AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬ್ರೇಕ್​ಫಾಸ್ಟ್ ವಿಚಾರಕ್ಕೆ ಸಿಕ್ಕಾಪಟೆ ಟ್ರೋಲ್​ ಆದ ಪಾಕಿಸ್ತಾನ ಪ್ರಧಾನಿ ಇಮ್ರಾನ್ ಖಾನ್​

ಹಾಗೆ ಪಕ್ಕದಲ್ಲಿ ಕೂರಿಸಿಕೊಳ್ಳುತ್ತೀರಲ್ಲ, ಅವರ ಬಳಿ ಮಾತನಾಡುವುದು ಬಿಟ್ಟು, ತಿನ್ನಲು ಕೊಡಬಹುದಲ್ಲ ! ಶೇರಿಂಗ್ ಈಸ್ ಕೇರಿಂಗ್​ ಎಂದು ನೆಟ್ಟಿಗರು ವ್ಯಂಗ್ಯವಾಡಿದ್ದಾರೆ.

ಬ್ರೇಕ್​ಫಾಸ್ಟ್ ವಿಚಾರಕ್ಕೆ ಸಿಕ್ಕಾಪಟೆ ಟ್ರೋಲ್​ ಆದ ಪಾಕಿಸ್ತಾನ ಪ್ರಧಾನಿ ಇಮ್ರಾನ್ ಖಾನ್​
ಇಮ್ರಾನ್ ಖಾನ್​
Lakshmi Hegde
|

Updated on:Mar 21, 2021 | 6:42 PM

Share

ಕೆಲವು ದಿನಗಳ ಹಿಂದೆ ಪಾಕಿಸ್ತಾನದ ಪ್ರಧಾನಮಂತ್ರಿ ಇಮ್ರಾನ್ ಖಾನ್ ಅವರು ಉಪಾಹಾರ ಸೇವಿಸುತ್ತಿರುವ ಫೋಟೋವೊಂದು ವೈರಲ್ ಆಗಿದೆ. ಅದನ್ನು ನೋಡಿದ ನೆಟ್ಟಿಗರು ಭಿನ್ನ-ವಿಭಿನ್ನವಾಗಿ ಕಮೆಂಟ್ ಮಾಡುತ್ತ, ಪ್ರಧಾನಿ ಇಮ್ರಾನ್​ ಖಾನ್​ರನ್ನು ಟ್ರೋಲ್ ಮಾಡುತ್ತಿದ್ದಾರೆ. ಇಮ್ರಾನ್ ಖಾನ್​ ಯಾರೊಂದಿಗೋ ಮಾತನಾಡುತ್ತ, ಆಹಾರ ಸೇವಿಸುತ್ತಿರುವುದನ್ನು ನೀವು ಫೋಟೋದಲ್ಲಿ ನೋಡಬಹುದು. ಈಗ ಇದೇ ಫೋಟೋದೊಂದಿಗೆ, ಹಲವು ವರ್ಷಗಳ ಹಿಂದಿನ ಅವರ ಫೋಟೋವೊಂದನ್ನು ನೆಟ್ಟಿಗರು ಹೋಲಿಕೆ ಮಾಡುತ್ತಿದ್ದಾರೆ. ಆ ಹಳೇ ಫೋಟೋದಲ್ಲೂ ಸಹ ಇಮ್ರಾನ್ ಖಾನ್​ ಜರ್ನಲಿಸ್ಟ್ ಒಬ್ಬರೊಂದಿಗೆ ಮಾತನಾಡುತ್ತಲೇ ಬ್ರೇಕ್​ಫಾಸ್ಟ್ ಮಾಡುತ್ತಿದ್ದಾರೆ.

ಆದರೆ ಇದೀಗ ವೈರಲ್​ ಆದ ಫೋಟೋ ನೋಡಿದ ನೆಟ್ಟಿಗರು ಇಮ್ರಾನ್​ ಖಾನ್​ ಅವರದ್ದು ಬ್ಯಾಡ್​ ಹ್ಯಾಬಿಟ್​ ಎಂದಿದ್ದಾರೆ. ಇಮ್ರಾನ್​ ಖಾನ್ ಆಹಾರ ಸೇವನೆ ಮಾಡುವ ಹೀಗೆ ಇನ್ನೊಬ್ಬರೊಂದಿಗೆ ಮಾತನಾಡುವುದು ಹಳೇ ಹಾಗೂ ಈಗಿನ ಫೋಟೋಗಳೆರಡರಲ್ಲೂ ಕಾಣುತ್ತಿದೆ. ಇದು ಒಳ್ಳೆಯ ಅಭ್ಯಾಸ ಅಲ್ಲ ಎಂದೇ ಬಹುತೇಕರು ಅಭಿಪ್ರಾಯಪಟ್ಟಿದ್ದಾರೆ. ಅಂದಹಾಗೆ ಇಮ್ರಾನ್​ ಖಾನ್​ರನ್ನು ಟ್ರೋಲ್ ಮಾಡಿದ್ದು ಪಾಕಿಸ್ತಾನದ ಟ್ವಿಟರ್​ ಬಳಕೆದಾರರೇ ಆಗಿದ್ದಾರೆ. ಇನ್ನು ವೈರಲ್ ಆದ ಎರಡೂ ಫೋಟೋಗಳಲ್ಲೂ ಇಮ್ರಾನ್ ಖಾನ್ ಮೊಟ್ಟೆ, ಮಾವಿನಹಣ್ಣು ಮತ್ತು ಮೊಸರಿನ ಪಾತ್ರೆಗಳನ್ನು ಮುಂದಿಟ್ಟುಕೊಂಡಿರುವುದು ಕಾಣುತ್ತದೆ. ಈ ವಿಚಾರದಲ್ಲೂ ನೆಟ್ಟಿಗರು ಟೀಕಿಸಿದ್ದಾರೆ. ಇದ್ಯಾವ ವಿಧದ ಬ್ರೇಕ್​ಫಾಸ್ಟ್​. ಮೊಟ್ಟೆ, ಮೊಸರು.. ಮಾವಿನಹಣ್ಣನ್ನು ಒಟ್ಟಿಗೆ ತಿನ್ನುವ ಹವ್ಯಾಸ ಇವರಿಗೆ ಹೇಗೆ ಬೆಳೆದುಬಂತು ಎಂದು ಪ್ರಶ್ನಿಸಿದ್ದಾರೆ. ಇನ್ನೂ ಕೆಲವರಂತೂ ನಿಮ್ಮ ಡಯಟ್​ ವಿಧಾನ ಯಾವುದು ಎಂದು ಕೇಳಿದ್ದಾರೆ. ಇನ್ನೊಂದಿಷ್ಟು ಮಂದಿ, ಹಾಗೆ ಪಕ್ಕದಲ್ಲಿ ಕೂರಿಸಿಕೊಳ್ಳುತ್ತೀರಲ್ಲ, ಅವರ ಬಳಿ ಮಾತನಾಡುವುದು ಬಿಟ್ಟು, ತಿನ್ನಲು ಕೊಡಬಹುದಲ್ಲ ! ಶೇರಿಂಗ್ ಈಸ್ ಕೇರಿಂಗ್​ ಎಂದು ವ್ಯಂಗ್ಯವಾಡಿದ್ದಾರೆ.

Published On - 6:36 pm, Sun, 21 March 21

ಮಾನಸಿಕ ಒತ್ತಡ, ಖಿನ್ನತೆ ದೂರ ಮಾಡುತ್ತೆ ಕಿರಣ್: ಏನಿದು ಕಿರಣ್ ಸಹಾಯವಾಣಿ?
ಮಾನಸಿಕ ಒತ್ತಡ, ಖಿನ್ನತೆ ದೂರ ಮಾಡುತ್ತೆ ಕಿರಣ್: ಏನಿದು ಕಿರಣ್ ಸಹಾಯವಾಣಿ?
ಹಸುಗಳಿಗೆ AI ಅನ್ವಯದ ಬಗ್ಗೆ ಮೋದಿ ತುರ್ತು ನಿರ್ಧಾರ;ನಂದನ್ ನಿಲೇಕಣಿ ಬಣ್ಣನೆ
ಹಸುಗಳಿಗೆ AI ಅನ್ವಯದ ಬಗ್ಗೆ ಮೋದಿ ತುರ್ತು ನಿರ್ಧಾರ;ನಂದನ್ ನಿಲೇಕಣಿ ಬಣ್ಣನೆ
ದರ್ಶನ್ ಕರೆದರೆ ಮರುದಿನವೇ ಸಿನಿಮಾ ಮಾಡಲು ರೆಡಿ: ತರುಣ್ ಸುಧೀರ್
ದರ್ಶನ್ ಕರೆದರೆ ಮರುದಿನವೇ ಸಿನಿಮಾ ಮಾಡಲು ರೆಡಿ: ತರುಣ್ ಸುಧೀರ್
ಮಳೆ, ರಾಜ್ಯಕಾರಣದ ಬಗ್ಗೆ ಬಬಲಾದಿ ಕಾಲಜ್ಞಾನ ಸ್ಫೋಟಕ ಭವಿಷ್ಯ
ಮಳೆ, ರಾಜ್ಯಕಾರಣದ ಬಗ್ಗೆ ಬಬಲಾದಿ ಕಾಲಜ್ಞಾನ ಸ್ಫೋಟಕ ಭವಿಷ್ಯ
ಶೆಟ್ಟಿ ಗ್ಯಾಂಗ್ ಮೆರೆತ ರಶ್ಮಿಕಾ ಮಂದಣ್ಣ: ಬಂದಿಲ್ಲ ಮದುವೆ ಆಹ್ವಾನ
ಶೆಟ್ಟಿ ಗ್ಯಾಂಗ್ ಮೆರೆತ ರಶ್ಮಿಕಾ ಮಂದಣ್ಣ: ಬಂದಿಲ್ಲ ಮದುವೆ ಆಹ್ವಾನ
ಮೈಸೂರು: ಡಾ ಯತೀಂದ್ರ ಕಟೌಟ್ ನಿಲ್ಲಿಸಲು ರಸ್ತೆ ಬ್ಲಾಕ್; ಸವಾರರು ಆಕ್ರೋಶ
ಮೈಸೂರು: ಡಾ ಯತೀಂದ್ರ ಕಟೌಟ್ ನಿಲ್ಲಿಸಲು ರಸ್ತೆ ಬ್ಲಾಕ್; ಸವಾರರು ಆಕ್ರೋಶ
KSRTC, BMTC ಸಾರಿಗೆ ನೌಕರರ ಮುಷ್ಕರ ಏನಾಯ್ತು? ನಾಳೆ ಬಸ್ ಸಂಚಾರ ಇರುತ್ತಾ?
KSRTC, BMTC ಸಾರಿಗೆ ನೌಕರರ ಮುಷ್ಕರ ಏನಾಯ್ತು? ನಾಳೆ ಬಸ್ ಸಂಚಾರ ಇರುತ್ತಾ?
ವಿದ್ಯಾರ್ಥಿಗಳೇ ಪರೀಕ್ಷೆ ಹೊತ್ತಲ್ಲಿ ಭಯ ಬೇಡ.. ನಿಮಗಾಗಿ ಸಿಂಪಲ್ ಟಿಪ್ಸ್
ವಿದ್ಯಾರ್ಥಿಗಳೇ ಪರೀಕ್ಷೆ ಹೊತ್ತಲ್ಲಿ ಭಯ ಬೇಡ.. ನಿಮಗಾಗಿ ಸಿಂಪಲ್ ಟಿಪ್ಸ್
ಯುವತಿಯರಿಗೆ ಪ್ಲೈಯಿಂಗ್ ಕಿಸ್:ಬೀದಿ ಕಾಮಣ್ಣರ ವಿಡಿಯೋ ವೈರಲ್
ಯುವತಿಯರಿಗೆ ಪ್ಲೈಯಿಂಗ್ ಕಿಸ್:ಬೀದಿ ಕಾಮಣ್ಣರ ವಿಡಿಯೋ ವೈರಲ್
ಮಂಗಳೂರಿಗೆ ಹೂಡಿಕೆದಾರರು ಬರುತ್ತಿಲ್ಲ ಎಂದ ಖರ್ಗೆ ವಿರುದ್ಧ ಪೈ ಕಿಡಿ
ಮಂಗಳೂರಿಗೆ ಹೂಡಿಕೆದಾರರು ಬರುತ್ತಿಲ್ಲ ಎಂದ ಖರ್ಗೆ ವಿರುದ್ಧ ಪೈ ಕಿಡಿ