AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪ್ಯಾಲೆಸ್ತೀನ್ ಬ್ಯಾಗ್ ಹಿಡಿದು ಸಂಸತ್ತಿಗೆ ಹೋದ ಪ್ರಿಯಾಂಕಾಳನ್ನು ಹೊಗಳಿದ ಪಾಕಿಸ್ತಾನ ರಾಜಕಾರಣಿ

ಕಾಂಗ್ರೆಸ್​ ಸಂಸದೆ ಪ್ರಿಯಾಂಕಾ ಗಾಂಧಿ ಸಂಸತ್ತಿಗೆ ಪ್ಯಾಲೆಸ್ತೀನ್ ಎಂದು ಬರೆದಿರುವ ಬ್ಯಾಗ್​ ಹಿಡಿದುಕೊಂಡು ಹೋಗಿರುವುದು ಕೇವಲ ಭಾರತದಲ್ಲಿ ಮಾತ್ರವಲ್ಲ ಪಾಕಿಸ್ತಾನದಲ್ಲೂ ಚರ್ಚೆಯನ್ನು ಹುಟ್ಟುಹಾಕಿದೆ. ಪ್ರಿಯಾಂಕಾ ಗಾಂಧಿ ಪ್ಯಾಲೆಸ್ತೀನ್​ಗೆ ಬೆಂಬಲ ಸೂಚಿಸಲು ಈ ರೀತಿ ಮಾಡಿದ್ದಾರೆ ಎಂದು ಜನರು ಮಾತನಾಡಿಕೊಳ್ಳುತ್ತಿದ್ದಾರೆ. ಈ ಕುರಿತು ಪಾಕಿಸ್ತಾನ ಮಾಜಿ ಸಚಿವ ಫವಾದ್ ಹಸನ್ ಚೌಧರಿ ಮಾತನಾಡಿದ್ದಾರೆ.

ಪ್ಯಾಲೆಸ್ತೀನ್ ಬ್ಯಾಗ್ ಹಿಡಿದು ಸಂಸತ್ತಿಗೆ ಹೋದ ಪ್ರಿಯಾಂಕಾಳನ್ನು ಹೊಗಳಿದ ಪಾಕಿಸ್ತಾನ ರಾಜಕಾರಣಿ
ಪ್ರಿಯಾಂಕಾ -ಪವಾದ್
Follow us
ನಯನಾ ರಾಜೀವ್
|

Updated on: Dec 17, 2024 | 11:31 AM

ಕಾಂಗ್ರೆಸ್​ ಸಂಸದೆ ಪ್ರಿಯಾಂಕಾ ಗಾಂಧಿ ಸಂಸತ್ತಿಗೆ ಪ್ಯಾಲೆಸ್ತೀನ್ ಎಂದು ಬರೆದಿರುವ ಬ್ಯಾಗ್​ ಹಿಡಿದುಕೊಂಡು ಹೋಗಿರುವುದು ಕೇವಲ ಭಾರತದಲ್ಲಿ ಮಾತ್ರವಲ್ಲ ಪಾಕಿಸ್ತಾನದಲ್ಲೂ ಚರ್ಚೆಯನ್ನು ಹುಟ್ಟುಹಾಕಿದೆ. ಪ್ರಿಯಾಂಕಾ ಗಾಂಧಿ ಪ್ಯಾಲೆಸ್ತೀನ್​ಗೆ ಬೆಂಬಲ ಸೂಚಿಸಲು ಈ ರೀತಿ ಮಾಡಿದ್ದಾರೆ ಎಂದು ಜನರು ಮಾತನಾಡಿಕೊಳ್ಳುತ್ತಿದ್ದಾರೆ. ಈ ಕುರಿತು ಪಾಕಿಸ್ತಾನ ಮಾಜಿ ಸಚಿವ ಫವಾದ್ ಹಸನ್ ಚೌಧರಿ ಮಾತನಾಡಿದ್ದಾರೆ.

ಜವಾಹರಲಾಲ್ ನೆಹರೂ ಅವರಂತಹ ಮಹಾನ್ ಸ್ವಾತಂತ್ರ್ಯ ಹೋರಾಟಗಾರರ ಮೊಮ್ಮಗಳಿಂದ ಇನ್ನೇನು ನಿರೀಕ್ಷಿಸಲು ಸಾಧ್ಯ ಎಂದು ಅವರು ಬರೆದಿದ್ದಾರೆ. ಹೇಡಿಗಳ ನಡುವೆ ಪ್ರಿಯಾಂಕಾ ತಲೆ ಎತ್ತಿ ನಿಂತಿದ್ದಾರೆ. ಇಲ್ಲಿಯವರೆಗೂ ಪಾಕಿಸ್ತಾನದ ಯಾವೊಬ್ಬ ಸಂಸತ್ ಸದಸ್ಯನೂ ಅಂತಹ ಧೈರ್ಯ ತೋರಿಲ್ಲ ಎಂಬುದು ನಾಚಿಕೆಗೇಡಿನ ಸಂಗತಿ ಎಂದಿದ್ದಾರೆ.

ಪ್ರಿಯಾಂಕಾ ಗಾಂಧಿ ಬ್ಯಾಗ್​ನಲ್ಲಿ ಪ್ಯಾಲೆಸ್ತೀನ್ ಎಂಬ ಬರಹವಿತ್ತು ಜತೆಗೆ ಕಲ್ಲಂಗಡಿ ಹಣ್ಣಿನ ಚಿತ್ರ ಕೂಡ ಇತ್ತು ಇದನ್ನು ಪ್ಯಾಲೆಸ್ತೀನ್ ಒಗ್ಗಟ್ಟಿನ ಸಂಕೇತ ಎಂದು ಪರಿಗಣಿಸಲಾಗುತ್ತದೆ. ಕಲ್ಲಂಗಡಿ ಚಿತ್ರಗಳು ಮತ್ತು ಎಮೋಜಿಗಳನ್ನು ಪ್ಯಾಲೆಸ್ಟೈನ್ ಅನ್ನು ಬೆಂಬಲಿಸಲು ಹೆಚ್ಚಾಗಿ ಬಳಸಲಾಗುತ್ತದೆ.

ಮತ್ತಷ್ಟು ಓದಿ: Video: ಸಂಸತ್ತಿಗೆ ಪ್ಯಾಲೆಸ್ತೀನ್ ಬ್ಯಾಗ್ ಹಿಡಿದು ಬಂದ ಪ್ರಿಯಾಂಕಾ ಗಾಂಧಿ

ಗಾಜಾ ಸಂಘರ್ಷದ ಬಗ್ಗೆ ಪ್ರಿಯಾಂಕಾ ಗಾಂಧಿ ನಿಲುವು ಗಾಜಾದಲ್ಲಿ ಇಸ್ರೇಲ್ ಕ್ರಮದ ವಿರುದ್ಧ ಪ್ರಿಯಾಂಕಾ ಗಾಂಧಿ ಬಹಳ ಸಮಯದಿಂದ ಧ್ವನಿ ಎತ್ತುತ್ತಿದ್ದಾರೆ. ಅಕ್ಟೋಬರ್‌ನಲ್ಲಿ, ಹಮಾಸ್ ಮತ್ತು ಇಸ್ರೇಲ್ ನಡುವಿನ ಯುದ್ಧವು ಒಂದು ವರ್ಷವನ್ನು ಪೂರ್ಣಗೊಳಿಸಿದಾಗ, ಪ್ರಿಯಾಂಕಾ ಇಸ್ರೇಲ್ ಅಂತರರಾಷ್ಟ್ರೀಯ ಕಾನೂನುಗಳನ್ನು ಉಲ್ಲಂಘಿಸುತ್ತಿದೆ ಎಂದು ಆರೋಪಿಸಿದ್ದರು.

ವಯನಾಡಿನಲ್ಲಿ ಚುನಾವಣಾ ಪ್ರಚಾರದ ವೇಳೆ ಪ್ರಿಯಾಂಕಾ ಗಾಂಧಿ ಪ್ಯಾಲೆಸ್ತೀನ್ ವಿಷಯವನ್ನು ಪ್ರಮುಖವಾಗಿ ಪ್ರಸ್ತಾಪಿಸಿದ್ದರು. ಜೂನ್‌ನಲ್ಲಿ, ಪ್ರಿಯಾಂಕಾ ಇಸ್ರೇಲಿ ಪ್ರಧಾನಿ ಬೆಂಜಮಿನ್ ನೆತನ್ಯಾಹು ಅವರನ್ನು ಟೀಕಿಸಿದ್ದರು.

ಅಂತಾರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ಕಾಂಗ್ರೆಸ್​ಗೆ ಬಿಗ್ ಶಾಕ್: ಮುಸ್ಲಿಂ ಮುಖಂಡರಿಂದ ಸಾಮೂಹಿಕ ರಾಜೀನಾಮೆ
ಕಾಂಗ್ರೆಸ್​ಗೆ ಬಿಗ್ ಶಾಕ್: ಮುಸ್ಲಿಂ ಮುಖಂಡರಿಂದ ಸಾಮೂಹಿಕ ರಾಜೀನಾಮೆ
ಕ್ಯಾಬಿನೆಟ್​ಗೆ ಕಮ್ಯೂನಲ್ ವೈರಸ್ ಮೆತ್ತಿಕೊಂಡಿದೆ, ಚಿಕಿತ್ಸೆ ಬೇಕು: ರವಿ
ಕ್ಯಾಬಿನೆಟ್​ಗೆ ಕಮ್ಯೂನಲ್ ವೈರಸ್ ಮೆತ್ತಿಕೊಂಡಿದೆ, ಚಿಕಿತ್ಸೆ ಬೇಕು: ರವಿ
ಕರ್ನಾಟಕದಲ್ಲಿ ಇನ್ನೂ 3 ದಿನ ಭಾರೀ ಮಳೆ: ಈ ಜಿಲ್ಲೆಗಳಿಗೆ ರೆಡ್​ ಅಲರ್ಟ್​
ಕರ್ನಾಟಕದಲ್ಲಿ ಇನ್ನೂ 3 ದಿನ ಭಾರೀ ಮಳೆ: ಈ ಜಿಲ್ಲೆಗಳಿಗೆ ರೆಡ್​ ಅಲರ್ಟ್​
ನಾಳೆಯೇ ಚುನಾವಣೆ ಘೋಷಿಸಿ; ಮೋದಿಗೆ ಮಮತಾ ಬ್ಯಾನರ್ಜಿ ಬಹಿರಂಗ ಸವಾಲು
ನಾಳೆಯೇ ಚುನಾವಣೆ ಘೋಷಿಸಿ; ಮೋದಿಗೆ ಮಮತಾ ಬ್ಯಾನರ್ಜಿ ಬಹಿರಂಗ ಸವಾಲು
ಕಮಲ್ ಹಾಸನ್ ಕ್ಷಮೆ ಕೇಳಿದ್ರೆ ಮಾತ್ರ ಸಿನಿಮಾ ಬಿಡುಗಡೆ: ಸಾ.ರಾ. ಗೋವಿಂದು
ಕಮಲ್ ಹಾಸನ್ ಕ್ಷಮೆ ಕೇಳಿದ್ರೆ ಮಾತ್ರ ಸಿನಿಮಾ ಬಿಡುಗಡೆ: ಸಾ.ರಾ. ಗೋವಿಂದು
ಬಂಟ್ವಾಳ್ ರಹಿಮಾನ್ ಹತ್ಯೆ: ರಣಾಂಗಣವಾದ ಮುಸ್ಲಿಂ ಮುಖಂಡರ ಸಭೆ
ಬಂಟ್ವಾಳ್ ರಹಿಮಾನ್ ಹತ್ಯೆ: ರಣಾಂಗಣವಾದ ಮುಸ್ಲಿಂ ಮುಖಂಡರ ಸಭೆ
ದಲಿತರ ಮಾರಣವಾಗುತ್ತಿದ್ದರೂ ದಲಿತ ನಾಯಕರು ಸುಮ್ಮನಿದ್ದಾರೆ: ಚಲವಾದಿ
ದಲಿತರ ಮಾರಣವಾಗುತ್ತಿದ್ದರೂ ದಲಿತ ನಾಯಕರು ಸುಮ್ಮನಿದ್ದಾರೆ: ಚಲವಾದಿ
ತಳಿರು ತೋರಣ ಮತ್ತು ರಂಗೋಲಿಯಿಂದ ಅಲಂಕೃತಗೊಂಡ ಶಾಲೆ ನೋಡಿ ಮಕ್ಕಳು ಖುಷ್
ತಳಿರು ತೋರಣ ಮತ್ತು ರಂಗೋಲಿಯಿಂದ ಅಲಂಕೃತಗೊಂಡ ಶಾಲೆ ನೋಡಿ ಮಕ್ಕಳು ಖುಷ್
ಪಾಕಿಸ್ತಾನಕ್ಕೆ ಇನ್ನೂ ಹೆಚ್ಚಿನದನ್ನೇ ಮಾಡುವ ತಾಕತ್ತು ನಮಗಿತ್ತು
ಪಾಕಿಸ್ತಾನಕ್ಕೆ ಇನ್ನೂ ಹೆಚ್ಚಿನದನ್ನೇ ಮಾಡುವ ತಾಕತ್ತು ನಮಗಿತ್ತು
ಹೆಸರು ಬದಲಾವಣೆಯಿಂದ ಜನಕ್ಕೆ ಅನುಕೂಲವಾಗೋದಾದರೆ ಸಂತೋಷ: ಯೋಗೇಶ್ವರ್
ಹೆಸರು ಬದಲಾವಣೆಯಿಂದ ಜನಕ್ಕೆ ಅನುಕೂಲವಾಗೋದಾದರೆ ಸಂತೋಷ: ಯೋಗೇಶ್ವರ್