AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Pak Politics: ಚುನಾವಣೆ ಘೋಷಿಸಲು ಪಾಕಿಸ್ತಾನದ ಹೊಸ ಸರ್ಕಾರಕ್ಕೆ 6 ದಿನಗಳ ಗಡುವು ಕೊಟ್ಟ ಇಮ್ರಾನ್ ಖಾನ್

ಪಾಕ್ ರಾಜಧಾನಿ ಇಸ್ಲಾಮಾಬಾದ್​ಗೆ ಸಾವಿರಾರು ಬೆಂಬಲಿಗರೊಂದಿಗೆ ಬಂದ ಇಮ್ರಾನ್ ಖಾನ್ ತಮ್ಮ ರಾಜಕೀಯ ವಿರೋಧಿಗಳಿಗೆ ತಾವು ಹೊಂದಿರುವ ಜನಬೆಂಬಲ ಎಂಥದ್ದು ಎಂದು ತೋರಿಸಿದರು.

Pak Politics: ಚುನಾವಣೆ ಘೋಷಿಸಲು ಪಾಕಿಸ್ತಾನದ ಹೊಸ ಸರ್ಕಾರಕ್ಕೆ 6 ದಿನಗಳ ಗಡುವು ಕೊಟ್ಟ ಇಮ್ರಾನ್ ಖಾನ್
ಇಸ್ಲಾಮಾಬಾದ್​ನಲ್ಲಿ ಬೆಂಬಲಿಗರನ್ನು ಉದ್ದೇಶಿಸಿ ಇಮ್ರಾನ್​ ಖಾನ್ ಮಾತನಾಡಿದರು.
TV9 Web
| Edited By: |

Updated on:May 26, 2022 | 12:21 PM

Share

ಇಸ್ಲಾಮಾಬಾದ್: ಪಾಕಿಸ್ತಾನದಲ್ಲಿ ಶೀಘ್ರ ಸಾವ್ರರ್ತಿಕ ಚುನಾವಣೆ (Pakistan Politics) ಘೋಷಿಸಬೇಕು. ಇಲ್ಲದಿದ್ದರೆ ದೇಶಾದ್ಯಂತ ಪ್ರತಿಭಟನೆ ನಡೆಸಲಾಗುವುದು ಎಂದು ಪದಚ್ಯುತ ಪ್ರಧಾನಿ ಇಮ್ರಾನ್ ಖಾನ್ (Imran Khan) ಗುರುವಾರ ಸರ್ಕಾರವನ್ನು ಎಚ್ಚರಿಸಿದ್ದಾರೆ. ಪಾಕ್ ರಾಜಧಾನಿ ಇಸ್ಲಾಮಾಬಾದ್​ಗೆ ಸಾವಿರಾರು ಬೆಂಬಲಿಗರೊಂದಿಗೆ ಬಂದು ಪ್ರತಿಭಟನೆ ನಡೆಸಿದ ಅವರು, ತಮ್ಮ ರಾಜಕೀಯ ವಿರೋಧಿಗಳಿಗೆ ತಾವು ಹೊಂದಿರುವ ಜನಬೆಂಬಲ ಎಂಥದ್ದು ಎಂದು ತೋರಿಸಿದರು.

ಪಾಕಿಸ್ತಾನದ ರಾಜಧಾನಿ ಇಸ್ಲಾಮಾಬಾದ್​ ಕಳೆದ 24 ಗಂಟೆಗಳಿಂದ ಅಕ್ಷರಶಃ ಮುತ್ತಿಗೆಯಲ್ಲಿದ್ದಂತೆ ಇತ್ತು. ಇಮ್ರಾನ್ ಖಾನ್ ಬೆಂಬಲಿಗರು ಪೊಲೀಸರೊಂದಿಗೆ ಸಂಘರ್ಷಕ್ಕಿಳಿದಿದ್ದಲ್ಲದೆ, ಟ್ರಾಫಿಕ್ ಅಸ್ತವ್ಯಸ್ತಗೊಳ್ಳುವಂತೆ ಮಾಡಿದ್ದರು. ಪ್ರತಿಭಟನಾಕಾರರು ನಗರ ಪ್ರವೇಶಿಸದಂತೆ ತಡೆಯಲು ಸರ್ಕಾರವು ಎಲ್ಲ ಪ್ರಯತ್ನ ಮಾಡಿತ್ತು. ನಗರಕ್ಕೆ ಪ್ರವೇಶ ಕಲ್ಪಿಸುವ ಎಲ್ಲ ರಸ್ತೆಗಳನ್ನು ಬಂದ್ ಮಾಡಿತ್ತು. ಆದರೆ ಸುಪ್ರೀಂಕೋರ್ಟ್​ ನೀಡಿದ ತುರ್ತು ಆದೇಶದ ಅನ್ವಯ ಪ್ರತಿಭಟನಾಕಾರರ ನಗರ ಪ್ರವೇಶಕ್ಕೆ ಅವಕಾಶ ನೀಡಬೇಕಾಯಿತು.

ಕಳೆದ ತಿಂಗಳು ಅವಿಶ್ವಾಸ ಗೊತ್ತುವಳಿಯ ಮೂಲಕ ಪ್ರಧಾನಿ ಹುದ್ದೆ ಕಳೆದುಕೊಂಡಿದ್ದ ಇಮ್ರಾನ್ ಖಾನ್ ನಂತರದ ದಿನಗಳಲ್ಲಿ ದೇಶಾದ್ಯಂತ ಪ್ರತಿಭಟನೆಗಳನ್ನು ಸಂಘಟಿಸಲು ಆರಂಭಿಸಿದರು. ತಾವು ಅಧಿಕಾರ ಕಳೆದುಕೊಳ್ಳಲು ವಿದೇಶಿ ಸಂಚು ಕಾರಣ ಎಂದು ಎಲ್ಲೆಡೆ ಆರೋಪಿಸುತ್ತಾ, ‘ತಕ್ಷಣ ಚುನಾವಣೆ ನಡೆಸಬೇಕು’ ಎಂದು ಹಾಲಿ ಪ್ರಧಾನಿ ಶೆಹಬಾಜ್ ಷರೀಫ್ ಅವರನ್ನು ಒತ್ತಾಯಿಸುತ್ತಿದ್ದರು.

‘ವಿದೇಶಿ ಸಂಚಿನ ಭಾಗವಾಗಿ ಅಧಿಕಾರಕ್ಕೆ ಬಂದಿರುವ ಸರ್ಕಾರವು ಇನ್ನು ಆರು ದಿನಗಳಲ್ಲಿ ಚುನಾವಣೆ ಘೋಷಿಸಬೇಕು. ಸಂಸತ್ತು ವಿಸರ್ಜಿಸಿ, ಜೂನ್ ತಿಂಗಳಲ್ಲಿ ಚುನಾವಣೆ ನಡೆಸಿ’ ಎಂದು ಒತ್ತಾಯಿಸಿದ್ದರು. ಜಾಥಾದಲ್ಲಿ ಪಾಲ್ಗೊಂಡಿದ್ದ ಸಾವಿರಾರು ಪ್ರತಿಭಟನಾಕಾರರು ಇಮ್ರಾನ್ ಹೇಳಿಕೆಗೆ ದನಿಗೂಡಿಸಿದ್ದರು. ಚುನಾವಣೆ ಘೋಷಿಸದಿದ್ದರೆ ಇನ್ನೊಂದು ಜನಜಾಥಾ ಆಯೋಜಿಸಿ ಇಸ್ಲಾಮಾಬಾದ್​ಗೆ ಬರುತ್ತೇನೆ. ಸದ್ಯಕ್ಕೆ ಎಲ್ಲ ಬೆಂಬಲಿಗರೂ ಮನೆಗಳಿಗೆ ಹೋಗಬೇಕು ಎಂದು ವಿನಂತಿಸಿದರು.

ಸಂಸತ್ತು ವಿಸರ್ಜಿಸಿ ಚುನಾವಣೆ ನಡೆಸಬೇಕು ಎನ್ನುವ ಇಮ್ರಾನ್ ಖಾನ್ ವಿನಂತಿಗೆ ಶೆಹಬಾಜ್ ಷರೀಫ್ ನೇತೃತ್ವದ ಸರ್ಕಾರ ಈವರೆಗೆ ಸೊಪ್ಪು ಹಾಕಿಲ್ಲ. ‘ಚುನಾವಣೆ ನಡೆಸುವ ಯಾವುದೇ ಉದ್ದೇಶ ತನಗಿಲ್ಲ’ ಎಂದು ಸ್ಪಷ್ಟಪಡಿಸಿದ್ದಾರೆ.

ಚುನಾವಣೆ ನಡೆಸಬೇಕೆಂಬ ಇಮ್ರಾನ್ ಖಾನ್ ಆಗ್ರಹಕ್ಕೆ ದನಿಗೂಡಿಸಿ ಇಸ್ಲಾಮಾಬಾದ್​ಗೆ ಸಾವಿರಾರು ಮಂದಿ ಬಂದಿದ್ದರು. ತಮ್ಮನ್ನು ತಡೆಯಲು ಯತ್ನಿಸಿದ ಪೊಲೀಸರೊಂದಿಗೆ ಘರ್ಷಣೆಗೆ ಇಳಿದರು. ಪ್ರತಿಭಟನಾಕಾರರನ್ನು ತಡೆಯಲು ಯತ್ನಿಸಿದ ಪೊಲೀಸರು ಹಲವು ಬಾರಿ ಅಶ್ರುವಾಯು ಶೆಲ್​ಗಳನ್ನು ಸಿಡಿಸಿದರು.

ಇಸ್ಲಾಮಾಬಾದ್ ಮಾತ್ರವಲ್ಲ, ಪಾಕಿಸ್ತಾನದ ಲಾಹೋರ್, ರಾವಲ್​ಪಿಂಡಿ ಮತ್ತು ಕರಾಚಿ ನಗರಗಳಲ್ಲಿಯೂ ಇಮ್ರಾನ್ ಬೆಂಬಲಿಗರು ಪ್ರತಿಭಟನೆ ನಡೆಸಿದರು. ದೇಶದ ವಿವಿಧೆಡೆ ನಡೆದ ಪ್ರತಿಭಟನಾ ಜಾಥಾಗಳಲ್ಲಿ ಪಾಲ್ಗೊಂಡಿದ್ದ 1,700 ಮಂದಿಯನ್ನು ಪೊಲೀಸರು ಬಂಧಿಸಿದ್ದಾರೆ. ಜಾಥಾಗಳಿಗೆ ಶಸ್ತ್ರಾಸ್ತ್ರ ಕೊಂಡೊಯ್ಯಲು ಯತ್ನಿಸಿದ ಇಮ್ರಾನ್ ಬೆಂಬಲಿಗರ ಮನೆಗಳ ಮೇಲೆಯೂ ಪೊಲೀಸರು ದಾಳಿ ನಡೆಸಿದ್ದರು.

ಕರ್ನಾಟಕದ ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ. ದೇಶದ ಇತರ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ ಪ್ರಮುಖ  ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 12:21 pm, Thu, 26 May 22

Follow Us
ರೈಲ್ವೆ ನಿಲ್ದಾಣಗಳಲ್ಲಿ ಆಹಾರ ಸೇವಿಸುವವರೇ ಹುಷಾರ್: ವಿಡಿಯೋ ನೋಡಿ
ರೈಲ್ವೆ ನಿಲ್ದಾಣಗಳಲ್ಲಿ ಆಹಾರ ಸೇವಿಸುವವರೇ ಹುಷಾರ್: ವಿಡಿಯೋ ನೋಡಿ
ED ತನಿಖೆಯಲ್ಲಿ KPSC ಕರ್ಮಕಾಂಡ ಸ್ಫೋಟಕ ಸಂಗತಿ ಬಯಲು
ED ತನಿಖೆಯಲ್ಲಿ KPSC ಕರ್ಮಕಾಂಡ ಸ್ಫೋಟಕ ಸಂಗತಿ ಬಯಲು
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ