AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪಾಕ್​ ಪ್ರಧಾನಿ ಇಮ್ರಾನ್ ಖಾನ್​ ಪತ್ನಿ ಮೇಲೆ ಗುಂಡಿನ ದಾಳಿ; ಮಾಜಿ ಪತಿಯನ್ನು ಟೀಕಿಸಿ, ಹೇಡಿಗಳ ರಾಜ್ಯವೆಂದ ರೇಹಮ್​ ಖಾನ್​

ನನಗೆ ಗಾಯವಾಗದೆ ಇದ್ದರೂ ಘಟನೆಯಿಂದ ತುಂಬ ಕೋಪ ಬಂದಿದೆ. ಹಾಗೇ, ಜನಸಾಮಾನ್ಯರ ಬಗ್ಗೆ ಆತಂಕವಾಗುತ್ತಿದೆ. ಇದೊಂದು ಹೇಡಿತನದ ಕೃತ್ಯ ಎಂದು ಹೇಳಿದ್ದಾರೆ.  ರೇಹಮ್​ ಖಾನ್​ ಅವರು ಬ್ರಿಟಿಷ್​-ಪಾಕಿಸ್ತಾನಿ ಮೂಲದವರು.

ಪಾಕ್​ ಪ್ರಧಾನಿ ಇಮ್ರಾನ್ ಖಾನ್​ ಪತ್ನಿ ಮೇಲೆ ಗುಂಡಿನ ದಾಳಿ; ಮಾಜಿ ಪತಿಯನ್ನು ಟೀಕಿಸಿ, ಹೇಡಿಗಳ ರಾಜ್ಯವೆಂದ ರೇಹಮ್​ ಖಾನ್​
ರಹೇಮ್ ಖಾನ್​
TV9 Web
| Edited By: |

Updated on: Jan 03, 2022 | 9:30 AM

Share

ಪಾಕಿಸ್ತಾನದ ಪ್ರಧಾನಮಂತ್ರಿ ಇಮ್ರಾನ್ ಖಾನ್ (Imrah Khan)​ ಮಾಜಿ ಪತ್ನಿ ರೇಹಮ್​ ಖಾನ್​ ಪ್ರಯಾಣಿಸುತ್ತಿದ್ದ ವಾಹನದ ಮೇಲೆ ಗುಂಡಿನ ದಾಳಿಯಾಗಿದೆ. ಈ ಬಗ್ಗೆ ರೇಹಮ್​ ಟ್ವೀಟ್ ಮಾಡಿ ತಿಳಿಸಿದ್ದಾರೆ. ಹಾಗೇ, ತಮ್ಮ ಮಾಜಿ ಪತಿ ಇಮ್ರಾನ್​ ಖಾನ್​ ವಿರುದ್ಧ ಕಟು ವಾಗ್ದಾಳಿ ನಡೆಸಿದ್ದಾರೆ. ಟ್ವೀಟ್ ಮಾಡಿರುವ ರೇಹಮ್​ ಖಾನ್​, ನಾನು ನನ್ನ ಸಂಬಂಧಿಯೊಬ್ಬರ ವಿವಾಹ ಸಮಾರಂಭದಿಂದ ಭಾನುವಾರ ರಾತ್ರಿ ವಾಪಸ್​ ಬರುತ್ತಿದ್ದೆ. ಆಗ ನನ್ನ ಕಾರಿನ ಮೇಲೆ ಗುಂಡಿನ ದಾಳಿಯಾಗಿದೆ. ಮೋಟರ್​ ಸೈಕಲ್​ ಮೇಲೆ ಬಂದ ಇಬ್ಬರು ಅಪರಿಚಿತರು ಗುಂಡು ಹಾರಿಸಿದ್ದಾರೆ. ನನ್ನ ವೈಯಕ್ತಿಕ ಕಾರ್ಯದರ್ಶಿ ಮತ್ತು ಚಾಲಕ ಕೂಡ ಕಾರಿನಲ್ಲಿ ಇದ್ದರು. ಅದೃಷ್ಟಕ್ಕೆ ಏನೂ ಅಪಾಯ ಆಗಲಿಲ್ಲ. ಈ ಇಮ್ರಾನ್​ ಖಾನ್​ ಆಡಳಿತದ ಹೊಸ ಪಾಕಿಸ್ತಾನ !.ಈಗ ಇದು ಹೇಡಿಗಳು, ಕೊಲೆಗೆಡುಕರು, ದುರಾಸೆಬುರುಕರ ರಾಜ್ಯವಾಗಿದೆ ಎಂದು ಹೇಳಿದ್ದಾರೆ. ಈ ಮೂಲಕ ಇಮ್ರಾನ್​ ಖಾನ್​​ರನ್ನು ಟೀಕಿಸಿದ್ದಾರೆ. 

ನನಗೆ ಗಾಯವಾಗದೆ ಇದ್ದರೂ ಘಟನೆಯಿಂದ ತುಂಬ ಕೋಪ ಬಂದಿದೆ. ಹಾಗೇ, ಜನಸಾಮಾನ್ಯರ ಬಗ್ಗೆ ಆತಂಕವಾಗುತ್ತಿದೆ. ಇದೊಂದು ಹೇಡಿತನದ ಕೃತ್ಯ ಎಂದು ಹೇಳಿದ್ದಾರೆ.  ರೇಹಮ್​ ಖಾನ್​ ಅವರು ಬ್ರಿಟಿಷ್​-ಪಾಕಿಸ್ತಾನಿ ಮೂಲದವರು. ಮಾಜಿ ಟಿವಿ ನಿರೂಪಕಿ. 2014ರ ಅಕ್ಟೋಬರ್​ 30ರಂದು ಇಮ್ರಾನ್ ಖಾನ್​ರನ್ನು ಮದುವೆಯಾಗಿದ್ದರು. ನಂತರ 2015ರಲ್ಲಿ ವಿಚ್ಛೇದನ ನೀಡಿದ್ದಾರೆ. ಅವರಂತೂ ತಮ್ಮ ಮಾಜಿ ಪತಿಯನ್ನು ಸದಾ ಟೀಕಿಸುತ್ತಾರೆ.  ಇಮ್ರಾನ್​ ಖಾನ್ ಆಡಳಿತ, ಅವರ ಸಾರ್ವಜನಿಕ ನಿಯಮಗಳ ವಿರುದ್ಧ ಪದೇಪದೆ ವಾಗ್ದಾಳಿ ನಡೆಸುತ್ತಾರೆ. 2019ರಲ್ಲಿ ಪುಲ್ವಾಮಾ ದಾಳಿಯಾದಾಗಲೂ ಕೂಡ ಇಮ್ರಾನ್​ ಖಾನ್​ರನ್ನು ಹೀಗಳೆದಿದ್ದರು. ಇಮ್ರಾನ್ ಖಾನ್​ ಮಿಲಿಟರಿಯ ಕೈಗೊಂಬೆಯಾಗಿದ್ದಾರೆ. ಸಿದ್ಧಾಂತದಲ್ಲಿ ರಾಜಿಮಾಡಿಕೊಂಡು ಅಧಿಕಾರಕ್ಕೆ ಬಂದವರು ಎಂದು ಟೀಕಿಸಿದ್ದರು.

ಇದನ್ನ ಓದಿ: ಹಿಂಸಾಚಾರಕ್ಕೆ ತಿರುಗಿದ ಉಷ್ಣ ವಿದ್ಯುತ್​ ಸ್ಥಾವರ ಕಾರ್ಮಿಕರ ಪ್ರತಿಭಟನೆ; 20 ಪೊಲೀಸರಿಗೆ ಗಾಯ, ವಾಹನಗಳೆಲ್ಲ ಧ್ವಂಸ

Follow Us
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಹಾಸನ: ಬೆಂಗಳೂರು-ಮಂಗಳೂರು ಹೆದ್ದಾರಿಯಲ್ಲಿ ಪೆಟ್ರೋಲ್ ಟ್ಯಾಂಕರ್ ಪಲ್ಟಿ
ಹಾಸನ: ಬೆಂಗಳೂರು-ಮಂಗಳೂರು ಹೆದ್ದಾರಿಯಲ್ಲಿ ಪೆಟ್ರೋಲ್ ಟ್ಯಾಂಕರ್ ಪಲ್ಟಿ
ಶಾರ್ಟ್​ ಸರ್ಕ್ಯೂಟ್​ಗೆ ಸಿಲಿಂಡರ್​ ಸ್ಫೋಟ; 21 ಲಕ್ಷ ರೂ. ಕಳೆದುಕೊಂಡ ಮಾಲೀಕ
ಶಾರ್ಟ್​ ಸರ್ಕ್ಯೂಟ್​ಗೆ ಸಿಲಿಂಡರ್​ ಸ್ಫೋಟ; 21 ಲಕ್ಷ ರೂ. ಕಳೆದುಕೊಂಡ ಮಾಲೀಕ