AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬ್ರೇಕ್​ಫಾಸ್ಟ್ ವಿಚಾರಕ್ಕೆ ಸಿಕ್ಕಾಪಟೆ ಟ್ರೋಲ್​ ಆದ ಪಾಕಿಸ್ತಾನ ಪ್ರಧಾನಿ ಇಮ್ರಾನ್ ಖಾನ್​

ಹಾಗೆ ಪಕ್ಕದಲ್ಲಿ ಕೂರಿಸಿಕೊಳ್ಳುತ್ತೀರಲ್ಲ, ಅವರ ಬಳಿ ಮಾತನಾಡುವುದು ಬಿಟ್ಟು, ತಿನ್ನಲು ಕೊಡಬಹುದಲ್ಲ ! ಶೇರಿಂಗ್ ಈಸ್ ಕೇರಿಂಗ್​ ಎಂದು ನೆಟ್ಟಿಗರು ವ್ಯಂಗ್ಯವಾಡಿದ್ದಾರೆ.

ಬ್ರೇಕ್​ಫಾಸ್ಟ್ ವಿಚಾರಕ್ಕೆ ಸಿಕ್ಕಾಪಟೆ ಟ್ರೋಲ್​ ಆದ ಪಾಕಿಸ್ತಾನ ಪ್ರಧಾನಿ ಇಮ್ರಾನ್ ಖಾನ್​
ಇಮ್ರಾನ್ ಖಾನ್​
Lakshmi Hegde
|

Updated on:Mar 21, 2021 | 6:42 PM

Share

ಕೆಲವು ದಿನಗಳ ಹಿಂದೆ ಪಾಕಿಸ್ತಾನದ ಪ್ರಧಾನಮಂತ್ರಿ ಇಮ್ರಾನ್ ಖಾನ್ ಅವರು ಉಪಾಹಾರ ಸೇವಿಸುತ್ತಿರುವ ಫೋಟೋವೊಂದು ವೈರಲ್ ಆಗಿದೆ. ಅದನ್ನು ನೋಡಿದ ನೆಟ್ಟಿಗರು ಭಿನ್ನ-ವಿಭಿನ್ನವಾಗಿ ಕಮೆಂಟ್ ಮಾಡುತ್ತ, ಪ್ರಧಾನಿ ಇಮ್ರಾನ್​ ಖಾನ್​ರನ್ನು ಟ್ರೋಲ್ ಮಾಡುತ್ತಿದ್ದಾರೆ. ಇಮ್ರಾನ್ ಖಾನ್​ ಯಾರೊಂದಿಗೋ ಮಾತನಾಡುತ್ತ, ಆಹಾರ ಸೇವಿಸುತ್ತಿರುವುದನ್ನು ನೀವು ಫೋಟೋದಲ್ಲಿ ನೋಡಬಹುದು. ಈಗ ಇದೇ ಫೋಟೋದೊಂದಿಗೆ, ಹಲವು ವರ್ಷಗಳ ಹಿಂದಿನ ಅವರ ಫೋಟೋವೊಂದನ್ನು ನೆಟ್ಟಿಗರು ಹೋಲಿಕೆ ಮಾಡುತ್ತಿದ್ದಾರೆ. ಆ ಹಳೇ ಫೋಟೋದಲ್ಲೂ ಸಹ ಇಮ್ರಾನ್ ಖಾನ್​ ಜರ್ನಲಿಸ್ಟ್ ಒಬ್ಬರೊಂದಿಗೆ ಮಾತನಾಡುತ್ತಲೇ ಬ್ರೇಕ್​ಫಾಸ್ಟ್ ಮಾಡುತ್ತಿದ್ದಾರೆ.

ಆದರೆ ಇದೀಗ ವೈರಲ್​ ಆದ ಫೋಟೋ ನೋಡಿದ ನೆಟ್ಟಿಗರು ಇಮ್ರಾನ್​ ಖಾನ್​ ಅವರದ್ದು ಬ್ಯಾಡ್​ ಹ್ಯಾಬಿಟ್​ ಎಂದಿದ್ದಾರೆ. ಇಮ್ರಾನ್​ ಖಾನ್ ಆಹಾರ ಸೇವನೆ ಮಾಡುವ ಹೀಗೆ ಇನ್ನೊಬ್ಬರೊಂದಿಗೆ ಮಾತನಾಡುವುದು ಹಳೇ ಹಾಗೂ ಈಗಿನ ಫೋಟೋಗಳೆರಡರಲ್ಲೂ ಕಾಣುತ್ತಿದೆ. ಇದು ಒಳ್ಳೆಯ ಅಭ್ಯಾಸ ಅಲ್ಲ ಎಂದೇ ಬಹುತೇಕರು ಅಭಿಪ್ರಾಯಪಟ್ಟಿದ್ದಾರೆ. ಅಂದಹಾಗೆ ಇಮ್ರಾನ್​ ಖಾನ್​ರನ್ನು ಟ್ರೋಲ್ ಮಾಡಿದ್ದು ಪಾಕಿಸ್ತಾನದ ಟ್ವಿಟರ್​ ಬಳಕೆದಾರರೇ ಆಗಿದ್ದಾರೆ. ಇನ್ನು ವೈರಲ್ ಆದ ಎರಡೂ ಫೋಟೋಗಳಲ್ಲೂ ಇಮ್ರಾನ್ ಖಾನ್ ಮೊಟ್ಟೆ, ಮಾವಿನಹಣ್ಣು ಮತ್ತು ಮೊಸರಿನ ಪಾತ್ರೆಗಳನ್ನು ಮುಂದಿಟ್ಟುಕೊಂಡಿರುವುದು ಕಾಣುತ್ತದೆ. ಈ ವಿಚಾರದಲ್ಲೂ ನೆಟ್ಟಿಗರು ಟೀಕಿಸಿದ್ದಾರೆ. ಇದ್ಯಾವ ವಿಧದ ಬ್ರೇಕ್​ಫಾಸ್ಟ್​. ಮೊಟ್ಟೆ, ಮೊಸರು.. ಮಾವಿನಹಣ್ಣನ್ನು ಒಟ್ಟಿಗೆ ತಿನ್ನುವ ಹವ್ಯಾಸ ಇವರಿಗೆ ಹೇಗೆ ಬೆಳೆದುಬಂತು ಎಂದು ಪ್ರಶ್ನಿಸಿದ್ದಾರೆ. ಇನ್ನೂ ಕೆಲವರಂತೂ ನಿಮ್ಮ ಡಯಟ್​ ವಿಧಾನ ಯಾವುದು ಎಂದು ಕೇಳಿದ್ದಾರೆ. ಇನ್ನೊಂದಿಷ್ಟು ಮಂದಿ, ಹಾಗೆ ಪಕ್ಕದಲ್ಲಿ ಕೂರಿಸಿಕೊಳ್ಳುತ್ತೀರಲ್ಲ, ಅವರ ಬಳಿ ಮಾತನಾಡುವುದು ಬಿಟ್ಟು, ತಿನ್ನಲು ಕೊಡಬಹುದಲ್ಲ ! ಶೇರಿಂಗ್ ಈಸ್ ಕೇರಿಂಗ್​ ಎಂದು ವ್ಯಂಗ್ಯವಾಡಿದ್ದಾರೆ.

Published On - 6:36 pm, Sun, 21 March 21

Follow Us
ಖಾಸಗಿ ಏಜೆನ್ಸಿ ಧೋರಣೆ ಖಂಡಿಸಿ ಹಾಸನದಲ್ಲಿ ಗುತ್ತಿಗೆ ಕಾರ್ಮಿಕರ ಪ್ರತಿಭಟನೆ
ಖಾಸಗಿ ಏಜೆನ್ಸಿ ಧೋರಣೆ ಖಂಡಿಸಿ ಹಾಸನದಲ್ಲಿ ಗುತ್ತಿಗೆ ಕಾರ್ಮಿಕರ ಪ್ರತಿಭಟನೆ
ತಾಂತ್ರಿಕ ದೋಷದಿಂದ ನೇರಳೆ ಮಾರ್ಗ ಮೆಟ್ರೋ ಸಂಚಾರ ಬಂದ್- ಪ್ರಯಾಣಿಕರ ಪರದಾಟ
ತಾಂತ್ರಿಕ ದೋಷದಿಂದ ನೇರಳೆ ಮಾರ್ಗ ಮೆಟ್ರೋ ಸಂಚಾರ ಬಂದ್- ಪ್ರಯಾಣಿಕರ ಪರದಾಟ
ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಧುರಂಧರ್ ನಟ ಆರ್. ಮಾಧವನ್: ವಿಡಿಯೋ ನೋಡಿ
ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಧುರಂಧರ್ ನಟ ಆರ್. ಮಾಧವನ್: ವಿಡಿಯೋ ನೋಡಿ
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
ನವಿಲುಗರಿ ಧರಿಸಿ ನಿವೇದಿತಾ ಗೌಡ, ಕಿಶನ್ ರೀಲ್ಸ್: ವಿವಾದಕ್ಕೆ ಕಾರಣ ಏನು?
ನವಿಲುಗರಿ ಧರಿಸಿ ನಿವೇದಿತಾ ಗೌಡ, ಕಿಶನ್ ರೀಲ್ಸ್: ವಿವಾದಕ್ಕೆ ಕಾರಣ ಏನು?
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
ವಿನೋದ್ ಪ್ರಭಾಕರ್​​ಗೆ ಆಗಿದ್ದೇನು: ಮಾಹಿತಿ ನೀಡಿದ ಸಹ ನಟ ವಿಜಯ್ ಗೌಡ
ವಿನೋದ್ ಪ್ರಭಾಕರ್​​ಗೆ ಆಗಿದ್ದೇನು: ಮಾಹಿತಿ ನೀಡಿದ ಸಹ ನಟ ವಿಜಯ್ ಗೌಡ
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು