AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪಾಕ್​ ಪ್ರಧಾನಿ ಇಮ್ರಾನ್ ಖಾನ್​ ಪತ್ನಿ ಮೇಲೆ ಗುಂಡಿನ ದಾಳಿ; ಮಾಜಿ ಪತಿಯನ್ನು ಟೀಕಿಸಿ, ಹೇಡಿಗಳ ರಾಜ್ಯವೆಂದ ರೇಹಮ್​ ಖಾನ್​

ನನಗೆ ಗಾಯವಾಗದೆ ಇದ್ದರೂ ಘಟನೆಯಿಂದ ತುಂಬ ಕೋಪ ಬಂದಿದೆ. ಹಾಗೇ, ಜನಸಾಮಾನ್ಯರ ಬಗ್ಗೆ ಆತಂಕವಾಗುತ್ತಿದೆ. ಇದೊಂದು ಹೇಡಿತನದ ಕೃತ್ಯ ಎಂದು ಹೇಳಿದ್ದಾರೆ.  ರೇಹಮ್​ ಖಾನ್​ ಅವರು ಬ್ರಿಟಿಷ್​-ಪಾಕಿಸ್ತಾನಿ ಮೂಲದವರು.

ಪಾಕ್​ ಪ್ರಧಾನಿ ಇಮ್ರಾನ್ ಖಾನ್​ ಪತ್ನಿ ಮೇಲೆ ಗುಂಡಿನ ದಾಳಿ; ಮಾಜಿ ಪತಿಯನ್ನು ಟೀಕಿಸಿ, ಹೇಡಿಗಳ ರಾಜ್ಯವೆಂದ ರೇಹಮ್​ ಖಾನ್​
ರಹೇಮ್ ಖಾನ್​
TV9 Web
| Edited By: |

Updated on: Jan 03, 2022 | 9:30 AM

Share

ಪಾಕಿಸ್ತಾನದ ಪ್ರಧಾನಮಂತ್ರಿ ಇಮ್ರಾನ್ ಖಾನ್ (Imrah Khan)​ ಮಾಜಿ ಪತ್ನಿ ರೇಹಮ್​ ಖಾನ್​ ಪ್ರಯಾಣಿಸುತ್ತಿದ್ದ ವಾಹನದ ಮೇಲೆ ಗುಂಡಿನ ದಾಳಿಯಾಗಿದೆ. ಈ ಬಗ್ಗೆ ರೇಹಮ್​ ಟ್ವೀಟ್ ಮಾಡಿ ತಿಳಿಸಿದ್ದಾರೆ. ಹಾಗೇ, ತಮ್ಮ ಮಾಜಿ ಪತಿ ಇಮ್ರಾನ್​ ಖಾನ್​ ವಿರುದ್ಧ ಕಟು ವಾಗ್ದಾಳಿ ನಡೆಸಿದ್ದಾರೆ. ಟ್ವೀಟ್ ಮಾಡಿರುವ ರೇಹಮ್​ ಖಾನ್​, ನಾನು ನನ್ನ ಸಂಬಂಧಿಯೊಬ್ಬರ ವಿವಾಹ ಸಮಾರಂಭದಿಂದ ಭಾನುವಾರ ರಾತ್ರಿ ವಾಪಸ್​ ಬರುತ್ತಿದ್ದೆ. ಆಗ ನನ್ನ ಕಾರಿನ ಮೇಲೆ ಗುಂಡಿನ ದಾಳಿಯಾಗಿದೆ. ಮೋಟರ್​ ಸೈಕಲ್​ ಮೇಲೆ ಬಂದ ಇಬ್ಬರು ಅಪರಿಚಿತರು ಗುಂಡು ಹಾರಿಸಿದ್ದಾರೆ. ನನ್ನ ವೈಯಕ್ತಿಕ ಕಾರ್ಯದರ್ಶಿ ಮತ್ತು ಚಾಲಕ ಕೂಡ ಕಾರಿನಲ್ಲಿ ಇದ್ದರು. ಅದೃಷ್ಟಕ್ಕೆ ಏನೂ ಅಪಾಯ ಆಗಲಿಲ್ಲ. ಈ ಇಮ್ರಾನ್​ ಖಾನ್​ ಆಡಳಿತದ ಹೊಸ ಪಾಕಿಸ್ತಾನ !.ಈಗ ಇದು ಹೇಡಿಗಳು, ಕೊಲೆಗೆಡುಕರು, ದುರಾಸೆಬುರುಕರ ರಾಜ್ಯವಾಗಿದೆ ಎಂದು ಹೇಳಿದ್ದಾರೆ. ಈ ಮೂಲಕ ಇಮ್ರಾನ್​ ಖಾನ್​​ರನ್ನು ಟೀಕಿಸಿದ್ದಾರೆ. 

ನನಗೆ ಗಾಯವಾಗದೆ ಇದ್ದರೂ ಘಟನೆಯಿಂದ ತುಂಬ ಕೋಪ ಬಂದಿದೆ. ಹಾಗೇ, ಜನಸಾಮಾನ್ಯರ ಬಗ್ಗೆ ಆತಂಕವಾಗುತ್ತಿದೆ. ಇದೊಂದು ಹೇಡಿತನದ ಕೃತ್ಯ ಎಂದು ಹೇಳಿದ್ದಾರೆ.  ರೇಹಮ್​ ಖಾನ್​ ಅವರು ಬ್ರಿಟಿಷ್​-ಪಾಕಿಸ್ತಾನಿ ಮೂಲದವರು. ಮಾಜಿ ಟಿವಿ ನಿರೂಪಕಿ. 2014ರ ಅಕ್ಟೋಬರ್​ 30ರಂದು ಇಮ್ರಾನ್ ಖಾನ್​ರನ್ನು ಮದುವೆಯಾಗಿದ್ದರು. ನಂತರ 2015ರಲ್ಲಿ ವಿಚ್ಛೇದನ ನೀಡಿದ್ದಾರೆ. ಅವರಂತೂ ತಮ್ಮ ಮಾಜಿ ಪತಿಯನ್ನು ಸದಾ ಟೀಕಿಸುತ್ತಾರೆ.  ಇಮ್ರಾನ್​ ಖಾನ್ ಆಡಳಿತ, ಅವರ ಸಾರ್ವಜನಿಕ ನಿಯಮಗಳ ವಿರುದ್ಧ ಪದೇಪದೆ ವಾಗ್ದಾಳಿ ನಡೆಸುತ್ತಾರೆ. 2019ರಲ್ಲಿ ಪುಲ್ವಾಮಾ ದಾಳಿಯಾದಾಗಲೂ ಕೂಡ ಇಮ್ರಾನ್​ ಖಾನ್​ರನ್ನು ಹೀಗಳೆದಿದ್ದರು. ಇಮ್ರಾನ್ ಖಾನ್​ ಮಿಲಿಟರಿಯ ಕೈಗೊಂಬೆಯಾಗಿದ್ದಾರೆ. ಸಿದ್ಧಾಂತದಲ್ಲಿ ರಾಜಿಮಾಡಿಕೊಂಡು ಅಧಿಕಾರಕ್ಕೆ ಬಂದವರು ಎಂದು ಟೀಕಿಸಿದ್ದರು.

ಇದನ್ನ ಓದಿ: ಹಿಂಸಾಚಾರಕ್ಕೆ ತಿರುಗಿದ ಉಷ್ಣ ವಿದ್ಯುತ್​ ಸ್ಥಾವರ ಕಾರ್ಮಿಕರ ಪ್ರತಿಭಟನೆ; 20 ಪೊಲೀಸರಿಗೆ ಗಾಯ, ವಾಹನಗಳೆಲ್ಲ ಧ್ವಂಸ

ಕಡಲೆ ಕಳ್ಳನಿಗೆ ಕಂಬಕ್ಕೆ ಕಟ್ಟಿ ಹಾಕಿ ಹಿಗ್ಗಾಮುಗ್ಗಾ ಥಳಿತ!
ಕಡಲೆ ಕಳ್ಳನಿಗೆ ಕಂಬಕ್ಕೆ ಕಟ್ಟಿ ಹಾಕಿ ಹಿಗ್ಗಾಮುಗ್ಗಾ ಥಳಿತ!
ಅಸಹ್ಯ ದೃಶ್ಯ! ಟಾಕ್ಸಿಕ್ ವಿರುದ್ಧ ಕಂಪ್ಲೇಂಟ್ ನೀಡಿದ ವಕೀಲರು ಹೇಳಿದ್ದೇನು?
ಅಸಹ್ಯ ದೃಶ್ಯ! ಟಾಕ್ಸಿಕ್ ವಿರುದ್ಧ ಕಂಪ್ಲೇಂಟ್ ನೀಡಿದ ವಕೀಲರು ಹೇಳಿದ್ದೇನು?
ಪ್ಯಾರಾ-ಅಥ್ಲೀಟ್ ಪ್ರಸಾದ್​​​ಗೆ 5 ವರ್ಷಗಳ ನಂತರ ಸಿಕ್ತು ಸೂರು ಭಾಗ್ಯ!
ಪ್ಯಾರಾ-ಅಥ್ಲೀಟ್ ಪ್ರಸಾದ್​​​ಗೆ 5 ವರ್ಷಗಳ ನಂತರ ಸಿಕ್ತು ಸೂರು ಭಾಗ್ಯ!
ಯುವಕನ ಬಳಿ ನನ್ನ ಕರ್ಕೊಂಡೋಗಿ ಮದುವೆಯಾಗು ಎಂದಿದ್ದ ಅಪ್ರಾಪ್ತೆ ನಿಗೂಢ ಸಾವು
ಯುವಕನ ಬಳಿ ನನ್ನ ಕರ್ಕೊಂಡೋಗಿ ಮದುವೆಯಾಗು ಎಂದಿದ್ದ ಅಪ್ರಾಪ್ತೆ ನಿಗೂಢ ಸಾವು
ಕಾಂಪೌಂಡ್ ಒಳಗಿದ್ದ ನಾಯಿಯನ್ನು ಬೇಟೆಯಾಡಲು ಬಂದ ಚಿರತೆ!
ಕಾಂಪೌಂಡ್ ಒಳಗಿದ್ದ ನಾಯಿಯನ್ನು ಬೇಟೆಯಾಡಲು ಬಂದ ಚಿರತೆ!
ಸಂಬಂಧಗಳನ್ನು ಇಟ್ಟುಕೊಂಡು ಮನೆಯನ್ನು ನರಕ ಮಾಡ್ತಾ ಇದೀರಾ; ರಕ್ಷಿತಾಗೆ ಪಾಠ
ಸಂಬಂಧಗಳನ್ನು ಇಟ್ಟುಕೊಂಡು ಮನೆಯನ್ನು ನರಕ ಮಾಡ್ತಾ ಇದೀರಾ; ರಕ್ಷಿತಾಗೆ ಪಾಠ
WPL 2026: 6 ಎಸೆತಗಳಲ್ಲಿ 3 ತಪ್ಪು ಮಾಡಿ ಸೋತ ಮುಂಬೈ ಇಂಡಿಯನ್ಸ್
WPL 2026: 6 ಎಸೆತಗಳಲ್ಲಿ 3 ತಪ್ಪು ಮಾಡಿ ಸೋತ ಮುಂಬೈ ಇಂಡಿಯನ್ಸ್
ಬೆಂಗಳೂರಿಗರಿಗೆ ಮೆಟ್ರೋ ದಿಂದ ಮತ್ತೊಂದು ಗುಡ್ ನ್ಯೂಸ್!
ಬೆಂಗಳೂರಿಗರಿಗೆ ಮೆಟ್ರೋ ದಿಂದ ಮತ್ತೊಂದು ಗುಡ್ ನ್ಯೂಸ್!
ಅರಣ್ಯ ಇಲಾಖೆ ವಾಹನವ ಅಟ್ಟಾಡಿಸಿಕೊಂಡು ಬೆನ್ನಟ್ಟಿದ ಕಾಡಾನೆ, ವಿಡಿಯೋ ವೈರಲ್
ಅರಣ್ಯ ಇಲಾಖೆ ವಾಹನವ ಅಟ್ಟಾಡಿಸಿಕೊಂಡು ಬೆನ್ನಟ್ಟಿದ ಕಾಡಾನೆ, ವಿಡಿಯೋ ವೈರಲ್
ಚಾಮರಾಜನಗರ: ನೇನೆಕಟ್ಟೆ ಗ್ರಾಮದಲ್ಲಿ ರಾಜಾರೋಷವಾಗಿ ಸಂಚರಿಸಿದ ಚಿರತೆ
ಚಾಮರಾಜನಗರ: ನೇನೆಕಟ್ಟೆ ಗ್ರಾಮದಲ್ಲಿ ರಾಜಾರೋಷವಾಗಿ ಸಂಚರಿಸಿದ ಚಿರತೆ