹಮ್​ ಖಾನ್​ ಅವರು ಬ್ರಿಟಿಷ್​-ಪಾಕಿಸ್ತಾನಿ ಮೂಲದವರು. ಮಾಜಿ ಟಿವಿ ನಿರೂಪಕಿ. 2014ರ ಅಕ್ಟೋಬರ್​ 30ರಂದು ಇಮ್ರಾನ್ ಖಾನ್​ರನ್ನು ಮದುವೆಯಾಗಿದ್ದರು. ನಂತರ 2015ರಲ್ಲಿ ವಿಚ್ಛೇದನ ನೀಡಿದ್ದಾರೆ. ಅವರಂತೂ ತಮ್ಮ ಮಾಜಿ ಪತಿಯನ್ನು ಸದಾ ಟೀಕಿಸುತ್ತಾರೆ.  ಇಮ್ರಾನ್​ ಖಾನ್ ಆಡಳಿತ, ಅವರ ಸಾರ್ವಜನಿಕ ನಿಯಮಗಳ ವಿರುದ್ಧ ಪದೇಪದೆ ವಾಗ್ದಾಳಿ ನಡೆಸುತ್ತಾರೆ. 2019ರಲ್ಲಿ ಪುಲ್ವಾಮಾ ದಾಳಿಯಾದಾಗಲೂ ಕೂಡ ಇಮ್ರಾನ್​ ಖಾನ್​ರನ್ನು ಹೀಗಳೆದಿದ್ದರು. ಇಮ್ರಾನ್ ಖಾನ್​ ಮಿಲಿಟರಿಯ ಕೈಗೊಂಬೆಯಾಗಿದ್ದಾರೆ. ಸಿದ್ಧಾಂತದಲ್ಲಿ ರಾಜಿಮಾಡಿಕೊಂಡು ಅಧಿಕಾರಕ್ಕೆ ಬಂದವರು ಎಂದು ಟೀಕಿಸಿದ್ದರು.

ಇದನ್ನ ಓದಿ: ಹಿಂಸಾಚಾರಕ್ಕೆ ತಿರುಗಿದ ಉಷ್ಣ ವಿದ್ಯುತ್​ ಸ್ಥಾವರ ಕಾರ್ಮಿಕರ ಪ್ರತಿಭಟನೆ; 20 ಪೊಲೀಸರಿಗೆ ಗಾಯ, ವಾಹನಗಳೆಲ್ಲ ಧ್ವಂಸ

Follow Us
ನಾಲಿಗೆ ಹರಿಬಿಟ್ಟ ಪ್ರತಾಪ್ ಸಿಂಹ: ಸಿಎಂ ವಿರುದ್ಧ ವಿವಾದಾತ್ಮಕ ಹೇಳಿಕೆ
ನಾಲಿಗೆ ಹರಿಬಿಟ್ಟ ಪ್ರತಾಪ್ ಸಿಂಹ: ಸಿಎಂ ವಿರುದ್ಧ ವಿವಾದಾತ್ಮಕ ಹೇಳಿಕೆ
11 ಎಸೆತಗಳಲ್ಲಿ ಸಿಎಸ್​ಕೆಗೆ ಭಯ ಹುಟ್ಟಿಸಿದ ಪ್ರಿಯಾಂಶ್
11 ಎಸೆತಗಳಲ್ಲಿ ಸಿಎಸ್​ಕೆಗೆ ಭಯ ಹುಟ್ಟಿಸಿದ ಪ್ರಿಯಾಂಶ್
ಗ್ಯಾಸ್​ ಇಲ್ಲದೇ ಬೆಂಗಳೂರಿನ ಗಲ್ಲಿ ಗಲ್ಲಿಯಲ್ಲೂ ನಿಂತ ಆಟೋಗಳು!
ಗ್ಯಾಸ್​ ಇಲ್ಲದೇ ಬೆಂಗಳೂರಿನ ಗಲ್ಲಿ ಗಲ್ಲಿಯಲ್ಲೂ ನಿಂತ ಆಟೋಗಳು!
ಅಧಿಕಾರಿ ಮೇಲೆ ಪಾಲಿಕೆ ಸದಸ್ಯ ಹಲ್ಲೆ: ಪ್ರಕರಣದಲ್ಲಿ​ ಶಾಸಕ ರೆಡ್ಡಿ ಎಂಟ್ರಿ
ಅಧಿಕಾರಿ ಮೇಲೆ ಪಾಲಿಕೆ ಸದಸ್ಯ ಹಲ್ಲೆ: ಪ್ರಕರಣದಲ್ಲಿ​ ಶಾಸಕ ರೆಡ್ಡಿ ಎಂಟ್ರಿ
ಹಿಂದೆ ಸಂಬಂಧಿಯನ್ನ ಕೊಂದ್ರು, ಈಗ ಅಳಿಯನ ಹತ್ಯೆ:ಮಾಜಿ ಸಚಿವ ಬೆಳಮಗಿ ಕಣ್ಣೀರು
ಹಿಂದೆ ಸಂಬಂಧಿಯನ್ನ ಕೊಂದ್ರು, ಈಗ ಅಳಿಯನ ಹತ್ಯೆ:ಮಾಜಿ ಸಚಿವ ಬೆಳಮಗಿ ಕಣ್ಣೀರು
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
ರಂಗೇರಿದ ಚುನಾವಣಾ ಅಖಾಡ; ಪುದುಚೇರಿಯಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ರಂಗೇರಿದ ಚುನಾವಣಾ ಅಖಾಡ; ಪುದುಚೇರಿಯಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಜೈಪುರದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ, ಜನಜೀವನ ಅಸ್ತವ್ಯಸ್ತ
ಜೈಪುರದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ, ಜನಜೀವನ ಅಸ್ತವ್ಯಸ್ತ