AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪಾಕ್​ ಪ್ರಧಾನಿ ಇಮ್ರಾನ್ ಖಾನ್​ ಪತ್ನಿ ಮೇಲೆ ಗುಂಡಿನ ದಾಳಿ; ಮಾಜಿ ಪತಿಯನ್ನು ಟೀಕಿಸಿ, ಹೇಡಿಗಳ ರಾಜ್ಯವೆಂದ ರೇಹಮ್​ ಖಾನ್​

ನನಗೆ ಗಾಯವಾಗದೆ ಇದ್ದರೂ ಘಟನೆಯಿಂದ ತುಂಬ ಕೋಪ ಬಂದಿದೆ. ಹಾಗೇ, ಜನಸಾಮಾನ್ಯರ ಬಗ್ಗೆ ಆತಂಕವಾಗುತ್ತಿದೆ. ಇದೊಂದು ಹೇಡಿತನದ ಕೃತ್ಯ ಎಂದು ಹೇಳಿದ್ದಾರೆ.  ರೇಹಮ್​ ಖಾನ್​ ಅವರು ಬ್ರಿಟಿಷ್​-ಪಾಕಿಸ್ತಾನಿ ಮೂಲದವರು.

ಪಾಕ್​ ಪ್ರಧಾನಿ ಇಮ್ರಾನ್ ಖಾನ್​ ಪತ್ನಿ ಮೇಲೆ ಗುಂಡಿನ ದಾಳಿ; ಮಾಜಿ ಪತಿಯನ್ನು ಟೀಕಿಸಿ, ಹೇಡಿಗಳ ರಾಜ್ಯವೆಂದ ರೇಹಮ್​ ಖಾನ್​
ರಹೇಮ್ ಖಾನ್​
TV9 Web
| Edited By: |

Updated on: Jan 03, 2022 | 9:30 AM

Share

ಪಾಕಿಸ್ತಾನದ ಪ್ರಧಾನಮಂತ್ರಿ ಇಮ್ರಾನ್ ಖಾನ್ (Imrah Khan)​ ಮಾಜಿ ಪತ್ನಿ ರೇಹಮ್​ ಖಾನ್​ ಪ್ರಯಾಣಿಸುತ್ತಿದ್ದ ವಾಹನದ ಮೇಲೆ ಗುಂಡಿನ ದಾಳಿಯಾಗಿದೆ. ಈ ಬಗ್ಗೆ ರೇಹಮ್​ ಟ್ವೀಟ್ ಮಾಡಿ ತಿಳಿಸಿದ್ದಾರೆ. ಹಾಗೇ, ತಮ್ಮ ಮಾಜಿ ಪತಿ ಇಮ್ರಾನ್​ ಖಾನ್​ ವಿರುದ್ಧ ಕಟು ವಾಗ್ದಾಳಿ ನಡೆಸಿದ್ದಾರೆ. ಟ್ವೀಟ್ ಮಾಡಿರುವ ರೇಹಮ್​ ಖಾನ್​, ನಾನು ನನ್ನ ಸಂಬಂಧಿಯೊಬ್ಬರ ವಿವಾಹ ಸಮಾರಂಭದಿಂದ ಭಾನುವಾರ ರಾತ್ರಿ ವಾಪಸ್​ ಬರುತ್ತಿದ್ದೆ. ಆಗ ನನ್ನ ಕಾರಿನ ಮೇಲೆ ಗುಂಡಿನ ದಾಳಿಯಾಗಿದೆ. ಮೋಟರ್​ ಸೈಕಲ್​ ಮೇಲೆ ಬಂದ ಇಬ್ಬರು ಅಪರಿಚಿತರು ಗುಂಡು ಹಾರಿಸಿದ್ದಾರೆ. ನನ್ನ ವೈಯಕ್ತಿಕ ಕಾರ್ಯದರ್ಶಿ ಮತ್ತು ಚಾಲಕ ಕೂಡ ಕಾರಿನಲ್ಲಿ ಇದ್ದರು. ಅದೃಷ್ಟಕ್ಕೆ ಏನೂ ಅಪಾಯ ಆಗಲಿಲ್ಲ. ಈ ಇಮ್ರಾನ್​ ಖಾನ್​ ಆಡಳಿತದ ಹೊಸ ಪಾಕಿಸ್ತಾನ !.ಈಗ ಇದು ಹೇಡಿಗಳು, ಕೊಲೆಗೆಡುಕರು, ದುರಾಸೆಬುರುಕರ ರಾಜ್ಯವಾಗಿದೆ ಎಂದು ಹೇಳಿದ್ದಾರೆ. ಈ ಮೂಲಕ ಇಮ್ರಾನ್​ ಖಾನ್​​ರನ್ನು ಟೀಕಿಸಿದ್ದಾರೆ. 

ನನಗೆ ಗಾಯವಾಗದೆ ಇದ್ದರೂ ಘಟನೆಯಿಂದ ತುಂಬ ಕೋಪ ಬಂದಿದೆ. ಹಾಗೇ, ಜನಸಾಮಾನ್ಯರ ಬಗ್ಗೆ ಆತಂಕವಾಗುತ್ತಿದೆ. ಇದೊಂದು ಹೇಡಿತನದ ಕೃತ್ಯ ಎಂದು ಹೇಳಿದ್ದಾರೆ.  ರೇಹಮ್​ ಖಾನ್​ ಅವರು ಬ್ರಿಟಿಷ್​-ಪಾಕಿಸ್ತಾನಿ ಮೂಲದವರು. ಮಾಜಿ ಟಿವಿ ನಿರೂಪಕಿ. 2014ರ ಅಕ್ಟೋಬರ್​ 30ರಂದು ಇಮ್ರಾನ್ ಖಾನ್​ರನ್ನು ಮದುವೆಯಾಗಿದ್ದರು. ನಂತರ 2015ರಲ್ಲಿ ವಿಚ್ಛೇದನ ನೀಡಿದ್ದಾರೆ. ಅವರಂತೂ ತಮ್ಮ ಮಾಜಿ ಪತಿಯನ್ನು ಸದಾ ಟೀಕಿಸುತ್ತಾರೆ.  ಇಮ್ರಾನ್​ ಖಾನ್ ಆಡಳಿತ, ಅವರ ಸಾರ್ವಜನಿಕ ನಿಯಮಗಳ ವಿರುದ್ಧ ಪದೇಪದೆ ವಾಗ್ದಾಳಿ ನಡೆಸುತ್ತಾರೆ. 2019ರಲ್ಲಿ ಪುಲ್ವಾಮಾ ದಾಳಿಯಾದಾಗಲೂ ಕೂಡ ಇಮ್ರಾನ್​ ಖಾನ್​ರನ್ನು ಹೀಗಳೆದಿದ್ದರು. ಇಮ್ರಾನ್ ಖಾನ್​ ಮಿಲಿಟರಿಯ ಕೈಗೊಂಬೆಯಾಗಿದ್ದಾರೆ. ಸಿದ್ಧಾಂತದಲ್ಲಿ ರಾಜಿಮಾಡಿಕೊಂಡು ಅಧಿಕಾರಕ್ಕೆ ಬಂದವರು ಎಂದು ಟೀಕಿಸಿದ್ದರು.

ಇದನ್ನ ಓದಿ: ಹಿಂಸಾಚಾರಕ್ಕೆ ತಿರುಗಿದ ಉಷ್ಣ ವಿದ್ಯುತ್​ ಸ್ಥಾವರ ಕಾರ್ಮಿಕರ ಪ್ರತಿಭಟನೆ; 20 ಪೊಲೀಸರಿಗೆ ಗಾಯ, ವಾಹನಗಳೆಲ್ಲ ಧ್ವಂಸ

ಡಿಕೆ ಶಿವಕುಮಾರ್​ ಹಾಗೂ ಕೆಎನ್​​ ರಾಜಣ್ಣ ಭೇಟಿ: ಕುತೂಹಲ ಮೂಡಿಸಿದ ನಾಯಕರ ನಡ
ಡಿಕೆ ಶಿವಕುಮಾರ್​ ಹಾಗೂ ಕೆಎನ್​​ ರಾಜಣ್ಣ ಭೇಟಿ: ಕುತೂಹಲ ಮೂಡಿಸಿದ ನಾಯಕರ ನಡ
ವಿಶಾಖಪಟ್ಟಣದಲ್ಲಿ ರಸ್ತೆ ಕಾಮಗಾರಿ ವೇಳೆ ಶ್ರೀರಾಮನ ಪ್ರಾಚೀನ ವಿಗ್ರಹ ಪತ್ತೆ
ವಿಶಾಖಪಟ್ಟಣದಲ್ಲಿ ರಸ್ತೆ ಕಾಮಗಾರಿ ವೇಳೆ ಶ್ರೀರಾಮನ ಪ್ರಾಚೀನ ವಿಗ್ರಹ ಪತ್ತೆ
ಊಟಿಯಲ್ಲಿ ದಾಖಲೆಯ ಚಳಿ; ಪ್ರವಾಸಿಗರನ್ನು ಸೆಳೆಯುತ್ತಿವೆ ಹಿಮಾವೃತ ಹೂಗಳು
ಊಟಿಯಲ್ಲಿ ದಾಖಲೆಯ ಚಳಿ; ಪ್ರವಾಸಿಗರನ್ನು ಸೆಳೆಯುತ್ತಿವೆ ಹಿಮಾವೃತ ಹೂಗಳು
ಚಿಕ್ಕಬಳ್ಳಾಪುರದಲ್ಲಿ ಕಾರು-ಸ್ಕೂಟಿ ನಡುವೆ ಭೀಕರ ಅಪಘಾತ
ಚಿಕ್ಕಬಳ್ಳಾಪುರದಲ್ಲಿ ಕಾರು-ಸ್ಕೂಟಿ ನಡುವೆ ಭೀಕರ ಅಪಘಾತ
‘45’ ಸಿನಿಮಾದ ಕತೆ ಹುಟ್ಟಿದ್ದೇಗೆ? ಭಾವುಕ ಕ್ಷಣ ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾದ ಕತೆ ಹುಟ್ಟಿದ್ದೇಗೆ? ಭಾವುಕ ಕ್ಷಣ ವಿವರಿಸಿದ ಅರ್ಜುನ್ ಜನ್ಯ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ಗುವಾಹಟಿಯಲ್ಲಿ ಭಾರತದ ಮೊದಲ ಪ್ರಕೃತಿ ಥೀಮ್​ನ ಟರ್ಮಿನಲ್ ಉದ್ಘಾಟನೆ
ಗುವಾಹಟಿಯಲ್ಲಿ ಭಾರತದ ಮೊದಲ ಪ್ರಕೃತಿ ಥೀಮ್​ನ ಟರ್ಮಿನಲ್ ಉದ್ಘಾಟನೆ
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ