AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೇಲಿಯೇ ಎದ್ದು ಹೊಲ ಮೇಯ್ದಂತೆ, ಭಾರತಕ್ಕೆ ಮಾದಕ ವಸ್ತು ಕಳ್ಳಸಾಗಣೆಯಲ್ಲಿ ಲಾಹೋರ್​ನ ಆ್ಯಂಟಿ ನಾರ್ಕೋಟಿಕ್ ಸೆಲ್​ನ ಮುಖ್ಯಸ್ಥರ ಕೈವಾಡ

ಡ್ರೋನ್​ಗಳ ಮೂಲಕ ಭಾರತ ಹಾಗೂ ಗಡಿಯಾಚೆಗಿನ ಮಾದಕವಸ್ತು ಕಳ್ಳಸಾಗಣೆ ಜಾಲವನ್ನು ಭೇದಿಸಿರುವುದಾಗಿ ಪಾಕಿಸ್ತಾನದ ಮಾದಕ ದ್ರವ್ಯ ನಿಗ್ರಹ ಪಡೆ ಮಾಹಿತಿ ನೀಡಿದೆ. ಪಾಕಿಸ್ತಾನದ ಪೊಲೀಸರ ಪ್ರಕಾರ, ಕಳೆದ ವಾರ ಪಾಕಿಸ್ತಾನದ ರೇಂಜರ್​ಗಳು  ಮಾದಕದ್ರವ್ಯಗಳು, ಶಸ್ತ್ರಾಸ್ತ್ರಗಳು ಮತ್ತು ಮದ್ದುಗುಂಡುಗಳನ್ನು ಕಳ್ಳಸಾಗಣೆ ಮಾಡಲು ಯತ್ನಿಸಿದ ಆರು ಭಾರತೀಯ ಪ್ರಜೆಗಳನ್ನು ಪಾಕಿಸ್ತಾನದಲ್ಲಿ ಬಂಧಿಸಲಾಗಿದೆ.

ಬೇಲಿಯೇ ಎದ್ದು ಹೊಲ ಮೇಯ್ದಂತೆ, ಭಾರತಕ್ಕೆ ಮಾದಕ ವಸ್ತು ಕಳ್ಳಸಾಗಣೆಯಲ್ಲಿ ಲಾಹೋರ್​ನ ಆ್ಯಂಟಿ ನಾರ್ಕೋಟಿಕ್ ಸೆಲ್​ನ ಮುಖ್ಯಸ್ಥರ ಕೈವಾಡ
ಡ್ರೋನ್Image Credit source: News 18
ನಯನಾ ರಾಜೀವ್
|

Updated on: Aug 31, 2023 | 10:34 AM

Share

ಲಾಹೋರ್, ಆಗಸ್ಟ್​ 31: ಡ್ರೋನ್​ಗಳ ಮೂಲಕ ಭಾರತ ಹಾಗೂ ಗಡಿಯಾಚೆಗಿನ ಮಾದಕವಸ್ತು ಕಳ್ಳಸಾಗಣೆ ಜಾಲವನ್ನು ಭೇದಿಸಿರುವುದಾಗಿ ಪಾಕಿಸ್ತಾನದ ಮಾದಕ ದ್ರವ್ಯ ನಿಗ್ರಹ ಪಡೆ ಮಾಹಿತಿ ನೀಡಿದೆ. ಪಾಕಿಸ್ತಾನದ ಪೊಲೀಸರ ಪ್ರಕಾರ, ಕಳೆದ ವಾರ ಪಾಕಿಸ್ತಾನದ ರೇಂಜರ್​ಗಳು  ಮಾದಕದ್ರವ್ಯಗಳು, ಶಸ್ತ್ರಾಸ್ತ್ರಗಳು ಮತ್ತು ಮದ್ದುಗುಂಡುಗಳನ್ನು ಕಳ್ಳಸಾಗಣೆ ಮಾಡಲು ಯತ್ನಿಸಿದ ಆರು ಭಾರತೀಯ ಪ್ರಜೆಗಳನ್ನು ಪಾಕಿಸ್ತಾನದಲ್ಲಿ ಬಂಧಿಸಲಾಗಿದೆ.

ಗುರ್ಮೀತ್ ಸಿಂಗ್ , ಶಿಂದರ್ ಸಿಂಗ್, ಜೋಗಿಂದರ್ ಸಿಂಗ್ ಹಾಗೂ ವಿಶಾಲ್ ಜಗ್ಗ ಸೇರಿದಂತೆ ನಾಲ್ವರು ಕಳ್ಳಸಾಗಣೆದಾರರು ಭಾರತದ ಫಿರೋಜ್​ಪುರದವರು ಮತ್ತು ರತನ್​ಪಾಲ್ ಹಾಗೂ ಗರ್ವೇಂದರ್​ ಸಿಂಗ್ ಜಲಂಧರ್ ಹಾಗೂ ಲುಧಿಯಾನದವರು ಎಂದು ಹೇಳಿದ್ದಾರೆ.

ಆದರೆ ಸತ್ಯವೇ ಬೇರೆ, ಪಂಜಾಬ್​ ಪೊಲೀಸರ ಮಾಹಿತಿ ಪ್ರಕಾರ, ಲಾಹೋರ್​ ಆ್ಯಂಟಿ-ನಾರ್ಕೋಟಿಕ್ ಸೆಲ್​ನ ಮುಖ್ಯಸ್ಥ ಮಝರ್ ಇಕ್ಬಾಲ್, ಡ್ರಗ್ಸ್​ ವಿಶೇಷವಾಗಿ ಹೆರಾಯಿನ್​ ಅನ್ನು ಡ್ರೋನ್​ಗಳ ಮೂಲಕ ಭಾರತಕ್ಕೆ ಕಳ್ಳಸಾಗಣೆ ಮಾಡಿದ ಆರೋಪ ಹೊತ್ತಿದ್ದಾರೆ. ಅವರನ್ನು ಬಂಧಿಸಲಾಗಿದೆ ಎನ್ನುವ ಮಾಹಿತಿ ಲಭ್ಯವಾಗಿದೆ.

ಇಕ್ಬಾಲ್ ಕಳ್ಳಸಾಗಣೆ ಮೂಲಕ ಕೋಟ್ಯಂತರ ರೂಪಾಯಿ ಕಳಿಸಿದ್ದು, ಇತ್ತೀಚೆಗೆ ಬಂಧಿತ ಭಾರತೀಯ ಕಳ್ಳಸಾಗಣೆದಾರರ ಹೇಳಿಕೆಯನ್ನು ಗಮನದಲ್ಲಿಟ್ಟುಕೊಂಡು ಆತನ ವಿರುದ್ಧ ಕ್ರಮ ಕೈಗೊಳ್ಳಲಾಗಿದೆ ಎಂದು ಹಿರಿಯ ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ. ಗಡಿಯಾಚೆಗಿನ ಮಾದಕವಸ್ತು ಕಳ್ಳಸಾಗಣೆ ಕುರಿತು ತನಿಖೆಯ ವ್ಯಾಪ್ತಿಯನ್ನು ಮತ್ತಷ್ಟು ವಿಸ್ತರಿಸಲು ಹಿರಿಯ ಪೊಲೀಸ್ ಅಧಿಕಾರಿಗಳ ಉನ್ನತಾಧಿಕಾರಿಗಳ ಸಮಿತಿಯನ್ನು ರಚಿಸಿದ್ದೇವೆ ಎಂದು ತಿಳಿಸಿದ್ದಾರೆ.

ಮತ್ತಷ್ಟು ಓದಿ: Punjab: ಅಮೃತಸರದಲ್ಲಿ ಡ್ರಗ್ಸ್​​ ಸಾಗಿಸುತ್ತಿದ್ದ ಪಾಕಿಸ್ತಾನಿ ಡ್ರೋನ್ ಹೊಡೆದುರುಳಿಸಿದ ಬಿಎಸ್​ಎಫ್​ ಯೋಧರು, 4 ದಿನಗಳಲ್ಲಿ 5ನೇ ಘಟನೆ

ಪ್ರಾಥಮಿಕ ತನಿಖೆ ಪ್ರಕಾರ, ಇಕ್ಬಾಲ್ ಮತ್ತು ಅವರ ಗ್ಯಾಂಗ್ ಕಸೂರ್​ನಿಂದ ಡ್ರೋನ್​ಗಳ ಮೂಲಕ ಭಾರತಕ್ಕೆ ಮಾದಕ ವಸ್ತುಗಳನ್ನು ಕಳ್ಳಸಾಗಣೆ ಮಾಡುತ್ತಿದ್ದರು ಎಂಬುದು ತಿಳಿದುಬಂದಿದೆ. ಲಾಹೋರ್ ಪೊಲೀಸರ ಆ್ಯಂಟಿ ನಾರ್ಕೋಟಿಕ್ ಸೆಲ್ ಮುಖ್ಯಸ್ಥರು ಈ ಜಾಲವನ್ನು ನಿರ್ವಹಿಸುತ್ತಿದ್ದರು.

ಅಂತಾರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Follow Us
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ
ಕನಕಪುರ ದೇಗುಲ ಮಠದ ಹಿರಿಯ ಶ್ರೀ ಮುಮ್ಮಡಿ ನಿರ್ವಾಣ ಸ್ವಾಮೀಜಿ ಲಿಂಗೈಕ್ಯ
ಕನಕಪುರ ದೇಗುಲ ಮಠದ ಹಿರಿಯ ಶ್ರೀ ಮುಮ್ಮಡಿ ನಿರ್ವಾಣ ಸ್ವಾಮೀಜಿ ಲಿಂಗೈಕ್ಯ
ನಿರ್ಮಲಾನಂದನಾಥಶ್ರೀ ಭೇಟಿಯಾದ ಸಿಎಂ ಡಿಕೆ ಶಿವಕುಮಾರ್
ನಿರ್ಮಲಾನಂದನಾಥಶ್ರೀ ಭೇಟಿಯಾದ ಸಿಎಂ ಡಿಕೆ ಶಿವಕುಮಾರ್