AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಾನು ರಾಜೀನಾಮೆ ನೀಡುತ್ತೇನೆ, ಒಂದು ನಿಮಿಷವೂ ಪ್ರಧಾನಿಯಾಗಿರುವುದಿಲ್ಲ, ಆದರೆ..: ಪಾಕ್ ಪ್ರಧಾನಿ ಶೆಹಬಾಜ್ ಷರೀಫ್

‘‘ಪಾಕಿಸ್ತಾನದ ಮಾಜಿ ಪ್ರಧಾನಿ ಇಮ್ರಾನ್​ ಖಾನ್​ ಮೇಲೆ ನಡೆದ ಹಲ್ಲೆಯ ಹಿಂದೆ ನನ್ನ ಕೈವಾಡವಿದೆ ಎಂದು ಸಾಬೀತಾದರೆ ನಾನು ಕೂಡಲೇ ರಾಜೀನಾಮೆ ನೀಡುತ್ತೇನೆ, ಒಂದು ಕ್ಷಣವೂ ಪ್ರಧಾನಿಯಾಗಿರುವುದಿಲ್ಲ’’ ಎಂದು ಪಾಕಿಸ್ತಾನದ ಪ್ರಧಾನಿ ಶಹಬಾಜ್ ಷರೀಫ್ ಹೇಳಿದ್ದಾರೆ.

ನಾನು ರಾಜೀನಾಮೆ ನೀಡುತ್ತೇನೆ, ಒಂದು ನಿಮಿಷವೂ ಪ್ರಧಾನಿಯಾಗಿರುವುದಿಲ್ಲ, ಆದರೆ..: ಪಾಕ್ ಪ್ರಧಾನಿ ಶೆಹಬಾಜ್ ಷರೀಫ್
Shehbaz Sharif
TV9 Web
| Updated By: ನಯನಾ ರಾಜೀವ್|

Updated on: Nov 06, 2022 | 11:16 AM

Share

‘‘ಪಾಕಿಸ್ತಾನದ ಮಾಜಿ ಪ್ರಧಾನಿ ಇಮ್ರಾನ್​ ಖಾನ್​ ಮೇಲೆ ನಡೆದ ಹಲ್ಲೆಯ ಹಿಂದೆ ನನ್ನ ಕೈವಾಡವಿದೆ ಎಂದು ಸಾಬೀತಾದರೆ ನಾನು ಕೂಡಲೇ ರಾಜೀನಾಮೆ ನೀಡುತ್ತೇನೆ, ಒಂದು ಕ್ಷಣವೂ ಪ್ರಧಾನಿಯಾಗಿರುವುದಿಲ್ಲ’’ ಎಂದು ಪಾಕಿಸ್ತಾನದ ಪ್ರಧಾನಿ ಶೇಹಬಾಜ್ ಷರೀಫ್ ಹೇಳಿದ್ದಾರೆ.

ಕಳೆದ ಎರಡು ದಿನಗಳ ಹಿಂದಷ್ಟೇ ಪಾಕ್ ಪಾಜಿ ಪ್ರಧಾನಿ ಇಮ್ರಾನ್ ಖಾನ್​ ಮೇಲೆ ಗುಂಡಿನ ದಾಳಿಯಾಗಿದ್ದು, ಅವರು ತೀವ್ರವಾಗಿ ಗಾಯಗೊಂಡಿದ್ದರು, ಹಲ್ಲೆಯ ಹಿಂದೆ ಈಗಿನ ಪ್ರಧಾನಿ ಶೆಹಬಾಜ್ ಷರೀಫ್ ಅವರ ಕೈವಾಡವಿದೆ ಎಂದು ಆರೋಪಿಸಲಾಗಿತ್ತು.

ಈ ಕುರಿತು ಇದೀಗ ಪ್ರಧಾನಿ ಶೆಹಬಾಜ್ ಮೌನ ಮುರಿದಿದ್ದಾರೆ, ‘‘ಒಂದೊಮ್ಮೆ ಹಲ್ಲೆಯ ಹಿಂದೆ ನನ್ನ ಕೈವಾಡವಿದೆ ಎಂಬುದು ಸಾಬೀತಾದರೆ ಕೂಡಲೇ ರಾಜೀನಾಮೆ ನೀಡುತ್ತೇನೆ’’ ಎಂದು ಹೇಳಿದ್ದಾರೆ.

ಖಾನ್ ಮೇಲಿನ ದಾಳಿಗೆ ಸಂಬಂಧಿಸಿದ ಯಾವುದೇ ಸಂಚಿನಲ್ಲಿ ಭಾಗಿಯಾಗಿರುವುದು ಕಂಡುಬಂದರೆ ನಾನು ಒಂದು ನಿಮಿಷವೂ ಪ್ರಧಾನಿಯಾಗಿ ಉಳಿಯುವುದಿಲ್ಲ ಎಂದು ಶಹಬಾಜ್ ಹೇಳಿದ್ದಾರೆ. 70ರ ಹರೆಯದ ಇಮ್ರಾನ್ ಖಾನ್ ಅವರು ಗುರುವಾರ ಪಂಜಾಬ್ ಪ್ರಾಂತ್ಯದ ವಜೀರಾಬಾದ್ ಪ್ರದೇಶದಲ್ಲಿ ಪ್ರತಿಭಟನಾ ಮೆರವಣಿಗೆಯನ್ನು ಮುನ್ನಡೆಸುತ್ತಿದ್ದ ಕಂಟೈನರ್ ಮೌಂಟೆಡ್ ಟ್ರಕ್ ಮೇಲೆ ಇಬ್ಬರು ಬಂದೂಕುಧಾರಿಗಳು ಗುಂಡು ಹಾರಿಸಿದಾಗ ಅವರ ಬಲಗಾಲಿಗೆ ಗುಂಡು ತಗುಲಿತ್ತು.

ಘಟನೆಯಲ್ಲಿ ಓರ್ವ ಸಾವನ್ನಪ್ಪಿದ್ದು, ಪಾಕಿಸ್ತಾನ್ ತೆಹ್ರೀಕ್-ಎ-ಇನ್ಸಾಫ್ (ಪಿಟಿಐ) ನಾಯಕರು ಗಾಯಗೊಂಡಿದ್ದಾರೆ. ಈ ಸಂಚಿನಲ್ಲಿ ನಾನು ಅಥವಾ ಆಂತರಿಕ ಸಚಿವರು ಅಥವಾ ಸೇನಾಧಿಕಾರಿ ಭಾಗಿಯಾಗಿದ್ದಾರೆ ಎಂಬುದಕ್ಕೆ ಖಾನ್ ಪುರಾವೆ ನೀಡಿದರೆ, ನಾನು ಒಂದು ನಿಮಿಷವೂ ಪ್ರಧಾನಿಯಾಗುವುದಿಲ್ಲ, ನಾನು ರಾಜೀನಾಮೆ ನೀಡುತ್ತೇನೆ ಎಂದು ಅವರು ಹೇಳಿದರು.

ಖಾನ್​ ತಲೆಯಿಂದ ಪಾದದವರೆಗೂ ಸುಳ್ಳನ್ನೇ ಹೊದ್ದುಕೊಂಡಿದ್ದಾರೆ, ಪಾಕಿಸ್ತಾನವನ್ನು ನಾಶಮಾಡಲು ತಮ್ಮ ಅತ್ಯುತ್ತಮ ಪ್ರಯತ್ನ ಮಾಡುತ್ತಿದ್ದಾರೆ ಎಂದು ಶೆಹಬಾಜ್ ಹೇಳಿದರು.

ನೀವು ಸುಳ್ಳಿನ ಮೂಲಕ ರಾಷ್ಟ್ರವನ್ನು ವಿನಾಶದತ್ತ ತಳ್ಳುತ್ತಿದ್ದೀರಿ. ಈ ವಿನಾಶದಿಂದ ರಾಷ್ಟ್ರವನ್ನು ರಕ್ಷಿಸುವ ಜವಾಬ್ದಾರಿ ನನ್ನದ ಎಂದು ಶೆಹಬಾಜ್ ಹೇಳಿದರು.

ದಾಳಿಯ ಎಫ್‌ಐಆರ್ ದಾಖಲಿಸುವಲ್ಲಿ ವಿಳಂಬವಾದ ಬಗ್ಗೆ, ಶೆಹಬಾಜ್ ಪಂಜಾಬ್ ಪ್ರಾಂತ್ಯದಲ್ಲಿ ಖಾನ್ ಪಕ್ಷದ ಪಿಟಿಐ ಅಧಿಕಾರದಲ್ಲಿದೆ ಮತ್ತು ಹತ್ಯೆಯ ಯತ್ನದ ಪ್ರಥಮ ಮಾಹಿತಿ ವರದಿಯನ್ನು ಇಲ್ಲಿಯವರೆಗೆ ಏಕೆ ದಾಖಲಿಸಿಲ್ಲ ಎಂಬುದನ್ನು ಪ್ರಾಂತೀಯ ಸರ್ಕಾರ ತಿಳಿಸಬೇಕು ಎಂದು ಹೇಳಿದರು.

ಸಂಸ್ಥೆ ಮತ್ತು ವಿಶೇಷವಾಗಿ ಹಿರಿಯ ಸೇನಾಧಿಕಾರಿಯ ವಿರುದ್ಧ ಖಾನ್ ಅವರು ಆಧಾರರಹಿತ ಮತ್ತು ಬೇಜವಾಬ್ದಾರಿ ಆರೋಪಗಳು ಸ್ವೀಕಾರಾರ್ಹವಲ್ಲ ಎಂದು ಸೇನೆ ಹೇಳಿಕೆಯಲ್ಲಿ ತಿಳಿಸಿದೆ.

ಅಂತಾರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
‘45’ ಚಿತ್ರದ ಟ್ರೇಲರ್ ರಿಲೀಸ್ ಕಾರ್ಯಕ್ರಮ: ಲೈವ್ ವಿಡಿಯೋ ಇಲ್ಲಿದೆ ನೋಡಿ..
‘45’ ಚಿತ್ರದ ಟ್ರೇಲರ್ ರಿಲೀಸ್ ಕಾರ್ಯಕ್ರಮ: ಲೈವ್ ವಿಡಿಯೋ ಇಲ್ಲಿದೆ ನೋಡಿ..
ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!
ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!
ಶಿವಶಂಕರಪ್ಪ ಕೈಲಾಸ ಶಿವಗಣಾರಾಧನೆಗೆ ಆಹ್ವಾನ ನೀಡಿದ ಕುಟುಂಬ: ಯಾವಾಗ, ಎಲ್ಲಿ?
ಶಿವಶಂಕರಪ್ಪ ಕೈಲಾಸ ಶಿವಗಣಾರಾಧನೆಗೆ ಆಹ್ವಾನ ನೀಡಿದ ಕುಟುಂಬ: ಯಾವಾಗ, ಎಲ್ಲಿ?
ಜೈಲಿನಲ್ಲಿ ದರ್ಶನ ಭೇಟಿ ಮಾಡಿದ ​ಅಲೋಕ್ ಕುಮಾರ್: ಏನು ವಿಚಾರಿಸಿದ್ರು?
ಜೈಲಿನಲ್ಲಿ ದರ್ಶನ ಭೇಟಿ ಮಾಡಿದ ​ಅಲೋಕ್ ಕುಮಾರ್: ಏನು ವಿಚಾರಿಸಿದ್ರು?
ಸೀಕ್ರೆಟ್ ರೂಮ್​​ನಲ್ಲೂ ನಡೆಯಿತು ಧ್ರುವಂತ್, ರಕ್ಷಿತಾ ಶೆಟ್ಟಿ ಜಗಳ
ಸೀಕ್ರೆಟ್ ರೂಮ್​​ನಲ್ಲೂ ನಡೆಯಿತು ಧ್ರುವಂತ್, ರಕ್ಷಿತಾ ಶೆಟ್ಟಿ ಜಗಳ
ಆರ್​ಸಿಬಿಯಲ್ಲಿ ಅವಕಾಶ ಸಿಗಲಿಲ್ಲ; 56 ಎಸೆತಗಳಲ್ಲಿ ಶತಕ ಸಿಡಿಸಿದ ಸೀಫರ್ಟ್
ಆರ್​ಸಿಬಿಯಲ್ಲಿ ಅವಕಾಶ ಸಿಗಲಿಲ್ಲ; 56 ಎಸೆತಗಳಲ್ಲಿ ಶತಕ ಸಿಡಿಸಿದ ಸೀಫರ್ಟ್
ಸಂಸತ್ತಿಗೆ ಸೈಕಲ್​​ನಲ್ಲಿ ಬಂದ ಸಂಸದ
ಸಂಸತ್ತಿಗೆ ಸೈಕಲ್​​ನಲ್ಲಿ ಬಂದ ಸಂಸದ