AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪಾಕ್​ ಪ್ರಧಾನಿ ಇಮ್ರಾನ್ ಖಾನ್​ ಪತ್ನಿ ಮೇಲೆ ಗುಂಡಿನ ದಾಳಿ; ಮಾಜಿ ಪತಿಯನ್ನು ಟೀಕಿಸಿ, ಹೇಡಿಗಳ ರಾಜ್ಯವೆಂದ ರೇಹಮ್​ ಖಾನ್​

ನನಗೆ ಗಾಯವಾಗದೆ ಇದ್ದರೂ ಘಟನೆಯಿಂದ ತುಂಬ ಕೋಪ ಬಂದಿದೆ. ಹಾಗೇ, ಜನಸಾಮಾನ್ಯರ ಬಗ್ಗೆ ಆತಂಕವಾಗುತ್ತಿದೆ. ಇದೊಂದು ಹೇಡಿತನದ ಕೃತ್ಯ ಎಂದು ಹೇಳಿದ್ದಾರೆ.  ರೇಹಮ್​ ಖಾನ್​ ಅವರು ಬ್ರಿಟಿಷ್​-ಪಾಕಿಸ್ತಾನಿ ಮೂಲದವರು.

ಪಾಕ್​ ಪ್ರಧಾನಿ ಇಮ್ರಾನ್ ಖಾನ್​ ಪತ್ನಿ ಮೇಲೆ ಗುಂಡಿನ ದಾಳಿ; ಮಾಜಿ ಪತಿಯನ್ನು ಟೀಕಿಸಿ, ಹೇಡಿಗಳ ರಾಜ್ಯವೆಂದ ರೇಹಮ್​ ಖಾನ್​
ರಹೇಮ್ ಖಾನ್​
TV9 Web
| Edited By: |

Updated on: Jan 03, 2022 | 9:30 AM

Share

ಪಾಕಿಸ್ತಾನದ ಪ್ರಧಾನಮಂತ್ರಿ ಇಮ್ರಾನ್ ಖಾನ್ (Imrah Khan)​ ಮಾಜಿ ಪತ್ನಿ ರೇಹಮ್​ ಖಾನ್​ ಪ್ರಯಾಣಿಸುತ್ತಿದ್ದ ವಾಹನದ ಮೇಲೆ ಗುಂಡಿನ ದಾಳಿಯಾಗಿದೆ. ಈ ಬಗ್ಗೆ ರೇಹಮ್​ ಟ್ವೀಟ್ ಮಾಡಿ ತಿಳಿಸಿದ್ದಾರೆ. ಹಾಗೇ, ತಮ್ಮ ಮಾಜಿ ಪತಿ ಇಮ್ರಾನ್​ ಖಾನ್​ ವಿರುದ್ಧ ಕಟು ವಾಗ್ದಾಳಿ ನಡೆಸಿದ್ದಾರೆ. ಟ್ವೀಟ್ ಮಾಡಿರುವ ರೇಹಮ್​ ಖಾನ್​, ನಾನು ನನ್ನ ಸಂಬಂಧಿಯೊಬ್ಬರ ವಿವಾಹ ಸಮಾರಂಭದಿಂದ ಭಾನುವಾರ ರಾತ್ರಿ ವಾಪಸ್​ ಬರುತ್ತಿದ್ದೆ. ಆಗ ನನ್ನ ಕಾರಿನ ಮೇಲೆ ಗುಂಡಿನ ದಾಳಿಯಾಗಿದೆ. ಮೋಟರ್​ ಸೈಕಲ್​ ಮೇಲೆ ಬಂದ ಇಬ್ಬರು ಅಪರಿಚಿತರು ಗುಂಡು ಹಾರಿಸಿದ್ದಾರೆ. ನನ್ನ ವೈಯಕ್ತಿಕ ಕಾರ್ಯದರ್ಶಿ ಮತ್ತು ಚಾಲಕ ಕೂಡ ಕಾರಿನಲ್ಲಿ ಇದ್ದರು. ಅದೃಷ್ಟಕ್ಕೆ ಏನೂ ಅಪಾಯ ಆಗಲಿಲ್ಲ. ಈ ಇಮ್ರಾನ್​ ಖಾನ್​ ಆಡಳಿತದ ಹೊಸ ಪಾಕಿಸ್ತಾನ !.ಈಗ ಇದು ಹೇಡಿಗಳು, ಕೊಲೆಗೆಡುಕರು, ದುರಾಸೆಬುರುಕರ ರಾಜ್ಯವಾಗಿದೆ ಎಂದು ಹೇಳಿದ್ದಾರೆ. ಈ ಮೂಲಕ ಇಮ್ರಾನ್​ ಖಾನ್​​ರನ್ನು ಟೀಕಿಸಿದ್ದಾರೆ. 

ನನಗೆ ಗಾಯವಾಗದೆ ಇದ್ದರೂ ಘಟನೆಯಿಂದ ತುಂಬ ಕೋಪ ಬಂದಿದೆ. ಹಾಗೇ, ಜನಸಾಮಾನ್ಯರ ಬಗ್ಗೆ ಆತಂಕವಾಗುತ್ತಿದೆ. ಇದೊಂದು ಹೇಡಿತನದ ಕೃತ್ಯ ಎಂದು ಹೇಳಿದ್ದಾರೆ.  ರೇಹಮ್​ ಖಾನ್​ ಅವರು ಬ್ರಿಟಿಷ್​-ಪಾಕಿಸ್ತಾನಿ ಮೂಲದವರು. ಮಾಜಿ ಟಿವಿ ನಿರೂಪಕಿ. 2014ರ ಅಕ್ಟೋಬರ್​ 30ರಂದು ಇಮ್ರಾನ್ ಖಾನ್​ರನ್ನು ಮದುವೆಯಾಗಿದ್ದರು. ನಂತರ 2015ರಲ್ಲಿ ವಿಚ್ಛೇದನ ನೀಡಿದ್ದಾರೆ. ಅವರಂತೂ ತಮ್ಮ ಮಾಜಿ ಪತಿಯನ್ನು ಸದಾ ಟೀಕಿಸುತ್ತಾರೆ.  ಇಮ್ರಾನ್​ ಖಾನ್ ಆಡಳಿತ, ಅವರ ಸಾರ್ವಜನಿಕ ನಿಯಮಗಳ ವಿರುದ್ಧ ಪದೇಪದೆ ವಾಗ್ದಾಳಿ ನಡೆಸುತ್ತಾರೆ. 2019ರಲ್ಲಿ ಪುಲ್ವಾಮಾ ದಾಳಿಯಾದಾಗಲೂ ಕೂಡ ಇಮ್ರಾನ್​ ಖಾನ್​ರನ್ನು ಹೀಗಳೆದಿದ್ದರು. ಇಮ್ರಾನ್ ಖಾನ್​ ಮಿಲಿಟರಿಯ ಕೈಗೊಂಬೆಯಾಗಿದ್ದಾರೆ. ಸಿದ್ಧಾಂತದಲ್ಲಿ ರಾಜಿಮಾಡಿಕೊಂಡು ಅಧಿಕಾರಕ್ಕೆ ಬಂದವರು ಎಂದು ಟೀಕಿಸಿದ್ದರು.

ಇದನ್ನ ಓದಿ: ಹಿಂಸಾಚಾರಕ್ಕೆ ತಿರುಗಿದ ಉಷ್ಣ ವಿದ್ಯುತ್​ ಸ್ಥಾವರ ಕಾರ್ಮಿಕರ ಪ್ರತಿಭಟನೆ; 20 ಪೊಲೀಸರಿಗೆ ಗಾಯ, ವಾಹನಗಳೆಲ್ಲ ಧ್ವಂಸ

Follow Us
Web contact
Web contact

TV9 Kannada

Read More
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​