AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

International Beggar: ಪಾಕಿಸ್ತಾನದ ಪ್ರಧಾನಿ ಇಮ್ರಾನ್​ ಖಾನ್​ ’ಅಂತಾರಾಷ್ಟ್ರೀಯ ಭಿಕ್ಷುಕ’ ಎಂದು ಜರಿದ ಜಮಾಯತ್ ಮುಖ್ಯಸ್ಥ

ಲಾಹೋರ್​​ನಲ್ಲಿ ಸ್ಥಳೀಯ ಸಂಸ್ಥೆಗಳ ಚುನಾವಣೆ ಸಿದ್ಧತಾ ಕಾರ್ಯದಲ್ಲಿ ತೊಡಗಿರುವ ಜಮಾಯತ್ (Jamat-e-Islami)​ ಮುಖ್ಯಸ್ಥ ಸಿರಾಜುಲ್ ಹಕ್ (Sirajul-Haq) ಪಾಕಿಸ್ತಾನದ ಸಮಸ್ಯೆಗಳೆಲ್ಲ ಪರಿಹಾರವಾಗಬೇಕೆಂದರೆ ಇಮ್ರಾನ್​ ಖಾನ್ ನಿರ್ಗಮನವೊಂದೇ ದಾರಿ ಎಂದಿದ್ದಾರೆ.

International Beggar: ಪಾಕಿಸ್ತಾನದ ಪ್ರಧಾನಿ ಇಮ್ರಾನ್​ ಖಾನ್​ ’ಅಂತಾರಾಷ್ಟ್ರೀಯ ಭಿಕ್ಷುಕ’ ಎಂದು ಜರಿದ ಜಮಾಯತ್ ಮುಖ್ಯಸ್ಥ
International Beggar: ಪಾಕಿಸ್ತಾನದ ಪ್ರಧಾನಿ ಇಮ್ರಾನ್​ ಖಾನ್​ನನ್ನು ’ಅಂತಾರಾಷ್ಟ್ರೀಯ ಭಿಕ್ಷುಕ’ ಎಂದು ಜರಿದ
TV9 Web
| Edited By: |

Updated on:Jan 17, 2022 | 11:07 AM

Share

ಲಾಹೋರ್​​: ಮೊನ್ನೆಯಷ್ಟೇ ಪಾಕಿಸ್ತಾನದ ಆರ್ಥಿಕತೆ ಭಾರತಕ್ಕಿಂತ ಚೆನ್ನಾಗಿದೆ ಎಂದು ಪಾಕಿಸ್ತಾನದ ಪ್ರಧಾನಿ (Pakistan Prime Minister) ಜನಾಬ್ ಇಮ್ರಾನ್​ ಖಾನ್ ಫರ್ಮಾನು ಹೊರಡಿಸಿ, ನಗೆಪಾಟಲಿಗೀಡಾದ್ದರು. ಇದೀಗ ಜಮಾತ್​ ಎ ಇಸ್ಲಾಮಿ ಪಾಕಿಸ್ತಾನದ ನೂತನ ‘ಅರ್ಥಶಾಸ್ತ್ರಜ್ಞ’ ಜನಾಬ್ ಇಮ್ರಾನ್​ ಖಾನ್​ರನ್ನು ತರಾಟೆಗೆ ತೆಗೆದುಕೊಂಡಿದೆ. ಪಾಕಿಸ್ತಾನದ ಹಣಕಾಸು ಸಂಕಷ್ಟಗಳು ಬೆಟ್ಟದಷ್ಟು ಮಿತಿಮೀರಿದ್ದು ಪ್ರಧಾನಿ ಇಮ್ರಾನ್​ ಖಾನ್ ’ಅಂತಾರಾಷ್ಟ್ರೀಯ ಭಿಕ್ಷುಕ’ ಎಂದು (international beggar) ಜರಿದಿದೆ. ಅಷ್ಟೇ ಆತ (Imran Khan) ಪ್ರಧಾನಿ ಹುದ್ದೆಯಿಂದ ತೊಲಗಿದರೆ ಮಾತ್ರ ಈ ಸಮಸ್ಯೆಗಳಿಗೆಲ್ಲಾ ಪರಿಹಾರ ದೊರಕುವುದು ಎಂದೂ ಜಮಾಯತ್​ ಮುಖ್ಯಸ್ಥ ವ್ಯಾಖ್ಯಾನಿಸಿದ್ದಾರೆ.

ಲಾಹೋರ್​​ನಲ್ಲಿ ಸ್ಥಳೀಯ ಸಂಸ್ಥೆಗಳ ಚುನಾವಣೆ ಸಿದ್ಧತಾ ಕಾರ್ಯದಲ್ಲಿ ತೊಡಗಿರುವ ಜಮಾಯತ್ (Jamat-e-Islami)​ ಮುಖ್ಯಸ್ಥ ಸಿರಾಜುಲ್ ಹಕ್ (Sirajul-Haq) ಪಾಕಿಸ್ತಾನದ ಸಮಸ್ಯೆಗಳೆಲ್ಲ ಪರಿಹಾರವಾಗಬೇಕೆಂದರೆ ಇಮ್ರಾನ್​ ಖಾನ್ ನಿರ್ಗಮನವೊಂದೇ ದಾರಿ ಎಂದಿದ್ದಾರೆ.

ಅಂತಾರಾಷ್ಟ್ರೀಯ ಹಣಕಾಸು ಸಂಸ್ಥೆಯಿಂದ (International Monetary Fund -IMF) ತುರ್ತಾಗಿ ಒಂದು ಶತಕೋಟಿ ಡಾಲರ್ ಸಾಲ ಪಡೆಯುತ್ತಿರುವುದನ್ನು ನೋಡಿದರೆ ಆತ (ಪಾಕಿಸ್ತಾನದ ಪ್ರಧಾನಿ ಇಮ್ರಾನ್​ ಖಾನ್) ನಿಜಕ್ಕೂ ಅಂತಾರಾಷ್ಟ್ರೀಯ ಭಿಕ್ಷುಕನೇ ಸರಿ ಎಂದು ಜಮಾಯತ್ ವ್ಯಾಖ್ಯಾನಿಸಿದೆ. ಪಾಕಿಸ್ತಾನದ ಆರ್ಥಿಕತೆ ಸುಸ್ಥಿಗೆ ತರಲು ಹಿಂದಿನ ಕಿಚಡಿ ಸರ್ಕಾರದಿಂದಲೂ ಏನೂ ಮಾಡಲು ಸಾಧ್ಯವಾಗಲಿಲ್ಲ. ಅದಾದ ಮೇಲೆ ತಾನು ಆರ್ಥಿಕತೆಯ ಚಾಂಪಿಯನ್​ ಎಂದು ಡಾಯಿ ಕೊಚ್ಚಿಕೊಮಡು ಅಧಿಕಾರಕ್ಕೆ ಬಂದ ಪಿಟಿಐ ನೇತೃತ್ವದಲ್ಲಿ ಇಮ್ರಾನ್​ ಖಾನ್​ಗೂ ಸಹ ಏನೂ ಮಾಡಲು ಆಗಲಿಲ್ಲ ಎಂದು ಜಮಾತೆ ನಾಯಕರು ಬಣ್ಣಿಸಿದ್ದಾರೆ.

ಪಾಕಿಸ್ತಾನದಲ್ಲಿ ಆರ್ಥಿಕ ದುಸ್ಥಿತಿ ಹೇರಳವಾಗಿದೆ. ಅಂತಾರಾಷ್ಟ್ರೀಯ ಹಣಕಾಸು ಸಂಸ್ಥೆಯ ತಾಳಕ್ಕೆ ತಕ್ಕಂತೆ ಕುಣಿಯುತ್ತಾ ಈಗಾಗಲೇ ಎರಡು ಮಿನಿ ಬಜೆಟ್​​ಗಳನ್ನು ಮಂಡಿಸಲಾಗಿದೆ. ದೇಶದ ವ್ಯಾಪಾರ ಕೊರತೆ ತಾಳತಪ್ಪಿದೆ. ಹಣದುಬ್ಬರ ಉಬ್ಬುತ್ತಲೇ ಇದೆ. ಇದನ್ನೆಲ್ಲಾ ಸರಿದೂಗಿಸಲು ಶತಕೋಟಿ ಡಾಲರ್​ ಸಾಲ ಎತ್ತುವಳಿ ಪ್ರೋಗ್ರಾಂ ಹಾಕಿಕೊಳ್ಳುವ ಮೂಲಕ ತಾನು​ ’ಅಂತಾರಾಷ್ಟ್ರೀಯ ಭಿಕ್ಷುಕ’ ಎಂದು ಪಾಕಿಸ್ತಾನದ ಪ್ರಧಾನಿ ಇಮ್ರಾನ್​ ಖಾನ್ ಪ್ರೂವ್​ ಮಾಡಿದಂತಾಗಿದೆ ಎಂದು ಜಮಾಯತ್ ಹೇಳಿದೆ.

Also Read: ಪಾಕಿಸ್ತಾನದ ಆರ್ಥಿಕತೆ ಭಾರತಕ್ಕಿಂತ ಚೆನ್ನಾಗಿದೆ ಎಂದ ಪಾಕ್​ ಪ್ರಧಾನಿ ಜನಾಬ್ ಇಮ್ರಾನ್​ ಖಾನ್!

Published On - 10:39 am, Mon, 17 January 22

ಟಾಕ್ಸಿಕ್ ಟೀಸರ್ ಟೀಕಿಸಿದವರ ಗೂಗಲ್ ಸರ್ಚ್ ಹಿಸ್ಟರಿ ನೋಡಿ: ವಿನಯ್ ಗೌಡ
ಟಾಕ್ಸಿಕ್ ಟೀಸರ್ ಟೀಕಿಸಿದವರ ಗೂಗಲ್ ಸರ್ಚ್ ಹಿಸ್ಟರಿ ನೋಡಿ: ವಿನಯ್ ಗೌಡ
ಸ್ಫೋಟಕ ಬ್ಯಾಟರ್​ಗಳನ್ನು ಪೆವಿಲಿಯನ್​ಗಟ್ಟಿದ ಶ್ರೇಯಾಂಕ
ಸ್ಫೋಟಕ ಬ್ಯಾಟರ್​ಗಳನ್ನು ಪೆವಿಲಿಯನ್​ಗಟ್ಟಿದ ಶ್ರೇಯಾಂಕ
ಪೊಲೀಸ್ ಠಾಣೆಗೆ ಬೆಂಕಿ ಹಚ್ಚುತ್ತೇನೆ; ಬಜರಂಗದಳದ ವ್ಯಕ್ತಿಯಿಂದ ಬೆದರಿಕೆ
ಪೊಲೀಸ್ ಠಾಣೆಗೆ ಬೆಂಕಿ ಹಚ್ಚುತ್ತೇನೆ; ಬಜರಂಗದಳದ ವ್ಯಕ್ತಿಯಿಂದ ಬೆದರಿಕೆ
ಬಸ್​​ನಲ್ಲಿ 240 ಗ್ರಾಂ ಚಿನ್ನ ಕದ್ದಾಕೆ ಸಿಕ್ಕಿಬಿದ್ದಿದ್ಹೇಗೆ ಗೊತ್ತಾ?
ಬಸ್​​ನಲ್ಲಿ 240 ಗ್ರಾಂ ಚಿನ್ನ ಕದ್ದಾಕೆ ಸಿಕ್ಕಿಬಿದ್ದಿದ್ಹೇಗೆ ಗೊತ್ತಾ?
ಹಠವಾದಿ, ಛಲಗಾರ್ತಿ, ಕಿಚ್ಚು ಇತ್ಯಾದಿ; ಅಶ್ವಿನಿ ಗೌಡಗೆ ಸಿಕ್ಕ ಬಿರುದು ನೋಡಿ
ಹಠವಾದಿ, ಛಲಗಾರ್ತಿ, ಕಿಚ್ಚು ಇತ್ಯಾದಿ; ಅಶ್ವಿನಿ ಗೌಡಗೆ ಸಿಕ್ಕ ಬಿರುದು ನೋಡಿ
ಸಿದ್ದರಾಮಯ್ಯ ಅಧಿಕಾರದಿಂದ ಇಳಿಯೋದು ಯಾವಾಗ?: ಕೋಡಿಮಠ ಶ್ರೀ ಸ್ಪೋಟಕ ಭವಿಷ್ಯ
ಸಿದ್ದರಾಮಯ್ಯ ಅಧಿಕಾರದಿಂದ ಇಳಿಯೋದು ಯಾವಾಗ?: ಕೋಡಿಮಠ ಶ್ರೀ ಸ್ಪೋಟಕ ಭವಿಷ್ಯ
ಕೂಲಿ ಕಾರ್ಮಿಕ ಮಹಿಳೆ ಜತೆ ಲವ್ವಿಡವ್ವಿ: ಗುತ್ತಿಗೆದಾರನನ್ನ ಕೊಚ್ಚಿ ಕೊಂದ್ರು
ಕೂಲಿ ಕಾರ್ಮಿಕ ಮಹಿಳೆ ಜತೆ ಲವ್ವಿಡವ್ವಿ: ಗುತ್ತಿಗೆದಾರನನ್ನ ಕೊಚ್ಚಿ ಕೊಂದ್ರು
ನಮ್ಮಿಂದ ತಪ್ಪಾಗಿದೆ ಕ್ಷಮಿಸಿ: ಕನ್ನಡಿಗರ ಕ್ಷಮೆಯಾಚಿಸಿದ ಬೆಂಗಳೂರಿನ ಕಂಪನಿ
ನಮ್ಮಿಂದ ತಪ್ಪಾಗಿದೆ ಕ್ಷಮಿಸಿ: ಕನ್ನಡಿಗರ ಕ್ಷಮೆಯಾಚಿಸಿದ ಬೆಂಗಳೂರಿನ ಕಂಪನಿ
ರಿಜ್ವಾನ್ ಬ್ಯಾಟಿಂಗ್‌ ಅರ್ಧಕ್ಕೆ ನಿಲ್ಲಿಸಿ ವಾಪಸ್ ಕರೆಸಿಕೊಂಡ ನಾಯಕ
ರಿಜ್ವಾನ್ ಬ್ಯಾಟಿಂಗ್‌ ಅರ್ಧಕ್ಕೆ ನಿಲ್ಲಿಸಿ ವಾಪಸ್ ಕರೆಸಿಕೊಂಡ ನಾಯಕ
ಸಿದ್ರಾಮಯ್ಯ ಮೈಸೂರು, ಡಿಕೆಶಿ ಕನಕಪುರ ಇದ್ದಂಗೆ ನಮ್ಗೆ ಆಗ್ಬೇಕು ಎಂದ ಖರ್ಗೆ
ಸಿದ್ರಾಮಯ್ಯ ಮೈಸೂರು, ಡಿಕೆಶಿ ಕನಕಪುರ ಇದ್ದಂಗೆ ನಮ್ಗೆ ಆಗ್ಬೇಕು ಎಂದ ಖರ್ಗೆ