AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮದ್ಯ ಮಾರಾಟ ಮತ್ತು ಸೇವನೆ ನಿಷೇಧಿತ ಪಾಕಿಸ್ತಾನದಲ್ಲಿ ಪ್ರಧಾನಿ ಇಮ್ರಾನ್ ಖಾನ್ ಮಲಮಗ ಲಿಕ್ಕರ್​​ನೊಂದಿಗೆ ಸಿಕ್ಕಿಬಿದ್ದ!

ಮನೇಕಾ ಅವರನ್ನು ತಮ್ಮೊಂದಿಗೆ ಲಿಕ್ಕರ್ ಹೊಂದಿದ್ದ ಕಾರಣ ಬಂಧಿಸಲಾಗಿತ್ತು ಮತ್ತು ಬಂಧನಕ್ಕೊಳಗಾದ ಬಳಿಕ ಅವರು ತಾನು ಪಾಕಿಸ್ತಾನದ ಪ್ರಥಮ ಮಹಿಳೆಯ ಮಗನಾಗಿದ್ದು ಬಂಧಿಸಿರುವುದಕ್ಕೆ ಭಾರಿ ದಂಡ ತೆರಬೇಕಾಗುತ್ತದೆ ಅಂತ ಭದ್ರತಾ ಅಧಿಕಾರಿಗಳನ್ನು ಹೆದರಿಸಿದರೆಂದು ಅಧಿಕಾರಿ ಹೇಳಿದ್ದಾರೆ.

ಮದ್ಯ ಮಾರಾಟ ಮತ್ತು ಸೇವನೆ ನಿಷೇಧಿತ ಪಾಕಿಸ್ತಾನದಲ್ಲಿ ಪ್ರಧಾನಿ ಇಮ್ರಾನ್ ಖಾನ್ ಮಲಮಗ ಲಿಕ್ಕರ್​​ನೊಂದಿಗೆ ಸಿಕ್ಕಿಬಿದ್ದ!
ಇಮ್ರಾನ್ ಖಾನ್ ಮಲ ಮಗ ಮುಸಾ ಮನೇಕ
TV9 Web
| Updated By: shivaprasad.hs|

Updated on:Feb 24, 2022 | 7:36 AM

Share

ಲಾಹೋರ್: ಪಾಕಿಸ್ತಾನದ ಪ್ರಧಾನ ಮಂತ್ರಿ ಇಮ್ರಾನ್ ಖಾನ್ (Imran Khan) ಅವರ ಮಲಮಗ (stepson) ಮತ್ತು ಅವರ ಜೊತೆ ಇನ್ನಿಬ್ಬರು ಮದ್ಯದ ಬಾಟಲಿಗಳ ಜೊತೆ ಪೊಲೀಸರಿಗೆ ಸಿಕ್ಕಿಬಿದ್ದ ನಂತರ ‘ಮೇಲಿನವರ’ ಆದೇಶದ ಮೇರೆಗೆ ಅವರನ್ನು ಬಿಡುಗಡೆ ಮಾಡಲಾಯಿತು ಎಂದು ಪೊಲೀಸ್ ಮೂಲಗಳು ಮಂಗಳವಾರ ತಿಳಿಸಿವೆ. ಲಾಹೋರಿನ (Lahore) ಪೊಲೀಸ್ ಠಾಣೆಯೊಂದರಲ್ಲಿ ದಾಖಲಾಗಿರುವ ಎಫ್ ಐ ಆರ್ ಪ್ರಕಾರ ಪ್ರಧಾನಿ ಇಮ್ರಾನ್ ಖಾನ್ ಅವರ ಪತ್ನಿ ಬುಶ್ರಾ ಬೀಬು ಅವರು ತಮ್ಮ ಹಿಂದಿನ ಪತಿಯಿಂದ ಪಡೆದಿರುವ ಮಗ ಮುಸಾ ಮನೇಕಾ ಮತ್ತು ಅವರ ಇಬ್ಬರು ಸ್ನೇಹಿತರನ್ನು ಸೋಮವಾರದಂದು ಗಡ್ಡಾಫಿ ಸ್ಟೇಡಿಯಂ ಬಳಿ ಅವರು ಪ್ರಯಾಣಿಸುತ್ತಿದ್ದ ಕಾರಿನಲ್ಲಿ ಮದ್ಯದ ಬಾಟಲಿಗಳು ಪತ್ತೆಯಾದ ಬಳಿಕ ಬಂಧಿಸಲಾಗಿತ್ತು.

‘ದೇಶದ ಪ್ರಥಮ ಮಹಿಳೆಯ ಮಗ ಸೇರಿದಂತೆ ಮೂವರು ಯುವಕರನ್ನು ಮೇಲಿನ ಆದೇಶದ ಹಿನ್ನೆಲೆಯಲ್ಲಿ ಮೇರೆಗೆ ಬಂಧಿಸಿದ ದಿನವೇ ಬಿಡುಗಡೆ ಮಾಡಲಾಯಿತು. ಅರೋಪಿಗಳ ಕುಟುಂಬಗಳ ವೈಯಕ್ತಿಕ ಬಾಂಡ್ ಮತ್ತು ಕಾನೂನಿನ ಇತರ ಕ್ರಮಗಳನ್ನು ಪೂರೈಸಿದ ನಂತರ ಅವರನ್ನು ಬಿಡುಗಡೆ ಮಾಡಲಾಯಿತು,’ ಎಂದು ಪೊಲೀಸ್ ಅಧಿಕಾರಿಯೊಬ್ಬರು ಪಿಟಿಐ ಸುದ್ದಿಸಂಸ್ಥೆಗೆ ಮಂಗಳವಾರ ತಿಳಿಸಿದರು.

ಮನೇಕಾ ಅವರನ್ನು ತಮ್ಮೊಂದಿಗೆ ಲಿಕ್ಕರ್ ಹೊಂದಿದ್ದ ಕಾರಣ ಬಂಧಿಸಲಾಗಿತ್ತು ಮತ್ತು ಬಂಧನಕ್ಕೊಳಗಾದ ಬಳಿಕ ಅವರು ತಾನು ಪಾಕಿಸ್ತಾನದ ಪ್ರಥಮ ಮಹಿಳೆಯ ಮಗನಾಗಿದ್ದು ಬಂಧಿಸಿರುವುದಕ್ಕೆ ಭಾರಿ ದಂಡ ತೆರಬೇಕಾಗುತ್ತದೆ ಅಂತ ಭದ್ರತಾ ಅಧಿಕಾರಿಗಳನ್ನು ಹೆದರಿಸಿದರೆಂದು ಅಧಿಕಾರಿ ಹೇಳಿದ್ದಾರೆ.

ಮನೇಕಾ ವಿರುದ್ಧ ಪ್ರಕರಣ ದಾಖಲಾದ ಕೂಡಲೇ ಪಂಜಾಬ್ ಪೊಲೀಸ್ ಚೀಫ್ ಅವರಿಗೆ ‘ಮೇಲಿಂದ’ ಕರೆಗಳು ಬರಲಾರಂಭಿಸಿದವು. ಆದರೆ, ಪೊಲೀಸ್ ಮನೇಕಾ ವಿರುದ್ಧ ಯಾವುದೇ ಕ್ರಮ ಜರುಗಿಸದೆ ಕೆಲ ಗಂಟೆಗಳ ನಂತರ ಅವರನ್ನು ಬಿಡುಗಡೆ ಮಾಡಲಾಯಿತು,’ ಅಂತ ಅಧಿಕಾರಿ ತಿಳಿಸಿದ್ದಾರೆ.

ಮುಸ್ಲಿಂ ಬಹುಸಂಖ್ಯಾತ ರಾಷ್ಟ್ರವಾಗಿರುವ ಪಾಕಿಸ್ತಾನದಲ್ಲಿ ಮದ್ಯ ಮಾರಾಟ ಮತ್ತು ಸೇವನೆ ಕಾನೂನು ಬಾಹಿರವಾಗಿದೆ.

ಕಳೆದ ವಾರವಷ್ಟೇ ಪ್ರಧಾನಿ ಇಮ್ರಾನ್ ಖಾನ್ ಮತ್ತು ಅವರ ಮೂರನೇ ಪತ್ನಿ ಬುಶ್ರಾ ಅವರ ನಡುವೆ ವಿರಸ ತಲೆದೋರಿರುವ ವದಂತಿಗಳು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದ್ದವು.

ಬುಶ್ರಾ ಅವರ ಆಪ್ತ ಗೆಳತಿ ಫರ್ಹಾ ಖಾನ್ ಈ ವದಂತಿಗಳು ಸತ್ಯಕ್ಕೆ ದೂರವಾಗಿವೆ, ಪಾಕಿಸ್ತಾನದ ಪ್ರಥಮ ಮಹಿಳೆ ತಮ್ಮ ಪತಿಯೊಂದಿಗೆ ಇಸ್ಲಾಮಾಬಾದ್ ನಲ್ಲಿರುವ ಬಾನಿ ಗಾಲಾ ನಿವಾಸದಲ್ಲಿ ವಾಸಿಸುತ್ತಿದ್ದಾರೆ ಎಂದು ಹೇಳಿದ್ದರು.

‘ಪಾಕಿಸ್ತಾನದ ಪ್ರಥಮ ದಂಪತಿ ಬಗ್ಗೆ ಅಪಪ್ರಚಾರ ಮಾಡಲಾಗುತ್ತಿದೆ, ವಾಟ್ಸ್ಯಾಪ್ಗಳಲ್ಲಿ ಸುಳ್ಳು ಸುದ್ದಿಗಳನ್ನು ಹಬ್ಬಲಾಗುತ್ತಿದೆ. ಅವರು ನನ್ನ ಜೊತೆ ವಾಸಮಾಡುತ್ತಿಲ್ಲ, ಬದಲಿಗೆ ಇಸ್ಲಾಮಾಬಾದ್ ನಲ್ಲಿರುವ ಪ್ರಧಾನ ಮಂತ್ರಿಗಳ ಬಾನಿ ಗಾಲಾ ನಿವಾಸದಲ್ಲಿ ವಾಸಿಸುತ್ತಿದ್ದಾರೆ,’ ಎಂದುದ ಅವರು ಹೇಳಿದ್ದರು.

ಫೆಬ್ರವರಿ ಮೊದಲ ವಾರದಲ್ಲಿ ಪಾಕಿಸ್ತಾನದ ಫೆಡರಲ್ ತನಿಖಾ ಏಜೆನ್ಸಿಯು ದೇಶದಾದ್ಯಂತ ಕಾರ್ಯಾಚರಣೆ ನಡೆಸಿ ಇಮ್ರಾನ್ ಖಾನ್, ಅವರ ಪತ್ನಿ ಬುಶ್ರಾ ಮತ್ತು ಪಾಕಿಸ್ತಾನದ ಸೇನೆ ವಿರುದ್ಧ ಸಾಮಾಜಿಕ ಜಾಲತಾಣಗಳಲ್ಲಿ ಅವಹೇಳನಕಾರಿ ಮತ್ತು ದುರುದ್ದೇಶಪೂರಿತ ಅಭಿಯಾನ ನಡೆಸುತ್ತಿದ್ದ ಐದು ಜನರನ್ನು ಬಂಧಿಸಿತ್ತು.

ಇದನ್ನೂ ಓದಿ:  Imran Khan: ಭಾರತ- ಪಾಕ್ ನಡುವಿನ ಭಿನ್ನಾಭಿಪ್ರಾಯ ಬಗೆಹರಿಸಲು ಟಿವಿ ಚರ್ಚೆ ನಡೆಸೋಣ; ಪ್ರಧಾನಿ ಮೋದಿಗೆ ಇಮ್ರಾನ್ ಖಾನ್ ಆಹ್ವಾನ

Published On - 7:29 am, Thu, 24 February 22

ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?