AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪಾಕ್​ ಪ್ರಧಾನಿ ಇಮ್ರಾನ್ ಖಾನ್​ ಪತ್ನಿ ಮೇಲೆ ಗುಂಡಿನ ದಾಳಿ; ಮಾಜಿ ಪತಿಯನ್ನು ಟೀಕಿಸಿ, ಹೇಡಿಗಳ ರಾಜ್ಯವೆಂದ ರೇಹಮ್​ ಖಾನ್​

ನನಗೆ ಗಾಯವಾಗದೆ ಇದ್ದರೂ ಘಟನೆಯಿಂದ ತುಂಬ ಕೋಪ ಬಂದಿದೆ. ಹಾಗೇ, ಜನಸಾಮಾನ್ಯರ ಬಗ್ಗೆ ಆತಂಕವಾಗುತ್ತಿದೆ. ಇದೊಂದು ಹೇಡಿತನದ ಕೃತ್ಯ ಎಂದು ಹೇಳಿದ್ದಾರೆ.  ರೇಹಮ್​ ಖಾನ್​ ಅವರು ಬ್ರಿಟಿಷ್​-ಪಾಕಿಸ್ತಾನಿ ಮೂಲದವರು.

ಪಾಕ್​ ಪ್ರಧಾನಿ ಇಮ್ರಾನ್ ಖಾನ್​ ಪತ್ನಿ ಮೇಲೆ ಗುಂಡಿನ ದಾಳಿ; ಮಾಜಿ ಪತಿಯನ್ನು ಟೀಕಿಸಿ, ಹೇಡಿಗಳ ರಾಜ್ಯವೆಂದ ರೇಹಮ್​ ಖಾನ್​
ರಹೇಮ್ ಖಾನ್​
Follow us
TV9 Web
| Updated By: Lakshmi Hegde

Updated on: Jan 03, 2022 | 9:30 AM

ಪಾಕಿಸ್ತಾನದ ಪ್ರಧಾನಮಂತ್ರಿ ಇಮ್ರಾನ್ ಖಾನ್ (Imrah Khan)​ ಮಾಜಿ ಪತ್ನಿ ರೇಹಮ್​ ಖಾನ್​ ಪ್ರಯಾಣಿಸುತ್ತಿದ್ದ ವಾಹನದ ಮೇಲೆ ಗುಂಡಿನ ದಾಳಿಯಾಗಿದೆ. ಈ ಬಗ್ಗೆ ರೇಹಮ್​ ಟ್ವೀಟ್ ಮಾಡಿ ತಿಳಿಸಿದ್ದಾರೆ. ಹಾಗೇ, ತಮ್ಮ ಮಾಜಿ ಪತಿ ಇಮ್ರಾನ್​ ಖಾನ್​ ವಿರುದ್ಧ ಕಟು ವಾಗ್ದಾಳಿ ನಡೆಸಿದ್ದಾರೆ. ಟ್ವೀಟ್ ಮಾಡಿರುವ ರೇಹಮ್​ ಖಾನ್​, ನಾನು ನನ್ನ ಸಂಬಂಧಿಯೊಬ್ಬರ ವಿವಾಹ ಸಮಾರಂಭದಿಂದ ಭಾನುವಾರ ರಾತ್ರಿ ವಾಪಸ್​ ಬರುತ್ತಿದ್ದೆ. ಆಗ ನನ್ನ ಕಾರಿನ ಮೇಲೆ ಗುಂಡಿನ ದಾಳಿಯಾಗಿದೆ. ಮೋಟರ್​ ಸೈಕಲ್​ ಮೇಲೆ ಬಂದ ಇಬ್ಬರು ಅಪರಿಚಿತರು ಗುಂಡು ಹಾರಿಸಿದ್ದಾರೆ. ನನ್ನ ವೈಯಕ್ತಿಕ ಕಾರ್ಯದರ್ಶಿ ಮತ್ತು ಚಾಲಕ ಕೂಡ ಕಾರಿನಲ್ಲಿ ಇದ್ದರು. ಅದೃಷ್ಟಕ್ಕೆ ಏನೂ ಅಪಾಯ ಆಗಲಿಲ್ಲ. ಈ ಇಮ್ರಾನ್​ ಖಾನ್​ ಆಡಳಿತದ ಹೊಸ ಪಾಕಿಸ್ತಾನ !.ಈಗ ಇದು ಹೇಡಿಗಳು, ಕೊಲೆಗೆಡುಕರು, ದುರಾಸೆಬುರುಕರ ರಾಜ್ಯವಾಗಿದೆ ಎಂದು ಹೇಳಿದ್ದಾರೆ. ಈ ಮೂಲಕ ಇಮ್ರಾನ್​ ಖಾನ್​​ರನ್ನು ಟೀಕಿಸಿದ್ದಾರೆ. 

ನನಗೆ ಗಾಯವಾಗದೆ ಇದ್ದರೂ ಘಟನೆಯಿಂದ ತುಂಬ ಕೋಪ ಬಂದಿದೆ. ಹಾಗೇ, ಜನಸಾಮಾನ್ಯರ ಬಗ್ಗೆ ಆತಂಕವಾಗುತ್ತಿದೆ. ಇದೊಂದು ಹೇಡಿತನದ ಕೃತ್ಯ ಎಂದು ಹೇಳಿದ್ದಾರೆ.  ರೇಹಮ್​ ಖಾನ್​ ಅವರು ಬ್ರಿಟಿಷ್​-ಪಾಕಿಸ್ತಾನಿ ಮೂಲದವರು. ಮಾಜಿ ಟಿವಿ ನಿರೂಪಕಿ. 2014ರ ಅಕ್ಟೋಬರ್​ 30ರಂದು ಇಮ್ರಾನ್ ಖಾನ್​ರನ್ನು ಮದುವೆಯಾಗಿದ್ದರು. ನಂತರ 2015ರಲ್ಲಿ ವಿಚ್ಛೇದನ ನೀಡಿದ್ದಾರೆ. ಅವರಂತೂ ತಮ್ಮ ಮಾಜಿ ಪತಿಯನ್ನು ಸದಾ ಟೀಕಿಸುತ್ತಾರೆ.  ಇಮ್ರಾನ್​ ಖಾನ್ ಆಡಳಿತ, ಅವರ ಸಾರ್ವಜನಿಕ ನಿಯಮಗಳ ವಿರುದ್ಧ ಪದೇಪದೆ ವಾಗ್ದಾಳಿ ನಡೆಸುತ್ತಾರೆ. 2019ರಲ್ಲಿ ಪುಲ್ವಾಮಾ ದಾಳಿಯಾದಾಗಲೂ ಕೂಡ ಇಮ್ರಾನ್​ ಖಾನ್​ರನ್ನು ಹೀಗಳೆದಿದ್ದರು. ಇಮ್ರಾನ್ ಖಾನ್​ ಮಿಲಿಟರಿಯ ಕೈಗೊಂಬೆಯಾಗಿದ್ದಾರೆ. ಸಿದ್ಧಾಂತದಲ್ಲಿ ರಾಜಿಮಾಡಿಕೊಂಡು ಅಧಿಕಾರಕ್ಕೆ ಬಂದವರು ಎಂದು ಟೀಕಿಸಿದ್ದರು.

ಇದನ್ನ ಓದಿ: ಹಿಂಸಾಚಾರಕ್ಕೆ ತಿರುಗಿದ ಉಷ್ಣ ವಿದ್ಯುತ್​ ಸ್ಥಾವರ ಕಾರ್ಮಿಕರ ಪ್ರತಿಭಟನೆ; 20 ಪೊಲೀಸರಿಗೆ ಗಾಯ, ವಾಹನಗಳೆಲ್ಲ ಧ್ವಂಸ

ಮನೆಯ ದ್ವಾರಕ್ಕೆ ತೆಂಗಿನ ಕಾಯಿ ಕಟ್ಟುವುದರ ಹಿಂದಿನ ಅಧ್ಯಾತ್ಮಿಕ ರಹಸ್ಯ
ಮನೆಯ ದ್ವಾರಕ್ಕೆ ತೆಂಗಿನ ಕಾಯಿ ಕಟ್ಟುವುದರ ಹಿಂದಿನ ಅಧ್ಯಾತ್ಮಿಕ ರಹಸ್ಯ
ಚಂದ್ರ ವೃಶ್ಚಿಕ ರಾಶಿಯಲ್ಲಿ ಸಂಚಾರ: ದ್ವಾದಶ ರಾಶಿಗಳ ಫಲಾಫಲ ಹೇಗಿದೆ ನೋಡಿ
ಚಂದ್ರ ವೃಶ್ಚಿಕ ರಾಶಿಯಲ್ಲಿ ಸಂಚಾರ: ದ್ವಾದಶ ರಾಶಿಗಳ ಫಲಾಫಲ ಹೇಗಿದೆ ನೋಡಿ
ವಿಜಯೇಂದ್ರ ಕೆಳಗಿಳಿಸಿ ನನ್ನನ್ನು ಪಕ್ಷಕ್ಕೆ ಸೇರಿಸಿಕೊಳ್ಳುತ್ತಾರೆ: ಯತ್ನಾಳ್
ವಿಜಯೇಂದ್ರ ಕೆಳಗಿಳಿಸಿ ನನ್ನನ್ನು ಪಕ್ಷಕ್ಕೆ ಸೇರಿಸಿಕೊಳ್ಳುತ್ತಾರೆ: ಯತ್ನಾಳ್
ರಾಕೇಶ್ ಒಬ್ಬ ಒಳ್ಳೆಯ ಮಗ, ಸಹೋದರ ಮತ್ತು ವ್ಯಕ್ತಿ ಕೂಡ ಆಗಿದ್ದರು
ರಾಕೇಶ್ ಒಬ್ಬ ಒಳ್ಳೆಯ ಮಗ, ಸಹೋದರ ಮತ್ತು ವ್ಯಕ್ತಿ ಕೂಡ ಆಗಿದ್ದರು
ರಕ್ಷಿತಾಗೆ ರಾಕೇಶ್ ಮೇಲಿದ್ದ ವಾತ್ಸಲ್ಯ, ಪ್ರೀತಿ ಪದಗಳಲ್ಲಿ ಹೇಳಲಾಗದು
ರಕ್ಷಿತಾಗೆ ರಾಕೇಶ್ ಮೇಲಿದ್ದ ವಾತ್ಸಲ್ಯ, ಪ್ರೀತಿ ಪದಗಳಲ್ಲಿ ಹೇಳಲಾಗದು
ರಾಕೇಶ್ ಪೂಜಾರಿ ಅಂತಿಮ ದರ್ಶನ ಪಡೆದು ಕಣ್ಣೀರು ಹಾಕಿದ ನಟಿ ರಕ್ಷಿತಾ ಪ್ರೇಮ್
ರಾಕೇಶ್ ಪೂಜಾರಿ ಅಂತಿಮ ದರ್ಶನ ಪಡೆದು ಕಣ್ಣೀರು ಹಾಕಿದ ನಟಿ ರಕ್ಷಿತಾ ಪ್ರೇಮ್
ದೇವೇಗೌಡರ ಮಾರ್ಗದರ್ಶನದಲ್ಲಿ ಪಕ್ಷ ಸಂಘಟನೆ ಕೆಲಸ ಶುರುವಾಗಲಿದೆ: ನಿಖಿಲ್
ದೇವೇಗೌಡರ ಮಾರ್ಗದರ್ಶನದಲ್ಲಿ ಪಕ್ಷ ಸಂಘಟನೆ ಕೆಲಸ ಶುರುವಾಗಲಿದೆ: ನಿಖಿಲ್
ರಾಕೇಶ್ ಪೂಜಾರಿ ಸಾವಿನ ಸುದ್ದಿ ಸುಳ್ಳಾಗಬಾರದೇ ಎನಿಸುತ್ತಿದೆ: ಗೋವಿಂದೇ ಗೌಡ
ರಾಕೇಶ್ ಪೂಜಾರಿ ಸಾವಿನ ಸುದ್ದಿ ಸುಳ್ಳಾಗಬಾರದೇ ಎನಿಸುತ್ತಿದೆ: ಗೋವಿಂದೇ ಗೌಡ
ಇಂದು ಸಾಯಂಕಾಲ 5 ಗಂಟೆಗೆ ನಡೆಯಬಹುದು ಡಿಜಿಎಂಒಗಳ ಸಭೆ
ಇಂದು ಸಾಯಂಕಾಲ 5 ಗಂಟೆಗೆ ನಡೆಯಬಹುದು ಡಿಜಿಎಂಒಗಳ ಸಭೆ
ಕೇಂದ್ರ ಸಚಿವ ಕುಮಾರಸ್ವಾಮಿ ಆರೋಗ್ಯದ ಬಗ್ಗೆ ಅಪ್ಡೇಟ್ ನೀಡಿದ ನಿಖಿಲ್​
ಕೇಂದ್ರ ಸಚಿವ ಕುಮಾರಸ್ವಾಮಿ ಆರೋಗ್ಯದ ಬಗ್ಗೆ ಅಪ್ಡೇಟ್ ನೀಡಿದ ನಿಖಿಲ್​