AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೇಲಿಯೇ ಎದ್ದು ಹೊಲ ಮೇಯ್ದಂತೆ, ಭಾರತಕ್ಕೆ ಮಾದಕ ವಸ್ತು ಕಳ್ಳಸಾಗಣೆಯಲ್ಲಿ ಲಾಹೋರ್​ನ ಆ್ಯಂಟಿ ನಾರ್ಕೋಟಿಕ್ ಸೆಲ್​ನ ಮುಖ್ಯಸ್ಥರ ಕೈವಾಡ

ಡ್ರೋನ್​ಗಳ ಮೂಲಕ ಭಾರತ ಹಾಗೂ ಗಡಿಯಾಚೆಗಿನ ಮಾದಕವಸ್ತು ಕಳ್ಳಸಾಗಣೆ ಜಾಲವನ್ನು ಭೇದಿಸಿರುವುದಾಗಿ ಪಾಕಿಸ್ತಾನದ ಮಾದಕ ದ್ರವ್ಯ ನಿಗ್ರಹ ಪಡೆ ಮಾಹಿತಿ ನೀಡಿದೆ. ಪಾಕಿಸ್ತಾನದ ಪೊಲೀಸರ ಪ್ರಕಾರ, ಕಳೆದ ವಾರ ಪಾಕಿಸ್ತಾನದ ರೇಂಜರ್​ಗಳು  ಮಾದಕದ್ರವ್ಯಗಳು, ಶಸ್ತ್ರಾಸ್ತ್ರಗಳು ಮತ್ತು ಮದ್ದುಗುಂಡುಗಳನ್ನು ಕಳ್ಳಸಾಗಣೆ ಮಾಡಲು ಯತ್ನಿಸಿದ ಆರು ಭಾರತೀಯ ಪ್ರಜೆಗಳನ್ನು ಪಾಕಿಸ್ತಾನದಲ್ಲಿ ಬಂಧಿಸಲಾಗಿದೆ.

ಬೇಲಿಯೇ ಎದ್ದು ಹೊಲ ಮೇಯ್ದಂತೆ, ಭಾರತಕ್ಕೆ ಮಾದಕ ವಸ್ತು ಕಳ್ಳಸಾಗಣೆಯಲ್ಲಿ ಲಾಹೋರ್​ನ ಆ್ಯಂಟಿ ನಾರ್ಕೋಟಿಕ್ ಸೆಲ್​ನ ಮುಖ್ಯಸ್ಥರ ಕೈವಾಡ
ಡ್ರೋನ್Image Credit source: News 18
ನಯನಾ ರಾಜೀವ್
|

Updated on: Aug 31, 2023 | 10:34 AM

Share

ಲಾಹೋರ್, ಆಗಸ್ಟ್​ 31: ಡ್ರೋನ್​ಗಳ ಮೂಲಕ ಭಾರತ ಹಾಗೂ ಗಡಿಯಾಚೆಗಿನ ಮಾದಕವಸ್ತು ಕಳ್ಳಸಾಗಣೆ ಜಾಲವನ್ನು ಭೇದಿಸಿರುವುದಾಗಿ ಪಾಕಿಸ್ತಾನದ ಮಾದಕ ದ್ರವ್ಯ ನಿಗ್ರಹ ಪಡೆ ಮಾಹಿತಿ ನೀಡಿದೆ. ಪಾಕಿಸ್ತಾನದ ಪೊಲೀಸರ ಪ್ರಕಾರ, ಕಳೆದ ವಾರ ಪಾಕಿಸ್ತಾನದ ರೇಂಜರ್​ಗಳು  ಮಾದಕದ್ರವ್ಯಗಳು, ಶಸ್ತ್ರಾಸ್ತ್ರಗಳು ಮತ್ತು ಮದ್ದುಗುಂಡುಗಳನ್ನು ಕಳ್ಳಸಾಗಣೆ ಮಾಡಲು ಯತ್ನಿಸಿದ ಆರು ಭಾರತೀಯ ಪ್ರಜೆಗಳನ್ನು ಪಾಕಿಸ್ತಾನದಲ್ಲಿ ಬಂಧಿಸಲಾಗಿದೆ.

ಗುರ್ಮೀತ್ ಸಿಂಗ್ , ಶಿಂದರ್ ಸಿಂಗ್, ಜೋಗಿಂದರ್ ಸಿಂಗ್ ಹಾಗೂ ವಿಶಾಲ್ ಜಗ್ಗ ಸೇರಿದಂತೆ ನಾಲ್ವರು ಕಳ್ಳಸಾಗಣೆದಾರರು ಭಾರತದ ಫಿರೋಜ್​ಪುರದವರು ಮತ್ತು ರತನ್​ಪಾಲ್ ಹಾಗೂ ಗರ್ವೇಂದರ್​ ಸಿಂಗ್ ಜಲಂಧರ್ ಹಾಗೂ ಲುಧಿಯಾನದವರು ಎಂದು ಹೇಳಿದ್ದಾರೆ.

ಆದರೆ ಸತ್ಯವೇ ಬೇರೆ, ಪಂಜಾಬ್​ ಪೊಲೀಸರ ಮಾಹಿತಿ ಪ್ರಕಾರ, ಲಾಹೋರ್​ ಆ್ಯಂಟಿ-ನಾರ್ಕೋಟಿಕ್ ಸೆಲ್​ನ ಮುಖ್ಯಸ್ಥ ಮಝರ್ ಇಕ್ಬಾಲ್, ಡ್ರಗ್ಸ್​ ವಿಶೇಷವಾಗಿ ಹೆರಾಯಿನ್​ ಅನ್ನು ಡ್ರೋನ್​ಗಳ ಮೂಲಕ ಭಾರತಕ್ಕೆ ಕಳ್ಳಸಾಗಣೆ ಮಾಡಿದ ಆರೋಪ ಹೊತ್ತಿದ್ದಾರೆ. ಅವರನ್ನು ಬಂಧಿಸಲಾಗಿದೆ ಎನ್ನುವ ಮಾಹಿತಿ ಲಭ್ಯವಾಗಿದೆ.

ಇಕ್ಬಾಲ್ ಕಳ್ಳಸಾಗಣೆ ಮೂಲಕ ಕೋಟ್ಯಂತರ ರೂಪಾಯಿ ಕಳಿಸಿದ್ದು, ಇತ್ತೀಚೆಗೆ ಬಂಧಿತ ಭಾರತೀಯ ಕಳ್ಳಸಾಗಣೆದಾರರ ಹೇಳಿಕೆಯನ್ನು ಗಮನದಲ್ಲಿಟ್ಟುಕೊಂಡು ಆತನ ವಿರುದ್ಧ ಕ್ರಮ ಕೈಗೊಳ್ಳಲಾಗಿದೆ ಎಂದು ಹಿರಿಯ ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ. ಗಡಿಯಾಚೆಗಿನ ಮಾದಕವಸ್ತು ಕಳ್ಳಸಾಗಣೆ ಕುರಿತು ತನಿಖೆಯ ವ್ಯಾಪ್ತಿಯನ್ನು ಮತ್ತಷ್ಟು ವಿಸ್ತರಿಸಲು ಹಿರಿಯ ಪೊಲೀಸ್ ಅಧಿಕಾರಿಗಳ ಉನ್ನತಾಧಿಕಾರಿಗಳ ಸಮಿತಿಯನ್ನು ರಚಿಸಿದ್ದೇವೆ ಎಂದು ತಿಳಿಸಿದ್ದಾರೆ.

ಮತ್ತಷ್ಟು ಓದಿ: Punjab: ಅಮೃತಸರದಲ್ಲಿ ಡ್ರಗ್ಸ್​​ ಸಾಗಿಸುತ್ತಿದ್ದ ಪಾಕಿಸ್ತಾನಿ ಡ್ರೋನ್ ಹೊಡೆದುರುಳಿಸಿದ ಬಿಎಸ್​ಎಫ್​ ಯೋಧರು, 4 ದಿನಗಳಲ್ಲಿ 5ನೇ ಘಟನೆ

ಪ್ರಾಥಮಿಕ ತನಿಖೆ ಪ್ರಕಾರ, ಇಕ್ಬಾಲ್ ಮತ್ತು ಅವರ ಗ್ಯಾಂಗ್ ಕಸೂರ್​ನಿಂದ ಡ್ರೋನ್​ಗಳ ಮೂಲಕ ಭಾರತಕ್ಕೆ ಮಾದಕ ವಸ್ತುಗಳನ್ನು ಕಳ್ಳಸಾಗಣೆ ಮಾಡುತ್ತಿದ್ದರು ಎಂಬುದು ತಿಳಿದುಬಂದಿದೆ. ಲಾಹೋರ್ ಪೊಲೀಸರ ಆ್ಯಂಟಿ ನಾರ್ಕೋಟಿಕ್ ಸೆಲ್ ಮುಖ್ಯಸ್ಥರು ಈ ಜಾಲವನ್ನು ನಿರ್ವಹಿಸುತ್ತಿದ್ದರು.

ಅಂತಾರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Follow Us
ಬಾಗೇಪಲ್ಲಿ ಕಾರು ಚಾಲಕನ ಹತ್ಯೆ ಮಾಡಿದ ಆರೋಪಿಗೆ ಪೊಲೀಸರ ತೀವ್ರ ಶೋಧ
ಬಾಗೇಪಲ್ಲಿ ಕಾರು ಚಾಲಕನ ಹತ್ಯೆ ಮಾಡಿದ ಆರೋಪಿಗೆ ಪೊಲೀಸರ ತೀವ್ರ ಶೋಧ
ಬಾಲ್ಯದಲ್ಲೇ ನಟಿಸುವ ಆಸೆಯಿತ್ತು, ಅಪ್ಪ ಬೇಡ ಅಂದಿದ್ರು: ಮೋನಿಷಾ ವಿಜಯ್
ಬಾಲ್ಯದಲ್ಲೇ ನಟಿಸುವ ಆಸೆಯಿತ್ತು, ಅಪ್ಪ ಬೇಡ ಅಂದಿದ್ರು: ಮೋನಿಷಾ ವಿಜಯ್
ಬೆಂಗಳೂರಿಗೆ ಬಂದ ಇಡಿ ನಿರ್ದೇಶಕ ರಾಹುಲ್ ನವೀನ್
ಬೆಂಗಳೂರಿಗೆ ಬಂದ ಇಡಿ ನಿರ್ದೇಶಕ ರಾಹುಲ್ ನವೀನ್
ಜಗ್ಗು ಮಮ್ಮಿಯ ವ್ಯಂಗ್ಯ ಮಾಡಿದ ತಾಂಡವ್​​ಗೆ ಸುದೀಪ್ ತರಾಟೆ: ವಿಡಿಯೋ
ಜಗ್ಗು ಮಮ್ಮಿಯ ವ್ಯಂಗ್ಯ ಮಾಡಿದ ತಾಂಡವ್​​ಗೆ ಸುದೀಪ್ ತರಾಟೆ: ವಿಡಿಯೋ
ಥಣಿಸಂದ್ರದ ರಿಸರ್ಚ್ ಸೆಂಟರ್‌ಗೆ ಸಚಿವ ರಾಮಲಿಂಗಾರೆಡ್ಡಿ ದಿಢೀರ್ ಭೇಟಿ
ಥಣಿಸಂದ್ರದ ರಿಸರ್ಚ್ ಸೆಂಟರ್‌ಗೆ ಸಚಿವ ರಾಮಲಿಂಗಾರೆಡ್ಡಿ ದಿಢೀರ್ ಭೇಟಿ
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!